Homeಅಂಕಣಗಳುಐ ಯಾಮ್ ಬಾಯ್ ಕಟಿಂಗ್ ಯು

ಐ ಯಾಮ್ ಬಾಯ್ ಕಟಿಂಗ್ ಯು

- Advertisement -
- Advertisement -

ಯಾಹೂ|

ಗತಿಸಿಹೋದ ಗುಂಡುರಾಯರಂತೆ ಕುಮಾರಣ್ಣನವರು ಕೂಡ ಕರ್ನಾಟಕದ ಜನಾಭಿಪ್ರಾಯವಿಲ್ಲದ ಮುಖ್ಯಮಂತ್ರಿ! ಅಂದರೆ ಸ್ಪರ್ಧಿಸಿದ್ದ ಮೂರು ಪಾರ್ಟಿಗಳ ಪೈಕಿ. ಕೇವಲ ಮುವ್ವತ್ತೇಳು ಕ್ಷೇತ್ರ ಕುಮಾರಣ್ಣನನ್ನ ಒಪ್ಪಿವೆ. ಆದರೇನು ಅವರೇ ಮುಖ್ಯಮಂತ್ರಿಯಾಗಿ ಮೆರೆಯುತ್ತಿದ್ದಾರೆ. ಲೋಕಸಭಾ ಚುನಾವಣೆ ಮುಗಿದಿದೆ. ದುಸ್ವಪ್ನವೊಂದು ಕಾಡಿದಂತೆ, ಅದರ ಫಲಿತಾಂಶ ಮುಂದಿನ ತಿಂಗಳು 23ರವರೆಗೆ ತನ್ನ ಅವಧಿ ವಿಸ್ತರಿಸಿಕೊಂಡಿದೆಯಲ್ಲಾ. ಈ ಸಮಯದಲ್ಲಿ ಅಪಾಯಕಾರಿ ದೇಹವೊಂದಿರುವ ಅವರಿಗೆ ಸಾಂತ್ವನ ಹೇಳಿ, ಐದು ವರ್ಷ ಪೂರ್ತಿಯ ಆಯಸ್ಸು ಕೋರುವುದು ನಮ್ಮ ಕರ್ತವ್ಯವೆಂದು ಫೋನ್ ಮಾಡಲಾಗಿ ರಿಂಗಾಯ್ತು….
ರಿಂಗ್ ಠೋನ್: `ರಾಧಿಕೆ ನಿನ್ನ ಸರಸವಿದೇನೇ ರಾಧಿಕೆ ನಿನ್ನ ನಿನ್ನ ಸರಸವಿದೇನೆ……..’ “ಹಲೋ ಯಾರು”
“ನಾನು ಸಾರ್ ಯಾಹೂ.”
“ಐ ಯಾಮ್ ಬಾಯ್ ಕಾಟಿಂಗ್ ಯು.”
“ವೈ ಸಾರ್.”
“ಯು ಆಲ್‍ಸೊ ಪ್ರೆಸ್‍ಮ್ಯಾನ್.”
“ನೋ, ನೊ ಅಯಾಮ್ ನಾಟ್ ದಟ್ ಟೈಪ್ ಆಫ್ ಪ್ರೆಸ್ ಮ್ಯಾನ್.”
“ನೀವ್ಯಲ್ಲ ಒಂದೇ ಕಂಡ್ರೀ.”
“ಸಾರಿ ಸಾರ್, ನಾನು ರಂಗನಾಥ ಭಾರದ್ವಾಜ, ಮಾದೇವ ಪ್ರಸಾದ್ ತರ ಅಲ್ಲ. ಮೊದಲಿಂದ ನಿಮ್ಮ ಹಿತೈಶಿ.”
“ಏನು ಹಿತೈಸಿನೊ ಏನೊ, ಅದೇನು ಬರಕತ್ತಿರೊ ಬರಕಳಿ ನನಿಗೆ ಟೈಮಿಲ್ಲ ಈಗ.”
“ಸಾರ್ ಆ ಮೋದಿನೂ ಪತ್ರಕರ್ತರ ಜೊತೆ ಟೈಂ ವೇಸ್ಟ್ ಮಾಡಲಿಲ್ಲ, ನೀವೂ ಅಂಗೇ ಅಂತೀರಲ್ಲ ಸಾರ್.”
“ಆ ಮೋದಿ ಅನತಕ್ಕಂತ ವ್ಯಕ್ತಿ ಬೇರೆ, ನಾನು ಬೇರೆ ಕಂಡ್ರಿ, ಆತ ಪತ್ರಕರ್ತರನ್ನ ಬೇಟಿಮಾಡದೇ ಇದ್ರು, ಅವರೆಲ್ಲಾ ಅವರ ಪರವಾಗೇ ಬರದ್ರು. ಈಗ್ಲು ಬರಿತಾ ಅವುರೆ, ಅಂದ್ರೆ ನೀವೆ ತಿಳಕಳಿ!”
“ಸಾರ್ ಇಪ್ಪತ್ತೈದು ವರ್ಷದ ಹಿಂದೆ ಲಂಕೇಶ್ ಇದನ್ನೇ ಹೇಳಿದ್ರು ಸಾರ್.”
“ಏನೇಳಿದ್ರು.”
“ಬ್ರಾಹ್ಮಣ ಪತ್ರಕರ್ತರ ಅನಾಹುತ ಮುಂದೆ ಜರುಗ್ತವೆ ಎಚ್ಚರ ಅಂದಿದ್ರು.’’
“ಬ್ರಾಂಬ್ರು ಅಂತ ಅಲ್ಲ, ಹೊಟ್ಟೆಪಾಡಿನ ಪತ್ರಕರ್ತರಿಗೆ ಜಾತಿ ಇಲ್ಲ. ಮಂಡ್ಯದಲ್ಲಿ ನಮ್ಮ ಜಾತಿಯೋರೆ ಬರದ್ರು.”
“ಮೂರ್ಖರು ಸಾರ್ ಅವರು, ನೀವು ಅನಾರೋಗ್ಯದಲ್ಲಿದೀರಿ, ಯಾವ ಸಮಯದಲ್ಲಿ ಏನೋ ಅಂತೇಳಿ ನನ್ನ ಆಸರೆಗೆ ನನ್ನ ಮಗ ಬಂದವುನೆ ಅಂದ್ರೂ, ಮನಸಿಗೆ ಬಂದಿದ್ನೆ ಬರದ್ರು.”
“ಮಾನವೀಯತೆ ಇಲ್ದೆ ಇರತಕ್ಕಂತವರು ಪತ್ರಕರ್ತರಾದರೆ, ಈ ತರ ಬರೀತಾರೆ ಅನ್ನೊ ಅಭಿಪ್ರಾಯ ನನಿಗೆ ಮನದಟ್ಟಾಗದಕ್ಕೆ ಬಹಳ ಸಮಯ ಹಿಡೀತು.”
“ಎಲೆಕ್ಷನ್ನಿಗೆ ನಿಲ್ಲೋಕೆ ಮಂಡ್ಯದಲ್ಲೇ ಯಾರೂ ಇರಲಿಲ್ಲವೇ ಅಂತ ಬರದ್ರು ಸಾರ್.”
“ನೀವೆ ಹೇಳಿ ಯಾಹು, ಮಂಡ್ಯದಲ್ಲಿ ನಿಖಿಲ್ ತರ ಅಭ್ಯರ್ಥಿ ಇದ್ನಾ!”
“ದೇವರಾಣೆ ಇಲ್ಲ ಸಾರ್, ಜಾಗ್ವಾರಲ್ಲಿ ಪೈಟ್ ಎಷ್ಟು ಚೆನ್ನಾಗಿ ಮಾಡ್ಯವುನೆ, ಅವುನ ತರ ಪಂಚೆ ಉಡಕ್ಕೆ ಬತ್ತದ ಸಾ, ಆ ಮಂಡೆದವುಕೆ.”
“ನನ್ನ ಮಗ ಅನ್ನತಕ್ಕಂತ ಅಭಿಪ್ರಾಯವನ್ನ ಬದಿಗಿಟ್ಟು ನೋಡದಾದ್ರೆ, ಈ ವಯಸಿಗೆ ಅವುನು ಮಂಡ್ಯವನ್ನ ನಿಭಾಯಿಸೊ ಶಕ್ತಿಯನ್ನ ಪಡಕಂಡಿರತಕ್ಕಂತದನ್ನ ನೋಡಿ, ನಾವು ಅಭ್ಯರ್ಥಿ ಮಾಡದಕ್ಕೆ ಏನು ತೀರ್ಮಾನ ತಗಂಡೋ, ಅದಕ್ಕೆ ಮಂಡ್ಯದ ಜನಗಳೇ ಒಪ್ಪಿಗಂಡ್ರು.”
“ನಿಜ ಸಾರ್, ಎಷ್ಟು ಮುಗ್ದರು ಅಂದ್ರೆ, ನಿಮಗೆಲ್ಲಾ ಸೇಬಿನ ಹಾರ ಹಾಕಿದಾಗ, ಆ ಸೇಬಣ್ಣನ್ನ ಜನ ನೋಡ್ತಾಯಿದ್ದದ್ದು, ಆನಂತ್ರ ಹಾರನ ಚಿಂದಿ ಉಡಾಯಿಸಿ ತಿಂದಿದ್ದು, ಇನ್ನೂ ನನ್ನ ಕಣ್ಣೊಳಗದೆ ಸಾ. ಅಂಥವರ ಮನಸನ್ನ ಈ ಪತ್ರಕರ್ತರು ಅರ್ಥಮಾಡಿಕೊಬೇಕಾಗಿತ್ತು.”
“ಅದಿರ್ಲಿ ಕಂಡ್ರೀ, ಜಾಗ್ವಾರ್ ಸಿನಿಮಾ ಸಿಡಿ ಬಿಡುಗಡೆ ಮಾಡ್ತಕಂತ ವಿಷಯದಲ್ಲಿ ಏನು ಸ್ಟೇಡಿಯಂ ತುಂಬ ಜನ ಸೇರಿಕಂಡಿದ್ರು, ಆ ಸಂದರ್ಭದಲ್ಲಿ ನನಿಗೆ ನಮ್ಮ ನಿಖಿಲ್ ಕಾಣಿಸಲಿಲ್ಲ. ಆಗ ಎಲ್ಲಿದ್ದೀಯಪ್ಪಾ? ಅಂದೆ. ಅದು ತಪ್ಪೇನ್ರಿ, ಅದನ್ನ ಸಾಮಾಜಿಕ ಜಾಲತಾಣಗಳಲ್ಲಿ ಇನ್ನು ತೋರುಸ್ತಾ ಅವುರೆ.”
“ಅದಕ್ಕೆ ನೀವು ಸರಿಯಾದುತ್ರ ಕೊಟ್ರಿ ಸಾರ್.”
“ಇನ್ನೇನು ಮತ್ತೆ, ನಿಖಿಲ್ ಎಲ್ಲಿದ್ದೀಯಪ್ಪಾ ಅಂದೋರಿಗೆ ನಿಮ್ಮ ಹೃದಯದಲ್ಲವುನೆ ಅಂದ್ರಾಯ್ತು.”
“ನಿಜ ಸಾರ್, ಸಗಣೀಲಿ ಹೊಡದೋರಿಗೆ ನೀವು ಬೆಲ್ಲದಲ್ಲಿ ಹೊಡುದ್ರಿ. ರಿಯಲಿ ಗ್ರೇಟ್ ಸಾರ್.”
“ಇನ್ನೊಂದೆರಡು ಕಳ್ಳೆತ್ತುಗಳಿಗೂ ಸರಿಯಾದ ಉತ್ರ ಕೊಟ್ಟಿದ್ದಿನಿ, ನಾನು ಸಿನುಮ ತಗದ್ರಲವೇನ್ರಿ ಇವುರು ಹೀರೋಗಳಾಗಿ ಮರೆಯೋದು.”
“ಯಾವ ಯಾವ ಸಿನುಮ ತಗದ್ರಿ.”
“ಮರತೋಗ್ಯವೆ ಕಂಡ್ರಿ, ಜಾಗ್ವಾರ್, ಸೀತೆರಾಮನ್ ಕಲ್ಯಾಣ ಮಾತ್ರ ನೆನಪಲ್ಲವೆ.”
“ಇರಲೇಬೇಕಲ್ಲ ಸಾ, ನಿಮ್ಮ ಮಗನ ಸಿನುಮಗಳು ಅಲುವೆ! ನಾನೊಂದು ಸಿನುಮ ನೋಡಿದ್ದೆ ಸಾ ನಿಮ್ದು.”
“ಯಾವುದ್ರಿ.”
“ಜಿತೇಂದ್ರ ಅಂತ ಉಪೇಂದ್ರನ್ನಾಡಿಕಂಡು ತಗದಿದ್ರಲ್ಲ, ಆ ಕೋತಿ ಮುಂಡೇದು ಜಗ್ಗೇಶ್ ಚೆನ್ನಾಗಿ ಮಾಡಿತ್ತು ಸಾರ್”
“ಅವನು ವಳ್ಳೆ ಆಕ್ಟರು ಕಂಡ್ರೀ.”
“ಮತ್ತೆ ಜೆಡಿಎಸ್ಸೆಲ್ಯಾಕೆ ಸಾರ್ ಮಡಿಕಳ್ಳಿಲ್ಲ ಅವುನ್ನ.”
“ಅವು ಯಾವಾಗ್ಲು ಕೈ ಬಾಯಿ ನೋಡ್ತವೆ ಕಂಡ್ರಿ. ಅಂಥವು ಕಂಡ್ರೆ ನಮ್ಮ ತಂದೆಗಾಗಲ್ಲ. ಅದ್ಕೆ ಹೋಗಿ ಬಿ.ಜೆ.ಪಿ ಸೇರಿಕಂಡ.”
“ಹೋಗ್ಲಿ ಬುಡಿ ಸಾ, ಅಂಥವಲ್ಲಿಗೆ ಸರಿ. ಈ ಯಶ್ ಮತ್ತೆ ದರ್ಶನ್, ಸುಮಲತ ಗಾಡಿ ಯಳಿಯಕ್ಕೆ ಸರಿ.”
“ಅದಕ್ಕೂ ಲಾಯಕ್ಕಲ್ಲ ಕಂಡ್ರಿ ಅವು. ಅವುರಾಡತಕ್ಕಂತ ಮಾತಿಗೆ ನನ್ನ ಅಭಿಮಾನಿಗಳು ಸಿಟ್ಟಾಗಿ ಸರಿಯಾಗಿ ಬುದ್ದಿ ಕಲುಸಕ್ಕೆ ಮಾಡಿದ್ರು. ನಾನೇ ಅವಾಯ್ಡು ಮಾಡಿದೆ.”
“ನಿಜ ಸಾರ್, ಆಗ ನೀವೊಂದು ಸೂಚನೆ ಕೊಟ್ಟ ಕೂಡ್ಳೆ, ಆ ಸಿದ್ದರಾಮಯ್ಯನ ಅಹಿಂದ ಸಭೆ ಏರ್ಪಡಿಸುತ್ತಿದ್ದೋರ ಕಾರನ್ನೇ ಸುಟ್ಟಾಕಿದ್ರು ನಿಂ ಅಭಿಮಾನಿಗಳು, ನಾನೆ ನೋಡಿದ್ದೆ.”
“ಈಗ್ಲು ನಾನು ಮುಖ್ಯಮಂತ್ರಿಯಾಗಿರದ್ರಿಂದ, ನನಿಗೆ ಕೆಟ್ಟ ಹೆಸರು ಬರತ್ತೆ ಅಂತ ಸೂಚನೆ ಕೊಡ್ಳಿಲ್ಲ.”
“ನಿಮ್ಮ ಸರಕಾರ ಕೆಡುವಕ್ಕೆ ಸಂಚು ಮಾಡ್ತಾಯಿರೊ ಎಮ್ಮೆಲ್ಲೆಗಳಿಗೆ ವಸಿ ವಿಚಾರಿಸಿಗಳಿ ಸಾ.”
“ಅದಕ್ಕೆಲ್ಲಾ ಟೈಂ ಬರತ್ತೆ ಇರಿ, ಈಗ ಬೇಡ.”
“ಕಿಡಿಗೇಡಿ ಪತ್ರಕರ್ತರಿಗೆ, ಏನಾರ ಮಾಡಬೇಕಲ್ಲ ಸಾ.”
“ನಮ್ಮ ತಂದೆ ಹೇಳಿದಾರೆ ನೆಗ್ಲೆಟ್ ಮಾಡು ಅಂತ, ಅಂಗೆ ಮಾಡ್ತಿನಿ.”
“ಒಳ್ಳೆ ಐಡಿಯಾ ಸಾರ್, ದೇವೇಗೌಡ್ರದು ಅನುಭವದ ಮಾತು.”
“ನಮ್ಮ ತಂದೆಯವರು ರಾಷ್ಟ್ರಮಟ್ಟದ ನಾಯಕರಾದ್ರೂ ಅವರ ಬಗ್ಗೆ ಒಳ್ಳೆದು ಬರೀಲಿಲ್ಲ ಇವುರು.”
“ನಾವು ಬರದಿದ್ದಿವಿ ಸಾರ್, ಅವುರೇನು ಅನ್ನದ ಇವತ್ತಿಗೂ ಜನಕ್ಕೆ ಹೇಳಿಕೊಂಡು ಬಂದಿದ್ದೀವಿ.”
“ಥ್ಯಾಂಕ್ಸ್ ಯಾಹೂ ಅವುರೆ, ಈ ಕಡೆ ಬನ್ನಿ ಈಗ ಟೈಮಿಲ್ಲ.”
“ಯಾಕ್ ಸಾರ್.”
“ಕುಕ್ಕೆ ಸುಬ್ರಮಣ್ಯಕ್ಕೆ ಚಿನ್ನದ ರಥ ಮಾಡಸೊ ಚರ್ಚೆಗೆ ಆ ದೇವಸ್ತಾನದೋರು ಬಂದವುರೆ”
“ಆಯ್ತು ಮಾಡಿಸಿ ಸಾರ್; ಕುಕ್ಕೆಗೆ ಚಿನ್ನದ ರಥ ಮಾಡಿಸೊ ತೀರ್ಮಾನದಿಂದ ನಿಖಿಲ್ ಎರಡೂವರೆ ಲಕ್ಷ ಲೀಡಲ್ಲಿ ಬರ್ತಾನೆ. ಗೌಡ್ರು ಪ್ರಜ್ವಲ್ ವಿಷಯ ಅಂಗಿರ್ಲಿ, ಅಮ್ಯಾಲೆ ಕರ್ನಾಟಕದ ಎಲ್ಲ ಹಳ್ಳಿಗಳಿಗೂ ಟ್ಯಾಂಕರಲ್ಲಿ ನೀರು ಹೊಡಿತಾ ಅವುರೆ. ಈ ಪೈಕಿ ಕಾಂಗ್ರೆಸ್ಸಿನವುರು ದಳದÀ ಕಡಿಯವರಿಗೆ ನೀರು ಕೊಡಲ್ಲ. ದಳದವುರು ಕಾಂಗ್ರೆಸ್ಸಿಗೆ ಓಟಾಕಿದೋರಿಗೆ ನೀರು ಕೊಡ್ತಾಯಿಲ್ಲ. ಇನ್ನ ಬಿಜೆಪಿಗಳು ಯಾರಿಗೂ ನೀರು ಕೊಡ್ತಾಯಿಲ್ಲ. ಇಂಥ ಧಾರುಣವಾದ ಜಲಕ್ಷಾಮ, ಸುಬ್ರಮಣ್ಯ ದೇವರಿಗೆ ಚಿನ್ನದ ರಥ ಮಾಡಿಸೋದ್ರಿಂದ ಪರಿಹಾರ ಕಾಣೋದಾದ್ರೆ, ಮಾಡಿಸಿ ಸಾ. ಇನ್ನೊಂದು ವಿಷಯ, ಆ ದೇವರಿಗೆ ಒಡವೆ ಕೊಟ್ಟ ಮಲ್ಯ ಕೂಡ್ಳೆ ಹಾಳಾದ ಗೊತ್ತ ಸಾ, ಹಲೋ…. ಹಲೋ…….. ಹಲೋ……..”
“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...