Homeಅಂಕಣಗಳುಸರಳ ಬಹುಮತ ಸಿಕ್ಕಿದ್ದರೆ ಸರಿಯಾಗಿ ಮಾಡುತ್ತಿದ್ದೆ!

ಸರಳ ಬಹುಮತ ಸಿಕ್ಕಿದ್ದರೆ ಸರಿಯಾಗಿ ಮಾಡುತ್ತಿದ್ದೆ!

- Advertisement -
- Advertisement -

ಆತ ಅವಳ ಕಿವಿಯಲ್ಲಿ ಉಸುರಿದ! ‘ನಾನು ಒಂದು ಹತ್ತು ವರ್ಷ ಚಿಕ್ಕವನಾಗಿದ್ದಿದ್ದ್ರೆ, ನಿನ್ನನ್ನು ಇನ್ನೂ ಸುಖವಾಗಿಡುತ್ತಿದೆ’ ಎಂದು. ಅದಕ್ಕವಳು ಈಗಲೂ ಏನೂ ಆಗಿಲ್ಲ, ಹತ್ತು ವರ್ಷ ಚಿಕ್ಕವನೆಂದೇ ನಿನ್ನ ಪೌರುಷ ತೋರಬಹುದೆಂದಳು.
ಇಂತಹದೊಂದು ಮಾತು ನಮ್ಮ ಗ್ರಾಮೀಣ ಭಾಗದಲ್ಲಿ ಆಗಾಗ್ಗೆ ಹೊರಬರುತ್ತದೆ. ಕಾರಣ, ತಮ್ಮತಮ್ಮ ಅಸಮರ್ಥತೆಗಳನ್ನು ಯಾವು ಯಾವುದೋ ಕಾರಣಗಳ ಮೇಲೆ ಹಾಕಿ ಬಂಡವಾಳವನ್ನ ಕೊಚ್ಚಿಕೊಳ್ಳುವ ಜನ ಈಗಲೂ ಇದ್ದಾರೆ. ಅದಕ್ಕೆ ತಕ್ಕ ಉದಾಹರಣೆ ಎಂದರೆ, ನಮ್ಮ ಮುಖ್ಯಮಂತ್ರಿಯಂತಲ್ಲಾ. ಜೆಡಿಎಸ್‍ಗೆ ಹೆಚ್ಚಿನ ಬಹುಮತವಿದ್ದರೆ ಇನ್ನೂ ಹೆಚ್ಚಿನದನ್ನು ಕಡಿದು ಕಟ್ಟೆ ಹಾಕುತ್ತಿದ್ದೆ ಎಂದು ಕುಮಾರಣ್ಣ ಜನರ ಮೇಲೆಯೇ ಆಪಾದನೆ ಹೊರಿಸುತ್ತಿದ್ದಾರೆ. ಹಾಗೆನೋಡಿದರೆ ತಮ್ಮ ಕ್ಯೆಪಾಸಿಟಿ ಮೂವತ್ತು ಸೀಟು; ಅದು ಹೇಗೋ ಬಿಜೆಪಿಯ ಜೊತೆ ಒಳ ವ್ಯವಹಾರ ನಡೆಸಿ ಮುವ್ವತ್ತೆಂಟು ಸೀಟು ಬಂದವು. ಇನ್ನು ಎಡೂರಪ್ಪನ ಸೀಟು ನೂರ ನಾಕು, ಏಕೆಂದರೆ ಸಿದ್ದು ವೀರಶೈವ ಮತ್ತು ಲಿಂಗಾಯಿತ ಜೇನುಹುಟ್ಟಿಗೆ ಕಲ್ಲು ಬೀರಿ ಕಡಿಸಿಕೊಂಡಿದ್ದಕ್ಕೆ. ಇಂತಿರುವಾಗ ಕುಮಾರಣ್ಣನಿಗ್ಹೇಗೆ ಸರಳ ಬಹುಮತ ಸಾಧ್ಯ. ಅಂತೂ ಕುಮಾರಣ್ಣ ಕೈಲಾಗದಕ್ಕೆ ಕಾಂಗೈನೇ ದೂರುತ್ತಿದ್ದಾರಂತಲ್ಲಾ… ಥೂತ್ತೇರಿ!

******

ಕುಮಾರಣ್ಣನವರು ಸರಳ ಬಹುಮತ ಬಂದಿದ್ದರೆ ಒಳ್ಳೆ ಕೆಲಸ ಮಾಡುತ್ತಿದ್ದೆ ಎಂದರೆ ಏನರ್ಥ. ಈ ಕಾಂಗೈಗಳು ನನ್ನನ್ನು ಒಳ್ಳೆ ಕೆಲಸ ಮಾಡಲು ಬಿಡುತ್ತಿಲ್ಲ ಎಂಬರ್ಥ ತಾನೆ. ನಾವು ಯಾವರೀತಿ ಇವರಿಗೆ ಅಡ್ಡಿಯಾಗಿದ್ದೇವೆ ಎಂದು ವಿವರಿಸಬೇಕೆಂದು ಕಾಂಗೈ ಬುದ್ದಿಜೀವಿಗಳು ತಮ್ಮ ಅನಿಸಿಕೆಯನ್ನು ಬಾಯಿಬಿಡದೆ ಮುಲುಕುತ್ತಿರುವಾಗಲೇ ಅತ್ತ ದೇವೇಗೌಡರು ನನ್ನ ಜೆಡಿಎಸ್ ಪಾರ್ಟಿಯಿಂದ ಮುಸ್ಲಿಮರು ಕಾಲ್ತೆಗೆಯಲು ಕಾಂಗ್ರೆಸ್ಸಿನವರೇ ಕಾರಣ, ಯಾಕೆಂದರೆ ಕಳೆದ ಚುನಾವಣೆಯಲ್ಲಿ ನಮ್ಮನ್ನ ಬಿಜೆಪಿಯ ಬಿ ಟೀಮ್ ಎಂದು ಕರೆದ ಕಾರಣವಾಗಿ ಮುಸ್ಲಿಮರು ನಮ್ಮಿಂದ ದೂರ ಹೋದರು ಎಂದು ಕಾಂಗೈನೇ ದೂರಿದರಲ್ಲಾ. ಕಾಂಗ್ರೆಸ್‍ನವರು ಹಾಗಂದಿದ್ದು ನಿಜ, ಆದರೆ ಜೆಡಿಎಸ್‍ನವರ ನಡವಳಿಕೆಯೇ ಹಾಗಿತ್ತು. ಚಾಮುಂಡೇಶ್ವರಿ ಚುನಾವಣೆಯಲ್ಲಿ ಗೌಡರ ಪಾರ್ಟಿ ಬಿ ಟೀಮಿನ ಕೆಲಸ ಮಾಡಿದ್ದಲ್ಲದೆ ಕರ್ನಾಟಕದ ಉಳಿದ ಕಡೆಯೂ ಹಾಗೇ ಮಾಡಿತು. ಜೊತೆಗೆ, ದೇವೇಗೌಡರು ಮೋದಿಯನ್ನು ಅಪ್ಪಿತಪ್ಪಿ ಟೀಕಿಸದೆ ಕಾಂಗ್ರೆಸ್‍ನ್ನೇ ಗುರಿಯಾಗಿರಿಸಿಕೊಂಡಿದ್ದಕ್ಕೆ ಸಾಕ್ಷಿ ಸಿಕ್ಕ ಕಾರಣಕ್ಕೆ ಜೆಡಿಎಸ್‍ಗೆ ಬಿ ಪಟ್ಟ ಕೊಟ್ಟರು. ಅದೇನಾದರಾಗಲಿ, ಇದೆಲ್ಲಾ ಆದಮೇಲೆ ಅಪ್ಪ ಮಗ ಕಾಂಗ್ರೆಸ್ಸನ್ನೇ ಟಾರ್ಗೆಟ್ ಮಾಡಿಕೊಂಡಿರುವುದರ ಮರ್ಮವೇನೆಂದು ಕಾಂಗೈಗಳು ಕಂಗಾಲಾಗಿವೆಯಂತಲ್ಲಾ, ಥೂತ್ತೇರಿ!!

******

ರೆಸಾರ್ಟ್ ರಾಜಕಾರಣಕ್ಕೂ ಕರ್ನಾಟಕಕ್ಕೂ ಸಂಬಂಧವೇ ಇರಲಿಲ್ಲ. ರಾಮಕೃಷ್ಣ ಹೆಗಡೆ ಕಾಲದಲ್ಲಿ ನಾದೆಂಡ್ಳ ಬಾಸ್ಕರರಾವ್ ಬಂಡಾಯದಿಂದ ಬೆಚ್ಚಿದ ಎನ್.ಟಿ.ಆರ್ ಆಂದ್ರದ ಶಾಸಕರನ್ನ ಹಿಡಿದುತಂದು ಬೆಂಗಳೂರು ನಂದಿಬೆಟ್ಟದಲ್ಲಿ ದನಗಳನ್ನು ಕೂಡಿಹಾಕಿದಂತೆ ಕೂಡಿ, ಕಡೆಗೆ ಹೊಡೆದುಕೊಂಡು ಹೋದರು. ಈ ಮೂರು ದಶಕದಲ್ಲಿ ಅಂತಹ ಘಟನೆಗಳು ಹಲವು ಜರುಗಿವೆ. ಆದರೀಗ ಜೆಡಿಎಸ್ ಸರಕಾರ ರಚಿಸಲು ಸಿದ್ದು 76 ಕುರಿಗಳನ್ನ ಅಟ್ಟಿಕೊಂಡು ರೆಸಾರ್ಟ್ ಕಡೆ ಹೋಗಿದ್ದು ಶಾನೆ ನಗೆಪಾಟಲಿಗೆ ಗುರಿಯಾಗಿದೆಯಂತಲ್ಲಾ. ಏಕೆಂದರೆ ನಿಮ್ಮಪ್ಪನಾಣೆ ಮುಖ್ಯಮಂತ್ರಿಯಾಗಲ್ಲ ಎಂದು ಕುಮಾರಣ್ಣನಿಗೆ ಹೇಳುತ್ತಿದ್ದ ಸಿದ್ದು ತನ್ನ ಜಾಯಮಾನಕ್ಕೆ ಒಗ್ಗದ ಈ ವ್ಯವಹಾರಕ್ಕೆ ತೊಡಗಿದ್ದು ಅಚ್ಚರಿ ಮೂಡಿಸಿದೆಯಲ್ಲಾ. ಸಿದ್ದು ಅನುಮಾನದ ಪ್ರಕಾರವನ್ನು ವಿಶ್ಲೇಷಿಸುವುದಾದರೆ ಕಳೆದ ಚುನಾವಣೆಯಲ್ಲಿ ಓಟಿಗೆರಡು ಸಾವಿರದಂತೆ ಪೀಕಿ ಗೆದ್ದು ಬಂದಿರುವ ಯಮ್ಮೆಲ್ಲೆಗಳು ಗೊಡ್ಡೆಮ್ಮೆಗಳಂತೆ ಬದುಕಲು ಸಾಧ್ಯವಿಲ್ಲ. ಮಾಡಿದ ಖರ್ಚನ್ನು ಮರಳಿ ಪಡೆದು ಎಷ್ಟು ಕೋಟಿಯನ್ನಾದರೂ ಕೊಡಲು ಮೋದಿ ಟೀಮು ಮರ್ಯಾದೆಗೆಟ್ಟು ಕೂತಿವೆ. ಆಕಡೆ ನೋಡದೆ ಇರಲು ನಮ್ಮವರಿಂದ ಸಾಧ್ಯವಿಲ್ಲ ಎಂದು ರೆಸಾರ್ಟ್ ಕಡೆ ಕುರಿಮಂದೆ ಹೊರಡಿಸಿದರಲ್ಲಾ, ಥೂತ್ತೇರಿ!!!

*******

ಧಾರವಾಡದ ಸಾಹಿತ್ಯ ಸಂಭ್ರಮವಂತೂ ಹೇಳತೀರದಾಗಿದೆಯಂತಲ್ಲಾ. ಈ ಹಿಂದೆ ಗಿರಡ್ಡಿ ಗೋವಿಂದರಾಜರು ಬಲಪಂಥೀಯರಿಗೂ ಆಹ್ವಾನ ಕೊಡಲಾಗಿ ಅವರು ಈ ಸಮ್ಮೇಳನ ನಮ್ಮದೇ ಎಂಬಂತೆ ನಡೆದುಕೊಳ್ಳುತ್ತಿದ್ದಾರಂತಲ್ಲಾ. ಆ ನಂತರ ಎಡಪಂಥೀಯರೂ ಈ ಸಂಭ್ರಮದೊಳಗೆ ಕಾಣಿಸಿಕೊಂಡು ಗುಟುರು ಹಾಕಲಾಗಿ ಹಲವು ಜನರು ಎಡಬಲ ಎಂದು ಚರ್ಚಿಸುತ್ತಿರುವಾಗಲೇ ಈ ಇಬ್ಬರು ಜೊತೆಗೂ ಸ್ನೇಹದಿಂದಿದ್ದ ಕೆಲವರು ನಾವಂತೂ ಎಡವೂ ಅಲ್ಲ, ಬಲವೂ ಅಲ್ಲ ನಮ್ಮದೇನಿದ್ದರೂ ನಡು ಎಂದಾಗ ಕಂಬಾರ `ನಾನೂ ಕೂಡ ನಡು ಮಧ್ಯದವನು. ನಡು ಎಂದರೆ ನನಗೆ ತುಂಬಾ ಇಷ್ಟ. ಆದರೂ, ಬಲದ ಕಡೆಗಿನ ಒಲವು ತುಸು ಜಾಸ್ತಿ ಇದ್ದುದರಿಂದ ಪೇಜಾವರನ ಕಾಲಿಗೆ ಡೈ ಹೊಡೆದೆ ಇದನ್ನು ಸರಿದೂಗಿಸಲೋಸ್ಕರ ಈಚೆಗೆ ಕೋಡೀಮಠದ ಕಾಲಿಗೆ ಬಿದ್ದೆ’ ಎಂದಿಲ್ಲವಂತಲ್ಲಾ, ಥೂತ್ತೇರಿ!!!!

******

ಯಾವತ್ತಿಗೂ ಹಿಂದೂ ಧರ್ಮದ ಮೇಧಾವಿಗಳ ಕಣ್ಣು ತೆರೆಸಿದ್ದು ಈ ಶ್ರೇಣೀಕೃತ ಸಮಾಜದ ಕಟ್ಟಕಡೆಯವರಂತಲ್ಲಾ. ಹಾಗೆಯೇ ಧಾರವಾಡದಲ್ಲಿ ನಡೆದ ಸಾಹಿತ್ಯ ಸಂಭ್ರಮದಲ್ಲಿ ಭಾಗವಹಿಸಿದ್ದ ಜನ ಬೆಚ್ಚಿ ಬೀಳುವಂತೆ ಉಚಲ್ಯಾ ಕ್ಯಾತಿಯ ಲಕ್ಷಣ ಗಾಯಕವಾಡ ಮಾತನಾಡಿದರಂತಲ್ಲಾ. ಅದೇನಪ್ಪ ಎಂದರೆ, ಭೂದೇವಿ ಉಳಿಸಲು ವಿಷ್ಣು ವರಹ ಅವತಾರವೆತ್ತಿದ್ದ. ಅಂದರೆ ವಿಷ್ಣು ಹಂದಿಯಾಗಿದ್ದ. ಆದ್ದರಿಂದ ಹಂದಿ ಪೂಜನೀಯ ಪ್ರಾಣಿ. ಗೋವಿನಂತೆ ಇದೂ ಕೂಡ ಹಿಂದೂ ಧರ್ಮದ ಗೌರವಕ್ಕೆ ಪಾತ್ರವಾಗಬೇಕು. ಆದರೆ ನೀವು ಗೋಮೂತ್ರದಂತೆಯೇ ಹಂದಿ ಮೂತ್ರವನ್ನು ಪರಿಗಣಿಸಬೇಕು. ಅಂದರೆ ಪೂಜಾಸ್ಥಳದಲ್ಲಿ ಪ್ರೋಕ್ಷಣೆಗೆ ಬಳಸಬೇಕು, ತೀರ್ಥ ರೂಪವಾಗಿ ಸೇವಿಸಬೇಕು ಎಂದಾಗ ಬಲಪಂಥೀಯಗಳು ಮಧ್ಯಾಹ್ನ ಭೋಜನ ಮಾಡುವುದೇ ಕಷ್ಟವಾಯ್ತಂತಲ್ಲಾ, ಥೂತ್ತೇರಿ….!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...