Homeಅಂಕಣಗಳುಸರಳ ಬಹುಮತ ಸಿಕ್ಕಿದ್ದರೆ ಸರಿಯಾಗಿ ಮಾಡುತ್ತಿದ್ದೆ!

ಸರಳ ಬಹುಮತ ಸಿಕ್ಕಿದ್ದರೆ ಸರಿಯಾಗಿ ಮಾಡುತ್ತಿದ್ದೆ!

- Advertisement -
- Advertisement -

ಆತ ಅವಳ ಕಿವಿಯಲ್ಲಿ ಉಸುರಿದ! ‘ನಾನು ಒಂದು ಹತ್ತು ವರ್ಷ ಚಿಕ್ಕವನಾಗಿದ್ದಿದ್ದ್ರೆ, ನಿನ್ನನ್ನು ಇನ್ನೂ ಸುಖವಾಗಿಡುತ್ತಿದೆ’ ಎಂದು. ಅದಕ್ಕವಳು ಈಗಲೂ ಏನೂ ಆಗಿಲ್ಲ, ಹತ್ತು ವರ್ಷ ಚಿಕ್ಕವನೆಂದೇ ನಿನ್ನ ಪೌರುಷ ತೋರಬಹುದೆಂದಳು.
ಇಂತಹದೊಂದು ಮಾತು ನಮ್ಮ ಗ್ರಾಮೀಣ ಭಾಗದಲ್ಲಿ ಆಗಾಗ್ಗೆ ಹೊರಬರುತ್ತದೆ. ಕಾರಣ, ತಮ್ಮತಮ್ಮ ಅಸಮರ್ಥತೆಗಳನ್ನು ಯಾವು ಯಾವುದೋ ಕಾರಣಗಳ ಮೇಲೆ ಹಾಕಿ ಬಂಡವಾಳವನ್ನ ಕೊಚ್ಚಿಕೊಳ್ಳುವ ಜನ ಈಗಲೂ ಇದ್ದಾರೆ. ಅದಕ್ಕೆ ತಕ್ಕ ಉದಾಹರಣೆ ಎಂದರೆ, ನಮ್ಮ ಮುಖ್ಯಮಂತ್ರಿಯಂತಲ್ಲಾ. ಜೆಡಿಎಸ್‍ಗೆ ಹೆಚ್ಚಿನ ಬಹುಮತವಿದ್ದರೆ ಇನ್ನೂ ಹೆಚ್ಚಿನದನ್ನು ಕಡಿದು ಕಟ್ಟೆ ಹಾಕುತ್ತಿದ್ದೆ ಎಂದು ಕುಮಾರಣ್ಣ ಜನರ ಮೇಲೆಯೇ ಆಪಾದನೆ ಹೊರಿಸುತ್ತಿದ್ದಾರೆ. ಹಾಗೆನೋಡಿದರೆ ತಮ್ಮ ಕ್ಯೆಪಾಸಿಟಿ ಮೂವತ್ತು ಸೀಟು; ಅದು ಹೇಗೋ ಬಿಜೆಪಿಯ ಜೊತೆ ಒಳ ವ್ಯವಹಾರ ನಡೆಸಿ ಮುವ್ವತ್ತೆಂಟು ಸೀಟು ಬಂದವು. ಇನ್ನು ಎಡೂರಪ್ಪನ ಸೀಟು ನೂರ ನಾಕು, ಏಕೆಂದರೆ ಸಿದ್ದು ವೀರಶೈವ ಮತ್ತು ಲಿಂಗಾಯಿತ ಜೇನುಹುಟ್ಟಿಗೆ ಕಲ್ಲು ಬೀರಿ ಕಡಿಸಿಕೊಂಡಿದ್ದಕ್ಕೆ. ಇಂತಿರುವಾಗ ಕುಮಾರಣ್ಣನಿಗ್ಹೇಗೆ ಸರಳ ಬಹುಮತ ಸಾಧ್ಯ. ಅಂತೂ ಕುಮಾರಣ್ಣ ಕೈಲಾಗದಕ್ಕೆ ಕಾಂಗೈನೇ ದೂರುತ್ತಿದ್ದಾರಂತಲ್ಲಾ… ಥೂತ್ತೇರಿ!

******

ಕುಮಾರಣ್ಣನವರು ಸರಳ ಬಹುಮತ ಬಂದಿದ್ದರೆ ಒಳ್ಳೆ ಕೆಲಸ ಮಾಡುತ್ತಿದ್ದೆ ಎಂದರೆ ಏನರ್ಥ. ಈ ಕಾಂಗೈಗಳು ನನ್ನನ್ನು ಒಳ್ಳೆ ಕೆಲಸ ಮಾಡಲು ಬಿಡುತ್ತಿಲ್ಲ ಎಂಬರ್ಥ ತಾನೆ. ನಾವು ಯಾವರೀತಿ ಇವರಿಗೆ ಅಡ್ಡಿಯಾಗಿದ್ದೇವೆ ಎಂದು ವಿವರಿಸಬೇಕೆಂದು ಕಾಂಗೈ ಬುದ್ದಿಜೀವಿಗಳು ತಮ್ಮ ಅನಿಸಿಕೆಯನ್ನು ಬಾಯಿಬಿಡದೆ ಮುಲುಕುತ್ತಿರುವಾಗಲೇ ಅತ್ತ ದೇವೇಗೌಡರು ನನ್ನ ಜೆಡಿಎಸ್ ಪಾರ್ಟಿಯಿಂದ ಮುಸ್ಲಿಮರು ಕಾಲ್ತೆಗೆಯಲು ಕಾಂಗ್ರೆಸ್ಸಿನವರೇ ಕಾರಣ, ಯಾಕೆಂದರೆ ಕಳೆದ ಚುನಾವಣೆಯಲ್ಲಿ ನಮ್ಮನ್ನ ಬಿಜೆಪಿಯ ಬಿ ಟೀಮ್ ಎಂದು ಕರೆದ ಕಾರಣವಾಗಿ ಮುಸ್ಲಿಮರು ನಮ್ಮಿಂದ ದೂರ ಹೋದರು ಎಂದು ಕಾಂಗೈನೇ ದೂರಿದರಲ್ಲಾ. ಕಾಂಗ್ರೆಸ್‍ನವರು ಹಾಗಂದಿದ್ದು ನಿಜ, ಆದರೆ ಜೆಡಿಎಸ್‍ನವರ ನಡವಳಿಕೆಯೇ ಹಾಗಿತ್ತು. ಚಾಮುಂಡೇಶ್ವರಿ ಚುನಾವಣೆಯಲ್ಲಿ ಗೌಡರ ಪಾರ್ಟಿ ಬಿ ಟೀಮಿನ ಕೆಲಸ ಮಾಡಿದ್ದಲ್ಲದೆ ಕರ್ನಾಟಕದ ಉಳಿದ ಕಡೆಯೂ ಹಾಗೇ ಮಾಡಿತು. ಜೊತೆಗೆ, ದೇವೇಗೌಡರು ಮೋದಿಯನ್ನು ಅಪ್ಪಿತಪ್ಪಿ ಟೀಕಿಸದೆ ಕಾಂಗ್ರೆಸ್‍ನ್ನೇ ಗುರಿಯಾಗಿರಿಸಿಕೊಂಡಿದ್ದಕ್ಕೆ ಸಾಕ್ಷಿ ಸಿಕ್ಕ ಕಾರಣಕ್ಕೆ ಜೆಡಿಎಸ್‍ಗೆ ಬಿ ಪಟ್ಟ ಕೊಟ್ಟರು. ಅದೇನಾದರಾಗಲಿ, ಇದೆಲ್ಲಾ ಆದಮೇಲೆ ಅಪ್ಪ ಮಗ ಕಾಂಗ್ರೆಸ್ಸನ್ನೇ ಟಾರ್ಗೆಟ್ ಮಾಡಿಕೊಂಡಿರುವುದರ ಮರ್ಮವೇನೆಂದು ಕಾಂಗೈಗಳು ಕಂಗಾಲಾಗಿವೆಯಂತಲ್ಲಾ, ಥೂತ್ತೇರಿ!!

******

ರೆಸಾರ್ಟ್ ರಾಜಕಾರಣಕ್ಕೂ ಕರ್ನಾಟಕಕ್ಕೂ ಸಂಬಂಧವೇ ಇರಲಿಲ್ಲ. ರಾಮಕೃಷ್ಣ ಹೆಗಡೆ ಕಾಲದಲ್ಲಿ ನಾದೆಂಡ್ಳ ಬಾಸ್ಕರರಾವ್ ಬಂಡಾಯದಿಂದ ಬೆಚ್ಚಿದ ಎನ್.ಟಿ.ಆರ್ ಆಂದ್ರದ ಶಾಸಕರನ್ನ ಹಿಡಿದುತಂದು ಬೆಂಗಳೂರು ನಂದಿಬೆಟ್ಟದಲ್ಲಿ ದನಗಳನ್ನು ಕೂಡಿಹಾಕಿದಂತೆ ಕೂಡಿ, ಕಡೆಗೆ ಹೊಡೆದುಕೊಂಡು ಹೋದರು. ಈ ಮೂರು ದಶಕದಲ್ಲಿ ಅಂತಹ ಘಟನೆಗಳು ಹಲವು ಜರುಗಿವೆ. ಆದರೀಗ ಜೆಡಿಎಸ್ ಸರಕಾರ ರಚಿಸಲು ಸಿದ್ದು 76 ಕುರಿಗಳನ್ನ ಅಟ್ಟಿಕೊಂಡು ರೆಸಾರ್ಟ್ ಕಡೆ ಹೋಗಿದ್ದು ಶಾನೆ ನಗೆಪಾಟಲಿಗೆ ಗುರಿಯಾಗಿದೆಯಂತಲ್ಲಾ. ಏಕೆಂದರೆ ನಿಮ್ಮಪ್ಪನಾಣೆ ಮುಖ್ಯಮಂತ್ರಿಯಾಗಲ್ಲ ಎಂದು ಕುಮಾರಣ್ಣನಿಗೆ ಹೇಳುತ್ತಿದ್ದ ಸಿದ್ದು ತನ್ನ ಜಾಯಮಾನಕ್ಕೆ ಒಗ್ಗದ ಈ ವ್ಯವಹಾರಕ್ಕೆ ತೊಡಗಿದ್ದು ಅಚ್ಚರಿ ಮೂಡಿಸಿದೆಯಲ್ಲಾ. ಸಿದ್ದು ಅನುಮಾನದ ಪ್ರಕಾರವನ್ನು ವಿಶ್ಲೇಷಿಸುವುದಾದರೆ ಕಳೆದ ಚುನಾವಣೆಯಲ್ಲಿ ಓಟಿಗೆರಡು ಸಾವಿರದಂತೆ ಪೀಕಿ ಗೆದ್ದು ಬಂದಿರುವ ಯಮ್ಮೆಲ್ಲೆಗಳು ಗೊಡ್ಡೆಮ್ಮೆಗಳಂತೆ ಬದುಕಲು ಸಾಧ್ಯವಿಲ್ಲ. ಮಾಡಿದ ಖರ್ಚನ್ನು ಮರಳಿ ಪಡೆದು ಎಷ್ಟು ಕೋಟಿಯನ್ನಾದರೂ ಕೊಡಲು ಮೋದಿ ಟೀಮು ಮರ್ಯಾದೆಗೆಟ್ಟು ಕೂತಿವೆ. ಆಕಡೆ ನೋಡದೆ ಇರಲು ನಮ್ಮವರಿಂದ ಸಾಧ್ಯವಿಲ್ಲ ಎಂದು ರೆಸಾರ್ಟ್ ಕಡೆ ಕುರಿಮಂದೆ ಹೊರಡಿಸಿದರಲ್ಲಾ, ಥೂತ್ತೇರಿ!!!

*******

ಧಾರವಾಡದ ಸಾಹಿತ್ಯ ಸಂಭ್ರಮವಂತೂ ಹೇಳತೀರದಾಗಿದೆಯಂತಲ್ಲಾ. ಈ ಹಿಂದೆ ಗಿರಡ್ಡಿ ಗೋವಿಂದರಾಜರು ಬಲಪಂಥೀಯರಿಗೂ ಆಹ್ವಾನ ಕೊಡಲಾಗಿ ಅವರು ಈ ಸಮ್ಮೇಳನ ನಮ್ಮದೇ ಎಂಬಂತೆ ನಡೆದುಕೊಳ್ಳುತ್ತಿದ್ದಾರಂತಲ್ಲಾ. ಆ ನಂತರ ಎಡಪಂಥೀಯರೂ ಈ ಸಂಭ್ರಮದೊಳಗೆ ಕಾಣಿಸಿಕೊಂಡು ಗುಟುರು ಹಾಕಲಾಗಿ ಹಲವು ಜನರು ಎಡಬಲ ಎಂದು ಚರ್ಚಿಸುತ್ತಿರುವಾಗಲೇ ಈ ಇಬ್ಬರು ಜೊತೆಗೂ ಸ್ನೇಹದಿಂದಿದ್ದ ಕೆಲವರು ನಾವಂತೂ ಎಡವೂ ಅಲ್ಲ, ಬಲವೂ ಅಲ್ಲ ನಮ್ಮದೇನಿದ್ದರೂ ನಡು ಎಂದಾಗ ಕಂಬಾರ `ನಾನೂ ಕೂಡ ನಡು ಮಧ್ಯದವನು. ನಡು ಎಂದರೆ ನನಗೆ ತುಂಬಾ ಇಷ್ಟ. ಆದರೂ, ಬಲದ ಕಡೆಗಿನ ಒಲವು ತುಸು ಜಾಸ್ತಿ ಇದ್ದುದರಿಂದ ಪೇಜಾವರನ ಕಾಲಿಗೆ ಡೈ ಹೊಡೆದೆ ಇದನ್ನು ಸರಿದೂಗಿಸಲೋಸ್ಕರ ಈಚೆಗೆ ಕೋಡೀಮಠದ ಕಾಲಿಗೆ ಬಿದ್ದೆ’ ಎಂದಿಲ್ಲವಂತಲ್ಲಾ, ಥೂತ್ತೇರಿ!!!!

******

ಯಾವತ್ತಿಗೂ ಹಿಂದೂ ಧರ್ಮದ ಮೇಧಾವಿಗಳ ಕಣ್ಣು ತೆರೆಸಿದ್ದು ಈ ಶ್ರೇಣೀಕೃತ ಸಮಾಜದ ಕಟ್ಟಕಡೆಯವರಂತಲ್ಲಾ. ಹಾಗೆಯೇ ಧಾರವಾಡದಲ್ಲಿ ನಡೆದ ಸಾಹಿತ್ಯ ಸಂಭ್ರಮದಲ್ಲಿ ಭಾಗವಹಿಸಿದ್ದ ಜನ ಬೆಚ್ಚಿ ಬೀಳುವಂತೆ ಉಚಲ್ಯಾ ಕ್ಯಾತಿಯ ಲಕ್ಷಣ ಗಾಯಕವಾಡ ಮಾತನಾಡಿದರಂತಲ್ಲಾ. ಅದೇನಪ್ಪ ಎಂದರೆ, ಭೂದೇವಿ ಉಳಿಸಲು ವಿಷ್ಣು ವರಹ ಅವತಾರವೆತ್ತಿದ್ದ. ಅಂದರೆ ವಿಷ್ಣು ಹಂದಿಯಾಗಿದ್ದ. ಆದ್ದರಿಂದ ಹಂದಿ ಪೂಜನೀಯ ಪ್ರಾಣಿ. ಗೋವಿನಂತೆ ಇದೂ ಕೂಡ ಹಿಂದೂ ಧರ್ಮದ ಗೌರವಕ್ಕೆ ಪಾತ್ರವಾಗಬೇಕು. ಆದರೆ ನೀವು ಗೋಮೂತ್ರದಂತೆಯೇ ಹಂದಿ ಮೂತ್ರವನ್ನು ಪರಿಗಣಿಸಬೇಕು. ಅಂದರೆ ಪೂಜಾಸ್ಥಳದಲ್ಲಿ ಪ್ರೋಕ್ಷಣೆಗೆ ಬಳಸಬೇಕು, ತೀರ್ಥ ರೂಪವಾಗಿ ಸೇವಿಸಬೇಕು ಎಂದಾಗ ಬಲಪಂಥೀಯಗಳು ಮಧ್ಯಾಹ್ನ ಭೋಜನ ಮಾಡುವುದೇ ಕಷ್ಟವಾಯ್ತಂತಲ್ಲಾ, ಥೂತ್ತೇರಿ….!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...