Homeಕರ್ನಾಟಕನಿಮ್ಮ ನಿಮ್ಮ ತೆವಲುಗಳಿಗೆ ದೇಶ ಹಾಳು ಮಾಡಬೇಡಿ: ಟಿವಿ ಮಾಧ್ಯಮಗಳ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ನಿಮ್ಮ ನಿಮ್ಮ ತೆವಲುಗಳಿಗೆ ದೇಶ ಹಾಳು ಮಾಡಬೇಡಿ: ಟಿವಿ ಮಾಧ್ಯಮಗಳ ವಿರುದ್ಧ ಕುಮಾರಸ್ವಾಮಿ ಆಕ್ರೋಶ

- Advertisement -
- Advertisement -

ನಾನು ನಿರ್ಮಾಪಕನಾಗಿದ್ದೆ. ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದೆ. ನಮ್ಮ ತಂದೆಯವರು ನನಗೆ ವಿರೋಧ ವ್ಯಕ್ತಪಡಿಸಿದ್ದರು. ಅವರು ರೇವಣ್ಣನವರಿಗೆ ಮಾತ್ರ ಆಶರ್ವಾದ ಮಾಡಿದ್ದರು. ನನಗೆ ರಾಜಕಾರಣ ಬೇಡವೆಂದಿದ್ದರು. ಆಗ ನಾನು ಅವರ ಮಾತು ಕೇಳಬೇಕಿತ್ತು, ಕೇಳಿಲ್ಲ. ಆಗ ದೇವೆಗೌಡರು ಮುಖ್ಯಮಂತ್ರಿ ಆಗಿದ್ದರು. ಕಾಂಗ್ರೆಸ್ ನ ಚಂದ್ರಶೇಖರ್ ವಿರುದ್ಧ ನಾನು ಚುನಾವಣೆಗೆ ನಿಂತಿದ್ದು.. ಅಂದು ಮಧ್ಯಾಹ್ನ 3 ಗಂಟೆಗೆ ನಾಮಪತ್ರ ಸಲ್ಲಿಸಬೇಕಿತ್ತು.. ಆಗ ರಾಜಕಾರಣ ಪ್ರವೇಶಿಸಿದೆ.

ಒಂದು ಕಡೆ ದೇವೇಗೌಡರು ಮತ್ತು ಇನ್ನೊಂದು ಕಡೆ ಶಾಸಕರ ವಿಶ್ವಾಸ ನನ್ನ ಜೊತೆಗಿತ್ತು. ಆದರೆ 1999ರಲ್ಲಿ ರೇವಣ್ಣನವರು, ದೇವೇಗೌಡರು, ನಾನು ಸೋತಿದ್ದೇವು. ಅವತ್ತೇ ರಾಜಕಾರಣಕ್ಕೆ ಎಳ್ಳುನೀರು ಬಿಡಬೇಕಿತ್ತು. ಆದರೆ ಜನ.. ನನ್ನನ್ನು ನೋಡಲು ಬಂದಿದ್ದರು..  ಅವರು ನಮ್ಮ ಕೈಬಿಡಬೇಡಿ ಅಂದರು. ಹಾಗಾಗಿ ಮುಂದುವರೆದೆ. ಹಾಗಾಗಿ ಜನಗಳ ಮಧ್ಯಕ್ಕೆ ಹೋದೆ. 2004ರಲ್ಲಿ ಗೆದ್ದ.. ಅವತ್ತಿನ ರಾಜಕಾರಣ ನಿಮಗೆಲ್ಲ ಗೊತ್ತೆ ಇದೆ.

ವಿರೋಧ ಪಕ್ಷದ ನಾಯಕರಿಗೆ ಹೇಳುತ್ತೇನೆ. ನಿಮ್ಮ ಕಾರ್ಯಕರ್ತರಿಗೆ ಬುದ್ದಿ ಹೇಳಿ.. ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಬರೆಯುತ್ತಿದ್ದಾರೆ. ದೇಶದ ಸಂಸ್ಕೃತಿ ನಾಶ ಮಾಡಲಿಕ್ಕೆ ಈ ಸೋಷಿಯಲ್ ಮೀಡಿಯಾ ಆರಂಭವಾಗಿದೆ..

ನಾನು ತಪ್ಪು ಮಾಡಿದ್ದೇನೆ. ತಪ್ಪು ತಿದ್ದಿಕೊಂಡಿದ್ದೇನೆ.. ನನ್ನ ಜೀವನದಲ್ಲಿ ಆ ಅವಕಾಶವಿದೆ. ಆದರೆ ಬಿಜೆಪಿಯವರು ಸೋಷಿಯಲ್ ಮೀಡಿಯಾದಲ್ಲಿ ಅದರಲ್ಲೂ ಟ್ವಿಟ್ಟರ್ ನಲ್ಲಿ Session for Karnataka Trust Vote has begun But CM h.d kumaraswamy is resting at his Taj West end hotel His message is clear He will continue to loot & waste tax payers money to the very last second as CM ಅಂತ ಬರೆದಿದ್ದಾರೆ.

ನಾನು ತಾಜ್ ಹೋಟೆಲ್ ನಲ್ಲಿ ಭಾಷಣ ಪ್ರಿಪೇರ್ ಮಾಡ್ತಾ ಕೂತಿದ್ದೆ. ಹೌದು ಸ್ವಲ್ಪ ಪ್ರಯತ್ನ ಪಟ್ಟೆ.. ಏನಾದರೂ ಕೊನೆ ಹಂತದಲ್ಲಿ ವಿಶ್ವಾಸಮತ ಗೆಲ್ಲಲ್ಲಿಕ್ಕೆ, ಸದನ ಗೆಲ್ಲಿಸುತ್ತೆ ಅಂತ.. ಪ್ರಯತ್ನ ಮಾಡಿದೆ. ನಾನು ಕದ್ದು ಮುಚ್ಚಿ ಮಾತಾಡೋಲ್ಲ.. ಶಾಸಕರು ಕಣ್ಣೀರು ಹಾಕಿದ್ದಾರೆ.. ಅವರಿಗಾಗಿ ಅದಕ್ಕೋಸ್ಕರ ತಡವಾಯ್ತು.. ಈ ರಾಜ್ಯ ಲೂಟಿ ಮಾಡಲಿಕ್ಕಲ್ಲ..

ಆದರೆ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಬರೆಯುತ್ತೀರಿ. ನನ್ನ ಯೋಗ್ಯತೆಯ ಬಗ್ಗೆ ಮಾತಾಡುತ್ತೀರಿ. ಯೋಗ್ಯತೆಗೆ ತಕ್ಕ ಜವಾಬ್ದಾರಿ ನೀಡುತ್ತೇವೆ.. ಎಚ್ ವಿಶ್ವನಾಥ ರವರು ಸಾರ ಮಹೇಶ್ ಬಗ್ಗೆ ಬಳಸಿರುವ ಪದಬಳಕೆ.. ಬಹಳ ಕೆಟ್ಟ ರೀತಿಯ ಹೇಳಿಕೆ ಕೊಟ್ಟಿದ್ದಾರೆ..

ಇನ್ನು ವಾಟ್ಸಾಪ್ ನಲ್ಲಿ ವಿಡಿಯೋ ಒಂದು ಹರಿದಾಡುತ್ತಿದೆ. ಅದನ್ನು ನೋಡಿದರೆ ಬಗ್ಗೆ ವಾಂತಿ ಬರುತ್ತೆ.. ಥೂ..

ಇವತ್ತಿನ ಮಾಧ್ಯಮಗಳಿಗೆ ಮನುಷ್ಯತ್ವ, ಮಾನವೀಯತೆ ಇದೆಯೇ.? ಪ್ರಿಂಟ್ ಮಾಧ್ಯಮಗಳು ಇನ್ನು ನಂಬಿಕೆ ಉಳಿಸಿಕೊಂಡಿವೆ. ಆದರೆ ಎಲೆಕ್ಟ್ರಾನಿಕ್ ಮೀಡಿಯಾಗಳು ನಮ್ಮ ದೇಶ ಯಾಕೆ ಹಾಳು ಮಾಡುತ್ತಿದ್ದೀರಿ.. ನಿಮಗೆ ಬ್ಯುಸಿನೆಸ್ ಮಾಡಬೇಕಾರೆ ಬೇರೆ ಉದ್ಯಮ ಮಾಡಿಕೊಳ್ಳಿ. ಇಲ್ಲಿ ಬಂದು ನಿಮ್ಮ ತೆವಲುಗಳಿಗೆ ದೇಶ ಹಾಳು ಮಾಡಬೇಡಿ. ನಾನು ಜೆ.ಪಿ ನಗರಕ್ಕೆ ಹೋಗುವಾಗ ಕ್ಯಾಮರ ಇಟ್ಟುಕೊಂಡು ಬಂದಿದ್ದರು.. ಪ್ರೈವಸಿ ಎಲ್ಲಿದೆ?

ನಾನು ನಾಡಿನ ಮುಖ್ಯಮಂತ್ರಿ ಯಾಗಿದ್ದಾಗ ಒಂದು ಮಾಧ್ಯಮದಲ್ಲಿ ಲೋಡ್ ಶೆಡ್ಡಿಂಗ್ ಮಾಡುತ್ತಿದ್ದೇವೆ.. ಕತ್ತಲೆ ಲೋಕದ ಕುಮಾರ .. ಎಂದು ವರದಿ ಮಾಡಿದ್ದರು. ಸ್ವಚ್ಛ ಭಾವನಾತ್ಮಕ ಜೀವನ ನನ್ನದು.. ಅದನ್ನು ನೋಡಿದಾಗ ಇಂತಹ ಸರ್ಟಿಫಿಕೇಟ್ ತಗೊಂಡು ಮುಖ್ಯಮಂತ್ರಿ ಆಗಬೇಕ ಅನ್ನಿಸಿತು. ಅಂದು ರಾತ್ರಿಯೆಲ್ಲ ಮಲಗಿಲ್ಲ .. ಅವತ್ತು ಎಡಗಾಲು ಸ್ವಾಧೀನ ಕಳೆದುಕೊಂಡು ಒಂದೂವರೆ ಗಂಟೆ ನೊಂದಿದ್ದೇನೆ..

ಇಂದು ನಾನು ಅತ್ಯಂತ ಸಂತೋಷವಾಗಿ ಈ ಸ್ಥಾನ ತ್ಯಜಿಸುತ್ತಿದ್ದೇನೆ. ನನಗೆ ಯಾವ ನೋವು ಇಲ್ಲ.  ಮತ್ತೊಮ್ಮೆ ವಚನ ಭ್ರಷ್ಟ.. ಎನ್ನುವ ಮಾಧ್ಯಮಗಳು ಪ್ರಶ್ನೆ ಹಾಕಿಕೊಳ್ಳಿ.

ಬಿಜೆಪಿ ಜೊತೆ 20 ತಿಂಗಳು ಇದ್ದೆ. ಅಧಿಕಾರ ಹಸ್ತಾಂತರವನ್ನು ಮಾಡಬೇಕೆಂದಿದ್ದೆ. ಈಶ್ವರಪ್ಪ ಜಗದೀಶ್ ಶೆಟ್ಟರ್ ಯಡಿಯೂರಪ್ಪರವರ ಒಪ್ಪಂದ ಮಾಡಿಕೊಂಡಿದೆ. ಆಗ ನನ್ನ ಗೆಳೆಯರಾದ ಬಾಲಕೃಷ್ಣ, ಚಲುವರಾಯಸ್ವಾಮಿ ಜೊತೆಗಿದ್ದರು. ಅಗ್ರಿಮೆಂಟ್ ಮಾಡಿಕೊಂಡರು. ದೇವೆಗೌಡರು ಮತ್ತು ಬಿಜೆಪಿ ಹೈಕಮಾಂಡ್ ಗಮನಕ್ಕೆ ಬಂದಿತ್ತು. ಆದರೆ ಆಗಲಿಲ್ಲ ಅಷ್ಟೇ..

ನಾನು ತಾಜ್ ವೆಸ್ಟೆಂಡ್ ನಲ್ಲಿಯೇ ಇರುತ್ತೇನೆ ಅಂತ ಆರೋಪ ಮಾಡುತ್ತೀರಿ. 2018ರ ಚುನಾವಣೆಯ ಫಲಿತಾಂಶದ ದಿನ. ಅಂದು ಅದೇ ಹೋಟೆಲ್ ನಲ್ಲಿ ಕುಳಿತು ಟಿ.ವಿ ನೋಡುತ್ತಿದ್ದೆ. ಅಂದು ರಾಜಕೀಯ ಬಿಡಬೇಕಿತ್ತು.. ಆದರೆ ಆಗ ಗುಲಾಂ ನಬಿ ಆಜಾದ್ ರವರು ದೂರವಾಣಿ ಕರೆ ಮಾಡಿ.. ನಿಮಗೆ ಬೆಂಬಲ ನೀಡುತ್ತೇವೆ, ಸಮ್ಮಿಶ್ರ ಸರ್ಕಾರ ಮಾಡೋಣ ಅಂದರು. ಹಾಗಾಗಿ ಆ ರೂಂ ಬಗ್ಗೆ ಪ್ರೀತಿ ಅಷ್ಟೇ.

ನಾನು ವಚನ ಭ್ರಷ್ಟ ಅಲ್ಲ.. ಒಂಭತ್ತು ದಿನದ ಮುಖ್ಯಮಂತ್ರಿ ಯಡಿಯೂರಪ್ಪನವರು ಅರ್ಥಮಾಡಿಕೊಳ್ಳಬೇಕು. ಈ ನಾಡಿನ ಜನತೆಗೆ ತಿಳಿಸಬೇಕಿದೆ. ದೇವೇಗೌಡರು ಆತ್ಮಚರಿತ್ರೆ ಬರೆಯುತ್ತಿದ್ದಾರೆ. ಸ್ವಲ್ಪ ದಿನದಲ್ಲಿಯೇ ಹೊರಬರುತ್ತೆ. ನಾನು ಪ್ರಾಮಾಣಿಕವಾಗಿ ನಡೆದುಕೊಂಡಿದ್ದೇನೆ.. ಈ ಸರ್ಕಾರ ಇರುತ್ತೊ ಹೋಗುತ್ತೊ .. ಆದರೆ ನನ್ನ ಅಧಿಕಾರಿಗಳಿಗೆ ಹೃದಯತುಂಬಿದ ಧನ್ಯವಾದಗಳು

ಡೇ ಒಂದರಿಂದ ಮಾಧ್ಯಮಗಳು ತೊಂದರೆ ಕೊಟ್ಟಿವೆ. ಸುಭದ್ರ ಸರ್ಕಾರಗಲೇ ಕೆಲಸ ಮಾಡುವುದು ಕಷ್ಟ. ನಮ್ಮ ನಡವಳಿಕೆ ನೋಡಿ, ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡಿದ್ದಾರೆ. ಅವರಿಗೆ ಧನ್ಯವಾದಗಳು. ಇದು ಕೇವಲ ನನ್ನ ಸಾಧನೆ ಅಲ್ಲ.. ಅವರೆಲ್ಲರ ಪಾಲಿದೆ.

ಸಾಲ ಮನ್ನಾ .. 25 ಸಾವಿರ ಕೋಟಿ ತೆಗೆದಿದ್ದೇವೆ.. ರೈತರಿಗೆ ಮೋಸ ಮಾಡಲಿಕ್ಕೆ ಹೋಗಿಲ್ಲ.. 2018ರಲ್ಲಿ ಸಿದ್ದರಾಮಯ್ಯ ನವರು ಫೇಬ್ರವರಿ ತಿಂಗಳ ಬಜೆಟ್ ಮಂಡನೆ ಮಾಡಿದ್ದರು. ನಂತರ ನಾನು ಅಧಿಕಾರಕ್ಕೆ ಬಂದರೂ ಅವರ ಯಾವುದೇ ಕಾರ್ಯಕ್ರಮ ಕಡಿತ ಮಾಡಿಲ್ಲ.. ಸಿದ್ದರಾಮಯ್ಯನವರು ಘೋಷಿಸಿದ್ದ ಸಾಲಮನ್ನಾದ 2700 ಕೋಟಿ ರೂ ನಾವು ತೀರಿಸಿದೆವು. ರೈತರಿಗೆ ನಮ್ಮಿಂದ ಮೋಸವಾಗಿಲ್ಲ.. ಟ್ರಾಕ್ಟರ್, ಮನೆ ಕಟ್ಟುವಾಗ ಸಾಲ ಮಾಡಿದರೆ ಅದಕ್ಕೂ ಕುಮಾರಸ್ವಾಮಿ ಕಾರಣ ಎಂದು ಈ ಮಾಧ್ಯಮಗಳು ಅರಚುತ್ತವೆ.

ಒಂದೇ ಒಂದು ಹಗರಣ ಇದ್ರೆ ನನ್ನ ಮುಂದೆ ತಂದುಕೊಡಿ. ಬರಿ ಚಪಲಕ್ಕೆ ಹೇಳಬೇಡಿ. ದಾಖಲೆಗಳ ಸಮೇತ ತಂದಿಡಿ. ನಾನು ಸರ್ಕಾರಿ ಕಾರು, ಬಂಗಲೆ, ಟಿ.ಎ ಡಿ.ಎ, ಪೆಟ್ರೋಲ್ ಖರ್ಚು ತಗೊಂಡಿಲ್ಲ.. ಜನರ ತೆರಿಗೆ ಹಣ ಖರ್ಚು ಮಾಡಬೇಕಾದರೆ ನನ್ನ ಆತ್ಮಕ್ಕೆ ಪ್ರಶ್ನೆ ಹಾಕಿಕೊಂಡು ಖರ್ಚು ಮಾಡುತ್ತೇನೆ.

ಪ್ರಧಾನ್ ಮಂತ್ರಿ ಸಮ್ಮಾನ್ ಯೋಜನೆಗೆ 35 ಲಕ್ಷ ರೈತರ ವಿವರಗಳನ್ನು ವೆಬ್ ಸೈಟ್ ಗೆ ಅಪ್ ಲೋಡ್ ಮಾಡಿದ್ದೇವೆ. ಆದರೆ ಹಣ 15 ಲಕ್ಷ ರೈತ ಕುಟುಂಬಗಳಿಗೆ ಮಾತ್ರ. 1500 ಕೋಟಿ ಮಾತ್ರ. ನಾನು ತಪ್ಪು ಮಾಡಿದ್ರೆ ಕಿವಿಹಿಂಡಿ ಬುದ್ದಿ ಹೇಳಿ. ಹಾಗೆಯೇ ಒಳ್ಳೇಯ ಕೆಲಸ ಮಾಡಿದರೆ ಮನಸ್ಸು ಬಿಚ್ಚು ಹೇಳಿ. ಬೋಪಯ್ಯ ಅಪ್ಪಚ್ಚು ರಂಜಾನ್ ಕೇಳಿ. ಕೊಡಗಿನಲ್ಲಿ ಪ್ರಕೃತಿ ವಿಕೋಪ ಬಂದಾಗ ಯಾವ ರೀತಿ ಕೆಲಸ ಮಾಡಿದ್ದೀವಿ ಅಂತ. ಯಾವ ರೀತಿ ಕೆಲಸ ಮಾಡಿದ್ದೀನಿ ..

ಬಸವರಾಜ ಬೊಮ್ಮಾಯಿ ಜ್ಯೋತಿಷಿ ಯಾವಾಗ ಆದ್ರಿ? ಫೆಬ್ರವರಿ ನಲ್ಲೇ ನುಡಿದಿದ್ದರು.. ಈ ಸರ್ಕಾರ ಬೀಳುತ್ತೆ ಅಂತ. ನಾನು ಜ್ಯೋತಿಷಿ ಕೇಳಲ್ಲ.. ನಂಬೋಲ್ಲ. ರೇವಣ್ಣನ ಬಗ್ಗೆ ಮಾತಾಡುತ್ತಾರೆ.  ದಿನಾ ಟಿವಿಯೊಳಗೆ ನಿಂಬೆ ಹಣ್ಣಿನ ಚರ್ಚೆ ಮಾಡುತ್ತಾರೆ. ಆತ ಅಮಾಯಕ. ನನ್ನ ಪ್ರಕಾರ ಮುಗ್ಧ.

ನಾನು ಓಡಿ ಹೋಗೋಲ್ಲ. ವಿಶ್ವಾಸಮತಕ್ಕೆ ಹಾಕುತ್ತೇನೆ. ಗೆಲುವು ಸೋಲು ಎರಡನ್ನು ಸಮಭಾವದಿಂದ ಸ್ವೀಕರಿಸುತ್ತೇನೆ…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...