Homeಅಂಕಣಗಳುಸರಳ ಬಹುಮತ ಸಿಕ್ಕಿದ್ದರೆ ಸರಿಯಾಗಿ ಮಾಡುತ್ತಿದ್ದೆ!

ಸರಳ ಬಹುಮತ ಸಿಕ್ಕಿದ್ದರೆ ಸರಿಯಾಗಿ ಮಾಡುತ್ತಿದ್ದೆ!

- Advertisement -
- Advertisement -

ಆತ ಅವಳ ಕಿವಿಯಲ್ಲಿ ಉಸುರಿದ! ‘ನಾನು ಒಂದು ಹತ್ತು ವರ್ಷ ಚಿಕ್ಕವನಾಗಿದ್ದಿದ್ದ್ರೆ, ನಿನ್ನನ್ನು ಇನ್ನೂ ಸುಖವಾಗಿಡುತ್ತಿದೆ’ ಎಂದು. ಅದಕ್ಕವಳು ಈಗಲೂ ಏನೂ ಆಗಿಲ್ಲ, ಹತ್ತು ವರ್ಷ ಚಿಕ್ಕವನೆಂದೇ ನಿನ್ನ ಪೌರುಷ ತೋರಬಹುದೆಂದಳು.
ಇಂತಹದೊಂದು ಮಾತು ನಮ್ಮ ಗ್ರಾಮೀಣ ಭಾಗದಲ್ಲಿ ಆಗಾಗ್ಗೆ ಹೊರಬರುತ್ತದೆ. ಕಾರಣ, ತಮ್ಮತಮ್ಮ ಅಸಮರ್ಥತೆಗಳನ್ನು ಯಾವು ಯಾವುದೋ ಕಾರಣಗಳ ಮೇಲೆ ಹಾಕಿ ಬಂಡವಾಳವನ್ನ ಕೊಚ್ಚಿಕೊಳ್ಳುವ ಜನ ಈಗಲೂ ಇದ್ದಾರೆ. ಅದಕ್ಕೆ ತಕ್ಕ ಉದಾಹರಣೆ ಎಂದರೆ, ನಮ್ಮ ಮುಖ್ಯಮಂತ್ರಿಯಂತಲ್ಲಾ. ಜೆಡಿಎಸ್‍ಗೆ ಹೆಚ್ಚಿನ ಬಹುಮತವಿದ್ದರೆ ಇನ್ನೂ ಹೆಚ್ಚಿನದನ್ನು ಕಡಿದು ಕಟ್ಟೆ ಹಾಕುತ್ತಿದ್ದೆ ಎಂದು ಕುಮಾರಣ್ಣ ಜನರ ಮೇಲೆಯೇ ಆಪಾದನೆ ಹೊರಿಸುತ್ತಿದ್ದಾರೆ. ಹಾಗೆನೋಡಿದರೆ ತಮ್ಮ ಕ್ಯೆಪಾಸಿಟಿ ಮೂವತ್ತು ಸೀಟು; ಅದು ಹೇಗೋ ಬಿಜೆಪಿಯ ಜೊತೆ ಒಳ ವ್ಯವಹಾರ ನಡೆಸಿ ಮುವ್ವತ್ತೆಂಟು ಸೀಟು ಬಂದವು. ಇನ್ನು ಎಡೂರಪ್ಪನ ಸೀಟು ನೂರ ನಾಕು, ಏಕೆಂದರೆ ಸಿದ್ದು ವೀರಶೈವ ಮತ್ತು ಲಿಂಗಾಯಿತ ಜೇನುಹುಟ್ಟಿಗೆ ಕಲ್ಲು ಬೀರಿ ಕಡಿಸಿಕೊಂಡಿದ್ದಕ್ಕೆ. ಇಂತಿರುವಾಗ ಕುಮಾರಣ್ಣನಿಗ್ಹೇಗೆ ಸರಳ ಬಹುಮತ ಸಾಧ್ಯ. ಅಂತೂ ಕುಮಾರಣ್ಣ ಕೈಲಾಗದಕ್ಕೆ ಕಾಂಗೈನೇ ದೂರುತ್ತಿದ್ದಾರಂತಲ್ಲಾ… ಥೂತ್ತೇರಿ!

******

ಕುಮಾರಣ್ಣನವರು ಸರಳ ಬಹುಮತ ಬಂದಿದ್ದರೆ ಒಳ್ಳೆ ಕೆಲಸ ಮಾಡುತ್ತಿದ್ದೆ ಎಂದರೆ ಏನರ್ಥ. ಈ ಕಾಂಗೈಗಳು ನನ್ನನ್ನು ಒಳ್ಳೆ ಕೆಲಸ ಮಾಡಲು ಬಿಡುತ್ತಿಲ್ಲ ಎಂಬರ್ಥ ತಾನೆ. ನಾವು ಯಾವರೀತಿ ಇವರಿಗೆ ಅಡ್ಡಿಯಾಗಿದ್ದೇವೆ ಎಂದು ವಿವರಿಸಬೇಕೆಂದು ಕಾಂಗೈ ಬುದ್ದಿಜೀವಿಗಳು ತಮ್ಮ ಅನಿಸಿಕೆಯನ್ನು ಬಾಯಿಬಿಡದೆ ಮುಲುಕುತ್ತಿರುವಾಗಲೇ ಅತ್ತ ದೇವೇಗೌಡರು ನನ್ನ ಜೆಡಿಎಸ್ ಪಾರ್ಟಿಯಿಂದ ಮುಸ್ಲಿಮರು ಕಾಲ್ತೆಗೆಯಲು ಕಾಂಗ್ರೆಸ್ಸಿನವರೇ ಕಾರಣ, ಯಾಕೆಂದರೆ ಕಳೆದ ಚುನಾವಣೆಯಲ್ಲಿ ನಮ್ಮನ್ನ ಬಿಜೆಪಿಯ ಬಿ ಟೀಮ್ ಎಂದು ಕರೆದ ಕಾರಣವಾಗಿ ಮುಸ್ಲಿಮರು ನಮ್ಮಿಂದ ದೂರ ಹೋದರು ಎಂದು ಕಾಂಗೈನೇ ದೂರಿದರಲ್ಲಾ. ಕಾಂಗ್ರೆಸ್‍ನವರು ಹಾಗಂದಿದ್ದು ನಿಜ, ಆದರೆ ಜೆಡಿಎಸ್‍ನವರ ನಡವಳಿಕೆಯೇ ಹಾಗಿತ್ತು. ಚಾಮುಂಡೇಶ್ವರಿ ಚುನಾವಣೆಯಲ್ಲಿ ಗೌಡರ ಪಾರ್ಟಿ ಬಿ ಟೀಮಿನ ಕೆಲಸ ಮಾಡಿದ್ದಲ್ಲದೆ ಕರ್ನಾಟಕದ ಉಳಿದ ಕಡೆಯೂ ಹಾಗೇ ಮಾಡಿತು. ಜೊತೆಗೆ, ದೇವೇಗೌಡರು ಮೋದಿಯನ್ನು ಅಪ್ಪಿತಪ್ಪಿ ಟೀಕಿಸದೆ ಕಾಂಗ್ರೆಸ್‍ನ್ನೇ ಗುರಿಯಾಗಿರಿಸಿಕೊಂಡಿದ್ದಕ್ಕೆ ಸಾಕ್ಷಿ ಸಿಕ್ಕ ಕಾರಣಕ್ಕೆ ಜೆಡಿಎಸ್‍ಗೆ ಬಿ ಪಟ್ಟ ಕೊಟ್ಟರು. ಅದೇನಾದರಾಗಲಿ, ಇದೆಲ್ಲಾ ಆದಮೇಲೆ ಅಪ್ಪ ಮಗ ಕಾಂಗ್ರೆಸ್ಸನ್ನೇ ಟಾರ್ಗೆಟ್ ಮಾಡಿಕೊಂಡಿರುವುದರ ಮರ್ಮವೇನೆಂದು ಕಾಂಗೈಗಳು ಕಂಗಾಲಾಗಿವೆಯಂತಲ್ಲಾ, ಥೂತ್ತೇರಿ!!

******

ರೆಸಾರ್ಟ್ ರಾಜಕಾರಣಕ್ಕೂ ಕರ್ನಾಟಕಕ್ಕೂ ಸಂಬಂಧವೇ ಇರಲಿಲ್ಲ. ರಾಮಕೃಷ್ಣ ಹೆಗಡೆ ಕಾಲದಲ್ಲಿ ನಾದೆಂಡ್ಳ ಬಾಸ್ಕರರಾವ್ ಬಂಡಾಯದಿಂದ ಬೆಚ್ಚಿದ ಎನ್.ಟಿ.ಆರ್ ಆಂದ್ರದ ಶಾಸಕರನ್ನ ಹಿಡಿದುತಂದು ಬೆಂಗಳೂರು ನಂದಿಬೆಟ್ಟದಲ್ಲಿ ದನಗಳನ್ನು ಕೂಡಿಹಾಕಿದಂತೆ ಕೂಡಿ, ಕಡೆಗೆ ಹೊಡೆದುಕೊಂಡು ಹೋದರು. ಈ ಮೂರು ದಶಕದಲ್ಲಿ ಅಂತಹ ಘಟನೆಗಳು ಹಲವು ಜರುಗಿವೆ. ಆದರೀಗ ಜೆಡಿಎಸ್ ಸರಕಾರ ರಚಿಸಲು ಸಿದ್ದು 76 ಕುರಿಗಳನ್ನ ಅಟ್ಟಿಕೊಂಡು ರೆಸಾರ್ಟ್ ಕಡೆ ಹೋಗಿದ್ದು ಶಾನೆ ನಗೆಪಾಟಲಿಗೆ ಗುರಿಯಾಗಿದೆಯಂತಲ್ಲಾ. ಏಕೆಂದರೆ ನಿಮ್ಮಪ್ಪನಾಣೆ ಮುಖ್ಯಮಂತ್ರಿಯಾಗಲ್ಲ ಎಂದು ಕುಮಾರಣ್ಣನಿಗೆ ಹೇಳುತ್ತಿದ್ದ ಸಿದ್ದು ತನ್ನ ಜಾಯಮಾನಕ್ಕೆ ಒಗ್ಗದ ಈ ವ್ಯವಹಾರಕ್ಕೆ ತೊಡಗಿದ್ದು ಅಚ್ಚರಿ ಮೂಡಿಸಿದೆಯಲ್ಲಾ. ಸಿದ್ದು ಅನುಮಾನದ ಪ್ರಕಾರವನ್ನು ವಿಶ್ಲೇಷಿಸುವುದಾದರೆ ಕಳೆದ ಚುನಾವಣೆಯಲ್ಲಿ ಓಟಿಗೆರಡು ಸಾವಿರದಂತೆ ಪೀಕಿ ಗೆದ್ದು ಬಂದಿರುವ ಯಮ್ಮೆಲ್ಲೆಗಳು ಗೊಡ್ಡೆಮ್ಮೆಗಳಂತೆ ಬದುಕಲು ಸಾಧ್ಯವಿಲ್ಲ. ಮಾಡಿದ ಖರ್ಚನ್ನು ಮರಳಿ ಪಡೆದು ಎಷ್ಟು ಕೋಟಿಯನ್ನಾದರೂ ಕೊಡಲು ಮೋದಿ ಟೀಮು ಮರ್ಯಾದೆಗೆಟ್ಟು ಕೂತಿವೆ. ಆಕಡೆ ನೋಡದೆ ಇರಲು ನಮ್ಮವರಿಂದ ಸಾಧ್ಯವಿಲ್ಲ ಎಂದು ರೆಸಾರ್ಟ್ ಕಡೆ ಕುರಿಮಂದೆ ಹೊರಡಿಸಿದರಲ್ಲಾ, ಥೂತ್ತೇರಿ!!!

*******

ಧಾರವಾಡದ ಸಾಹಿತ್ಯ ಸಂಭ್ರಮವಂತೂ ಹೇಳತೀರದಾಗಿದೆಯಂತಲ್ಲಾ. ಈ ಹಿಂದೆ ಗಿರಡ್ಡಿ ಗೋವಿಂದರಾಜರು ಬಲಪಂಥೀಯರಿಗೂ ಆಹ್ವಾನ ಕೊಡಲಾಗಿ ಅವರು ಈ ಸಮ್ಮೇಳನ ನಮ್ಮದೇ ಎಂಬಂತೆ ನಡೆದುಕೊಳ್ಳುತ್ತಿದ್ದಾರಂತಲ್ಲಾ. ಆ ನಂತರ ಎಡಪಂಥೀಯರೂ ಈ ಸಂಭ್ರಮದೊಳಗೆ ಕಾಣಿಸಿಕೊಂಡು ಗುಟುರು ಹಾಕಲಾಗಿ ಹಲವು ಜನರು ಎಡಬಲ ಎಂದು ಚರ್ಚಿಸುತ್ತಿರುವಾಗಲೇ ಈ ಇಬ್ಬರು ಜೊತೆಗೂ ಸ್ನೇಹದಿಂದಿದ್ದ ಕೆಲವರು ನಾವಂತೂ ಎಡವೂ ಅಲ್ಲ, ಬಲವೂ ಅಲ್ಲ ನಮ್ಮದೇನಿದ್ದರೂ ನಡು ಎಂದಾಗ ಕಂಬಾರ `ನಾನೂ ಕೂಡ ನಡು ಮಧ್ಯದವನು. ನಡು ಎಂದರೆ ನನಗೆ ತುಂಬಾ ಇಷ್ಟ. ಆದರೂ, ಬಲದ ಕಡೆಗಿನ ಒಲವು ತುಸು ಜಾಸ್ತಿ ಇದ್ದುದರಿಂದ ಪೇಜಾವರನ ಕಾಲಿಗೆ ಡೈ ಹೊಡೆದೆ ಇದನ್ನು ಸರಿದೂಗಿಸಲೋಸ್ಕರ ಈಚೆಗೆ ಕೋಡೀಮಠದ ಕಾಲಿಗೆ ಬಿದ್ದೆ’ ಎಂದಿಲ್ಲವಂತಲ್ಲಾ, ಥೂತ್ತೇರಿ!!!!

******

ಯಾವತ್ತಿಗೂ ಹಿಂದೂ ಧರ್ಮದ ಮೇಧಾವಿಗಳ ಕಣ್ಣು ತೆರೆಸಿದ್ದು ಈ ಶ್ರೇಣೀಕೃತ ಸಮಾಜದ ಕಟ್ಟಕಡೆಯವರಂತಲ್ಲಾ. ಹಾಗೆಯೇ ಧಾರವಾಡದಲ್ಲಿ ನಡೆದ ಸಾಹಿತ್ಯ ಸಂಭ್ರಮದಲ್ಲಿ ಭಾಗವಹಿಸಿದ್ದ ಜನ ಬೆಚ್ಚಿ ಬೀಳುವಂತೆ ಉಚಲ್ಯಾ ಕ್ಯಾತಿಯ ಲಕ್ಷಣ ಗಾಯಕವಾಡ ಮಾತನಾಡಿದರಂತಲ್ಲಾ. ಅದೇನಪ್ಪ ಎಂದರೆ, ಭೂದೇವಿ ಉಳಿಸಲು ವಿಷ್ಣು ವರಹ ಅವತಾರವೆತ್ತಿದ್ದ. ಅಂದರೆ ವಿಷ್ಣು ಹಂದಿಯಾಗಿದ್ದ. ಆದ್ದರಿಂದ ಹಂದಿ ಪೂಜನೀಯ ಪ್ರಾಣಿ. ಗೋವಿನಂತೆ ಇದೂ ಕೂಡ ಹಿಂದೂ ಧರ್ಮದ ಗೌರವಕ್ಕೆ ಪಾತ್ರವಾಗಬೇಕು. ಆದರೆ ನೀವು ಗೋಮೂತ್ರದಂತೆಯೇ ಹಂದಿ ಮೂತ್ರವನ್ನು ಪರಿಗಣಿಸಬೇಕು. ಅಂದರೆ ಪೂಜಾಸ್ಥಳದಲ್ಲಿ ಪ್ರೋಕ್ಷಣೆಗೆ ಬಳಸಬೇಕು, ತೀರ್ಥ ರೂಪವಾಗಿ ಸೇವಿಸಬೇಕು ಎಂದಾಗ ಬಲಪಂಥೀಯಗಳು ಮಧ್ಯಾಹ್ನ ಭೋಜನ ಮಾಡುವುದೇ ಕಷ್ಟವಾಯ್ತಂತಲ್ಲಾ, ಥೂತ್ತೇರಿ….!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್-19 ಲಸಿಕೆ ಮತ್ತು ಯುವ ವಯಸ್ಕರ ಹಠಾತ್ ಸಾವುಗಳ ನಡುವೆ ಯಾವುದೇ ವೈಜ್ಞಾನಿಕ ಸಂಬಂಧ ಕಂಡುಬಂದಿಲ್ಲ: ಏಮ್ಸ್ ಅಧ್ಯಯನ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ನಡೆಸಿದ ಒಂದು ವರ್ಷದ ಸಮಗ್ರ, ಶವಪರೀಕ್ಷೆ ಆಧಾರಿತ ವೀಕ್ಷಣಾ ಅಧ್ಯಯನವು, ಯುವ ವಯಸ್ಕರಲ್ಲಿ ಕೋವಿಡ್-19 ಲಸಿಕೆಯನ್ನು ಹಠಾತ್ ಸಾವುಗಳೊಂದಿಗೆ ಸಂಪರ್ಕಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ, ಇದು ಕೋವಿಡ್ ಲಸಿಕೆಗಳ...

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರು 'ಗದ್ದಾರ್‌ಗಳು' (ದೇಶದ್ರೋಹಿಗಳು) ಮತ್ತು 'ಡ್ರಮೆಬಾಜ್' (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.  ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ...

ಆಸ್ಟ್ರೇಲಿಯಾ | ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ : 12 ಜನರು ಸಾವು

ಭಾನುವಾರ (ಡಿ.14) ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಸಮುದಾಯದ 'ಹನುಕ್ಕಾ' ಕಾರ್ಯಕ್ರಮದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಕೋಲ್ಕತ್ತಾದಲ್ಲಿ ನಡೆದ ಅವ್ಯವಸ್ಥೆ: ‘ಮೆಸ್ಸಿ ಭಾರತ ಪ್ರವಾಸ 2025’ರ ಪ್ರಮುಖ ಆಯೋಜಕರಿಗೆ 14 ದಿನಗಳ ಕಸ್ಟಡಿ

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಲಿಯೋನೆಲ್ ಮೆಸ್ಸಿ ಅವರ ಇಂಡಿಯಾ ಟೂರ್ 2025 ರ ಪ್ರಮುಖ ಆಯೋಜಕರನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆಯು ಪ್ರತಿಭಟನೆಗಳಿಗೆ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ...

ದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

ದೆಹಲಿ ಬರುತ್ತಿರುವ ನಮ್ಮವರ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ...

ಹೊಸೂರು ವಿಮಾನ ನಿಲ್ದಾಣ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಿಂದ 2,900 ಎಕರೆ ಸ್ವಾಧೀನ ಸಾಧ್ಯತೆ

ಚೆನ್ನೈ: ಬೆಂಗಳೂರಿಗೆ ಬಹಳ ಹತ್ತಿರದಲ್ಲಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ನಗರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಲ್ಲಿ ಸರ್ಕಾರಿ ಸ್ವಾಮ್ಯದ 800 ಎಕರೆ ಸೇರಿದಂತೆ ಸುಮಾರು 3,000...

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) 'ಅನುಕರಣೀಯ' ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ...

ಮುಸ್ಲಿಂ ಎಂದು ಪರಿಶೀಲಿಸಿ ಗುಂಪುಹಲ್ಲೆ: ತೀವ್ರ ದಾಳಿಗೆ ಒಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ  ಸಾವು

ನವಾಡಾ ಜಿಲ್ಲೆಯ ರೋಹ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಗುಂಪು ಹಲ್ಲೆಯಲ್ಲಿ ಕ್ರೂರವಾಗಿ ಹಲ್ಲೆಗೊಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ ಮೊಹಮ್ಮದ್ ಅಥರ್ ಹುಸೇನ್ ಶುಕ್ರವಾರ ತಡರಾತ್ರಿ ಬಿಹಾರ್ಷರೀಫ್ ಸದರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್...

ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ

ಅಮೆರಿಕಾದ ರೊಡ್ ಐಲ್ಯಂಡ್ ರಾಜ್ಯದ ಪ್ರೊವಿಡೆನ್ಸ್ ನಗರದಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಸಮಯದಲ್ಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಡಿಸೆಂಬರ್ 13ರ,...