Homeರಾಜಕೀಯಕಣ್ಣೀರಧಾರೆ... ಇದೇಕೆ ಇದೇಕೆ ...! ಕುಮಾರಸ್ವಾಮಿ ಜಾಸ್ತಿ ಅತ್ತಿದ್ದು ಯಾವ ಸರ್ಕಾರದಲ್ಲಿ ನಿಮಗೆ ಗೊತ್ತೆ?

ಕಣ್ಣೀರಧಾರೆ… ಇದೇಕೆ ಇದೇಕೆ …! ಕುಮಾರಸ್ವಾಮಿ ಜಾಸ್ತಿ ಅತ್ತಿದ್ದು ಯಾವ ಸರ್ಕಾರದಲ್ಲಿ ನಿಮಗೆ ಗೊತ್ತೆ?

- Advertisement -
- Advertisement -

‘ಕುಮಾರಸ್ವಾಮಿ, ಕಾಂಗ್ರೆಸ್ ಜತೆಗೆ ಸರ್ಕಾರ ನಡೆಸುತ್ತಿದ್ದಾಗ ಸುರಿಸಿದಷ್ಟು ಕಣ್ಣೀರನ್ನು ಬಿಜೆಪಿ ಜತೆಗಿನ ಸರ್ಕಾರ ನಡೆಸುತ್ತಿದ್ದಾಗ ಸುರಿಸಿಲ್ಲ’ ಹೀಗೆಂದು ಜೆಡಿಎಸ್ ರಾಷ್ಟ್ರೀಯ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಜೆಡಿಎಸ್ ರಾಷ್ಟ್ರೀಯ ವರಿಷ್ಠರೇ ? ಕರ್ನಾಟಕ ಬಿಟ್ಟು ಬೇರೆ ಕಡೆ ಜೆಡಿಎಸ್ ಇದ್ದಂಗೆ ಕಾಣ್ತೀಲ್ಲ ಅಂತ ನೀವು ಪ್ರಶ್ನೆ ಹಾಕ್ಬೇಡಿ ? ಆಮೇಲೆ ಅವ್ರು ಕುಮಾರಸ್ವಾಮಿ ಜತೆ ಕುತ್ಕೊಂಡು ಅಳೋದಿಕ್ಕೆ ಶುರು ಮಾಡಿದ್ರೆ ಕಷ್ಟ. ಆಲ್ ರೈಟ್ ಮುಂದಕ್ಕೋಗೋಣ…

ದೇವೇಗೌಡರ ಮಾತಿನ ಅರ್ಥ ಏನು ? ಬಿಜೆಪಿ ಜತೆಗೆ ಸರ್ಕಾರ ನಡೆಸುವಾಗಲೂ ಕಣ್ಣೀರು ಹಾಕ್ತಾ ಇದ್ರು, ಆದರೆ ಕಾಂಗ್ರೆಸ್ ಜತೆಗೆ ಸರ್ಕಾರ ನಡೆಸುವಾಗ ಹಾಕಿದಷ್ಟು ಕಣ್ಣೀರು ಹಾಕಿಲ್ಲ ಅಂತಲ್ವ. ಮಳೆ ಇಷ್ಟು ಸೆಂಟಿಮೀಟರ್ ಬಿತ್ತು, ಇಷ್ಟು ಇಂಚು ಮಳೆ ಆಯ್ತು ಅಂತ ಹೇಳೋದಿಕ್ಕೆ ಅಳತೆಗೋಲು ಇದೆ. ಆದ್ರೆ ಯಾವಾಗ ಎಷ್ಟು ಕಣ್ಣೀರು ಬಿತ್ತು ಅಂತ ಅಳೆಯೋಕೆ ಮಾತ್ರ ಇಲ್ಲ. ಈ ಸೈಂಟಿಸ್ಟುಗಳಿಗೂ ಬುದ್ದಿ ಇಲ್ಲ ಕಣ್ರಿ, ಎಂಥೆಂತದೋ ಯಂತ್ರ ಕಂಡು ಹಿಡಿತಾರೆ, ಚಂದ್ರಯಾನಕ್ಕೂ ಕಳಿಸ್ತಾರೆ. ಈ ಕಣ್ಣೀರು ಎಷ್ಟು ಬಿತ್ತು ಅಂತ ಅಳೆಯೋಕೆ ಸಣ್ಣದೊಂದು ಥರ್ಮಾಮೀಟರ್ ಥರದ್ದು ಕಂಡು ಹಿಡಿದಿಲ್ವಲ್ರಿ… ಆಲ್ ರೈಟ್ ಮುಂದಕ್ಕೋಗೋಣ… ಮುಂದೆ ಕಂಡು ಹಿಡಿದ್ರೂ ಹಿಡಿಬಹುದು.

ಈಗ ಕುಮಾರಸ್ವಾಮಿ‌ ಕಣ್ಣೀರು ವಿಷಯಕ್ಕೆ ಬರೋಣ. ಮುಖ್ಯಮಂತ್ರಿ ಆಗಿರುವಾಗ ಅವ್ರು ಏಕೆ ಅಳ್ಬೇಕು, ಅದೂ ಅನಾಯಾಸವಾಗಿ ಮುಖ್ಯಮಂತ್ರಿ ಪಟ್ಟ ದಕ್ಕಿರುವಾಗಲೂ ? ನನಗಂತೂ ಅರ್ಥವಾಗ್ಲಿಲ್ಲ. ನಿಮಗೇನಾದ್ರೂ ಅರ್ಥವಾದ್ರೆ ಕಾಮೆಂಟಿನಲ್ಲಿ ಹೇಳಿ. ಈ ಐಎಎಸ್, ಐಪಿಎಸ್ ಪಾಸು ಮಾಡೋರು ಹಗಲು ರಾತ್ರಿ ಕಣ್ಣಿಗೆ ಎಣ್ಣೆ ಬುಡ್ಕಂಡು ಓದ್ತಾರೆ.‌ಕಣ್ಣಿಗೆ ಮಾತ್ರ ಎಣ್ಣೆ ಬಿಟ್ಕೊಳೋದಾ ? ಬೇರೆಲ್ಲೂ ಅಂದ್ರೆ ಬಾಯಿಗೆ ಬಿಟ್ಕಳೋದಿಲ್ವ ಅಂತ ಕೇಳ್ಬೇಡಿ. ಹಾಗೆ ಬಿಡ್ಕಂಡ್ರೆ ಐಎಎಸ್ ಪಾಸ್ ಮಾಡೋಕ್ಕಾಗೋಲ್ಲ. ಹಾಗೆ ಕಷ್ಟಪಟ್ಟು ಅಧಿಕಾರಿಗಳಾದವ್ರೆ ಬೇಸರವಾದ್ರೆ ನಗ್ತಾನಗ್ತಾನೆ ರಾಜಿನಾಮೆ ಬೀಸಾಕ್ಬಿಟ್ಟು ಮನೆಗೋಯ್ತಾರೆ. ಆಲ್ ರೈಟ್ ಮುಂದಕ್ಕೋಗೋಣ.

ಒಂದ್ ಇಂಟರೆಸ್ಟಿಂಗ್ ಅಂದ್ರೆ ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗಲೂ, ಇಲ್ದೆ ಇದ್ದಾಗಲೂ ಅಳ್ತಾ ಇರ್ತಾರೆ. ಅಧಿಕಾರಕ್ಕೆ ಬರೋ ಮುಂಚೆ ‘ ನಾನು ಹಾರ್ಟ್ ಪೇಶಂಟು’ ಅಂತ ಅಳ್ತಾರೆ.‌ಕೇಳಿದ ಜನವೂ ‘ಹೇ ಅತ್ಲಾಗೆ ಬಿಡೊ, ನಾವೇನ್ ನಮ್ ಮನೆ ಆಸ್ತೀನಾ ಬರ್ಕೊಟ್ಟವಾ, ಒಂದ್ ಓಟ್ ತಾನೇ ಅಂತ ಹಾಕಿಬಿಡ್ತಾರೆ’ ಗೆದ್ದಮೇಲೂ ಅಳ್ತಾರೆ. ‘ನಾನ್ ನಂಬಿದ ಜನ ನನಗೆ ಕೈಬುಡಲಿಲ್ಲ’ ಅಂತ.

ಇತ್ತಿತ್ಲಾಗೆ ಯಾವ ಪಾರ್ಟಿಗೂ ಸ್ಪಷ್ಟ ಸ್ಪಷ್ಟ‌ಬಹುಮತ ಇಲ್ಲ. ವಸಿ ಅಂದ್ರೆ ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಂಡು ಅಧಿಕಾರಕ್ಕೆ ಬರೋಕೆ ದೇವೇಗೌಡ್ರು ತಾವನೇ ಬರ್ಬೇಕು. ಆಯ್ತು ಬಂದ್ರು, ಕುಮಾರಸ್ವಾಮಿ ಮುಖ್ಯಮಂತ್ರಿ ಆದ್ರು… ಆದ್ರೆ ಮಾತ್ ಮಾತಿಗೂ ಟವೆಲ್ ಹಿಡ್ಕಂಡು ಅಳೋದ್ಯಾಕೆ? ಗೊಳೋ ಅಂತ ಅಳ್ತಾರೆ. ಇದು ಅವರ ತಂದೆ ದೇವೇಗೌಡ್ರರಿಂದಲೇ ಬಂದಿರೋ ರಕ್ತಗತ ಬಳುವಳಿ. ಏಕಂದ್ರೆ ದೇವೇಗೌಡ್ರು ಮುಸಮುಸ ಅಂತ ಮೂಗ್ ತಿಕ್ಕಂಡು ಅಳ್ತಾನೆ‌ ಇರ್ತಾರೆ.

ನೀವು ಮೂಗ್ ತಿಕ್ಕಂಡ್ರೆ ಅಳು ಬರುತ್ತಾ ಅಂತ ಪ್ರಯತ್ನಿಸೋಕೆ ಹೋಗ್ಬೇಡಿ… ಬರೋದು‌ ಕಣ್ಣೀರಲ್ಲ ಸಿಂಬಳ. ಅಂದಹಾಗೆ ಕಣ್ಣೀರು ಸುರಿಸೋದು ರಕ್ತಗತವಾಗಿ ಬರ್ತುದಾ ಅಂತ ಕೇಳ್ಬೇಡಿ. ಈ ಡಾಕ್ಟರುಗಳು ಬೇರೆ ರಕ್ತದಲ್ಲಿ ಬರೋದು ಕಾಯಿಲೆ ಹೊರತು ಕಲೆ ಅಲ್ಲ ಅಂತಾರೆ. ಅವ್ರ ಮಾತು ನಂಬ್ಬೇಡಿ. ಅವ್ರಿಗೆ ರಾಜಕೀಯ ಅಂದ್ರೇನು, ಕಲೆ ಅಂದ್ರೇನು ಅಂತ ಗೊತ್ತಿಲ್ಲ. ಆಲ್ ರೈಟ್ ಮುಂದಕ್ಕೋಗೋಣ.

ಈಗ ಪಾಯಿಂಟಿಗೆ ಬರೋಣ. ಕಣ್ಣೀರು ಹಾಕ್ತಾ ರಾಜ್ಯಭಾರ ಮಾಡೋದೇನಪ್ಪಾ, ಆಗ್ಲಿಲ್ಲ ಅಂದ್ರೆ ರಾಜ್ಯಪಾಲರತ್ರ ಹೋಗಿ ರಾಜಿನಾಮೆ ಒಗಾಯಿಸಿ ಅಂದ್ರೆ ಕೊಟ್ಬುಟ್ಟು ಬರೋದಪ್ಪಾ… ಅಂಗೂ ಮಾಡೋದಿಲ್ಲ. ಜನ ಏನಾದ್ರೂ ‘ಕುಮಾರಣ್ಣ ನೀನು‌ ಮುಖ್ಯಮಂತ್ರಿಯಾಗಿ ಮುಂದುವರಿಲಿಲ್ಲ ಅಂದ್ರೆ ನಮ್ಗೆ ಸಂಕಟ ಆಯ್ತುದೆ’ ಅಂತ ಕಣ್ಣೀರಾಕ್ತಾರಾ… ? ಒಂದುವೇಳೆ ಕರ್ನಾಟಕದ ಆರೂವರೆ ಕೋಟಿ ಜನ ಕಣ್ಣೀರು ಹಾಕಿದ್ರೆ ಇಲ್ಲಿ ಮಳೆ ಬಾರದೇ ಇದ್ದಾಗ ಪರ್ಜನ್ಯ ಜಪ ಮಾಡೋ ಬದ್ಲು ಒಂದಷ್ಟು ದಿನ ಕುಮಾರಸ್ವಾಮಿನಾ ಸಿಎಂ ಕುರ್ಚಿ ಮೇಲೆ ಕೂರಿಸ್ಬುಟ್ಟು ನಂತ್ರ ಇಳಿಸ್ಬುಟ್ರೆ ಜನವೆಲ್ಲಾ ಕಣ್ಣೀರಾಕಿ ಹಾಕಿ ನೀರು ಪ್ರವಾಹದೋಪಾದಿ ಹರೀತಾ ಇರೋದು. ಆದ್ರೆ ಹಾಗೇನೂ ಆಗಿಲ್ವೆ. ಜನ ಏನು ಪಟ್ಟು ಹಿಡಿದಿಲ್ವೆ. ಆದ್ರೂ ಅಳ್ತಾ ಅಳ್ತಾ ಅಧಿಕಾರ ನಡೆಸೋದ್ಯಾಕೆ. ವಯೋವೃದ್ಧರಾದ ತಮ್ಮ ತಂದೆಯವ್ರ ಕಣ್ಣಲೂ ನೀರು ತರಿಸೋದ್ಯಾಕೆ…ಒಂದ್ ವೇಳೆ ಇವರಿಬ್ರು ಸುರಿಸಿದ ಕಣ್ಣೀರನ್ನೆಲ್ಲ ಸಂಗ್ರಹಿಸಿ ಯಾವ್ದಾದ್ರೂ ಒಂದು ಸಸಿ ಬುಡಕ್ಕೆ ಹಾಕಿದ್ರೆ ಅದು ಹೆಮ್ಮರವಾಗಿ ಬೆಳ್ದು ಹಣ್ಣು ಬಿಡೋ ಬದ್ಲು ಕಣ್ಣೀರು ಸುರಿಸ್ತಾ ಇತ್ತೇನೋ… ಅದಕ್ಕೆ ಕಣ್ಣೀರು ಮರ ಅಂತ ಹೆಸ್ರಾಗಿ ದೇಶವಿದೇಶದ ಜನವೆಲ್ಲಾ ನೋಡೋಕೆ ಬರೋರೇನು…

ಆಲ್ ರೈಟ್… ಮುಂದಕ್ಕೋಣ, ಸಮ್ಮಿಶ್ರ ಸರ್ಕಾರ ಬಿದ್ದು ಹೋದ ಮೇಲೂ ಮಗನ ಕಣ್ಣೀರು ನೋಡಕಾಯ್ತಿಲ್ಲ, ಅಂತ ದೇವೇಗೌಡ್ರು ಅಳ್ತಾ ಅವ್ರೆ, ಮಹಾಜನಗಳೇ ಅವ್ರು ಕಣ್ಣೀರು ನಿಲ್ಸಿ ನಗುಮೊಗ ಮಾಡ್ಕಂಡು ನಿಂತ್ಕಳ್ಳೊ ಐಡಿಯಾ ಇದ್ರೆ ಕೊಡಿ ಅಂತ ಹೇಳ್ತಾ ಸದ್ಯಕ್ಕೆ ಈ ಕಣ್ಣೀರಧಾರೆ ಕಥೆಯನ್ನ ನಿಲ್ಸೋಣ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Ayyo Ayyo Sumane Natak
    Estu Kaniru surisidru JDS GOVT Madoke Agola Next Election nali Own Agi Govt madidre Nanu HDK MANEGE 1 year Jeeta madoke ready..

    Nataka Nataka Hige ಕಣ್ಣೀರಧಾರೆ Kinta Maneli Irodu Like Alwa MANINA MAKLU HOLADA KELESA MADLI. ELA NEXT ELECTION NALI 122 MORE SEAT BANDU GOVT MADI NIMA MANELI NANU JEET MADTINI

  2. ಕಣ್ಣೀರಧಾರೆ‌ ಇದೇಕೆ…ಇದೇಕೆ..ಲೇಖನ ವಿಡಂಬನಾತ್ಮಕವಾಗಿ ಚೆನ್ನಾಗಿದೆ. ದೇವರು ದೆವ್ವಾಂಥ ಕಂಡ ಕಂಡ ದೇವಸ್ಥಾನ ಹುತ್ತ ಕಲ್ಲು ಅಲೆಯೋ ಅಪ್ಪ ಮಕ್ಕಳಿಗೆ ಅವರ ದೇವರು ಅಧಿಕಾರದಲ್ಲೇ ಉಳಿಸೊ ಬದಲಿಗೆ ಕಣ್ಣೀರ ವರ ಯಾಕೆ ದಯ ಪಾಲಿಸಿದನೋ ತಿಳಿಯಲು ಮತ್ತೊಂದು ಹೋಮಹವನ ಮಾಡಿದರೆ ತಿಳಿಯಬಹುದು..ಅಥವಾ ಬರೀ ಗಿಮಿಕ್ಕಾ..

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...