Homeಕರ್ನಾಟಕತಮ್ಮ ಶರತ್ತು ಒಪ್ಪಿಕೊಳ್ಳುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದ ಎಚ್‌ಡಿಕೆ

ತಮ್ಮ ಶರತ್ತು ಒಪ್ಪಿಕೊಳ್ಳುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದ ಎಚ್‌ಡಿಕೆ

- Advertisement -
- Advertisement -

ಬುಧವಾರ ಮತದಾನ ನಡೆದ ದಿನದಂದು 10 ಎಕ್ಸಿಟ್ ಪೋಲ್‌ಗಳು ಹೊರಬಿದ್ದಿದ್ದವು ಈ ಪೈಕಿ ಬಹುತೇಕ ಸಮೀಕ್ಷೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸುತ್ತೆ ಎಂದು ಭವಿಷ್ಯ ಹೊರ ಬಿದ್ದಿದೆ. ಕೆಲವು ಮತಗಟ್ಟೆ ಸಮೀಕ್ಷೆಗಳು ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಬಹುದು ಎಂದು ಅಂದಾಜಿಸಿದೆ. ಬಿಜೆಪಿ ಪಕ್ಷ ಈಗಾಗಲೇ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿಗಾಗಿ ಕಸರತ್ತು ಶುರು ಮಾಡಿದೆ. ಇದರ ನಡುವೆ ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ಅವರು, ”ತಮ್ಮ ಷರತ್ತನ್ನು ಒಪ್ಪಿಕೊಳ್ಳುವ ಯಾವುದೇ ಪಕ್ಷಕ್ಕೆ ಬೆಂಬಲ ನೀಡುತ್ತೇವೆ” ಎಂದು ಹೇಳಿದ್ದಾರೆ.

ಮತ ಎಣಿಕೆ ನಾಳೆ (ಮೇ 13) ಇರುವುದರಿಂದ ವಿಶ್ರಾಂತಿಗಾಗಿ ಸಿಂಗಾಪುರಕ್ಕೆ ತೆರಳುವ ಮೊದಲು ಹೆಚ್​ಡಿ ಕುಮಾರಸ್ವಾಮಿ ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ಸಂದರ್ಶನ ನೀಡಿದ್ದಾರೆ. ”ಎಕ್ಸಿಟ್ ಪೋಲ್​ಗಳಲ್ಲಿ ಹಲವು ಸಮೀಕ್ಷೆಗಳು ಜೆಡಿಎಸ್ ಪಾರ್ಟಿಗೆ ಬಹಳ ಕಡಿಮೆ ಸೀಟ್​ಗಳು ಸಿಗುತ್ತವೆ ಎಂದು ತಿಳಿಸಿವೆ. ಆದರೆ ನನಗೆ 50 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಈ ಬಾರಿ ನನ್ನ ಷರತ್ತುಗಳನ್ನು ಈಡೇರಿಸಲು ಒಪ್ಪುವ ಪಕ್ಷದೊಂದಿಗೆ ಹೋಗುತ್ತೇನೆ ಎಂದು ಹೆಚ್​ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಈ ಮೂಲಕ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಮೈತ್ರಿ ಸರ್ಕಾರಕ್ಕೆ ಸಿದ್ಧರಾಗಿದ್ದಾರೆ ಎನ್ನುವ ಸಂದೇಶ ರವಾನಿಸಿದ್ದಾರೆ. ಕುಮಾರಸ್ವಾಮಿ ಈಗಾಗಲೇ 2006ರಲ್ಲಿ ಬಿಜೆಪಿ ಹಾಗೂ 2018ರಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿಯಾಗಿದ್ದರು. ಹೀಗಾಗಿ ಷರತ್ತುಗಳನ್ನು ಒಪ್ಪಿಕೊಂಡರೆ ಮಾತ್ರ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರಗಳ ಅಡಿಯಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾದಾಗ, ಒಮ್ಮೆ ಬಿಜೆಪಿ (2006) ಮತ್ತು ನಂತರ ಕಾಂಗ್ರೆಸ್ (2018) ನೊಂದಿಗೆ ಕುಮಾರಸ್ವಾಮಿ ಅವರು ಎದುರಿಸಿದ ಬಿಕ್ಕಟ್ಟುಗಳಿಂದಾಗಿ ಕುಮಾರಸ್ವಾಮಿ ಅವರು ಈ ಬಾರಿ ನಿಟ್ಟ ನಿಲುವನ್ನು ಹೊಂದಿದ್ದಾರೆ. ಹೀಗಾಗಿ ಈ ಬಾರಿ ಮೈತ್ರಿಗೆ ಸಹಿ ಹಾಕುವ ಮೊದಲು ಅವರ ಕೆಲವು ಷರತ್ತುಗಳನ್ನು ಪೂರೈಸಲಾಗುತ್ತದೆಯೇ ಎಂದು ಖಚಿತಪಡಿಸಿಕೊಂಡ ನಂತರವೇ ಆ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವುದು ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ಮುಖ್ಯಮಂತ್ರಿಯಾಗಿ ಹೆಚ್​ಡಿ ಕುಮಾರಸ್ವಾಮಿ ಅವರು ಸರ್ಕಾರವನ್ನು ನಡೆಸಲು ಅವರಿಗೆ ಸ್ವತಂತ್ರ ನೀಡಬೇಕು ಎಂದು ಹೇಳಿದ ಅವರು, ”ಯಾರ ಅಪ್ಪಣೆಯೂ ತೆಗೆದುಕೊಳ್ಳುವಂತಿರಬಾರದು. ಹಾಗೂ ಯಾರು ಹಿಡಿತಸಾಧಿಸಬಾರದು ಎಂಬುವುದು ಕುಮಾರಸ್ವಾಮಿಯವರ ಷರತ್ತು. ನಿರ್ದಿಷ್ಟವಾಗಿ ಹೇಳುವುದಾದರೆ, ಜೆಡಿಎಸ್ ಶಾಸಕರು ಜಲಸಂಪನ್ಮೂಲ, ವಿದ್ಯುತ್ ಮತ್ತು ಸಾರ್ವಜನಿಕ ಕೆಲಸಗಳಂತಹ ಖಾತೆಗಳನ್ನು ಪಡೆಯಬೇಕೆಂದು ಕುಮಾರಸ್ವಾಮಿ ಬಯಸುತ್ತಾರೆ. ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಜಾರಿಗೆ ತರಲು ಸಮ್ಮಿಶ್ರ ಪಕ್ಷದ ಪಾಲುದಾರರು ಅವಕಾಶ ನೀಡಬೇಕು” ಎಂದು ಹೆಚ್​ಡಿ ಕುಮಾರಸ್ವಾಮಿ ತಮ್ಮ ಷರತ್ತುಗಳ ಬಗ್ಗೆ ವಿವರಿಸಿದ್ದಾರೆ.

ಇದನ್ನೂ ಓದಿ: ಸಿಟಿ ರವಿ ಸೋಲಿಸಲು ಕಾಂಗ್ರೆಸ್‌ಗೆ ಮತ ಹಾಕಿ: ಕೈ ಅಭ್ಯರ್ಥಿ ಪರ ಜೆಡಿಎಸ್ ಮುಖಂಡನ ಪ್ರಚಾರ

ಕುಮಾರಸ್ವಾಮಿ ಅವರಿಗೆ 2018ರಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಿದಾಗ ರಚನೆಯಾದ ಸಮ್ಮಿಶ್ರ ಸಮನ್ವಯ ಸಮಿತಿ ಬೇಕಿಲ್ಲವಂತೆ. ಹಾಗೂ ತಮ್ಮ ಸಮ್ಮಿಶ್ರ ಪಾಲುದಾರ ಪಕ್ಷವು ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಂದ ದೂರವಿರಬೇಕು. ಯಾವುದೇ ಸಿದ್ಧಾಂತಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಚರ್ಚೆಯಿಲ್ಲದೆ ಮಾಡಬಾರದು ಎಂದು ಕುಮಾರಸ್ವಾಮಿ ತಮ್ಮ ಷರತ್ತುಗಳನ್ನು ತಿಳಿಸಿದ್ದಾರೆ.

ಜೆಡಿಎಸ್ ಮೂಲಗಳ ಪ್ರಕಾರ, ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ರಾಷ್ಟ್ರೀಯ ನಾಯಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರು ಸಮ್ಮಿಶ್ರ ರಚನೆಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯ ಪೂರ್ವಭಾವಿಯಾಗಿ ಒಂದೆರೆಡು ಬಾರಿ ಜನಾದೇಶ ಮುರಿದು ಬೀಳಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದರು.

”2023ರ ಚುನಾವಣೆಯ ನಂತರ ಕೇಸರಿ ಪಕ್ಷವು ತನ್ನ ಬಳಿಗೆ ಬರಬೇಕಾಗುತ್ತದೆ ಎಂದು ಕುಮಾರಸ್ವಾಮಿ ಬಿಜೆಪಿಗೆ 2022ರ ಡಿಸೆಂಬರ್‌ನಲ್ಲಿಯೇ ಎಚ್ಚರಿಕೆ ನೀಡಿದ್ದರು.

ಮಾರ್ಚ್‌ನಲ್ಲಿ, ಕುಮಾರಸ್ವಾಮಿ ಅವರು ಬಿಜೆಪಿ ಮತ್ತು ಕಾಂಗ್ರೆಸ್ ಹೈಕಮಾಂಡ್‌ಗಳಿಂದ ಪ್ರಸ್ತಾವನೆಯನ್ನು ಸ್ವೀಕರಿಸಿದ್ದರಂತೆ. ಇದನ್ನು ದೇವೇಗೌಡರು ಸಹ ದೃಢಪಡಿಸಿದ್ದಾರೆ. ಕರ್ನಾಟಕವು 2018, 2008 ಮತ್ತು 2004 ರಲ್ಲಿ ಜನಾದೇಶ ಯಾವ ಪಕ್ಷಕ್ಕೂ ಬಹುಮತ ಇರಲಿಲ್ಲ, ಇದರ ಪರಿಣಾಮವಾಗಿ ಸಮ್ಮಿಶ್ರ ಸರ್ಕಾರಕ್ಕೆ ಕಾರಣವಾಯಿತು. ಈ ಬಾರಿಯ ಚುನಾವಣಾ ಫಲಿತಾಂಶಕ್ಕಾಗಿ ಮೂರು ಪಕ್ಷಗಳು ಕಾತುರರಾಗಿ ಕುಳಿತಿದ್ದು, ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಸ್ವತಂತ್ರವಾಗಿ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದ್ದಾರೆ. ಆದರೆ ಜೆಡಿಎಸ್ ಮಾತ್ರ ಸಮ್ಮಶ್ರ ಸರ್ಕಾರ ರಚಿಸಲು ಎರಡೂ ಪಕ್ಷಗಳಿಗೆ ಶರತ್ತುಬದ್ಧ ಆಹ್ವಾನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...