Homeರಾಜಕೀಯನಮ್ಮ ಸಿಎಮ್ಮು ಸಮಯದ ಬೊಂಬೆಯಂತಲ್ಲಾ....!

ನಮ್ಮ ಸಿಎಮ್ಮು ಸಮಯದ ಬೊಂಬೆಯಂತಲ್ಲಾ….!

- Advertisement -
- Advertisement -

ಆಡಿದ ಮಾತೆಲ್ಲವೂ ತಪ್ಪಾಗುವಂತೆ ಕಂಡಾಗ ಮೌನವಾಗಿರುವುದು ಲೇಸು. ಇಂತಹ ಸೂಕ್ಷ್ಮಗಳನ್ನು ಅರಿಯದ ಕುಮಾರಣ್ಣ ಮಾತನಾಡುತ್ತಲೆ ಆಡಿದ ಮಾತಿನ ಕೋಟೆಯೊಳಗೆ ಬಂದಿಯಾಗುತ್ತಿದ್ದಾರಂತಲ್ಲಾ, ಜವಾಬ್ದಾರಿ ಹೊತ್ತವರಿಂದ ಒಳ್ಳೆ ಮಾತುಗಳು ಬರಬೇಕಾದರೆ ಓದಿನ ಹಿನ್ನೆಲೆ ಇರಬೇಕಾಗುತ್ತದೆ. ಇಲ್ಲ ಅನುಭವದ ದ್ರವ್ಯ ಇರಬೇಕಾಗುತ್ತದೆ, ಇವೆರಡೂ ಇರದವರು ಕುಮಾರಣ್ಣನಂತಿರುತ್ತಾರೆ ಉದಾಹರಣೆಗೆ ಪ್ರತ್ಯೇಕತೆಯ ಕೂಗಿನಿಂದ ವಿಚಲಿತಗೊಂಡ ಕುಮಾರಣ್ಣ “ಪ್ರತ್ಯೇಕ ರಾಜ್ಯವಾದರೆ ಅಭಿವೃದ್ಧಿಗೆ ಹಣ ಎಲ್ಲಿಂದ ತರುತ್ತೀರಿ” ಎಂದುಬಿಟ್ಟಿದ್ದಾರೆ, ಇದರಿಂದ ಅನಾವರಣಗೊಂಡಿದ್ದೇನೆಂದರೆ ಅಂತೂ ಪ್ರತ್ಯೇಕತೆ ನಿಮ್ಮ ಮನಸ್ಸಿನಲ್ಲಿದೆ. ಹಣಕಾಸಿನ ಖಜಾನೆ ಬೆಂಗಳೂರಾಗಿರುವುದರಿಂದ ಅದು ನಿಮ್ಮಲಿಲ್ಲ ಇತ್ಯಾದಿ ಎಂಬಂತೆ ಅವರ ಮಾತು ಹಲವು ಚರ್ಚೆ ಹುಟ್ಟುಹಾಕುತ್ತಿವೆ. ಅಂತೂ ಸರಿಯಾಗಿ ಕನ್ನಡ ಮಾತನಾಡಲು ಬಾರದ ರಾಮುಲು ಎಂಬ ವ್ಯಕ್ತಿಗೆ ಉತ್ತರಕೊಡಲು ಹೋಗಿ ಸಿಕ್ಕಿಕೊಂಡಿರುವ ಕುಮಾರಣ್ಣನನ್ನು ಉಳಿಸಲು ಹೋದ ಧÀೃತರಾಷ್ಟ್ರರು ಎಂದಿನಂತೆ ಜಾತಿ ಲೆಕ್ಕಾಚಾರ ತೆಗೆದು ಲಿಂಗಾಯಿತ ಮುಖ್ಯಮಂತ್ರಿಗಳ ಅವಧಿಯ ಕೆಲಸಗಳನ್ನು ಎಣಿಸಿ ಎಂದಿದ್ದಾರಂತೆ. ಆ ಕೆಲಸವೇನಾದರೂ ನಡೆದರೆ ದೇವೇಗೌಡರೆ ಸಿಕ್ಕಿಬೀಳುತ್ತಾರಂತಲ್ಲಾ ಏಕೆಂದರೆ ಇಡೀ ಕರ್ನಾಟಕವನ್ನು ಸಮಭಾವದಲ್ಲಿ ಕಂಡ ವಿರೇಂದ್ರಪಾಟೀಲರು ತಮ್ಮ ಸ್ವಂತ ಕ್ಷೇತ್ರಕ್ಕೆ ಏನೂ ಮಾಡಿಲ್ಲ ಏಕೆಂದರೆ ಅವರ ತಲೆಯಲ್ಲಿರುವುದು ಅಖಂಡ ಕರ್ನಾಟಕ. ಅದೇ ದೇವೇಗೌಡರ ತಲೆಯಲ್ಲಿರುವುದು ಹೊಳೆನರಸೀಪುರವಂತಲ್ಲಾ ಥೂತ್ತೇರಿ.
*******
ಕುಮಾರಣ್ಣನವರು ಅನಿಸಿದ್ದನ್ನ ಅಂದುಬಿಡುವುದರಲ್ಲಿ ನಿಸ್ಸೀಮರು. ಅದರಂತೆ ಮಾಧ್ಯಮದವರ ಮೇಲೆ ಮುಗಿಬಿದ್ದಿದ್ದಾರೆ. ಇದನ್ನು ವಿಶ್ಲೇಷಿಸುವುದಾದರೆ ಕೆಲವು ಮಾಧ್ಯಮದವರಿಗೆ ಅವರಿಗೆ ಬೇಕಿದ್ದ ಸರಕಾರ ಬರಲಿಲ್ಲ ಬಂದಿದ್ದರೆ ಇನ್ನೊಂದೆರಡು ಸೈಟು ಮತ್ತು ಕಾರು ಕೊಳ್ಳಬಹುದಿತ್ತು. ರೆಸಾರ್ಟುಗಳಲ್ಲಿ ಪಾರ್ಟಿ ಮಾಡುತ್ತ ತಾವೇ ಸರಕಾರ ನಡೆಸುವವರಂತೆ ಬಹುಬೆಲೆಯ ಮದÀ್ಯ ಸೇವಿಸುತ್ತ ಉಳಿದದ್ದನ್ನ ಮನೆಗೆ ತೆಗೆದುಕೊಂಡು ಹೋಗಬಹುದಿತ್ತು. ಈಗ ಅದಾವುದಕ್ಕು ಅವಕಾಶವಿಲ್ಲದೆ ಕೇವಲ ಕುಮಾರಣ್ಣನ ಆಪ್ತ ಪತ್ರಕರ್ತರು ಮಾತ್ರ ತಿಂದುಂಡು ತೇಗುತ್ತಿರುವುದನ್ನು ನೋಡಿ ಸುಮ್ಮನಿರಲಾದೀತೆ. ಅದಕ್ಕಾಗಿಯೇ ಕರ್ನಾಟಕದ ಭೂಪಟವನ್ನೇ ಅರ್ಧ ಮಾಡಿಕೊಂಡು ಕೆರೆಯುತ್ತ ಮಾತನಾಡುತ್ತ ಕುಮಾರಣ್ಣನನ್ನು ರೇಗಿಸಿದ್ದಾರಂತಲ್ಲಾ. ಕುಮಾರಣ್ಣನ ಬಗ್ಗೆ ಪತ್ರಿಕೆಗಳೇನು ಜನಸಾಮಾನ್ಯರಿಗೂ ಅನುಮಾನಗಳಿವೆ. ಪಾಪ ಆತ ಜನಾಭಿಪ್ರಾಯದ ಮುಖ್ಯಮಂತ್ರಿಯಲ್ಲ ಗತಿಗೆಟ್ಟ ಕಾಂಗ್ರೆಸ್ಸಿಗರು ತಲೆಕೆಟ್ಟ ಬಿಜೆಪಿಗಳಿಗೆ ಹೆದರಿ ಮತಿಗೆಟ್ಟ ದಳದವರೊಂದಿಗೆ ಕೂಡಿಕೆ ಮಾಡಿಕೊಂಡರು. ಇದರಿಂದ ಇನ್ನ ತಲೆಕೆಟ್ಟಂತಾದ ಬಿಜೆಪಿಗಳು ರಾಜ್ಯವನ್ನೇ ಹೊಡೆದು ಹಾಕುವ ಹೀನಕೃತ್ಯಕ್ಕೆ ಕೈಹಾಕಿದೆ. ಈ ಹಿಂದೆ ಮಸೀದಿಯನ್ನೆ ಹೊಡೆದು ಹಾಕಿದ ಇತಿಹಾಸ ಹೊಂದಿರುವ ಬಿಜೆಪಿಗಳಿಗೆ ಯಾವುದೂ ಅಸಾಧ್ಯವಲ್ಲ. ಆದರೇನು ತನ್ನ ಮನೆತನ ಯಾವಾಗಲೂ ಅಧಿಕಾರದಲ್ಲಿರಬೇಕೆಂಬ ಕನಸು ಕಾಣುತ್ತ ಅದಕ್ಕಾಗಿ ಮಾರಿ ಬೆಲೆ ಹೆಣೆಯುತ್ತ ಕುಳಿತ ದೇವೇಗೌಡರ ಮನದಲ್ಲಿ ಕರ್ನಾಟಕ ಇಬ್ಭಾಗವಾಗುವುದು ಬೇಕಿಲ್ಲ ಎಂದು ಹೇಗೆ ಹೇಳುವುದು ಥೂತ್ತೇರಿ.
*******
ಮಾತಿನ ಬಲೆಯಲ್ಲಿ ಸಿಕ್ಕಿಕೊಂಡ ಕುಮಾರಣ್ಣನ ವರಸೆ ಹೊಸದೇನಲ್ಲ. ಹಿಂದೆ 20 ತಿಂಗಳು ಮುಖ್ಯಮಂತ್ರಿಯಾಗಿ ಇಳಿದಾಗ ಜನಾಂಗದ ಸಭೆಯಲ್ಲಿ ಮಾತನಾಡುತ್ತ ನಾನು ಅಧಿಕಾರದಲ್ಲಿದ್ದಾಗ ನನ್ನ ಜನಕ್ಕೆ ಏನೂ ಮಾಡಲಾಗಲಿಲ್ಲ ಕ್ಷಮಿಸಿ ಎಂದಿದ್ದರು. ಕಳೆದ ಚುನಾವಣೆಯಲ್ಲಿ ಜಾತಿ ಪ್ರಸ್ತಾಪ ಮಾಡಿ ಜನಾಂಗವನ್ನು ಎತ್ತಿ ಕಟ್ಟಿದ್ದರು. ಉತ್ತರ ಕರ್ನಾಟಕದ ಜನರನ್ನ ಮರಳು ಮಾಡಲು ಹುಬ್ಬಳ್ಳಿಯಲ್ಲಿ ಮನೆ ಮಾಡಿದ್ದರು. ಆದರದು ವರ್ಕೌಟಾಗಲಿಲ್ಲ. ಈಗ ಬಜೆಟ್ಟಿನಲ್ಲೂ ಪ್ರಾದೇಶಿಕ ಅಸಮತೋಲನ ಎದ್ದುಕಂಡಿದೆ. ಜನ ತಮ್ಮ ನಾಯಕನಾದವನನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ ಎಂಬ ತಿಳಿವಳಿಕೆಯಿಲ್ಲದ ಕುಮಾರಣ್ಣ ಈಗಾಗಲೇ ಆಡಿರುವ ಮಾತುಗಳಿಂದ ಖಚಿತ ಅಭಿಪ್ರಾಯವಿಲ್ಲದ ಪರಿಸ್ಥಿತಿಯ ಕೂಸೆಂಬುದನ್ನು ಸಾಬೀತು ಪಡಿಸಿದ್ದಾರೆ. ರಾಹುಲ್‍ಗಾಂಧಿ ಕೃಪೆಯಿಂದ ನಾನು ಮುಖ್ಯಮಂತ್ರಿಯಾದೆ ಎಂದಿದ್ದ ಕುಮಾರಣ್ಣ ಈಗಾಗಲೇ ಅಯ್ಯಪ್ಪನ ಕೃಪೆಯಿಂದ ಮುಖ್ಯಮಂತ್ರಿಯಾದೆ ಎಂದಿದ್ದಾರೆ. ಮದುವೆಯಾಗದೆ ಅಂಗೇ ಉಳಿದಿರುವ ರಾಹುಲ್‍ಗಾಂಧಿಯೇ ಅಯ್ಯಪ್ಪನಿಗೆ ಸಮಾನ ಎಂದುಕೊಂಡರೆ ತೊಂದರೆಯಿಲ್ಲ. ಆದರೆ ಸಮಯಕ್ಕೊಂದು ಮಾತು ಬದಲಿಸುವ ಕುಮಾರಣ್ಣನ ಎದುರು ಇನ್ನೊಂದೆರಡು ಸಮಸ್ಯೆಗಳಿವೆ, ಅವುಗಳ ಪೈಕಿ ಯಾರೊ ಲಂಬಾಣಿ ಸ್ವಾಮಿ ಮುಂದಿನ ಮುಖ್ಯಮಂತ್ರಿ ನೀವೇ ಅಂದಿದ್ದರಂತೆ. ಅಣ್ಣ ಇನ್ನು ಅಲ್ಲಿಗೆ ಹೋದಾಗ ಏನೇಳುತ್ತಾರೊ ಏನೋ ಥೂತ್ತೇರಿ.
*******
ಕರ್ನಾಟಕ ಹಿಂದೆಂದೂ ಕಂಡರಿಯದ ಸಮಸ್ಯೆಗಳಿಂದ ತತ್ತರಿಸುತ್ತಿರುವಾಗ ಅಷ್ಟಮಠಗಳು ಕಾಮದಾಹದಿಂದ ತತ್ತರಿಸುತ್ತಿವೆಯಂತಲ್ಲಾ. ಸದರಿ ಸಮಸ್ಯೆಗೆ ಬಹಳ ಹಿಂದೆಯೇ ನಿಡುಮಾಮಿಡಿ ಸ್ವಾಮಿಗಳಾದ ವೀರಭದ್ರ ಚೆನ್ನಮಲ್ಲ ಸ್ವಾಮೀಜಿಗಳವರು ವೀರ್ಯ ಕುರಿತ ಚಿಂತನೆ ನಡೆಸಿ ಮಠದ ಯತಿಗಳನ್ನಾಗಿ ಬಾಲಕರನ್ನು ನೇಮಿಸಬಾರದು, ಆತ ಪ್ರಾಪ್ತ ವಯಸ್ಸಿಗೆ ಬಂದನಂತರ ಲೈಂಗಿಕ ನಿಗ್ರಹದ ಶಕ್ತಿಗಳಿಸಿಕೊಂಡು ಪ್ರಾಯವನ್ನು ನಿಭಾಯಿಸಬಲ್ಲೆ ಎಂಬ ಆತ್ಮವಿಶ್ವಾಸ ಮೂಡಿಸಿಕೊಂಡಿದ್ದರೆ ಅಂತಹವನನ್ನು ಸ್ವಾಮಿಯನ್ನಾಗಿ ಮಾಡಿ ಇಲ್ಲವಾದರೆ ಹಿಡ ಮಾಡಿ ಯತಿಯನ್ನಾಗಿಸಿ ಎಂಬ ಸತ್ಯಸಂಗತಿ ಒಳಗೊಂಡ ಸಲಹೆ ಕೊಟ್ಟಿದ್ದರಲ್ಲ! ನಿಡುಮಾಮಿಡಿಯವರು ಇಂತಹ ಹೇಳಿಕೆಯನ್ನ ಆಡಿಕೊಂಡಿದ್ದ ಅಷ್ಟಮಠದ ಯತಿಗಳು, ಹಿಡ ಮಾಡುವುದಾಗಲಿ, ಬೀಜ ಹಿಸುಕುವುದಾಗಲಿ ಇದೆಲ್ಲ ಅನೈಸರ್ಗಿಕ ಕ್ರಿಯೆ. ನೈಸರ್ಗಿಕ ಕ್ರಿಯೆ ಯಾವುದಪ್ಪ ಅಂದ್ರೇ, ಮಠದಷ್ಟಕ್ಕೇ ಮಠವಾಯ್ತು. ನಮ್ಮಷ್ಟಕ್ಕೆ ನಾವು ಆರೈಕೆಗಾಗಿ ಕರೆಸಿಕೊಂಡ ಹೆಣ್ಣುಮಗಳನ್ನೇ ಅಂಗಾತÀ ಮಲಗಿಸಿಕೊಂಡು, ಕೃಷ್ಣಪೂಜೆ ಮಾಡಿದರೆ ಅಂತಹ ಯಾವ ಅಪÀರಾಧವೂ ಅಲ್ಲ; ಅನಾದಿಕಾಲದಿಂದಲೂ ಅಷ್ಟಮಠಗಳ ಯತಿಗಳು ಮಾಡಿಕೊಂಡು ಬಂದಿರುವುದು ಇದನ್ನೇ ಎಂದು ಭಾವಿಸಿ, ಯಾವ ಎಗ್ಗೂ ಇಲ್ಲದೆ ರಾಘವೇಶ್ವರನನ್ನೆ ಮೀರಿಸಿದರಂತಲ್ಲಾ. ಇದನ್ನೆಲ್ಲಾ ಕೇಳಿದ ಸಿದ್ದನಗೌಡ ಪಾಟೀಲ ಎಂಬ ಕಮ್ಯುನಿಸ್ಟ್ ಲೈಂಗಿಕ ಪ್ರತಿಪಾದಕರು “ಅಷ್ಟಮಠದ ಯತಿಗಳನ್ನ ಹಿಡಿದು ಸಾಮೂಹಿಕ ಮದುವೆ ಮಾಡಿಬಿಡುವುದೇ ಲೇಸು” ಎಂದರಂತಲ್ಲ. ಈ ಸುದ್ದಿ ಕೇಳಿದ ಅಷ್ಟಮಠದ ಲೈಂಗಿಕ ತಜ್ಞರು ಈಗ ಆಗಿರುವ ಅನಾಹುತವೇನು? ಮದುವೆ ಅಷ್ಟೊಂದು ಅನಿವಾರ್ಯವೆ, ಎಂದವಂತಲ್ಲಾ ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...