Homeಅಂಕಣಗಳುಸರಳ ಬಹುಮತ ಸಿಕ್ಕಿದ್ದರೆ ಸರಿಯಾಗಿ ಮಾಡುತ್ತಿದ್ದೆ!

ಸರಳ ಬಹುಮತ ಸಿಕ್ಕಿದ್ದರೆ ಸರಿಯಾಗಿ ಮಾಡುತ್ತಿದ್ದೆ!

- Advertisement -
- Advertisement -

ಆತ ಅವಳ ಕಿವಿಯಲ್ಲಿ ಉಸುರಿದ! ‘ನಾನು ಒಂದು ಹತ್ತು ವರ್ಷ ಚಿಕ್ಕವನಾಗಿದ್ದಿದ್ದ್ರೆ, ನಿನ್ನನ್ನು ಇನ್ನೂ ಸುಖವಾಗಿಡುತ್ತಿದೆ’ ಎಂದು. ಅದಕ್ಕವಳು ಈಗಲೂ ಏನೂ ಆಗಿಲ್ಲ, ಹತ್ತು ವರ್ಷ ಚಿಕ್ಕವನೆಂದೇ ನಿನ್ನ ಪೌರುಷ ತೋರಬಹುದೆಂದಳು.
ಇಂತಹದೊಂದು ಮಾತು ನಮ್ಮ ಗ್ರಾಮೀಣ ಭಾಗದಲ್ಲಿ ಆಗಾಗ್ಗೆ ಹೊರಬರುತ್ತದೆ. ಕಾರಣ, ತಮ್ಮತಮ್ಮ ಅಸಮರ್ಥತೆಗಳನ್ನು ಯಾವು ಯಾವುದೋ ಕಾರಣಗಳ ಮೇಲೆ ಹಾಕಿ ಬಂಡವಾಳವನ್ನ ಕೊಚ್ಚಿಕೊಳ್ಳುವ ಜನ ಈಗಲೂ ಇದ್ದಾರೆ. ಅದಕ್ಕೆ ತಕ್ಕ ಉದಾಹರಣೆ ಎಂದರೆ, ನಮ್ಮ ಮುಖ್ಯಮಂತ್ರಿಯಂತಲ್ಲಾ. ಜೆಡಿಎಸ್‍ಗೆ ಹೆಚ್ಚಿನ ಬಹುಮತವಿದ್ದರೆ ಇನ್ನೂ ಹೆಚ್ಚಿನದನ್ನು ಕಡಿದು ಕಟ್ಟೆ ಹಾಕುತ್ತಿದ್ದೆ ಎಂದು ಕುಮಾರಣ್ಣ ಜನರ ಮೇಲೆಯೇ ಆಪಾದನೆ ಹೊರಿಸುತ್ತಿದ್ದಾರೆ. ಹಾಗೆನೋಡಿದರೆ ತಮ್ಮ ಕ್ಯೆಪಾಸಿಟಿ ಮೂವತ್ತು ಸೀಟು; ಅದು ಹೇಗೋ ಬಿಜೆಪಿಯ ಜೊತೆ ಒಳ ವ್ಯವಹಾರ ನಡೆಸಿ ಮುವ್ವತ್ತೆಂಟು ಸೀಟು ಬಂದವು. ಇನ್ನು ಎಡೂರಪ್ಪನ ಸೀಟು ನೂರ ನಾಕು, ಏಕೆಂದರೆ ಸಿದ್ದು ವೀರಶೈವ ಮತ್ತು ಲಿಂಗಾಯಿತ ಜೇನುಹುಟ್ಟಿಗೆ ಕಲ್ಲು ಬೀರಿ ಕಡಿಸಿಕೊಂಡಿದ್ದಕ್ಕೆ. ಇಂತಿರುವಾಗ ಕುಮಾರಣ್ಣನಿಗ್ಹೇಗೆ ಸರಳ ಬಹುಮತ ಸಾಧ್ಯ. ಅಂತೂ ಕುಮಾರಣ್ಣ ಕೈಲಾಗದಕ್ಕೆ ಕಾಂಗೈನೇ ದೂರುತ್ತಿದ್ದಾರಂತಲ್ಲಾ… ಥೂತ್ತೇರಿ!

******

ಕುಮಾರಣ್ಣನವರು ಸರಳ ಬಹುಮತ ಬಂದಿದ್ದರೆ ಒಳ್ಳೆ ಕೆಲಸ ಮಾಡುತ್ತಿದ್ದೆ ಎಂದರೆ ಏನರ್ಥ. ಈ ಕಾಂಗೈಗಳು ನನ್ನನ್ನು ಒಳ್ಳೆ ಕೆಲಸ ಮಾಡಲು ಬಿಡುತ್ತಿಲ್ಲ ಎಂಬರ್ಥ ತಾನೆ. ನಾವು ಯಾವರೀತಿ ಇವರಿಗೆ ಅಡ್ಡಿಯಾಗಿದ್ದೇವೆ ಎಂದು ವಿವರಿಸಬೇಕೆಂದು ಕಾಂಗೈ ಬುದ್ದಿಜೀವಿಗಳು ತಮ್ಮ ಅನಿಸಿಕೆಯನ್ನು ಬಾಯಿಬಿಡದೆ ಮುಲುಕುತ್ತಿರುವಾಗಲೇ ಅತ್ತ ದೇವೇಗೌಡರು ನನ್ನ ಜೆಡಿಎಸ್ ಪಾರ್ಟಿಯಿಂದ ಮುಸ್ಲಿಮರು ಕಾಲ್ತೆಗೆಯಲು ಕಾಂಗ್ರೆಸ್ಸಿನವರೇ ಕಾರಣ, ಯಾಕೆಂದರೆ ಕಳೆದ ಚುನಾವಣೆಯಲ್ಲಿ ನಮ್ಮನ್ನ ಬಿಜೆಪಿಯ ಬಿ ಟೀಮ್ ಎಂದು ಕರೆದ ಕಾರಣವಾಗಿ ಮುಸ್ಲಿಮರು ನಮ್ಮಿಂದ ದೂರ ಹೋದರು ಎಂದು ಕಾಂಗೈನೇ ದೂರಿದರಲ್ಲಾ. ಕಾಂಗ್ರೆಸ್‍ನವರು ಹಾಗಂದಿದ್ದು ನಿಜ, ಆದರೆ ಜೆಡಿಎಸ್‍ನವರ ನಡವಳಿಕೆಯೇ ಹಾಗಿತ್ತು. ಚಾಮುಂಡೇಶ್ವರಿ ಚುನಾವಣೆಯಲ್ಲಿ ಗೌಡರ ಪಾರ್ಟಿ ಬಿ ಟೀಮಿನ ಕೆಲಸ ಮಾಡಿದ್ದಲ್ಲದೆ ಕರ್ನಾಟಕದ ಉಳಿದ ಕಡೆಯೂ ಹಾಗೇ ಮಾಡಿತು. ಜೊತೆಗೆ, ದೇವೇಗೌಡರು ಮೋದಿಯನ್ನು ಅಪ್ಪಿತಪ್ಪಿ ಟೀಕಿಸದೆ ಕಾಂಗ್ರೆಸ್‍ನ್ನೇ ಗುರಿಯಾಗಿರಿಸಿಕೊಂಡಿದ್ದಕ್ಕೆ ಸಾಕ್ಷಿ ಸಿಕ್ಕ ಕಾರಣಕ್ಕೆ ಜೆಡಿಎಸ್‍ಗೆ ಬಿ ಪಟ್ಟ ಕೊಟ್ಟರು. ಅದೇನಾದರಾಗಲಿ, ಇದೆಲ್ಲಾ ಆದಮೇಲೆ ಅಪ್ಪ ಮಗ ಕಾಂಗ್ರೆಸ್ಸನ್ನೇ ಟಾರ್ಗೆಟ್ ಮಾಡಿಕೊಂಡಿರುವುದರ ಮರ್ಮವೇನೆಂದು ಕಾಂಗೈಗಳು ಕಂಗಾಲಾಗಿವೆಯಂತಲ್ಲಾ, ಥೂತ್ತೇರಿ!!

******

ರೆಸಾರ್ಟ್ ರಾಜಕಾರಣಕ್ಕೂ ಕರ್ನಾಟಕಕ್ಕೂ ಸಂಬಂಧವೇ ಇರಲಿಲ್ಲ. ರಾಮಕೃಷ್ಣ ಹೆಗಡೆ ಕಾಲದಲ್ಲಿ ನಾದೆಂಡ್ಳ ಬಾಸ್ಕರರಾವ್ ಬಂಡಾಯದಿಂದ ಬೆಚ್ಚಿದ ಎನ್.ಟಿ.ಆರ್ ಆಂದ್ರದ ಶಾಸಕರನ್ನ ಹಿಡಿದುತಂದು ಬೆಂಗಳೂರು ನಂದಿಬೆಟ್ಟದಲ್ಲಿ ದನಗಳನ್ನು ಕೂಡಿಹಾಕಿದಂತೆ ಕೂಡಿ, ಕಡೆಗೆ ಹೊಡೆದುಕೊಂಡು ಹೋದರು. ಈ ಮೂರು ದಶಕದಲ್ಲಿ ಅಂತಹ ಘಟನೆಗಳು ಹಲವು ಜರುಗಿವೆ. ಆದರೀಗ ಜೆಡಿಎಸ್ ಸರಕಾರ ರಚಿಸಲು ಸಿದ್ದು 76 ಕುರಿಗಳನ್ನ ಅಟ್ಟಿಕೊಂಡು ರೆಸಾರ್ಟ್ ಕಡೆ ಹೋಗಿದ್ದು ಶಾನೆ ನಗೆಪಾಟಲಿಗೆ ಗುರಿಯಾಗಿದೆಯಂತಲ್ಲಾ. ಏಕೆಂದರೆ ನಿಮ್ಮಪ್ಪನಾಣೆ ಮುಖ್ಯಮಂತ್ರಿಯಾಗಲ್ಲ ಎಂದು ಕುಮಾರಣ್ಣನಿಗೆ ಹೇಳುತ್ತಿದ್ದ ಸಿದ್ದು ತನ್ನ ಜಾಯಮಾನಕ್ಕೆ ಒಗ್ಗದ ಈ ವ್ಯವಹಾರಕ್ಕೆ ತೊಡಗಿದ್ದು ಅಚ್ಚರಿ ಮೂಡಿಸಿದೆಯಲ್ಲಾ. ಸಿದ್ದು ಅನುಮಾನದ ಪ್ರಕಾರವನ್ನು ವಿಶ್ಲೇಷಿಸುವುದಾದರೆ ಕಳೆದ ಚುನಾವಣೆಯಲ್ಲಿ ಓಟಿಗೆರಡು ಸಾವಿರದಂತೆ ಪೀಕಿ ಗೆದ್ದು ಬಂದಿರುವ ಯಮ್ಮೆಲ್ಲೆಗಳು ಗೊಡ್ಡೆಮ್ಮೆಗಳಂತೆ ಬದುಕಲು ಸಾಧ್ಯವಿಲ್ಲ. ಮಾಡಿದ ಖರ್ಚನ್ನು ಮರಳಿ ಪಡೆದು ಎಷ್ಟು ಕೋಟಿಯನ್ನಾದರೂ ಕೊಡಲು ಮೋದಿ ಟೀಮು ಮರ್ಯಾದೆಗೆಟ್ಟು ಕೂತಿವೆ. ಆಕಡೆ ನೋಡದೆ ಇರಲು ನಮ್ಮವರಿಂದ ಸಾಧ್ಯವಿಲ್ಲ ಎಂದು ರೆಸಾರ್ಟ್ ಕಡೆ ಕುರಿಮಂದೆ ಹೊರಡಿಸಿದರಲ್ಲಾ, ಥೂತ್ತೇರಿ!!!

*******

ಧಾರವಾಡದ ಸಾಹಿತ್ಯ ಸಂಭ್ರಮವಂತೂ ಹೇಳತೀರದಾಗಿದೆಯಂತಲ್ಲಾ. ಈ ಹಿಂದೆ ಗಿರಡ್ಡಿ ಗೋವಿಂದರಾಜರು ಬಲಪಂಥೀಯರಿಗೂ ಆಹ್ವಾನ ಕೊಡಲಾಗಿ ಅವರು ಈ ಸಮ್ಮೇಳನ ನಮ್ಮದೇ ಎಂಬಂತೆ ನಡೆದುಕೊಳ್ಳುತ್ತಿದ್ದಾರಂತಲ್ಲಾ. ಆ ನಂತರ ಎಡಪಂಥೀಯರೂ ಈ ಸಂಭ್ರಮದೊಳಗೆ ಕಾಣಿಸಿಕೊಂಡು ಗುಟುರು ಹಾಕಲಾಗಿ ಹಲವು ಜನರು ಎಡಬಲ ಎಂದು ಚರ್ಚಿಸುತ್ತಿರುವಾಗಲೇ ಈ ಇಬ್ಬರು ಜೊತೆಗೂ ಸ್ನೇಹದಿಂದಿದ್ದ ಕೆಲವರು ನಾವಂತೂ ಎಡವೂ ಅಲ್ಲ, ಬಲವೂ ಅಲ್ಲ ನಮ್ಮದೇನಿದ್ದರೂ ನಡು ಎಂದಾಗ ಕಂಬಾರ `ನಾನೂ ಕೂಡ ನಡು ಮಧ್ಯದವನು. ನಡು ಎಂದರೆ ನನಗೆ ತುಂಬಾ ಇಷ್ಟ. ಆದರೂ, ಬಲದ ಕಡೆಗಿನ ಒಲವು ತುಸು ಜಾಸ್ತಿ ಇದ್ದುದರಿಂದ ಪೇಜಾವರನ ಕಾಲಿಗೆ ಡೈ ಹೊಡೆದೆ ಇದನ್ನು ಸರಿದೂಗಿಸಲೋಸ್ಕರ ಈಚೆಗೆ ಕೋಡೀಮಠದ ಕಾಲಿಗೆ ಬಿದ್ದೆ’ ಎಂದಿಲ್ಲವಂತಲ್ಲಾ, ಥೂತ್ತೇರಿ!!!!

******

ಯಾವತ್ತಿಗೂ ಹಿಂದೂ ಧರ್ಮದ ಮೇಧಾವಿಗಳ ಕಣ್ಣು ತೆರೆಸಿದ್ದು ಈ ಶ್ರೇಣೀಕೃತ ಸಮಾಜದ ಕಟ್ಟಕಡೆಯವರಂತಲ್ಲಾ. ಹಾಗೆಯೇ ಧಾರವಾಡದಲ್ಲಿ ನಡೆದ ಸಾಹಿತ್ಯ ಸಂಭ್ರಮದಲ್ಲಿ ಭಾಗವಹಿಸಿದ್ದ ಜನ ಬೆಚ್ಚಿ ಬೀಳುವಂತೆ ಉಚಲ್ಯಾ ಕ್ಯಾತಿಯ ಲಕ್ಷಣ ಗಾಯಕವಾಡ ಮಾತನಾಡಿದರಂತಲ್ಲಾ. ಅದೇನಪ್ಪ ಎಂದರೆ, ಭೂದೇವಿ ಉಳಿಸಲು ವಿಷ್ಣು ವರಹ ಅವತಾರವೆತ್ತಿದ್ದ. ಅಂದರೆ ವಿಷ್ಣು ಹಂದಿಯಾಗಿದ್ದ. ಆದ್ದರಿಂದ ಹಂದಿ ಪೂಜನೀಯ ಪ್ರಾಣಿ. ಗೋವಿನಂತೆ ಇದೂ ಕೂಡ ಹಿಂದೂ ಧರ್ಮದ ಗೌರವಕ್ಕೆ ಪಾತ್ರವಾಗಬೇಕು. ಆದರೆ ನೀವು ಗೋಮೂತ್ರದಂತೆಯೇ ಹಂದಿ ಮೂತ್ರವನ್ನು ಪರಿಗಣಿಸಬೇಕು. ಅಂದರೆ ಪೂಜಾಸ್ಥಳದಲ್ಲಿ ಪ್ರೋಕ್ಷಣೆಗೆ ಬಳಸಬೇಕು, ತೀರ್ಥ ರೂಪವಾಗಿ ಸೇವಿಸಬೇಕು ಎಂದಾಗ ಬಲಪಂಥೀಯಗಳು ಮಧ್ಯಾಹ್ನ ಭೋಜನ ಮಾಡುವುದೇ ಕಷ್ಟವಾಯ್ತಂತಲ್ಲಾ, ಥೂತ್ತೇರಿ….!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...