Homeರಾಜಕೀಯಕಣ್ಣೀರಧಾರೆ... ಇದೇಕೆ ಇದೇಕೆ ...! ಕುಮಾರಸ್ವಾಮಿ ಜಾಸ್ತಿ ಅತ್ತಿದ್ದು ಯಾವ ಸರ್ಕಾರದಲ್ಲಿ ನಿಮಗೆ ಗೊತ್ತೆ?

ಕಣ್ಣೀರಧಾರೆ… ಇದೇಕೆ ಇದೇಕೆ …! ಕುಮಾರಸ್ವಾಮಿ ಜಾಸ್ತಿ ಅತ್ತಿದ್ದು ಯಾವ ಸರ್ಕಾರದಲ್ಲಿ ನಿಮಗೆ ಗೊತ್ತೆ?

- Advertisement -
- Advertisement -

‘ಕುಮಾರಸ್ವಾಮಿ, ಕಾಂಗ್ರೆಸ್ ಜತೆಗೆ ಸರ್ಕಾರ ನಡೆಸುತ್ತಿದ್ದಾಗ ಸುರಿಸಿದಷ್ಟು ಕಣ್ಣೀರನ್ನು ಬಿಜೆಪಿ ಜತೆಗಿನ ಸರ್ಕಾರ ನಡೆಸುತ್ತಿದ್ದಾಗ ಸುರಿಸಿಲ್ಲ’ ಹೀಗೆಂದು ಜೆಡಿಎಸ್ ರಾಷ್ಟ್ರೀಯ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಜೆಡಿಎಸ್ ರಾಷ್ಟ್ರೀಯ ವರಿಷ್ಠರೇ ? ಕರ್ನಾಟಕ ಬಿಟ್ಟು ಬೇರೆ ಕಡೆ ಜೆಡಿಎಸ್ ಇದ್ದಂಗೆ ಕಾಣ್ತೀಲ್ಲ ಅಂತ ನೀವು ಪ್ರಶ್ನೆ ಹಾಕ್ಬೇಡಿ ? ಆಮೇಲೆ ಅವ್ರು ಕುಮಾರಸ್ವಾಮಿ ಜತೆ ಕುತ್ಕೊಂಡು ಅಳೋದಿಕ್ಕೆ ಶುರು ಮಾಡಿದ್ರೆ ಕಷ್ಟ. ಆಲ್ ರೈಟ್ ಮುಂದಕ್ಕೋಗೋಣ…

ದೇವೇಗೌಡರ ಮಾತಿನ ಅರ್ಥ ಏನು ? ಬಿಜೆಪಿ ಜತೆಗೆ ಸರ್ಕಾರ ನಡೆಸುವಾಗಲೂ ಕಣ್ಣೀರು ಹಾಕ್ತಾ ಇದ್ರು, ಆದರೆ ಕಾಂಗ್ರೆಸ್ ಜತೆಗೆ ಸರ್ಕಾರ ನಡೆಸುವಾಗ ಹಾಕಿದಷ್ಟು ಕಣ್ಣೀರು ಹಾಕಿಲ್ಲ ಅಂತಲ್ವ. ಮಳೆ ಇಷ್ಟು ಸೆಂಟಿಮೀಟರ್ ಬಿತ್ತು, ಇಷ್ಟು ಇಂಚು ಮಳೆ ಆಯ್ತು ಅಂತ ಹೇಳೋದಿಕ್ಕೆ ಅಳತೆಗೋಲು ಇದೆ. ಆದ್ರೆ ಯಾವಾಗ ಎಷ್ಟು ಕಣ್ಣೀರು ಬಿತ್ತು ಅಂತ ಅಳೆಯೋಕೆ ಮಾತ್ರ ಇಲ್ಲ. ಈ ಸೈಂಟಿಸ್ಟುಗಳಿಗೂ ಬುದ್ದಿ ಇಲ್ಲ ಕಣ್ರಿ, ಎಂಥೆಂತದೋ ಯಂತ್ರ ಕಂಡು ಹಿಡಿತಾರೆ, ಚಂದ್ರಯಾನಕ್ಕೂ ಕಳಿಸ್ತಾರೆ. ಈ ಕಣ್ಣೀರು ಎಷ್ಟು ಬಿತ್ತು ಅಂತ ಅಳೆಯೋಕೆ ಸಣ್ಣದೊಂದು ಥರ್ಮಾಮೀಟರ್ ಥರದ್ದು ಕಂಡು ಹಿಡಿದಿಲ್ವಲ್ರಿ… ಆಲ್ ರೈಟ್ ಮುಂದಕ್ಕೋಗೋಣ… ಮುಂದೆ ಕಂಡು ಹಿಡಿದ್ರೂ ಹಿಡಿಬಹುದು.

ಈಗ ಕುಮಾರಸ್ವಾಮಿ‌ ಕಣ್ಣೀರು ವಿಷಯಕ್ಕೆ ಬರೋಣ. ಮುಖ್ಯಮಂತ್ರಿ ಆಗಿರುವಾಗ ಅವ್ರು ಏಕೆ ಅಳ್ಬೇಕು, ಅದೂ ಅನಾಯಾಸವಾಗಿ ಮುಖ್ಯಮಂತ್ರಿ ಪಟ್ಟ ದಕ್ಕಿರುವಾಗಲೂ ? ನನಗಂತೂ ಅರ್ಥವಾಗ್ಲಿಲ್ಲ. ನಿಮಗೇನಾದ್ರೂ ಅರ್ಥವಾದ್ರೆ ಕಾಮೆಂಟಿನಲ್ಲಿ ಹೇಳಿ. ಈ ಐಎಎಸ್, ಐಪಿಎಸ್ ಪಾಸು ಮಾಡೋರು ಹಗಲು ರಾತ್ರಿ ಕಣ್ಣಿಗೆ ಎಣ್ಣೆ ಬುಡ್ಕಂಡು ಓದ್ತಾರೆ.‌ಕಣ್ಣಿಗೆ ಮಾತ್ರ ಎಣ್ಣೆ ಬಿಟ್ಕೊಳೋದಾ ? ಬೇರೆಲ್ಲೂ ಅಂದ್ರೆ ಬಾಯಿಗೆ ಬಿಟ್ಕಳೋದಿಲ್ವ ಅಂತ ಕೇಳ್ಬೇಡಿ. ಹಾಗೆ ಬಿಡ್ಕಂಡ್ರೆ ಐಎಎಸ್ ಪಾಸ್ ಮಾಡೋಕ್ಕಾಗೋಲ್ಲ. ಹಾಗೆ ಕಷ್ಟಪಟ್ಟು ಅಧಿಕಾರಿಗಳಾದವ್ರೆ ಬೇಸರವಾದ್ರೆ ನಗ್ತಾನಗ್ತಾನೆ ರಾಜಿನಾಮೆ ಬೀಸಾಕ್ಬಿಟ್ಟು ಮನೆಗೋಯ್ತಾರೆ. ಆಲ್ ರೈಟ್ ಮುಂದಕ್ಕೋಗೋಣ.

ಒಂದ್ ಇಂಟರೆಸ್ಟಿಂಗ್ ಅಂದ್ರೆ ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗಲೂ, ಇಲ್ದೆ ಇದ್ದಾಗಲೂ ಅಳ್ತಾ ಇರ್ತಾರೆ. ಅಧಿಕಾರಕ್ಕೆ ಬರೋ ಮುಂಚೆ ‘ ನಾನು ಹಾರ್ಟ್ ಪೇಶಂಟು’ ಅಂತ ಅಳ್ತಾರೆ.‌ಕೇಳಿದ ಜನವೂ ‘ಹೇ ಅತ್ಲಾಗೆ ಬಿಡೊ, ನಾವೇನ್ ನಮ್ ಮನೆ ಆಸ್ತೀನಾ ಬರ್ಕೊಟ್ಟವಾ, ಒಂದ್ ಓಟ್ ತಾನೇ ಅಂತ ಹಾಕಿಬಿಡ್ತಾರೆ’ ಗೆದ್ದಮೇಲೂ ಅಳ್ತಾರೆ. ‘ನಾನ್ ನಂಬಿದ ಜನ ನನಗೆ ಕೈಬುಡಲಿಲ್ಲ’ ಅಂತ.

ಇತ್ತಿತ್ಲಾಗೆ ಯಾವ ಪಾರ್ಟಿಗೂ ಸ್ಪಷ್ಟ ಸ್ಪಷ್ಟ‌ಬಹುಮತ ಇಲ್ಲ. ವಸಿ ಅಂದ್ರೆ ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಂಡು ಅಧಿಕಾರಕ್ಕೆ ಬರೋಕೆ ದೇವೇಗೌಡ್ರು ತಾವನೇ ಬರ್ಬೇಕು. ಆಯ್ತು ಬಂದ್ರು, ಕುಮಾರಸ್ವಾಮಿ ಮುಖ್ಯಮಂತ್ರಿ ಆದ್ರು… ಆದ್ರೆ ಮಾತ್ ಮಾತಿಗೂ ಟವೆಲ್ ಹಿಡ್ಕಂಡು ಅಳೋದ್ಯಾಕೆ? ಗೊಳೋ ಅಂತ ಅಳ್ತಾರೆ. ಇದು ಅವರ ತಂದೆ ದೇವೇಗೌಡ್ರರಿಂದಲೇ ಬಂದಿರೋ ರಕ್ತಗತ ಬಳುವಳಿ. ಏಕಂದ್ರೆ ದೇವೇಗೌಡ್ರು ಮುಸಮುಸ ಅಂತ ಮೂಗ್ ತಿಕ್ಕಂಡು ಅಳ್ತಾನೆ‌ ಇರ್ತಾರೆ.

ನೀವು ಮೂಗ್ ತಿಕ್ಕಂಡ್ರೆ ಅಳು ಬರುತ್ತಾ ಅಂತ ಪ್ರಯತ್ನಿಸೋಕೆ ಹೋಗ್ಬೇಡಿ… ಬರೋದು‌ ಕಣ್ಣೀರಲ್ಲ ಸಿಂಬಳ. ಅಂದಹಾಗೆ ಕಣ್ಣೀರು ಸುರಿಸೋದು ರಕ್ತಗತವಾಗಿ ಬರ್ತುದಾ ಅಂತ ಕೇಳ್ಬೇಡಿ. ಈ ಡಾಕ್ಟರುಗಳು ಬೇರೆ ರಕ್ತದಲ್ಲಿ ಬರೋದು ಕಾಯಿಲೆ ಹೊರತು ಕಲೆ ಅಲ್ಲ ಅಂತಾರೆ. ಅವ್ರ ಮಾತು ನಂಬ್ಬೇಡಿ. ಅವ್ರಿಗೆ ರಾಜಕೀಯ ಅಂದ್ರೇನು, ಕಲೆ ಅಂದ್ರೇನು ಅಂತ ಗೊತ್ತಿಲ್ಲ. ಆಲ್ ರೈಟ್ ಮುಂದಕ್ಕೋಗೋಣ.

ಈಗ ಪಾಯಿಂಟಿಗೆ ಬರೋಣ. ಕಣ್ಣೀರು ಹಾಕ್ತಾ ರಾಜ್ಯಭಾರ ಮಾಡೋದೇನಪ್ಪಾ, ಆಗ್ಲಿಲ್ಲ ಅಂದ್ರೆ ರಾಜ್ಯಪಾಲರತ್ರ ಹೋಗಿ ರಾಜಿನಾಮೆ ಒಗಾಯಿಸಿ ಅಂದ್ರೆ ಕೊಟ್ಬುಟ್ಟು ಬರೋದಪ್ಪಾ… ಅಂಗೂ ಮಾಡೋದಿಲ್ಲ. ಜನ ಏನಾದ್ರೂ ‘ಕುಮಾರಣ್ಣ ನೀನು‌ ಮುಖ್ಯಮಂತ್ರಿಯಾಗಿ ಮುಂದುವರಿಲಿಲ್ಲ ಅಂದ್ರೆ ನಮ್ಗೆ ಸಂಕಟ ಆಯ್ತುದೆ’ ಅಂತ ಕಣ್ಣೀರಾಕ್ತಾರಾ… ? ಒಂದುವೇಳೆ ಕರ್ನಾಟಕದ ಆರೂವರೆ ಕೋಟಿ ಜನ ಕಣ್ಣೀರು ಹಾಕಿದ್ರೆ ಇಲ್ಲಿ ಮಳೆ ಬಾರದೇ ಇದ್ದಾಗ ಪರ್ಜನ್ಯ ಜಪ ಮಾಡೋ ಬದ್ಲು ಒಂದಷ್ಟು ದಿನ ಕುಮಾರಸ್ವಾಮಿನಾ ಸಿಎಂ ಕುರ್ಚಿ ಮೇಲೆ ಕೂರಿಸ್ಬುಟ್ಟು ನಂತ್ರ ಇಳಿಸ್ಬುಟ್ರೆ ಜನವೆಲ್ಲಾ ಕಣ್ಣೀರಾಕಿ ಹಾಕಿ ನೀರು ಪ್ರವಾಹದೋಪಾದಿ ಹರೀತಾ ಇರೋದು. ಆದ್ರೆ ಹಾಗೇನೂ ಆಗಿಲ್ವೆ. ಜನ ಏನು ಪಟ್ಟು ಹಿಡಿದಿಲ್ವೆ. ಆದ್ರೂ ಅಳ್ತಾ ಅಳ್ತಾ ಅಧಿಕಾರ ನಡೆಸೋದ್ಯಾಕೆ. ವಯೋವೃದ್ಧರಾದ ತಮ್ಮ ತಂದೆಯವ್ರ ಕಣ್ಣಲೂ ನೀರು ತರಿಸೋದ್ಯಾಕೆ…ಒಂದ್ ವೇಳೆ ಇವರಿಬ್ರು ಸುರಿಸಿದ ಕಣ್ಣೀರನ್ನೆಲ್ಲ ಸಂಗ್ರಹಿಸಿ ಯಾವ್ದಾದ್ರೂ ಒಂದು ಸಸಿ ಬುಡಕ್ಕೆ ಹಾಕಿದ್ರೆ ಅದು ಹೆಮ್ಮರವಾಗಿ ಬೆಳ್ದು ಹಣ್ಣು ಬಿಡೋ ಬದ್ಲು ಕಣ್ಣೀರು ಸುರಿಸ್ತಾ ಇತ್ತೇನೋ… ಅದಕ್ಕೆ ಕಣ್ಣೀರು ಮರ ಅಂತ ಹೆಸ್ರಾಗಿ ದೇಶವಿದೇಶದ ಜನವೆಲ್ಲಾ ನೋಡೋಕೆ ಬರೋರೇನು…

ಆಲ್ ರೈಟ್… ಮುಂದಕ್ಕೋಣ, ಸಮ್ಮಿಶ್ರ ಸರ್ಕಾರ ಬಿದ್ದು ಹೋದ ಮೇಲೂ ಮಗನ ಕಣ್ಣೀರು ನೋಡಕಾಯ್ತಿಲ್ಲ, ಅಂತ ದೇವೇಗೌಡ್ರು ಅಳ್ತಾ ಅವ್ರೆ, ಮಹಾಜನಗಳೇ ಅವ್ರು ಕಣ್ಣೀರು ನಿಲ್ಸಿ ನಗುಮೊಗ ಮಾಡ್ಕಂಡು ನಿಂತ್ಕಳ್ಳೊ ಐಡಿಯಾ ಇದ್ರೆ ಕೊಡಿ ಅಂತ ಹೇಳ್ತಾ ಸದ್ಯಕ್ಕೆ ಈ ಕಣ್ಣೀರಧಾರೆ ಕಥೆಯನ್ನ ನಿಲ್ಸೋಣ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Ayyo Ayyo Sumane Natak
    Estu Kaniru surisidru JDS GOVT Madoke Agola Next Election nali Own Agi Govt madidre Nanu HDK MANEGE 1 year Jeeta madoke ready..

    Nataka Nataka Hige ಕಣ್ಣೀರಧಾರೆ Kinta Maneli Irodu Like Alwa MANINA MAKLU HOLADA KELESA MADLI. ELA NEXT ELECTION NALI 122 MORE SEAT BANDU GOVT MADI NIMA MANELI NANU JEET MADTINI

  2. ಕಣ್ಣೀರಧಾರೆ‌ ಇದೇಕೆ…ಇದೇಕೆ..ಲೇಖನ ವಿಡಂಬನಾತ್ಮಕವಾಗಿ ಚೆನ್ನಾಗಿದೆ. ದೇವರು ದೆವ್ವಾಂಥ ಕಂಡ ಕಂಡ ದೇವಸ್ಥಾನ ಹುತ್ತ ಕಲ್ಲು ಅಲೆಯೋ ಅಪ್ಪ ಮಕ್ಕಳಿಗೆ ಅವರ ದೇವರು ಅಧಿಕಾರದಲ್ಲೇ ಉಳಿಸೊ ಬದಲಿಗೆ ಕಣ್ಣೀರ ವರ ಯಾಕೆ ದಯ ಪಾಲಿಸಿದನೋ ತಿಳಿಯಲು ಮತ್ತೊಂದು ಹೋಮಹವನ ಮಾಡಿದರೆ ತಿಳಿಯಬಹುದು..ಅಥವಾ ಬರೀ ಗಿಮಿಕ್ಕಾ..

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...