Homeಅಂಕಣಗಳುಸರಳ ಬಹುಮತ ಸಿಕ್ಕಿದ್ದರೆ ಸರಿಯಾಗಿ ಮಾಡುತ್ತಿದ್ದೆ!

ಸರಳ ಬಹುಮತ ಸಿಕ್ಕಿದ್ದರೆ ಸರಿಯಾಗಿ ಮಾಡುತ್ತಿದ್ದೆ!

- Advertisement -
- Advertisement -

ಆತ ಅವಳ ಕಿವಿಯಲ್ಲಿ ಉಸುರಿದ! ‘ನಾನು ಒಂದು ಹತ್ತು ವರ್ಷ ಚಿಕ್ಕವನಾಗಿದ್ದಿದ್ದ್ರೆ, ನಿನ್ನನ್ನು ಇನ್ನೂ ಸುಖವಾಗಿಡುತ್ತಿದೆ’ ಎಂದು. ಅದಕ್ಕವಳು ಈಗಲೂ ಏನೂ ಆಗಿಲ್ಲ, ಹತ್ತು ವರ್ಷ ಚಿಕ್ಕವನೆಂದೇ ನಿನ್ನ ಪೌರುಷ ತೋರಬಹುದೆಂದಳು.
ಇಂತಹದೊಂದು ಮಾತು ನಮ್ಮ ಗ್ರಾಮೀಣ ಭಾಗದಲ್ಲಿ ಆಗಾಗ್ಗೆ ಹೊರಬರುತ್ತದೆ. ಕಾರಣ, ತಮ್ಮತಮ್ಮ ಅಸಮರ್ಥತೆಗಳನ್ನು ಯಾವು ಯಾವುದೋ ಕಾರಣಗಳ ಮೇಲೆ ಹಾಕಿ ಬಂಡವಾಳವನ್ನ ಕೊಚ್ಚಿಕೊಳ್ಳುವ ಜನ ಈಗಲೂ ಇದ್ದಾರೆ. ಅದಕ್ಕೆ ತಕ್ಕ ಉದಾಹರಣೆ ಎಂದರೆ, ನಮ್ಮ ಮುಖ್ಯಮಂತ್ರಿಯಂತಲ್ಲಾ. ಜೆಡಿಎಸ್‍ಗೆ ಹೆಚ್ಚಿನ ಬಹುಮತವಿದ್ದರೆ ಇನ್ನೂ ಹೆಚ್ಚಿನದನ್ನು ಕಡಿದು ಕಟ್ಟೆ ಹಾಕುತ್ತಿದ್ದೆ ಎಂದು ಕುಮಾರಣ್ಣ ಜನರ ಮೇಲೆಯೇ ಆಪಾದನೆ ಹೊರಿಸುತ್ತಿದ್ದಾರೆ. ಹಾಗೆನೋಡಿದರೆ ತಮ್ಮ ಕ್ಯೆಪಾಸಿಟಿ ಮೂವತ್ತು ಸೀಟು; ಅದು ಹೇಗೋ ಬಿಜೆಪಿಯ ಜೊತೆ ಒಳ ವ್ಯವಹಾರ ನಡೆಸಿ ಮುವ್ವತ್ತೆಂಟು ಸೀಟು ಬಂದವು. ಇನ್ನು ಎಡೂರಪ್ಪನ ಸೀಟು ನೂರ ನಾಕು, ಏಕೆಂದರೆ ಸಿದ್ದು ವೀರಶೈವ ಮತ್ತು ಲಿಂಗಾಯಿತ ಜೇನುಹುಟ್ಟಿಗೆ ಕಲ್ಲು ಬೀರಿ ಕಡಿಸಿಕೊಂಡಿದ್ದಕ್ಕೆ. ಇಂತಿರುವಾಗ ಕುಮಾರಣ್ಣನಿಗ್ಹೇಗೆ ಸರಳ ಬಹುಮತ ಸಾಧ್ಯ. ಅಂತೂ ಕುಮಾರಣ್ಣ ಕೈಲಾಗದಕ್ಕೆ ಕಾಂಗೈನೇ ದೂರುತ್ತಿದ್ದಾರಂತಲ್ಲಾ… ಥೂತ್ತೇರಿ!

******

ಕುಮಾರಣ್ಣನವರು ಸರಳ ಬಹುಮತ ಬಂದಿದ್ದರೆ ಒಳ್ಳೆ ಕೆಲಸ ಮಾಡುತ್ತಿದ್ದೆ ಎಂದರೆ ಏನರ್ಥ. ಈ ಕಾಂಗೈಗಳು ನನ್ನನ್ನು ಒಳ್ಳೆ ಕೆಲಸ ಮಾಡಲು ಬಿಡುತ್ತಿಲ್ಲ ಎಂಬರ್ಥ ತಾನೆ. ನಾವು ಯಾವರೀತಿ ಇವರಿಗೆ ಅಡ್ಡಿಯಾಗಿದ್ದೇವೆ ಎಂದು ವಿವರಿಸಬೇಕೆಂದು ಕಾಂಗೈ ಬುದ್ದಿಜೀವಿಗಳು ತಮ್ಮ ಅನಿಸಿಕೆಯನ್ನು ಬಾಯಿಬಿಡದೆ ಮುಲುಕುತ್ತಿರುವಾಗಲೇ ಅತ್ತ ದೇವೇಗೌಡರು ನನ್ನ ಜೆಡಿಎಸ್ ಪಾರ್ಟಿಯಿಂದ ಮುಸ್ಲಿಮರು ಕಾಲ್ತೆಗೆಯಲು ಕಾಂಗ್ರೆಸ್ಸಿನವರೇ ಕಾರಣ, ಯಾಕೆಂದರೆ ಕಳೆದ ಚುನಾವಣೆಯಲ್ಲಿ ನಮ್ಮನ್ನ ಬಿಜೆಪಿಯ ಬಿ ಟೀಮ್ ಎಂದು ಕರೆದ ಕಾರಣವಾಗಿ ಮುಸ್ಲಿಮರು ನಮ್ಮಿಂದ ದೂರ ಹೋದರು ಎಂದು ಕಾಂಗೈನೇ ದೂರಿದರಲ್ಲಾ. ಕಾಂಗ್ರೆಸ್‍ನವರು ಹಾಗಂದಿದ್ದು ನಿಜ, ಆದರೆ ಜೆಡಿಎಸ್‍ನವರ ನಡವಳಿಕೆಯೇ ಹಾಗಿತ್ತು. ಚಾಮುಂಡೇಶ್ವರಿ ಚುನಾವಣೆಯಲ್ಲಿ ಗೌಡರ ಪಾರ್ಟಿ ಬಿ ಟೀಮಿನ ಕೆಲಸ ಮಾಡಿದ್ದಲ್ಲದೆ ಕರ್ನಾಟಕದ ಉಳಿದ ಕಡೆಯೂ ಹಾಗೇ ಮಾಡಿತು. ಜೊತೆಗೆ, ದೇವೇಗೌಡರು ಮೋದಿಯನ್ನು ಅಪ್ಪಿತಪ್ಪಿ ಟೀಕಿಸದೆ ಕಾಂಗ್ರೆಸ್‍ನ್ನೇ ಗುರಿಯಾಗಿರಿಸಿಕೊಂಡಿದ್ದಕ್ಕೆ ಸಾಕ್ಷಿ ಸಿಕ್ಕ ಕಾರಣಕ್ಕೆ ಜೆಡಿಎಸ್‍ಗೆ ಬಿ ಪಟ್ಟ ಕೊಟ್ಟರು. ಅದೇನಾದರಾಗಲಿ, ಇದೆಲ್ಲಾ ಆದಮೇಲೆ ಅಪ್ಪ ಮಗ ಕಾಂಗ್ರೆಸ್ಸನ್ನೇ ಟಾರ್ಗೆಟ್ ಮಾಡಿಕೊಂಡಿರುವುದರ ಮರ್ಮವೇನೆಂದು ಕಾಂಗೈಗಳು ಕಂಗಾಲಾಗಿವೆಯಂತಲ್ಲಾ, ಥೂತ್ತೇರಿ!!

******

ರೆಸಾರ್ಟ್ ರಾಜಕಾರಣಕ್ಕೂ ಕರ್ನಾಟಕಕ್ಕೂ ಸಂಬಂಧವೇ ಇರಲಿಲ್ಲ. ರಾಮಕೃಷ್ಣ ಹೆಗಡೆ ಕಾಲದಲ್ಲಿ ನಾದೆಂಡ್ಳ ಬಾಸ್ಕರರಾವ್ ಬಂಡಾಯದಿಂದ ಬೆಚ್ಚಿದ ಎನ್.ಟಿ.ಆರ್ ಆಂದ್ರದ ಶಾಸಕರನ್ನ ಹಿಡಿದುತಂದು ಬೆಂಗಳೂರು ನಂದಿಬೆಟ್ಟದಲ್ಲಿ ದನಗಳನ್ನು ಕೂಡಿಹಾಕಿದಂತೆ ಕೂಡಿ, ಕಡೆಗೆ ಹೊಡೆದುಕೊಂಡು ಹೋದರು. ಈ ಮೂರು ದಶಕದಲ್ಲಿ ಅಂತಹ ಘಟನೆಗಳು ಹಲವು ಜರುಗಿವೆ. ಆದರೀಗ ಜೆಡಿಎಸ್ ಸರಕಾರ ರಚಿಸಲು ಸಿದ್ದು 76 ಕುರಿಗಳನ್ನ ಅಟ್ಟಿಕೊಂಡು ರೆಸಾರ್ಟ್ ಕಡೆ ಹೋಗಿದ್ದು ಶಾನೆ ನಗೆಪಾಟಲಿಗೆ ಗುರಿಯಾಗಿದೆಯಂತಲ್ಲಾ. ಏಕೆಂದರೆ ನಿಮ್ಮಪ್ಪನಾಣೆ ಮುಖ್ಯಮಂತ್ರಿಯಾಗಲ್ಲ ಎಂದು ಕುಮಾರಣ್ಣನಿಗೆ ಹೇಳುತ್ತಿದ್ದ ಸಿದ್ದು ತನ್ನ ಜಾಯಮಾನಕ್ಕೆ ಒಗ್ಗದ ಈ ವ್ಯವಹಾರಕ್ಕೆ ತೊಡಗಿದ್ದು ಅಚ್ಚರಿ ಮೂಡಿಸಿದೆಯಲ್ಲಾ. ಸಿದ್ದು ಅನುಮಾನದ ಪ್ರಕಾರವನ್ನು ವಿಶ್ಲೇಷಿಸುವುದಾದರೆ ಕಳೆದ ಚುನಾವಣೆಯಲ್ಲಿ ಓಟಿಗೆರಡು ಸಾವಿರದಂತೆ ಪೀಕಿ ಗೆದ್ದು ಬಂದಿರುವ ಯಮ್ಮೆಲ್ಲೆಗಳು ಗೊಡ್ಡೆಮ್ಮೆಗಳಂತೆ ಬದುಕಲು ಸಾಧ್ಯವಿಲ್ಲ. ಮಾಡಿದ ಖರ್ಚನ್ನು ಮರಳಿ ಪಡೆದು ಎಷ್ಟು ಕೋಟಿಯನ್ನಾದರೂ ಕೊಡಲು ಮೋದಿ ಟೀಮು ಮರ್ಯಾದೆಗೆಟ್ಟು ಕೂತಿವೆ. ಆಕಡೆ ನೋಡದೆ ಇರಲು ನಮ್ಮವರಿಂದ ಸಾಧ್ಯವಿಲ್ಲ ಎಂದು ರೆಸಾರ್ಟ್ ಕಡೆ ಕುರಿಮಂದೆ ಹೊರಡಿಸಿದರಲ್ಲಾ, ಥೂತ್ತೇರಿ!!!

*******

ಧಾರವಾಡದ ಸಾಹಿತ್ಯ ಸಂಭ್ರಮವಂತೂ ಹೇಳತೀರದಾಗಿದೆಯಂತಲ್ಲಾ. ಈ ಹಿಂದೆ ಗಿರಡ್ಡಿ ಗೋವಿಂದರಾಜರು ಬಲಪಂಥೀಯರಿಗೂ ಆಹ್ವಾನ ಕೊಡಲಾಗಿ ಅವರು ಈ ಸಮ್ಮೇಳನ ನಮ್ಮದೇ ಎಂಬಂತೆ ನಡೆದುಕೊಳ್ಳುತ್ತಿದ್ದಾರಂತಲ್ಲಾ. ಆ ನಂತರ ಎಡಪಂಥೀಯರೂ ಈ ಸಂಭ್ರಮದೊಳಗೆ ಕಾಣಿಸಿಕೊಂಡು ಗುಟುರು ಹಾಕಲಾಗಿ ಹಲವು ಜನರು ಎಡಬಲ ಎಂದು ಚರ್ಚಿಸುತ್ತಿರುವಾಗಲೇ ಈ ಇಬ್ಬರು ಜೊತೆಗೂ ಸ್ನೇಹದಿಂದಿದ್ದ ಕೆಲವರು ನಾವಂತೂ ಎಡವೂ ಅಲ್ಲ, ಬಲವೂ ಅಲ್ಲ ನಮ್ಮದೇನಿದ್ದರೂ ನಡು ಎಂದಾಗ ಕಂಬಾರ `ನಾನೂ ಕೂಡ ನಡು ಮಧ್ಯದವನು. ನಡು ಎಂದರೆ ನನಗೆ ತುಂಬಾ ಇಷ್ಟ. ಆದರೂ, ಬಲದ ಕಡೆಗಿನ ಒಲವು ತುಸು ಜಾಸ್ತಿ ಇದ್ದುದರಿಂದ ಪೇಜಾವರನ ಕಾಲಿಗೆ ಡೈ ಹೊಡೆದೆ ಇದನ್ನು ಸರಿದೂಗಿಸಲೋಸ್ಕರ ಈಚೆಗೆ ಕೋಡೀಮಠದ ಕಾಲಿಗೆ ಬಿದ್ದೆ’ ಎಂದಿಲ್ಲವಂತಲ್ಲಾ, ಥೂತ್ತೇರಿ!!!!

******

ಯಾವತ್ತಿಗೂ ಹಿಂದೂ ಧರ್ಮದ ಮೇಧಾವಿಗಳ ಕಣ್ಣು ತೆರೆಸಿದ್ದು ಈ ಶ್ರೇಣೀಕೃತ ಸಮಾಜದ ಕಟ್ಟಕಡೆಯವರಂತಲ್ಲಾ. ಹಾಗೆಯೇ ಧಾರವಾಡದಲ್ಲಿ ನಡೆದ ಸಾಹಿತ್ಯ ಸಂಭ್ರಮದಲ್ಲಿ ಭಾಗವಹಿಸಿದ್ದ ಜನ ಬೆಚ್ಚಿ ಬೀಳುವಂತೆ ಉಚಲ್ಯಾ ಕ್ಯಾತಿಯ ಲಕ್ಷಣ ಗಾಯಕವಾಡ ಮಾತನಾಡಿದರಂತಲ್ಲಾ. ಅದೇನಪ್ಪ ಎಂದರೆ, ಭೂದೇವಿ ಉಳಿಸಲು ವಿಷ್ಣು ವರಹ ಅವತಾರವೆತ್ತಿದ್ದ. ಅಂದರೆ ವಿಷ್ಣು ಹಂದಿಯಾಗಿದ್ದ. ಆದ್ದರಿಂದ ಹಂದಿ ಪೂಜನೀಯ ಪ್ರಾಣಿ. ಗೋವಿನಂತೆ ಇದೂ ಕೂಡ ಹಿಂದೂ ಧರ್ಮದ ಗೌರವಕ್ಕೆ ಪಾತ್ರವಾಗಬೇಕು. ಆದರೆ ನೀವು ಗೋಮೂತ್ರದಂತೆಯೇ ಹಂದಿ ಮೂತ್ರವನ್ನು ಪರಿಗಣಿಸಬೇಕು. ಅಂದರೆ ಪೂಜಾಸ್ಥಳದಲ್ಲಿ ಪ್ರೋಕ್ಷಣೆಗೆ ಬಳಸಬೇಕು, ತೀರ್ಥ ರೂಪವಾಗಿ ಸೇವಿಸಬೇಕು ಎಂದಾಗ ಬಲಪಂಥೀಯಗಳು ಮಧ್ಯಾಹ್ನ ಭೋಜನ ಮಾಡುವುದೇ ಕಷ್ಟವಾಯ್ತಂತಲ್ಲಾ, ಥೂತ್ತೇರಿ….!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...