Homeರಾಜಕೀಯನಮ್ಮ ಸಿಎಮ್ಮು ಸಮಯದ ಬೊಂಬೆಯಂತಲ್ಲಾ....!

ನಮ್ಮ ಸಿಎಮ್ಮು ಸಮಯದ ಬೊಂಬೆಯಂತಲ್ಲಾ….!

- Advertisement -
- Advertisement -

ಆಡಿದ ಮಾತೆಲ್ಲವೂ ತಪ್ಪಾಗುವಂತೆ ಕಂಡಾಗ ಮೌನವಾಗಿರುವುದು ಲೇಸು. ಇಂತಹ ಸೂಕ್ಷ್ಮಗಳನ್ನು ಅರಿಯದ ಕುಮಾರಣ್ಣ ಮಾತನಾಡುತ್ತಲೆ ಆಡಿದ ಮಾತಿನ ಕೋಟೆಯೊಳಗೆ ಬಂದಿಯಾಗುತ್ತಿದ್ದಾರಂತಲ್ಲಾ, ಜವಾಬ್ದಾರಿ ಹೊತ್ತವರಿಂದ ಒಳ್ಳೆ ಮಾತುಗಳು ಬರಬೇಕಾದರೆ ಓದಿನ ಹಿನ್ನೆಲೆ ಇರಬೇಕಾಗುತ್ತದೆ. ಇಲ್ಲ ಅನುಭವದ ದ್ರವ್ಯ ಇರಬೇಕಾಗುತ್ತದೆ, ಇವೆರಡೂ ಇರದವರು ಕುಮಾರಣ್ಣನಂತಿರುತ್ತಾರೆ ಉದಾಹರಣೆಗೆ ಪ್ರತ್ಯೇಕತೆಯ ಕೂಗಿನಿಂದ ವಿಚಲಿತಗೊಂಡ ಕುಮಾರಣ್ಣ “ಪ್ರತ್ಯೇಕ ರಾಜ್ಯವಾದರೆ ಅಭಿವೃದ್ಧಿಗೆ ಹಣ ಎಲ್ಲಿಂದ ತರುತ್ತೀರಿ” ಎಂದುಬಿಟ್ಟಿದ್ದಾರೆ, ಇದರಿಂದ ಅನಾವರಣಗೊಂಡಿದ್ದೇನೆಂದರೆ ಅಂತೂ ಪ್ರತ್ಯೇಕತೆ ನಿಮ್ಮ ಮನಸ್ಸಿನಲ್ಲಿದೆ. ಹಣಕಾಸಿನ ಖಜಾನೆ ಬೆಂಗಳೂರಾಗಿರುವುದರಿಂದ ಅದು ನಿಮ್ಮಲಿಲ್ಲ ಇತ್ಯಾದಿ ಎಂಬಂತೆ ಅವರ ಮಾತು ಹಲವು ಚರ್ಚೆ ಹುಟ್ಟುಹಾಕುತ್ತಿವೆ. ಅಂತೂ ಸರಿಯಾಗಿ ಕನ್ನಡ ಮಾತನಾಡಲು ಬಾರದ ರಾಮುಲು ಎಂಬ ವ್ಯಕ್ತಿಗೆ ಉತ್ತರಕೊಡಲು ಹೋಗಿ ಸಿಕ್ಕಿಕೊಂಡಿರುವ ಕುಮಾರಣ್ಣನನ್ನು ಉಳಿಸಲು ಹೋದ ಧÀೃತರಾಷ್ಟ್ರರು ಎಂದಿನಂತೆ ಜಾತಿ ಲೆಕ್ಕಾಚಾರ ತೆಗೆದು ಲಿಂಗಾಯಿತ ಮುಖ್ಯಮಂತ್ರಿಗಳ ಅವಧಿಯ ಕೆಲಸಗಳನ್ನು ಎಣಿಸಿ ಎಂದಿದ್ದಾರಂತೆ. ಆ ಕೆಲಸವೇನಾದರೂ ನಡೆದರೆ ದೇವೇಗೌಡರೆ ಸಿಕ್ಕಿಬೀಳುತ್ತಾರಂತಲ್ಲಾ ಏಕೆಂದರೆ ಇಡೀ ಕರ್ನಾಟಕವನ್ನು ಸಮಭಾವದಲ್ಲಿ ಕಂಡ ವಿರೇಂದ್ರಪಾಟೀಲರು ತಮ್ಮ ಸ್ವಂತ ಕ್ಷೇತ್ರಕ್ಕೆ ಏನೂ ಮಾಡಿಲ್ಲ ಏಕೆಂದರೆ ಅವರ ತಲೆಯಲ್ಲಿರುವುದು ಅಖಂಡ ಕರ್ನಾಟಕ. ಅದೇ ದೇವೇಗೌಡರ ತಲೆಯಲ್ಲಿರುವುದು ಹೊಳೆನರಸೀಪುರವಂತಲ್ಲಾ ಥೂತ್ತೇರಿ.
*******
ಕುಮಾರಣ್ಣನವರು ಅನಿಸಿದ್ದನ್ನ ಅಂದುಬಿಡುವುದರಲ್ಲಿ ನಿಸ್ಸೀಮರು. ಅದರಂತೆ ಮಾಧ್ಯಮದವರ ಮೇಲೆ ಮುಗಿಬಿದ್ದಿದ್ದಾರೆ. ಇದನ್ನು ವಿಶ್ಲೇಷಿಸುವುದಾದರೆ ಕೆಲವು ಮಾಧ್ಯಮದವರಿಗೆ ಅವರಿಗೆ ಬೇಕಿದ್ದ ಸರಕಾರ ಬರಲಿಲ್ಲ ಬಂದಿದ್ದರೆ ಇನ್ನೊಂದೆರಡು ಸೈಟು ಮತ್ತು ಕಾರು ಕೊಳ್ಳಬಹುದಿತ್ತು. ರೆಸಾರ್ಟುಗಳಲ್ಲಿ ಪಾರ್ಟಿ ಮಾಡುತ್ತ ತಾವೇ ಸರಕಾರ ನಡೆಸುವವರಂತೆ ಬಹುಬೆಲೆಯ ಮದÀ್ಯ ಸೇವಿಸುತ್ತ ಉಳಿದದ್ದನ್ನ ಮನೆಗೆ ತೆಗೆದುಕೊಂಡು ಹೋಗಬಹುದಿತ್ತು. ಈಗ ಅದಾವುದಕ್ಕು ಅವಕಾಶವಿಲ್ಲದೆ ಕೇವಲ ಕುಮಾರಣ್ಣನ ಆಪ್ತ ಪತ್ರಕರ್ತರು ಮಾತ್ರ ತಿಂದುಂಡು ತೇಗುತ್ತಿರುವುದನ್ನು ನೋಡಿ ಸುಮ್ಮನಿರಲಾದೀತೆ. ಅದಕ್ಕಾಗಿಯೇ ಕರ್ನಾಟಕದ ಭೂಪಟವನ್ನೇ ಅರ್ಧ ಮಾಡಿಕೊಂಡು ಕೆರೆಯುತ್ತ ಮಾತನಾಡುತ್ತ ಕುಮಾರಣ್ಣನನ್ನು ರೇಗಿಸಿದ್ದಾರಂತಲ್ಲಾ. ಕುಮಾರಣ್ಣನ ಬಗ್ಗೆ ಪತ್ರಿಕೆಗಳೇನು ಜನಸಾಮಾನ್ಯರಿಗೂ ಅನುಮಾನಗಳಿವೆ. ಪಾಪ ಆತ ಜನಾಭಿಪ್ರಾಯದ ಮುಖ್ಯಮಂತ್ರಿಯಲ್ಲ ಗತಿಗೆಟ್ಟ ಕಾಂಗ್ರೆಸ್ಸಿಗರು ತಲೆಕೆಟ್ಟ ಬಿಜೆಪಿಗಳಿಗೆ ಹೆದರಿ ಮತಿಗೆಟ್ಟ ದಳದವರೊಂದಿಗೆ ಕೂಡಿಕೆ ಮಾಡಿಕೊಂಡರು. ಇದರಿಂದ ಇನ್ನ ತಲೆಕೆಟ್ಟಂತಾದ ಬಿಜೆಪಿಗಳು ರಾಜ್ಯವನ್ನೇ ಹೊಡೆದು ಹಾಕುವ ಹೀನಕೃತ್ಯಕ್ಕೆ ಕೈಹಾಕಿದೆ. ಈ ಹಿಂದೆ ಮಸೀದಿಯನ್ನೆ ಹೊಡೆದು ಹಾಕಿದ ಇತಿಹಾಸ ಹೊಂದಿರುವ ಬಿಜೆಪಿಗಳಿಗೆ ಯಾವುದೂ ಅಸಾಧ್ಯವಲ್ಲ. ಆದರೇನು ತನ್ನ ಮನೆತನ ಯಾವಾಗಲೂ ಅಧಿಕಾರದಲ್ಲಿರಬೇಕೆಂಬ ಕನಸು ಕಾಣುತ್ತ ಅದಕ್ಕಾಗಿ ಮಾರಿ ಬೆಲೆ ಹೆಣೆಯುತ್ತ ಕುಳಿತ ದೇವೇಗೌಡರ ಮನದಲ್ಲಿ ಕರ್ನಾಟಕ ಇಬ್ಭಾಗವಾಗುವುದು ಬೇಕಿಲ್ಲ ಎಂದು ಹೇಗೆ ಹೇಳುವುದು ಥೂತ್ತೇರಿ.
*******
ಮಾತಿನ ಬಲೆಯಲ್ಲಿ ಸಿಕ್ಕಿಕೊಂಡ ಕುಮಾರಣ್ಣನ ವರಸೆ ಹೊಸದೇನಲ್ಲ. ಹಿಂದೆ 20 ತಿಂಗಳು ಮುಖ್ಯಮಂತ್ರಿಯಾಗಿ ಇಳಿದಾಗ ಜನಾಂಗದ ಸಭೆಯಲ್ಲಿ ಮಾತನಾಡುತ್ತ ನಾನು ಅಧಿಕಾರದಲ್ಲಿದ್ದಾಗ ನನ್ನ ಜನಕ್ಕೆ ಏನೂ ಮಾಡಲಾಗಲಿಲ್ಲ ಕ್ಷಮಿಸಿ ಎಂದಿದ್ದರು. ಕಳೆದ ಚುನಾವಣೆಯಲ್ಲಿ ಜಾತಿ ಪ್ರಸ್ತಾಪ ಮಾಡಿ ಜನಾಂಗವನ್ನು ಎತ್ತಿ ಕಟ್ಟಿದ್ದರು. ಉತ್ತರ ಕರ್ನಾಟಕದ ಜನರನ್ನ ಮರಳು ಮಾಡಲು ಹುಬ್ಬಳ್ಳಿಯಲ್ಲಿ ಮನೆ ಮಾಡಿದ್ದರು. ಆದರದು ವರ್ಕೌಟಾಗಲಿಲ್ಲ. ಈಗ ಬಜೆಟ್ಟಿನಲ್ಲೂ ಪ್ರಾದೇಶಿಕ ಅಸಮತೋಲನ ಎದ್ದುಕಂಡಿದೆ. ಜನ ತಮ್ಮ ನಾಯಕನಾದವನನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ ಎಂಬ ತಿಳಿವಳಿಕೆಯಿಲ್ಲದ ಕುಮಾರಣ್ಣ ಈಗಾಗಲೇ ಆಡಿರುವ ಮಾತುಗಳಿಂದ ಖಚಿತ ಅಭಿಪ್ರಾಯವಿಲ್ಲದ ಪರಿಸ್ಥಿತಿಯ ಕೂಸೆಂಬುದನ್ನು ಸಾಬೀತು ಪಡಿಸಿದ್ದಾರೆ. ರಾಹುಲ್‍ಗಾಂಧಿ ಕೃಪೆಯಿಂದ ನಾನು ಮುಖ್ಯಮಂತ್ರಿಯಾದೆ ಎಂದಿದ್ದ ಕುಮಾರಣ್ಣ ಈಗಾಗಲೇ ಅಯ್ಯಪ್ಪನ ಕೃಪೆಯಿಂದ ಮುಖ್ಯಮಂತ್ರಿಯಾದೆ ಎಂದಿದ್ದಾರೆ. ಮದುವೆಯಾಗದೆ ಅಂಗೇ ಉಳಿದಿರುವ ರಾಹುಲ್‍ಗಾಂಧಿಯೇ ಅಯ್ಯಪ್ಪನಿಗೆ ಸಮಾನ ಎಂದುಕೊಂಡರೆ ತೊಂದರೆಯಿಲ್ಲ. ಆದರೆ ಸಮಯಕ್ಕೊಂದು ಮಾತು ಬದಲಿಸುವ ಕುಮಾರಣ್ಣನ ಎದುರು ಇನ್ನೊಂದೆರಡು ಸಮಸ್ಯೆಗಳಿವೆ, ಅವುಗಳ ಪೈಕಿ ಯಾರೊ ಲಂಬಾಣಿ ಸ್ವಾಮಿ ಮುಂದಿನ ಮುಖ್ಯಮಂತ್ರಿ ನೀವೇ ಅಂದಿದ್ದರಂತೆ. ಅಣ್ಣ ಇನ್ನು ಅಲ್ಲಿಗೆ ಹೋದಾಗ ಏನೇಳುತ್ತಾರೊ ಏನೋ ಥೂತ್ತೇರಿ.
*******
ಕರ್ನಾಟಕ ಹಿಂದೆಂದೂ ಕಂಡರಿಯದ ಸಮಸ್ಯೆಗಳಿಂದ ತತ್ತರಿಸುತ್ತಿರುವಾಗ ಅಷ್ಟಮಠಗಳು ಕಾಮದಾಹದಿಂದ ತತ್ತರಿಸುತ್ತಿವೆಯಂತಲ್ಲಾ. ಸದರಿ ಸಮಸ್ಯೆಗೆ ಬಹಳ ಹಿಂದೆಯೇ ನಿಡುಮಾಮಿಡಿ ಸ್ವಾಮಿಗಳಾದ ವೀರಭದ್ರ ಚೆನ್ನಮಲ್ಲ ಸ್ವಾಮೀಜಿಗಳವರು ವೀರ್ಯ ಕುರಿತ ಚಿಂತನೆ ನಡೆಸಿ ಮಠದ ಯತಿಗಳನ್ನಾಗಿ ಬಾಲಕರನ್ನು ನೇಮಿಸಬಾರದು, ಆತ ಪ್ರಾಪ್ತ ವಯಸ್ಸಿಗೆ ಬಂದನಂತರ ಲೈಂಗಿಕ ನಿಗ್ರಹದ ಶಕ್ತಿಗಳಿಸಿಕೊಂಡು ಪ್ರಾಯವನ್ನು ನಿಭಾಯಿಸಬಲ್ಲೆ ಎಂಬ ಆತ್ಮವಿಶ್ವಾಸ ಮೂಡಿಸಿಕೊಂಡಿದ್ದರೆ ಅಂತಹವನನ್ನು ಸ್ವಾಮಿಯನ್ನಾಗಿ ಮಾಡಿ ಇಲ್ಲವಾದರೆ ಹಿಡ ಮಾಡಿ ಯತಿಯನ್ನಾಗಿಸಿ ಎಂಬ ಸತ್ಯಸಂಗತಿ ಒಳಗೊಂಡ ಸಲಹೆ ಕೊಟ್ಟಿದ್ದರಲ್ಲ! ನಿಡುಮಾಮಿಡಿಯವರು ಇಂತಹ ಹೇಳಿಕೆಯನ್ನ ಆಡಿಕೊಂಡಿದ್ದ ಅಷ್ಟಮಠದ ಯತಿಗಳು, ಹಿಡ ಮಾಡುವುದಾಗಲಿ, ಬೀಜ ಹಿಸುಕುವುದಾಗಲಿ ಇದೆಲ್ಲ ಅನೈಸರ್ಗಿಕ ಕ್ರಿಯೆ. ನೈಸರ್ಗಿಕ ಕ್ರಿಯೆ ಯಾವುದಪ್ಪ ಅಂದ್ರೇ, ಮಠದಷ್ಟಕ್ಕೇ ಮಠವಾಯ್ತು. ನಮ್ಮಷ್ಟಕ್ಕೆ ನಾವು ಆರೈಕೆಗಾಗಿ ಕರೆಸಿಕೊಂಡ ಹೆಣ್ಣುಮಗಳನ್ನೇ ಅಂಗಾತÀ ಮಲಗಿಸಿಕೊಂಡು, ಕೃಷ್ಣಪೂಜೆ ಮಾಡಿದರೆ ಅಂತಹ ಯಾವ ಅಪÀರಾಧವೂ ಅಲ್ಲ; ಅನಾದಿಕಾಲದಿಂದಲೂ ಅಷ್ಟಮಠಗಳ ಯತಿಗಳು ಮಾಡಿಕೊಂಡು ಬಂದಿರುವುದು ಇದನ್ನೇ ಎಂದು ಭಾವಿಸಿ, ಯಾವ ಎಗ್ಗೂ ಇಲ್ಲದೆ ರಾಘವೇಶ್ವರನನ್ನೆ ಮೀರಿಸಿದರಂತಲ್ಲಾ. ಇದನ್ನೆಲ್ಲಾ ಕೇಳಿದ ಸಿದ್ದನಗೌಡ ಪಾಟೀಲ ಎಂಬ ಕಮ್ಯುನಿಸ್ಟ್ ಲೈಂಗಿಕ ಪ್ರತಿಪಾದಕರು “ಅಷ್ಟಮಠದ ಯತಿಗಳನ್ನ ಹಿಡಿದು ಸಾಮೂಹಿಕ ಮದುವೆ ಮಾಡಿಬಿಡುವುದೇ ಲೇಸು” ಎಂದರಂತಲ್ಲ. ಈ ಸುದ್ದಿ ಕೇಳಿದ ಅಷ್ಟಮಠದ ಲೈಂಗಿಕ ತಜ್ಞರು ಈಗ ಆಗಿರುವ ಅನಾಹುತವೇನು? ಮದುವೆ ಅಷ್ಟೊಂದು ಅನಿವಾರ್ಯವೆ, ಎಂದವಂತಲ್ಲಾ ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...