Homeಮುಖಪುಟ'ವಿದ್ಯುತ್ ಕಳ್ಳ': ಕುಮಾರಸ್ವಾಮಿ ನಿವಾಸದ ಬಳಿ ಪೋಸ್ಟರ್‌ ಪತ್ತೆ

‘ವಿದ್ಯುತ್ ಕಳ್ಳ’: ಕುಮಾರಸ್ವಾಮಿ ನಿವಾಸದ ಬಳಿ ಪೋಸ್ಟರ್‌ ಪತ್ತೆ

- Advertisement -
- Advertisement -

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಿದ್ಯುತ್‌ ಕಳ್ಳತನದ ಆರೋಪದ ಬೆನ್ನಲ್ಲೇ ಇದೀಗ ವಿದ್ಯುತ್ ಕಳ್ಳ ಎಚ್.ಡಿ.ಕುಮಾರಸ್ವಾಮಿ ಎಂದು ಬರೆದು ಅಂಟಿಸಿರುವ ಪೋಸ್ಟರ್‌ ವ್ಯಾಪಕವಾಗಿ ವೈರಲ್‌ ಆಗಿದೆ.

ಎಚ್‌ಡಿಕೆ ನಿವಾಸದ ಬಳಿ ‘ಕರೆಂಟ್ ಕದ್ದರು ಎಚ್‌ಡಿಕೆ ಪ್ರಾಮಾಣಿಕತೆಯನ್ನು ಮೆಚ್ಚಲೇಬೇಕು’, ‘ವಿದ್ಯುತ್ ಕಳ್ಳ ಎಚ್.ಡಿ.ಕುಮಾರಸ್ವಾಮಿ’ ಎಂದು ಪೋಸ್ಟರ್‌ ಅಂಟಿಸಲಾಗಿದೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪೋಸ್ಟರ್‌ಗಳನ್ನು ತೆರವುಗೊಳಿಸಿದ್ದಾರೆ. ಈ ಪೋಸ್ಟರ್‌ಗಳು ಸಾಮಾಜಿಕ ಮಾದ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಈಗಾಗಲೇ ವಿದ್ಯುತ್ ಕಳ್ಳತನ ಆರೋಪಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯು (ಬೆಸ್ಕಾಂ) ವಿದ್ಯುತ್ ಕಳ್ಳತನ ಪ್ರಕರಣ ದಾಖಲಿಸಿದೆ.

ಬೆಂಗಳೂರಿನ ಜೆ.ಪಿ ನಗರದಲ್ಲಿರುವ ಕುಮಾರಸ್ವಾಮಿಯವರ ನಿವಾಸಕ್ಕೆ ದೀಪಾವಳಿ ಅಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಹೇಳಿದೆ.

ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ. ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ, ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್‌ಗಳಿವೆಯಲ್ಲವೇ? ಎಂದು ಹೇಳಿದೆ.

ರಾಜ್ಯದಲ್ಲಿ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು ಬರ ಎದುರಿಸುತ್ತಿದ್ದೀರಾ? ಎಂದು ಟೀಕಿಸಿದೆ.

ವಿದ್ಯುತ್ ಕಳ್ಳತನ ಮಾಡಿದ್ದಾರೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇದು ಅಚಾತುರ್ಯದಿಂದ ಆದ ಘಟನೆ. ದಂಡ ಕಟ್ಟುತ್ತೇನೆ ಎಂದು ಹೇಳಿದ್ದರು. ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್‌ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಹೇಳಿಕೊಂಡಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...