Homeಕರ್ನಾಟಕತಮ್ಮ ಶರತ್ತು ಒಪ್ಪಿಕೊಳ್ಳುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದ ಎಚ್‌ಡಿಕೆ

ತಮ್ಮ ಶರತ್ತು ಒಪ್ಪಿಕೊಳ್ಳುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದ ಎಚ್‌ಡಿಕೆ

- Advertisement -
- Advertisement -

ಬುಧವಾರ ಮತದಾನ ನಡೆದ ದಿನದಂದು 10 ಎಕ್ಸಿಟ್ ಪೋಲ್‌ಗಳು ಹೊರಬಿದ್ದಿದ್ದವು ಈ ಪೈಕಿ ಬಹುತೇಕ ಸಮೀಕ್ಷೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸುತ್ತೆ ಎಂದು ಭವಿಷ್ಯ ಹೊರ ಬಿದ್ದಿದೆ. ಕೆಲವು ಮತಗಟ್ಟೆ ಸಮೀಕ್ಷೆಗಳು ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಬಹುದು ಎಂದು ಅಂದಾಜಿಸಿದೆ. ಬಿಜೆಪಿ ಪಕ್ಷ ಈಗಾಗಲೇ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿಗಾಗಿ ಕಸರತ್ತು ಶುರು ಮಾಡಿದೆ. ಇದರ ನಡುವೆ ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ಅವರು, ”ತಮ್ಮ ಷರತ್ತನ್ನು ಒಪ್ಪಿಕೊಳ್ಳುವ ಯಾವುದೇ ಪಕ್ಷಕ್ಕೆ ಬೆಂಬಲ ನೀಡುತ್ತೇವೆ” ಎಂದು ಹೇಳಿದ್ದಾರೆ.

ಮತ ಎಣಿಕೆ ನಾಳೆ (ಮೇ 13) ಇರುವುದರಿಂದ ವಿಶ್ರಾಂತಿಗಾಗಿ ಸಿಂಗಾಪುರಕ್ಕೆ ತೆರಳುವ ಮೊದಲು ಹೆಚ್​ಡಿ ಕುಮಾರಸ್ವಾಮಿ ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ಸಂದರ್ಶನ ನೀಡಿದ್ದಾರೆ. ”ಎಕ್ಸಿಟ್ ಪೋಲ್​ಗಳಲ್ಲಿ ಹಲವು ಸಮೀಕ್ಷೆಗಳು ಜೆಡಿಎಸ್ ಪಾರ್ಟಿಗೆ ಬಹಳ ಕಡಿಮೆ ಸೀಟ್​ಗಳು ಸಿಗುತ್ತವೆ ಎಂದು ತಿಳಿಸಿವೆ. ಆದರೆ ನನಗೆ 50 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಈ ಬಾರಿ ನನ್ನ ಷರತ್ತುಗಳನ್ನು ಈಡೇರಿಸಲು ಒಪ್ಪುವ ಪಕ್ಷದೊಂದಿಗೆ ಹೋಗುತ್ತೇನೆ ಎಂದು ಹೆಚ್​ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಈ ಮೂಲಕ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಮೈತ್ರಿ ಸರ್ಕಾರಕ್ಕೆ ಸಿದ್ಧರಾಗಿದ್ದಾರೆ ಎನ್ನುವ ಸಂದೇಶ ರವಾನಿಸಿದ್ದಾರೆ. ಕುಮಾರಸ್ವಾಮಿ ಈಗಾಗಲೇ 2006ರಲ್ಲಿ ಬಿಜೆಪಿ ಹಾಗೂ 2018ರಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿಯಾಗಿದ್ದರು. ಹೀಗಾಗಿ ಷರತ್ತುಗಳನ್ನು ಒಪ್ಪಿಕೊಂಡರೆ ಮಾತ್ರ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರಗಳ ಅಡಿಯಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾದಾಗ, ಒಮ್ಮೆ ಬಿಜೆಪಿ (2006) ಮತ್ತು ನಂತರ ಕಾಂಗ್ರೆಸ್ (2018) ನೊಂದಿಗೆ ಕುಮಾರಸ್ವಾಮಿ ಅವರು ಎದುರಿಸಿದ ಬಿಕ್ಕಟ್ಟುಗಳಿಂದಾಗಿ ಕುಮಾರಸ್ವಾಮಿ ಅವರು ಈ ಬಾರಿ ನಿಟ್ಟ ನಿಲುವನ್ನು ಹೊಂದಿದ್ದಾರೆ. ಹೀಗಾಗಿ ಈ ಬಾರಿ ಮೈತ್ರಿಗೆ ಸಹಿ ಹಾಕುವ ಮೊದಲು ಅವರ ಕೆಲವು ಷರತ್ತುಗಳನ್ನು ಪೂರೈಸಲಾಗುತ್ತದೆಯೇ ಎಂದು ಖಚಿತಪಡಿಸಿಕೊಂಡ ನಂತರವೇ ಆ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವುದು ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ಮುಖ್ಯಮಂತ್ರಿಯಾಗಿ ಹೆಚ್​ಡಿ ಕುಮಾರಸ್ವಾಮಿ ಅವರು ಸರ್ಕಾರವನ್ನು ನಡೆಸಲು ಅವರಿಗೆ ಸ್ವತಂತ್ರ ನೀಡಬೇಕು ಎಂದು ಹೇಳಿದ ಅವರು, ”ಯಾರ ಅಪ್ಪಣೆಯೂ ತೆಗೆದುಕೊಳ್ಳುವಂತಿರಬಾರದು. ಹಾಗೂ ಯಾರು ಹಿಡಿತಸಾಧಿಸಬಾರದು ಎಂಬುವುದು ಕುಮಾರಸ್ವಾಮಿಯವರ ಷರತ್ತು. ನಿರ್ದಿಷ್ಟವಾಗಿ ಹೇಳುವುದಾದರೆ, ಜೆಡಿಎಸ್ ಶಾಸಕರು ಜಲಸಂಪನ್ಮೂಲ, ವಿದ್ಯುತ್ ಮತ್ತು ಸಾರ್ವಜನಿಕ ಕೆಲಸಗಳಂತಹ ಖಾತೆಗಳನ್ನು ಪಡೆಯಬೇಕೆಂದು ಕುಮಾರಸ್ವಾಮಿ ಬಯಸುತ್ತಾರೆ. ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಜಾರಿಗೆ ತರಲು ಸಮ್ಮಿಶ್ರ ಪಕ್ಷದ ಪಾಲುದಾರರು ಅವಕಾಶ ನೀಡಬೇಕು” ಎಂದು ಹೆಚ್​ಡಿ ಕುಮಾರಸ್ವಾಮಿ ತಮ್ಮ ಷರತ್ತುಗಳ ಬಗ್ಗೆ ವಿವರಿಸಿದ್ದಾರೆ.

ಇದನ್ನೂ ಓದಿ: ಸಿಟಿ ರವಿ ಸೋಲಿಸಲು ಕಾಂಗ್ರೆಸ್‌ಗೆ ಮತ ಹಾಕಿ: ಕೈ ಅಭ್ಯರ್ಥಿ ಪರ ಜೆಡಿಎಸ್ ಮುಖಂಡನ ಪ್ರಚಾರ

ಕುಮಾರಸ್ವಾಮಿ ಅವರಿಗೆ 2018ರಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಿದಾಗ ರಚನೆಯಾದ ಸಮ್ಮಿಶ್ರ ಸಮನ್ವಯ ಸಮಿತಿ ಬೇಕಿಲ್ಲವಂತೆ. ಹಾಗೂ ತಮ್ಮ ಸಮ್ಮಿಶ್ರ ಪಾಲುದಾರ ಪಕ್ಷವು ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಂದ ದೂರವಿರಬೇಕು. ಯಾವುದೇ ಸಿದ್ಧಾಂತಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಚರ್ಚೆಯಿಲ್ಲದೆ ಮಾಡಬಾರದು ಎಂದು ಕುಮಾರಸ್ವಾಮಿ ತಮ್ಮ ಷರತ್ತುಗಳನ್ನು ತಿಳಿಸಿದ್ದಾರೆ.

ಜೆಡಿಎಸ್ ಮೂಲಗಳ ಪ್ರಕಾರ, ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ರಾಷ್ಟ್ರೀಯ ನಾಯಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರು ಸಮ್ಮಿಶ್ರ ರಚನೆಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯ ಪೂರ್ವಭಾವಿಯಾಗಿ ಒಂದೆರೆಡು ಬಾರಿ ಜನಾದೇಶ ಮುರಿದು ಬೀಳಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದರು.

”2023ರ ಚುನಾವಣೆಯ ನಂತರ ಕೇಸರಿ ಪಕ್ಷವು ತನ್ನ ಬಳಿಗೆ ಬರಬೇಕಾಗುತ್ತದೆ ಎಂದು ಕುಮಾರಸ್ವಾಮಿ ಬಿಜೆಪಿಗೆ 2022ರ ಡಿಸೆಂಬರ್‌ನಲ್ಲಿಯೇ ಎಚ್ಚರಿಕೆ ನೀಡಿದ್ದರು.

ಮಾರ್ಚ್‌ನಲ್ಲಿ, ಕುಮಾರಸ್ವಾಮಿ ಅವರು ಬಿಜೆಪಿ ಮತ್ತು ಕಾಂಗ್ರೆಸ್ ಹೈಕಮಾಂಡ್‌ಗಳಿಂದ ಪ್ರಸ್ತಾವನೆಯನ್ನು ಸ್ವೀಕರಿಸಿದ್ದರಂತೆ. ಇದನ್ನು ದೇವೇಗೌಡರು ಸಹ ದೃಢಪಡಿಸಿದ್ದಾರೆ. ಕರ್ನಾಟಕವು 2018, 2008 ಮತ್ತು 2004 ರಲ್ಲಿ ಜನಾದೇಶ ಯಾವ ಪಕ್ಷಕ್ಕೂ ಬಹುಮತ ಇರಲಿಲ್ಲ, ಇದರ ಪರಿಣಾಮವಾಗಿ ಸಮ್ಮಿಶ್ರ ಸರ್ಕಾರಕ್ಕೆ ಕಾರಣವಾಯಿತು. ಈ ಬಾರಿಯ ಚುನಾವಣಾ ಫಲಿತಾಂಶಕ್ಕಾಗಿ ಮೂರು ಪಕ್ಷಗಳು ಕಾತುರರಾಗಿ ಕುಳಿತಿದ್ದು, ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಸ್ವತಂತ್ರವಾಗಿ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದ್ದಾರೆ. ಆದರೆ ಜೆಡಿಎಸ್ ಮಾತ್ರ ಸಮ್ಮಶ್ರ ಸರ್ಕಾರ ರಚಿಸಲು ಎರಡೂ ಪಕ್ಷಗಳಿಗೆ ಶರತ್ತುಬದ್ಧ ಆಹ್ವಾನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...