Homeರಾಜಕೀಯಕಣ್ಣೀರಧಾರೆ... ಇದೇಕೆ ಇದೇಕೆ ...! ಕುಮಾರಸ್ವಾಮಿ ಜಾಸ್ತಿ ಅತ್ತಿದ್ದು ಯಾವ ಸರ್ಕಾರದಲ್ಲಿ ನಿಮಗೆ ಗೊತ್ತೆ?

ಕಣ್ಣೀರಧಾರೆ… ಇದೇಕೆ ಇದೇಕೆ …! ಕುಮಾರಸ್ವಾಮಿ ಜಾಸ್ತಿ ಅತ್ತಿದ್ದು ಯಾವ ಸರ್ಕಾರದಲ್ಲಿ ನಿಮಗೆ ಗೊತ್ತೆ?

- Advertisement -
- Advertisement -

‘ಕುಮಾರಸ್ವಾಮಿ, ಕಾಂಗ್ರೆಸ್ ಜತೆಗೆ ಸರ್ಕಾರ ನಡೆಸುತ್ತಿದ್ದಾಗ ಸುರಿಸಿದಷ್ಟು ಕಣ್ಣೀರನ್ನು ಬಿಜೆಪಿ ಜತೆಗಿನ ಸರ್ಕಾರ ನಡೆಸುತ್ತಿದ್ದಾಗ ಸುರಿಸಿಲ್ಲ’ ಹೀಗೆಂದು ಜೆಡಿಎಸ್ ರಾಷ್ಟ್ರೀಯ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಜೆಡಿಎಸ್ ರಾಷ್ಟ್ರೀಯ ವರಿಷ್ಠರೇ ? ಕರ್ನಾಟಕ ಬಿಟ್ಟು ಬೇರೆ ಕಡೆ ಜೆಡಿಎಸ್ ಇದ್ದಂಗೆ ಕಾಣ್ತೀಲ್ಲ ಅಂತ ನೀವು ಪ್ರಶ್ನೆ ಹಾಕ್ಬೇಡಿ ? ಆಮೇಲೆ ಅವ್ರು ಕುಮಾರಸ್ವಾಮಿ ಜತೆ ಕುತ್ಕೊಂಡು ಅಳೋದಿಕ್ಕೆ ಶುರು ಮಾಡಿದ್ರೆ ಕಷ್ಟ. ಆಲ್ ರೈಟ್ ಮುಂದಕ್ಕೋಗೋಣ…

ದೇವೇಗೌಡರ ಮಾತಿನ ಅರ್ಥ ಏನು ? ಬಿಜೆಪಿ ಜತೆಗೆ ಸರ್ಕಾರ ನಡೆಸುವಾಗಲೂ ಕಣ್ಣೀರು ಹಾಕ್ತಾ ಇದ್ರು, ಆದರೆ ಕಾಂಗ್ರೆಸ್ ಜತೆಗೆ ಸರ್ಕಾರ ನಡೆಸುವಾಗ ಹಾಕಿದಷ್ಟು ಕಣ್ಣೀರು ಹಾಕಿಲ್ಲ ಅಂತಲ್ವ. ಮಳೆ ಇಷ್ಟು ಸೆಂಟಿಮೀಟರ್ ಬಿತ್ತು, ಇಷ್ಟು ಇಂಚು ಮಳೆ ಆಯ್ತು ಅಂತ ಹೇಳೋದಿಕ್ಕೆ ಅಳತೆಗೋಲು ಇದೆ. ಆದ್ರೆ ಯಾವಾಗ ಎಷ್ಟು ಕಣ್ಣೀರು ಬಿತ್ತು ಅಂತ ಅಳೆಯೋಕೆ ಮಾತ್ರ ಇಲ್ಲ. ಈ ಸೈಂಟಿಸ್ಟುಗಳಿಗೂ ಬುದ್ದಿ ಇಲ್ಲ ಕಣ್ರಿ, ಎಂಥೆಂತದೋ ಯಂತ್ರ ಕಂಡು ಹಿಡಿತಾರೆ, ಚಂದ್ರಯಾನಕ್ಕೂ ಕಳಿಸ್ತಾರೆ. ಈ ಕಣ್ಣೀರು ಎಷ್ಟು ಬಿತ್ತು ಅಂತ ಅಳೆಯೋಕೆ ಸಣ್ಣದೊಂದು ಥರ್ಮಾಮೀಟರ್ ಥರದ್ದು ಕಂಡು ಹಿಡಿದಿಲ್ವಲ್ರಿ… ಆಲ್ ರೈಟ್ ಮುಂದಕ್ಕೋಗೋಣ… ಮುಂದೆ ಕಂಡು ಹಿಡಿದ್ರೂ ಹಿಡಿಬಹುದು.

ಈಗ ಕುಮಾರಸ್ವಾಮಿ‌ ಕಣ್ಣೀರು ವಿಷಯಕ್ಕೆ ಬರೋಣ. ಮುಖ್ಯಮಂತ್ರಿ ಆಗಿರುವಾಗ ಅವ್ರು ಏಕೆ ಅಳ್ಬೇಕು, ಅದೂ ಅನಾಯಾಸವಾಗಿ ಮುಖ್ಯಮಂತ್ರಿ ಪಟ್ಟ ದಕ್ಕಿರುವಾಗಲೂ ? ನನಗಂತೂ ಅರ್ಥವಾಗ್ಲಿಲ್ಲ. ನಿಮಗೇನಾದ್ರೂ ಅರ್ಥವಾದ್ರೆ ಕಾಮೆಂಟಿನಲ್ಲಿ ಹೇಳಿ. ಈ ಐಎಎಸ್, ಐಪಿಎಸ್ ಪಾಸು ಮಾಡೋರು ಹಗಲು ರಾತ್ರಿ ಕಣ್ಣಿಗೆ ಎಣ್ಣೆ ಬುಡ್ಕಂಡು ಓದ್ತಾರೆ.‌ಕಣ್ಣಿಗೆ ಮಾತ್ರ ಎಣ್ಣೆ ಬಿಟ್ಕೊಳೋದಾ ? ಬೇರೆಲ್ಲೂ ಅಂದ್ರೆ ಬಾಯಿಗೆ ಬಿಟ್ಕಳೋದಿಲ್ವ ಅಂತ ಕೇಳ್ಬೇಡಿ. ಹಾಗೆ ಬಿಡ್ಕಂಡ್ರೆ ಐಎಎಸ್ ಪಾಸ್ ಮಾಡೋಕ್ಕಾಗೋಲ್ಲ. ಹಾಗೆ ಕಷ್ಟಪಟ್ಟು ಅಧಿಕಾರಿಗಳಾದವ್ರೆ ಬೇಸರವಾದ್ರೆ ನಗ್ತಾನಗ್ತಾನೆ ರಾಜಿನಾಮೆ ಬೀಸಾಕ್ಬಿಟ್ಟು ಮನೆಗೋಯ್ತಾರೆ. ಆಲ್ ರೈಟ್ ಮುಂದಕ್ಕೋಗೋಣ.

ಒಂದ್ ಇಂಟರೆಸ್ಟಿಂಗ್ ಅಂದ್ರೆ ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗಲೂ, ಇಲ್ದೆ ಇದ್ದಾಗಲೂ ಅಳ್ತಾ ಇರ್ತಾರೆ. ಅಧಿಕಾರಕ್ಕೆ ಬರೋ ಮುಂಚೆ ‘ ನಾನು ಹಾರ್ಟ್ ಪೇಶಂಟು’ ಅಂತ ಅಳ್ತಾರೆ.‌ಕೇಳಿದ ಜನವೂ ‘ಹೇ ಅತ್ಲಾಗೆ ಬಿಡೊ, ನಾವೇನ್ ನಮ್ ಮನೆ ಆಸ್ತೀನಾ ಬರ್ಕೊಟ್ಟವಾ, ಒಂದ್ ಓಟ್ ತಾನೇ ಅಂತ ಹಾಕಿಬಿಡ್ತಾರೆ’ ಗೆದ್ದಮೇಲೂ ಅಳ್ತಾರೆ. ‘ನಾನ್ ನಂಬಿದ ಜನ ನನಗೆ ಕೈಬುಡಲಿಲ್ಲ’ ಅಂತ.

ಇತ್ತಿತ್ಲಾಗೆ ಯಾವ ಪಾರ್ಟಿಗೂ ಸ್ಪಷ್ಟ ಸ್ಪಷ್ಟ‌ಬಹುಮತ ಇಲ್ಲ. ವಸಿ ಅಂದ್ರೆ ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಂಡು ಅಧಿಕಾರಕ್ಕೆ ಬರೋಕೆ ದೇವೇಗೌಡ್ರು ತಾವನೇ ಬರ್ಬೇಕು. ಆಯ್ತು ಬಂದ್ರು, ಕುಮಾರಸ್ವಾಮಿ ಮುಖ್ಯಮಂತ್ರಿ ಆದ್ರು… ಆದ್ರೆ ಮಾತ್ ಮಾತಿಗೂ ಟವೆಲ್ ಹಿಡ್ಕಂಡು ಅಳೋದ್ಯಾಕೆ? ಗೊಳೋ ಅಂತ ಅಳ್ತಾರೆ. ಇದು ಅವರ ತಂದೆ ದೇವೇಗೌಡ್ರರಿಂದಲೇ ಬಂದಿರೋ ರಕ್ತಗತ ಬಳುವಳಿ. ಏಕಂದ್ರೆ ದೇವೇಗೌಡ್ರು ಮುಸಮುಸ ಅಂತ ಮೂಗ್ ತಿಕ್ಕಂಡು ಅಳ್ತಾನೆ‌ ಇರ್ತಾರೆ.

ನೀವು ಮೂಗ್ ತಿಕ್ಕಂಡ್ರೆ ಅಳು ಬರುತ್ತಾ ಅಂತ ಪ್ರಯತ್ನಿಸೋಕೆ ಹೋಗ್ಬೇಡಿ… ಬರೋದು‌ ಕಣ್ಣೀರಲ್ಲ ಸಿಂಬಳ. ಅಂದಹಾಗೆ ಕಣ್ಣೀರು ಸುರಿಸೋದು ರಕ್ತಗತವಾಗಿ ಬರ್ತುದಾ ಅಂತ ಕೇಳ್ಬೇಡಿ. ಈ ಡಾಕ್ಟರುಗಳು ಬೇರೆ ರಕ್ತದಲ್ಲಿ ಬರೋದು ಕಾಯಿಲೆ ಹೊರತು ಕಲೆ ಅಲ್ಲ ಅಂತಾರೆ. ಅವ್ರ ಮಾತು ನಂಬ್ಬೇಡಿ. ಅವ್ರಿಗೆ ರಾಜಕೀಯ ಅಂದ್ರೇನು, ಕಲೆ ಅಂದ್ರೇನು ಅಂತ ಗೊತ್ತಿಲ್ಲ. ಆಲ್ ರೈಟ್ ಮುಂದಕ್ಕೋಗೋಣ.

ಈಗ ಪಾಯಿಂಟಿಗೆ ಬರೋಣ. ಕಣ್ಣೀರು ಹಾಕ್ತಾ ರಾಜ್ಯಭಾರ ಮಾಡೋದೇನಪ್ಪಾ, ಆಗ್ಲಿಲ್ಲ ಅಂದ್ರೆ ರಾಜ್ಯಪಾಲರತ್ರ ಹೋಗಿ ರಾಜಿನಾಮೆ ಒಗಾಯಿಸಿ ಅಂದ್ರೆ ಕೊಟ್ಬುಟ್ಟು ಬರೋದಪ್ಪಾ… ಅಂಗೂ ಮಾಡೋದಿಲ್ಲ. ಜನ ಏನಾದ್ರೂ ‘ಕುಮಾರಣ್ಣ ನೀನು‌ ಮುಖ್ಯಮಂತ್ರಿಯಾಗಿ ಮುಂದುವರಿಲಿಲ್ಲ ಅಂದ್ರೆ ನಮ್ಗೆ ಸಂಕಟ ಆಯ್ತುದೆ’ ಅಂತ ಕಣ್ಣೀರಾಕ್ತಾರಾ… ? ಒಂದುವೇಳೆ ಕರ್ನಾಟಕದ ಆರೂವರೆ ಕೋಟಿ ಜನ ಕಣ್ಣೀರು ಹಾಕಿದ್ರೆ ಇಲ್ಲಿ ಮಳೆ ಬಾರದೇ ಇದ್ದಾಗ ಪರ್ಜನ್ಯ ಜಪ ಮಾಡೋ ಬದ್ಲು ಒಂದಷ್ಟು ದಿನ ಕುಮಾರಸ್ವಾಮಿನಾ ಸಿಎಂ ಕುರ್ಚಿ ಮೇಲೆ ಕೂರಿಸ್ಬುಟ್ಟು ನಂತ್ರ ಇಳಿಸ್ಬುಟ್ರೆ ಜನವೆಲ್ಲಾ ಕಣ್ಣೀರಾಕಿ ಹಾಕಿ ನೀರು ಪ್ರವಾಹದೋಪಾದಿ ಹರೀತಾ ಇರೋದು. ಆದ್ರೆ ಹಾಗೇನೂ ಆಗಿಲ್ವೆ. ಜನ ಏನು ಪಟ್ಟು ಹಿಡಿದಿಲ್ವೆ. ಆದ್ರೂ ಅಳ್ತಾ ಅಳ್ತಾ ಅಧಿಕಾರ ನಡೆಸೋದ್ಯಾಕೆ. ವಯೋವೃದ್ಧರಾದ ತಮ್ಮ ತಂದೆಯವ್ರ ಕಣ್ಣಲೂ ನೀರು ತರಿಸೋದ್ಯಾಕೆ…ಒಂದ್ ವೇಳೆ ಇವರಿಬ್ರು ಸುರಿಸಿದ ಕಣ್ಣೀರನ್ನೆಲ್ಲ ಸಂಗ್ರಹಿಸಿ ಯಾವ್ದಾದ್ರೂ ಒಂದು ಸಸಿ ಬುಡಕ್ಕೆ ಹಾಕಿದ್ರೆ ಅದು ಹೆಮ್ಮರವಾಗಿ ಬೆಳ್ದು ಹಣ್ಣು ಬಿಡೋ ಬದ್ಲು ಕಣ್ಣೀರು ಸುರಿಸ್ತಾ ಇತ್ತೇನೋ… ಅದಕ್ಕೆ ಕಣ್ಣೀರು ಮರ ಅಂತ ಹೆಸ್ರಾಗಿ ದೇಶವಿದೇಶದ ಜನವೆಲ್ಲಾ ನೋಡೋಕೆ ಬರೋರೇನು…

ಆಲ್ ರೈಟ್… ಮುಂದಕ್ಕೋಣ, ಸಮ್ಮಿಶ್ರ ಸರ್ಕಾರ ಬಿದ್ದು ಹೋದ ಮೇಲೂ ಮಗನ ಕಣ್ಣೀರು ನೋಡಕಾಯ್ತಿಲ್ಲ, ಅಂತ ದೇವೇಗೌಡ್ರು ಅಳ್ತಾ ಅವ್ರೆ, ಮಹಾಜನಗಳೇ ಅವ್ರು ಕಣ್ಣೀರು ನಿಲ್ಸಿ ನಗುಮೊಗ ಮಾಡ್ಕಂಡು ನಿಂತ್ಕಳ್ಳೊ ಐಡಿಯಾ ಇದ್ರೆ ಕೊಡಿ ಅಂತ ಹೇಳ್ತಾ ಸದ್ಯಕ್ಕೆ ಈ ಕಣ್ಣೀರಧಾರೆ ಕಥೆಯನ್ನ ನಿಲ್ಸೋಣ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Ayyo Ayyo Sumane Natak
    Estu Kaniru surisidru JDS GOVT Madoke Agola Next Election nali Own Agi Govt madidre Nanu HDK MANEGE 1 year Jeeta madoke ready..

    Nataka Nataka Hige ಕಣ್ಣೀರಧಾರೆ Kinta Maneli Irodu Like Alwa MANINA MAKLU HOLADA KELESA MADLI. ELA NEXT ELECTION NALI 122 MORE SEAT BANDU GOVT MADI NIMA MANELI NANU JEET MADTINI

  2. ಕಣ್ಣೀರಧಾರೆ‌ ಇದೇಕೆ…ಇದೇಕೆ..ಲೇಖನ ವಿಡಂಬನಾತ್ಮಕವಾಗಿ ಚೆನ್ನಾಗಿದೆ. ದೇವರು ದೆವ್ವಾಂಥ ಕಂಡ ಕಂಡ ದೇವಸ್ಥಾನ ಹುತ್ತ ಕಲ್ಲು ಅಲೆಯೋ ಅಪ್ಪ ಮಕ್ಕಳಿಗೆ ಅವರ ದೇವರು ಅಧಿಕಾರದಲ್ಲೇ ಉಳಿಸೊ ಬದಲಿಗೆ ಕಣ್ಣೀರ ವರ ಯಾಕೆ ದಯ ಪಾಲಿಸಿದನೋ ತಿಳಿಯಲು ಮತ್ತೊಂದು ಹೋಮಹವನ ಮಾಡಿದರೆ ತಿಳಿಯಬಹುದು..ಅಥವಾ ಬರೀ ಗಿಮಿಕ್ಕಾ..

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...