Homeರಾಜಕೀಯಕಣ್ಣೀರಧಾರೆ... ಇದೇಕೆ ಇದೇಕೆ ...! ಕುಮಾರಸ್ವಾಮಿ ಜಾಸ್ತಿ ಅತ್ತಿದ್ದು ಯಾವ ಸರ್ಕಾರದಲ್ಲಿ ನಿಮಗೆ ಗೊತ್ತೆ?

ಕಣ್ಣೀರಧಾರೆ… ಇದೇಕೆ ಇದೇಕೆ …! ಕುಮಾರಸ್ವಾಮಿ ಜಾಸ್ತಿ ಅತ್ತಿದ್ದು ಯಾವ ಸರ್ಕಾರದಲ್ಲಿ ನಿಮಗೆ ಗೊತ್ತೆ?

- Advertisement -
- Advertisement -

‘ಕುಮಾರಸ್ವಾಮಿ, ಕಾಂಗ್ರೆಸ್ ಜತೆಗೆ ಸರ್ಕಾರ ನಡೆಸುತ್ತಿದ್ದಾಗ ಸುರಿಸಿದಷ್ಟು ಕಣ್ಣೀರನ್ನು ಬಿಜೆಪಿ ಜತೆಗಿನ ಸರ್ಕಾರ ನಡೆಸುತ್ತಿದ್ದಾಗ ಸುರಿಸಿಲ್ಲ’ ಹೀಗೆಂದು ಜೆಡಿಎಸ್ ರಾಷ್ಟ್ರೀಯ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಜೆಡಿಎಸ್ ರಾಷ್ಟ್ರೀಯ ವರಿಷ್ಠರೇ ? ಕರ್ನಾಟಕ ಬಿಟ್ಟು ಬೇರೆ ಕಡೆ ಜೆಡಿಎಸ್ ಇದ್ದಂಗೆ ಕಾಣ್ತೀಲ್ಲ ಅಂತ ನೀವು ಪ್ರಶ್ನೆ ಹಾಕ್ಬೇಡಿ ? ಆಮೇಲೆ ಅವ್ರು ಕುಮಾರಸ್ವಾಮಿ ಜತೆ ಕುತ್ಕೊಂಡು ಅಳೋದಿಕ್ಕೆ ಶುರು ಮಾಡಿದ್ರೆ ಕಷ್ಟ. ಆಲ್ ರೈಟ್ ಮುಂದಕ್ಕೋಗೋಣ…

ದೇವೇಗೌಡರ ಮಾತಿನ ಅರ್ಥ ಏನು ? ಬಿಜೆಪಿ ಜತೆಗೆ ಸರ್ಕಾರ ನಡೆಸುವಾಗಲೂ ಕಣ್ಣೀರು ಹಾಕ್ತಾ ಇದ್ರು, ಆದರೆ ಕಾಂಗ್ರೆಸ್ ಜತೆಗೆ ಸರ್ಕಾರ ನಡೆಸುವಾಗ ಹಾಕಿದಷ್ಟು ಕಣ್ಣೀರು ಹಾಕಿಲ್ಲ ಅಂತಲ್ವ. ಮಳೆ ಇಷ್ಟು ಸೆಂಟಿಮೀಟರ್ ಬಿತ್ತು, ಇಷ್ಟು ಇಂಚು ಮಳೆ ಆಯ್ತು ಅಂತ ಹೇಳೋದಿಕ್ಕೆ ಅಳತೆಗೋಲು ಇದೆ. ಆದ್ರೆ ಯಾವಾಗ ಎಷ್ಟು ಕಣ್ಣೀರು ಬಿತ್ತು ಅಂತ ಅಳೆಯೋಕೆ ಮಾತ್ರ ಇಲ್ಲ. ಈ ಸೈಂಟಿಸ್ಟುಗಳಿಗೂ ಬುದ್ದಿ ಇಲ್ಲ ಕಣ್ರಿ, ಎಂಥೆಂತದೋ ಯಂತ್ರ ಕಂಡು ಹಿಡಿತಾರೆ, ಚಂದ್ರಯಾನಕ್ಕೂ ಕಳಿಸ್ತಾರೆ. ಈ ಕಣ್ಣೀರು ಎಷ್ಟು ಬಿತ್ತು ಅಂತ ಅಳೆಯೋಕೆ ಸಣ್ಣದೊಂದು ಥರ್ಮಾಮೀಟರ್ ಥರದ್ದು ಕಂಡು ಹಿಡಿದಿಲ್ವಲ್ರಿ… ಆಲ್ ರೈಟ್ ಮುಂದಕ್ಕೋಗೋಣ… ಮುಂದೆ ಕಂಡು ಹಿಡಿದ್ರೂ ಹಿಡಿಬಹುದು.

ಈಗ ಕುಮಾರಸ್ವಾಮಿ‌ ಕಣ್ಣೀರು ವಿಷಯಕ್ಕೆ ಬರೋಣ. ಮುಖ್ಯಮಂತ್ರಿ ಆಗಿರುವಾಗ ಅವ್ರು ಏಕೆ ಅಳ್ಬೇಕು, ಅದೂ ಅನಾಯಾಸವಾಗಿ ಮುಖ್ಯಮಂತ್ರಿ ಪಟ್ಟ ದಕ್ಕಿರುವಾಗಲೂ ? ನನಗಂತೂ ಅರ್ಥವಾಗ್ಲಿಲ್ಲ. ನಿಮಗೇನಾದ್ರೂ ಅರ್ಥವಾದ್ರೆ ಕಾಮೆಂಟಿನಲ್ಲಿ ಹೇಳಿ. ಈ ಐಎಎಸ್, ಐಪಿಎಸ್ ಪಾಸು ಮಾಡೋರು ಹಗಲು ರಾತ್ರಿ ಕಣ್ಣಿಗೆ ಎಣ್ಣೆ ಬುಡ್ಕಂಡು ಓದ್ತಾರೆ.‌ಕಣ್ಣಿಗೆ ಮಾತ್ರ ಎಣ್ಣೆ ಬಿಟ್ಕೊಳೋದಾ ? ಬೇರೆಲ್ಲೂ ಅಂದ್ರೆ ಬಾಯಿಗೆ ಬಿಟ್ಕಳೋದಿಲ್ವ ಅಂತ ಕೇಳ್ಬೇಡಿ. ಹಾಗೆ ಬಿಡ್ಕಂಡ್ರೆ ಐಎಎಸ್ ಪಾಸ್ ಮಾಡೋಕ್ಕಾಗೋಲ್ಲ. ಹಾಗೆ ಕಷ್ಟಪಟ್ಟು ಅಧಿಕಾರಿಗಳಾದವ್ರೆ ಬೇಸರವಾದ್ರೆ ನಗ್ತಾನಗ್ತಾನೆ ರಾಜಿನಾಮೆ ಬೀಸಾಕ್ಬಿಟ್ಟು ಮನೆಗೋಯ್ತಾರೆ. ಆಲ್ ರೈಟ್ ಮುಂದಕ್ಕೋಗೋಣ.

ಒಂದ್ ಇಂಟರೆಸ್ಟಿಂಗ್ ಅಂದ್ರೆ ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗಲೂ, ಇಲ್ದೆ ಇದ್ದಾಗಲೂ ಅಳ್ತಾ ಇರ್ತಾರೆ. ಅಧಿಕಾರಕ್ಕೆ ಬರೋ ಮುಂಚೆ ‘ ನಾನು ಹಾರ್ಟ್ ಪೇಶಂಟು’ ಅಂತ ಅಳ್ತಾರೆ.‌ಕೇಳಿದ ಜನವೂ ‘ಹೇ ಅತ್ಲಾಗೆ ಬಿಡೊ, ನಾವೇನ್ ನಮ್ ಮನೆ ಆಸ್ತೀನಾ ಬರ್ಕೊಟ್ಟವಾ, ಒಂದ್ ಓಟ್ ತಾನೇ ಅಂತ ಹಾಕಿಬಿಡ್ತಾರೆ’ ಗೆದ್ದಮೇಲೂ ಅಳ್ತಾರೆ. ‘ನಾನ್ ನಂಬಿದ ಜನ ನನಗೆ ಕೈಬುಡಲಿಲ್ಲ’ ಅಂತ.

ಇತ್ತಿತ್ಲಾಗೆ ಯಾವ ಪಾರ್ಟಿಗೂ ಸ್ಪಷ್ಟ ಸ್ಪಷ್ಟ‌ಬಹುಮತ ಇಲ್ಲ. ವಸಿ ಅಂದ್ರೆ ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಂಡು ಅಧಿಕಾರಕ್ಕೆ ಬರೋಕೆ ದೇವೇಗೌಡ್ರು ತಾವನೇ ಬರ್ಬೇಕು. ಆಯ್ತು ಬಂದ್ರು, ಕುಮಾರಸ್ವಾಮಿ ಮುಖ್ಯಮಂತ್ರಿ ಆದ್ರು… ಆದ್ರೆ ಮಾತ್ ಮಾತಿಗೂ ಟವೆಲ್ ಹಿಡ್ಕಂಡು ಅಳೋದ್ಯಾಕೆ? ಗೊಳೋ ಅಂತ ಅಳ್ತಾರೆ. ಇದು ಅವರ ತಂದೆ ದೇವೇಗೌಡ್ರರಿಂದಲೇ ಬಂದಿರೋ ರಕ್ತಗತ ಬಳುವಳಿ. ಏಕಂದ್ರೆ ದೇವೇಗೌಡ್ರು ಮುಸಮುಸ ಅಂತ ಮೂಗ್ ತಿಕ್ಕಂಡು ಅಳ್ತಾನೆ‌ ಇರ್ತಾರೆ.

ನೀವು ಮೂಗ್ ತಿಕ್ಕಂಡ್ರೆ ಅಳು ಬರುತ್ತಾ ಅಂತ ಪ್ರಯತ್ನಿಸೋಕೆ ಹೋಗ್ಬೇಡಿ… ಬರೋದು‌ ಕಣ್ಣೀರಲ್ಲ ಸಿಂಬಳ. ಅಂದಹಾಗೆ ಕಣ್ಣೀರು ಸುರಿಸೋದು ರಕ್ತಗತವಾಗಿ ಬರ್ತುದಾ ಅಂತ ಕೇಳ್ಬೇಡಿ. ಈ ಡಾಕ್ಟರುಗಳು ಬೇರೆ ರಕ್ತದಲ್ಲಿ ಬರೋದು ಕಾಯಿಲೆ ಹೊರತು ಕಲೆ ಅಲ್ಲ ಅಂತಾರೆ. ಅವ್ರ ಮಾತು ನಂಬ್ಬೇಡಿ. ಅವ್ರಿಗೆ ರಾಜಕೀಯ ಅಂದ್ರೇನು, ಕಲೆ ಅಂದ್ರೇನು ಅಂತ ಗೊತ್ತಿಲ್ಲ. ಆಲ್ ರೈಟ್ ಮುಂದಕ್ಕೋಗೋಣ.

ಈಗ ಪಾಯಿಂಟಿಗೆ ಬರೋಣ. ಕಣ್ಣೀರು ಹಾಕ್ತಾ ರಾಜ್ಯಭಾರ ಮಾಡೋದೇನಪ್ಪಾ, ಆಗ್ಲಿಲ್ಲ ಅಂದ್ರೆ ರಾಜ್ಯಪಾಲರತ್ರ ಹೋಗಿ ರಾಜಿನಾಮೆ ಒಗಾಯಿಸಿ ಅಂದ್ರೆ ಕೊಟ್ಬುಟ್ಟು ಬರೋದಪ್ಪಾ… ಅಂಗೂ ಮಾಡೋದಿಲ್ಲ. ಜನ ಏನಾದ್ರೂ ‘ಕುಮಾರಣ್ಣ ನೀನು‌ ಮುಖ್ಯಮಂತ್ರಿಯಾಗಿ ಮುಂದುವರಿಲಿಲ್ಲ ಅಂದ್ರೆ ನಮ್ಗೆ ಸಂಕಟ ಆಯ್ತುದೆ’ ಅಂತ ಕಣ್ಣೀರಾಕ್ತಾರಾ… ? ಒಂದುವೇಳೆ ಕರ್ನಾಟಕದ ಆರೂವರೆ ಕೋಟಿ ಜನ ಕಣ್ಣೀರು ಹಾಕಿದ್ರೆ ಇಲ್ಲಿ ಮಳೆ ಬಾರದೇ ಇದ್ದಾಗ ಪರ್ಜನ್ಯ ಜಪ ಮಾಡೋ ಬದ್ಲು ಒಂದಷ್ಟು ದಿನ ಕುಮಾರಸ್ವಾಮಿನಾ ಸಿಎಂ ಕುರ್ಚಿ ಮೇಲೆ ಕೂರಿಸ್ಬುಟ್ಟು ನಂತ್ರ ಇಳಿಸ್ಬುಟ್ರೆ ಜನವೆಲ್ಲಾ ಕಣ್ಣೀರಾಕಿ ಹಾಕಿ ನೀರು ಪ್ರವಾಹದೋಪಾದಿ ಹರೀತಾ ಇರೋದು. ಆದ್ರೆ ಹಾಗೇನೂ ಆಗಿಲ್ವೆ. ಜನ ಏನು ಪಟ್ಟು ಹಿಡಿದಿಲ್ವೆ. ಆದ್ರೂ ಅಳ್ತಾ ಅಳ್ತಾ ಅಧಿಕಾರ ನಡೆಸೋದ್ಯಾಕೆ. ವಯೋವೃದ್ಧರಾದ ತಮ್ಮ ತಂದೆಯವ್ರ ಕಣ್ಣಲೂ ನೀರು ತರಿಸೋದ್ಯಾಕೆ…ಒಂದ್ ವೇಳೆ ಇವರಿಬ್ರು ಸುರಿಸಿದ ಕಣ್ಣೀರನ್ನೆಲ್ಲ ಸಂಗ್ರಹಿಸಿ ಯಾವ್ದಾದ್ರೂ ಒಂದು ಸಸಿ ಬುಡಕ್ಕೆ ಹಾಕಿದ್ರೆ ಅದು ಹೆಮ್ಮರವಾಗಿ ಬೆಳ್ದು ಹಣ್ಣು ಬಿಡೋ ಬದ್ಲು ಕಣ್ಣೀರು ಸುರಿಸ್ತಾ ಇತ್ತೇನೋ… ಅದಕ್ಕೆ ಕಣ್ಣೀರು ಮರ ಅಂತ ಹೆಸ್ರಾಗಿ ದೇಶವಿದೇಶದ ಜನವೆಲ್ಲಾ ನೋಡೋಕೆ ಬರೋರೇನು…

ಆಲ್ ರೈಟ್… ಮುಂದಕ್ಕೋಣ, ಸಮ್ಮಿಶ್ರ ಸರ್ಕಾರ ಬಿದ್ದು ಹೋದ ಮೇಲೂ ಮಗನ ಕಣ್ಣೀರು ನೋಡಕಾಯ್ತಿಲ್ಲ, ಅಂತ ದೇವೇಗೌಡ್ರು ಅಳ್ತಾ ಅವ್ರೆ, ಮಹಾಜನಗಳೇ ಅವ್ರು ಕಣ್ಣೀರು ನಿಲ್ಸಿ ನಗುಮೊಗ ಮಾಡ್ಕಂಡು ನಿಂತ್ಕಳ್ಳೊ ಐಡಿಯಾ ಇದ್ರೆ ಕೊಡಿ ಅಂತ ಹೇಳ್ತಾ ಸದ್ಯಕ್ಕೆ ಈ ಕಣ್ಣೀರಧಾರೆ ಕಥೆಯನ್ನ ನಿಲ್ಸೋಣ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Ayyo Ayyo Sumane Natak
    Estu Kaniru surisidru JDS GOVT Madoke Agola Next Election nali Own Agi Govt madidre Nanu HDK MANEGE 1 year Jeeta madoke ready..

    Nataka Nataka Hige ಕಣ್ಣೀರಧಾರೆ Kinta Maneli Irodu Like Alwa MANINA MAKLU HOLADA KELESA MADLI. ELA NEXT ELECTION NALI 122 MORE SEAT BANDU GOVT MADI NIMA MANELI NANU JEET MADTINI

  2. ಕಣ್ಣೀರಧಾರೆ‌ ಇದೇಕೆ…ಇದೇಕೆ..ಲೇಖನ ವಿಡಂಬನಾತ್ಮಕವಾಗಿ ಚೆನ್ನಾಗಿದೆ. ದೇವರು ದೆವ್ವಾಂಥ ಕಂಡ ಕಂಡ ದೇವಸ್ಥಾನ ಹುತ್ತ ಕಲ್ಲು ಅಲೆಯೋ ಅಪ್ಪ ಮಕ್ಕಳಿಗೆ ಅವರ ದೇವರು ಅಧಿಕಾರದಲ್ಲೇ ಉಳಿಸೊ ಬದಲಿಗೆ ಕಣ್ಣೀರ ವರ ಯಾಕೆ ದಯ ಪಾಲಿಸಿದನೋ ತಿಳಿಯಲು ಮತ್ತೊಂದು ಹೋಮಹವನ ಮಾಡಿದರೆ ತಿಳಿಯಬಹುದು..ಅಥವಾ ಬರೀ ಗಿಮಿಕ್ಕಾ..

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...