Homeರಾಜಕೀಯನಮ್ಮ ಸಿಎಮ್ಮು ಸಮಯದ ಬೊಂಬೆಯಂತಲ್ಲಾ....!

ನಮ್ಮ ಸಿಎಮ್ಮು ಸಮಯದ ಬೊಂಬೆಯಂತಲ್ಲಾ….!

- Advertisement -
- Advertisement -

ಆಡಿದ ಮಾತೆಲ್ಲವೂ ತಪ್ಪಾಗುವಂತೆ ಕಂಡಾಗ ಮೌನವಾಗಿರುವುದು ಲೇಸು. ಇಂತಹ ಸೂಕ್ಷ್ಮಗಳನ್ನು ಅರಿಯದ ಕುಮಾರಣ್ಣ ಮಾತನಾಡುತ್ತಲೆ ಆಡಿದ ಮಾತಿನ ಕೋಟೆಯೊಳಗೆ ಬಂದಿಯಾಗುತ್ತಿದ್ದಾರಂತಲ್ಲಾ, ಜವಾಬ್ದಾರಿ ಹೊತ್ತವರಿಂದ ಒಳ್ಳೆ ಮಾತುಗಳು ಬರಬೇಕಾದರೆ ಓದಿನ ಹಿನ್ನೆಲೆ ಇರಬೇಕಾಗುತ್ತದೆ. ಇಲ್ಲ ಅನುಭವದ ದ್ರವ್ಯ ಇರಬೇಕಾಗುತ್ತದೆ, ಇವೆರಡೂ ಇರದವರು ಕುಮಾರಣ್ಣನಂತಿರುತ್ತಾರೆ ಉದಾಹರಣೆಗೆ ಪ್ರತ್ಯೇಕತೆಯ ಕೂಗಿನಿಂದ ವಿಚಲಿತಗೊಂಡ ಕುಮಾರಣ್ಣ “ಪ್ರತ್ಯೇಕ ರಾಜ್ಯವಾದರೆ ಅಭಿವೃದ್ಧಿಗೆ ಹಣ ಎಲ್ಲಿಂದ ತರುತ್ತೀರಿ” ಎಂದುಬಿಟ್ಟಿದ್ದಾರೆ, ಇದರಿಂದ ಅನಾವರಣಗೊಂಡಿದ್ದೇನೆಂದರೆ ಅಂತೂ ಪ್ರತ್ಯೇಕತೆ ನಿಮ್ಮ ಮನಸ್ಸಿನಲ್ಲಿದೆ. ಹಣಕಾಸಿನ ಖಜಾನೆ ಬೆಂಗಳೂರಾಗಿರುವುದರಿಂದ ಅದು ನಿಮ್ಮಲಿಲ್ಲ ಇತ್ಯಾದಿ ಎಂಬಂತೆ ಅವರ ಮಾತು ಹಲವು ಚರ್ಚೆ ಹುಟ್ಟುಹಾಕುತ್ತಿವೆ. ಅಂತೂ ಸರಿಯಾಗಿ ಕನ್ನಡ ಮಾತನಾಡಲು ಬಾರದ ರಾಮುಲು ಎಂಬ ವ್ಯಕ್ತಿಗೆ ಉತ್ತರಕೊಡಲು ಹೋಗಿ ಸಿಕ್ಕಿಕೊಂಡಿರುವ ಕುಮಾರಣ್ಣನನ್ನು ಉಳಿಸಲು ಹೋದ ಧÀೃತರಾಷ್ಟ್ರರು ಎಂದಿನಂತೆ ಜಾತಿ ಲೆಕ್ಕಾಚಾರ ತೆಗೆದು ಲಿಂಗಾಯಿತ ಮುಖ್ಯಮಂತ್ರಿಗಳ ಅವಧಿಯ ಕೆಲಸಗಳನ್ನು ಎಣಿಸಿ ಎಂದಿದ್ದಾರಂತೆ. ಆ ಕೆಲಸವೇನಾದರೂ ನಡೆದರೆ ದೇವೇಗೌಡರೆ ಸಿಕ್ಕಿಬೀಳುತ್ತಾರಂತಲ್ಲಾ ಏಕೆಂದರೆ ಇಡೀ ಕರ್ನಾಟಕವನ್ನು ಸಮಭಾವದಲ್ಲಿ ಕಂಡ ವಿರೇಂದ್ರಪಾಟೀಲರು ತಮ್ಮ ಸ್ವಂತ ಕ್ಷೇತ್ರಕ್ಕೆ ಏನೂ ಮಾಡಿಲ್ಲ ಏಕೆಂದರೆ ಅವರ ತಲೆಯಲ್ಲಿರುವುದು ಅಖಂಡ ಕರ್ನಾಟಕ. ಅದೇ ದೇವೇಗೌಡರ ತಲೆಯಲ್ಲಿರುವುದು ಹೊಳೆನರಸೀಪುರವಂತಲ್ಲಾ ಥೂತ್ತೇರಿ.
*******
ಕುಮಾರಣ್ಣನವರು ಅನಿಸಿದ್ದನ್ನ ಅಂದುಬಿಡುವುದರಲ್ಲಿ ನಿಸ್ಸೀಮರು. ಅದರಂತೆ ಮಾಧ್ಯಮದವರ ಮೇಲೆ ಮುಗಿಬಿದ್ದಿದ್ದಾರೆ. ಇದನ್ನು ವಿಶ್ಲೇಷಿಸುವುದಾದರೆ ಕೆಲವು ಮಾಧ್ಯಮದವರಿಗೆ ಅವರಿಗೆ ಬೇಕಿದ್ದ ಸರಕಾರ ಬರಲಿಲ್ಲ ಬಂದಿದ್ದರೆ ಇನ್ನೊಂದೆರಡು ಸೈಟು ಮತ್ತು ಕಾರು ಕೊಳ್ಳಬಹುದಿತ್ತು. ರೆಸಾರ್ಟುಗಳಲ್ಲಿ ಪಾರ್ಟಿ ಮಾಡುತ್ತ ತಾವೇ ಸರಕಾರ ನಡೆಸುವವರಂತೆ ಬಹುಬೆಲೆಯ ಮದÀ್ಯ ಸೇವಿಸುತ್ತ ಉಳಿದದ್ದನ್ನ ಮನೆಗೆ ತೆಗೆದುಕೊಂಡು ಹೋಗಬಹುದಿತ್ತು. ಈಗ ಅದಾವುದಕ್ಕು ಅವಕಾಶವಿಲ್ಲದೆ ಕೇವಲ ಕುಮಾರಣ್ಣನ ಆಪ್ತ ಪತ್ರಕರ್ತರು ಮಾತ್ರ ತಿಂದುಂಡು ತೇಗುತ್ತಿರುವುದನ್ನು ನೋಡಿ ಸುಮ್ಮನಿರಲಾದೀತೆ. ಅದಕ್ಕಾಗಿಯೇ ಕರ್ನಾಟಕದ ಭೂಪಟವನ್ನೇ ಅರ್ಧ ಮಾಡಿಕೊಂಡು ಕೆರೆಯುತ್ತ ಮಾತನಾಡುತ್ತ ಕುಮಾರಣ್ಣನನ್ನು ರೇಗಿಸಿದ್ದಾರಂತಲ್ಲಾ. ಕುಮಾರಣ್ಣನ ಬಗ್ಗೆ ಪತ್ರಿಕೆಗಳೇನು ಜನಸಾಮಾನ್ಯರಿಗೂ ಅನುಮಾನಗಳಿವೆ. ಪಾಪ ಆತ ಜನಾಭಿಪ್ರಾಯದ ಮುಖ್ಯಮಂತ್ರಿಯಲ್ಲ ಗತಿಗೆಟ್ಟ ಕಾಂಗ್ರೆಸ್ಸಿಗರು ತಲೆಕೆಟ್ಟ ಬಿಜೆಪಿಗಳಿಗೆ ಹೆದರಿ ಮತಿಗೆಟ್ಟ ದಳದವರೊಂದಿಗೆ ಕೂಡಿಕೆ ಮಾಡಿಕೊಂಡರು. ಇದರಿಂದ ಇನ್ನ ತಲೆಕೆಟ್ಟಂತಾದ ಬಿಜೆಪಿಗಳು ರಾಜ್ಯವನ್ನೇ ಹೊಡೆದು ಹಾಕುವ ಹೀನಕೃತ್ಯಕ್ಕೆ ಕೈಹಾಕಿದೆ. ಈ ಹಿಂದೆ ಮಸೀದಿಯನ್ನೆ ಹೊಡೆದು ಹಾಕಿದ ಇತಿಹಾಸ ಹೊಂದಿರುವ ಬಿಜೆಪಿಗಳಿಗೆ ಯಾವುದೂ ಅಸಾಧ್ಯವಲ್ಲ. ಆದರೇನು ತನ್ನ ಮನೆತನ ಯಾವಾಗಲೂ ಅಧಿಕಾರದಲ್ಲಿರಬೇಕೆಂಬ ಕನಸು ಕಾಣುತ್ತ ಅದಕ್ಕಾಗಿ ಮಾರಿ ಬೆಲೆ ಹೆಣೆಯುತ್ತ ಕುಳಿತ ದೇವೇಗೌಡರ ಮನದಲ್ಲಿ ಕರ್ನಾಟಕ ಇಬ್ಭಾಗವಾಗುವುದು ಬೇಕಿಲ್ಲ ಎಂದು ಹೇಗೆ ಹೇಳುವುದು ಥೂತ್ತೇರಿ.
*******
ಮಾತಿನ ಬಲೆಯಲ್ಲಿ ಸಿಕ್ಕಿಕೊಂಡ ಕುಮಾರಣ್ಣನ ವರಸೆ ಹೊಸದೇನಲ್ಲ. ಹಿಂದೆ 20 ತಿಂಗಳು ಮುಖ್ಯಮಂತ್ರಿಯಾಗಿ ಇಳಿದಾಗ ಜನಾಂಗದ ಸಭೆಯಲ್ಲಿ ಮಾತನಾಡುತ್ತ ನಾನು ಅಧಿಕಾರದಲ್ಲಿದ್ದಾಗ ನನ್ನ ಜನಕ್ಕೆ ಏನೂ ಮಾಡಲಾಗಲಿಲ್ಲ ಕ್ಷಮಿಸಿ ಎಂದಿದ್ದರು. ಕಳೆದ ಚುನಾವಣೆಯಲ್ಲಿ ಜಾತಿ ಪ್ರಸ್ತಾಪ ಮಾಡಿ ಜನಾಂಗವನ್ನು ಎತ್ತಿ ಕಟ್ಟಿದ್ದರು. ಉತ್ತರ ಕರ್ನಾಟಕದ ಜನರನ್ನ ಮರಳು ಮಾಡಲು ಹುಬ್ಬಳ್ಳಿಯಲ್ಲಿ ಮನೆ ಮಾಡಿದ್ದರು. ಆದರದು ವರ್ಕೌಟಾಗಲಿಲ್ಲ. ಈಗ ಬಜೆಟ್ಟಿನಲ್ಲೂ ಪ್ರಾದೇಶಿಕ ಅಸಮತೋಲನ ಎದ್ದುಕಂಡಿದೆ. ಜನ ತಮ್ಮ ನಾಯಕನಾದವನನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ ಎಂಬ ತಿಳಿವಳಿಕೆಯಿಲ್ಲದ ಕುಮಾರಣ್ಣ ಈಗಾಗಲೇ ಆಡಿರುವ ಮಾತುಗಳಿಂದ ಖಚಿತ ಅಭಿಪ್ರಾಯವಿಲ್ಲದ ಪರಿಸ್ಥಿತಿಯ ಕೂಸೆಂಬುದನ್ನು ಸಾಬೀತು ಪಡಿಸಿದ್ದಾರೆ. ರಾಹುಲ್‍ಗಾಂಧಿ ಕೃಪೆಯಿಂದ ನಾನು ಮುಖ್ಯಮಂತ್ರಿಯಾದೆ ಎಂದಿದ್ದ ಕುಮಾರಣ್ಣ ಈಗಾಗಲೇ ಅಯ್ಯಪ್ಪನ ಕೃಪೆಯಿಂದ ಮುಖ್ಯಮಂತ್ರಿಯಾದೆ ಎಂದಿದ್ದಾರೆ. ಮದುವೆಯಾಗದೆ ಅಂಗೇ ಉಳಿದಿರುವ ರಾಹುಲ್‍ಗಾಂಧಿಯೇ ಅಯ್ಯಪ್ಪನಿಗೆ ಸಮಾನ ಎಂದುಕೊಂಡರೆ ತೊಂದರೆಯಿಲ್ಲ. ಆದರೆ ಸಮಯಕ್ಕೊಂದು ಮಾತು ಬದಲಿಸುವ ಕುಮಾರಣ್ಣನ ಎದುರು ಇನ್ನೊಂದೆರಡು ಸಮಸ್ಯೆಗಳಿವೆ, ಅವುಗಳ ಪೈಕಿ ಯಾರೊ ಲಂಬಾಣಿ ಸ್ವಾಮಿ ಮುಂದಿನ ಮುಖ್ಯಮಂತ್ರಿ ನೀವೇ ಅಂದಿದ್ದರಂತೆ. ಅಣ್ಣ ಇನ್ನು ಅಲ್ಲಿಗೆ ಹೋದಾಗ ಏನೇಳುತ್ತಾರೊ ಏನೋ ಥೂತ್ತೇರಿ.
*******
ಕರ್ನಾಟಕ ಹಿಂದೆಂದೂ ಕಂಡರಿಯದ ಸಮಸ್ಯೆಗಳಿಂದ ತತ್ತರಿಸುತ್ತಿರುವಾಗ ಅಷ್ಟಮಠಗಳು ಕಾಮದಾಹದಿಂದ ತತ್ತರಿಸುತ್ತಿವೆಯಂತಲ್ಲಾ. ಸದರಿ ಸಮಸ್ಯೆಗೆ ಬಹಳ ಹಿಂದೆಯೇ ನಿಡುಮಾಮಿಡಿ ಸ್ವಾಮಿಗಳಾದ ವೀರಭದ್ರ ಚೆನ್ನಮಲ್ಲ ಸ್ವಾಮೀಜಿಗಳವರು ವೀರ್ಯ ಕುರಿತ ಚಿಂತನೆ ನಡೆಸಿ ಮಠದ ಯತಿಗಳನ್ನಾಗಿ ಬಾಲಕರನ್ನು ನೇಮಿಸಬಾರದು, ಆತ ಪ್ರಾಪ್ತ ವಯಸ್ಸಿಗೆ ಬಂದನಂತರ ಲೈಂಗಿಕ ನಿಗ್ರಹದ ಶಕ್ತಿಗಳಿಸಿಕೊಂಡು ಪ್ರಾಯವನ್ನು ನಿಭಾಯಿಸಬಲ್ಲೆ ಎಂಬ ಆತ್ಮವಿಶ್ವಾಸ ಮೂಡಿಸಿಕೊಂಡಿದ್ದರೆ ಅಂತಹವನನ್ನು ಸ್ವಾಮಿಯನ್ನಾಗಿ ಮಾಡಿ ಇಲ್ಲವಾದರೆ ಹಿಡ ಮಾಡಿ ಯತಿಯನ್ನಾಗಿಸಿ ಎಂಬ ಸತ್ಯಸಂಗತಿ ಒಳಗೊಂಡ ಸಲಹೆ ಕೊಟ್ಟಿದ್ದರಲ್ಲ! ನಿಡುಮಾಮಿಡಿಯವರು ಇಂತಹ ಹೇಳಿಕೆಯನ್ನ ಆಡಿಕೊಂಡಿದ್ದ ಅಷ್ಟಮಠದ ಯತಿಗಳು, ಹಿಡ ಮಾಡುವುದಾಗಲಿ, ಬೀಜ ಹಿಸುಕುವುದಾಗಲಿ ಇದೆಲ್ಲ ಅನೈಸರ್ಗಿಕ ಕ್ರಿಯೆ. ನೈಸರ್ಗಿಕ ಕ್ರಿಯೆ ಯಾವುದಪ್ಪ ಅಂದ್ರೇ, ಮಠದಷ್ಟಕ್ಕೇ ಮಠವಾಯ್ತು. ನಮ್ಮಷ್ಟಕ್ಕೆ ನಾವು ಆರೈಕೆಗಾಗಿ ಕರೆಸಿಕೊಂಡ ಹೆಣ್ಣುಮಗಳನ್ನೇ ಅಂಗಾತÀ ಮಲಗಿಸಿಕೊಂಡು, ಕೃಷ್ಣಪೂಜೆ ಮಾಡಿದರೆ ಅಂತಹ ಯಾವ ಅಪÀರಾಧವೂ ಅಲ್ಲ; ಅನಾದಿಕಾಲದಿಂದಲೂ ಅಷ್ಟಮಠಗಳ ಯತಿಗಳು ಮಾಡಿಕೊಂಡು ಬಂದಿರುವುದು ಇದನ್ನೇ ಎಂದು ಭಾವಿಸಿ, ಯಾವ ಎಗ್ಗೂ ಇಲ್ಲದೆ ರಾಘವೇಶ್ವರನನ್ನೆ ಮೀರಿಸಿದರಂತಲ್ಲಾ. ಇದನ್ನೆಲ್ಲಾ ಕೇಳಿದ ಸಿದ್ದನಗೌಡ ಪಾಟೀಲ ಎಂಬ ಕಮ್ಯುನಿಸ್ಟ್ ಲೈಂಗಿಕ ಪ್ರತಿಪಾದಕರು “ಅಷ್ಟಮಠದ ಯತಿಗಳನ್ನ ಹಿಡಿದು ಸಾಮೂಹಿಕ ಮದುವೆ ಮಾಡಿಬಿಡುವುದೇ ಲೇಸು” ಎಂದರಂತಲ್ಲ. ಈ ಸುದ್ದಿ ಕೇಳಿದ ಅಷ್ಟಮಠದ ಲೈಂಗಿಕ ತಜ್ಞರು ಈಗ ಆಗಿರುವ ಅನಾಹುತವೇನು? ಮದುವೆ ಅಷ್ಟೊಂದು ಅನಿವಾರ್ಯವೆ, ಎಂದವಂತಲ್ಲಾ ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...