Homeಕರ್ನಾಟಕಹಿಂದಿ ದಿವಸ ಆಚರಣೆ ವಿರೋಧಿಸಿ ಮುಖ್ಯಮಂತ್ರಿಗೆ ಕುಮಾರಸ್ವಾಮಿ ಪತ್ರ

ಹಿಂದಿ ದಿವಸ ಆಚರಣೆ ವಿರೋಧಿಸಿ ಮುಖ್ಯಮಂತ್ರಿಗೆ ಕುಮಾರಸ್ವಾಮಿ ಪತ್ರ

- Advertisement -
- Advertisement -

ಸೆಪ್ಟಂಬರ್‌‌ 14ರಂದು ಆಚರಿಸಲಾಗುವ ಹಿಂದಿ ದಿವಸವನ್ನು ವಿರೋಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

“ಭಾರತವು ಸಾವಿರಾರು ಭಾಷೆ ಹಾಗೂ ಉಪ ಭಾಷೆಗಳನ್ನು ಒಳಗೊಂಡ, 560ಕ್ಕೂ ಹೆಚ್ಚು ಸಂಸ್ಥಾನಗಳು ಒಪ್ಪಿ ಸೇರಿದ ಮತ್ತು ಸಾಮಾಜಿಕ, ಸಾಂಸ್ಕೃತಿಕವಾಗಿ ಭಿನ್ನ ಆಚರಣೆಗಳನ್ನು ಹೊಂದಿರುವ ಒಂದು ಮಹಾನ್ ಒಕ್ಕೂಟವಾಗಿದೆ. ಇಂತಹ ನಾಡಿನಲ್ಲಿ ಕೇವಲ ಒಂದು ಭಾಷೆಯನ್ನು ಮಾತ್ರವೇ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಅನ್ಯಾಯವಾಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸೆಪ್ಟಂಬರ್‌ 14ರಂದು ಭಾರತ ಒಕ್ಕೂಟ ಸರ್ಕಾರದ ಪ್ರಯೋಜಿತ ಕಾರ್ಯಕ್ರಮವಾದ ‘ಹಿಂದಿ ದಿವಸ’ವನ್ನು ಕರ್ನಾಟಕದಲ್ಲಿ ಒತ್ತಾಯಪೂರ್ವಕವಾಗಿ ಆಚರಿಸುವುದು ರಾಜ್ಯ ಸರ್ಕಾರ ಕನ್ನಡಿಗರಿಗೆ ಮಾಡುವ ಅನ್ಯಾಯವಾಗಿದೆ. ಕರ್ನಾಟಕ ಸರ್ಕಾರದ ವತಿಯಿಂದ, ನಮ್ಮ ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಹಿಂದಿ ದಿವಸ ಆಚರಣೆ ಮಾಡಬಾರದು” ಎಂದು ಅವರು ಆಗ್ರಹಿಸಿದ್ದಾರೆ.

ಹಿಂದಿ ದಿವಸಕ್ಕೆ ಕರವೇ ವಿರೋಧ

ಸೆ 14 ರಂದು ಒಕ್ಕೂಟ ಸರ್ಕಾರ ನಡೆಸಲು ಉದ್ದೇಶಿಸಿರುವ ಹಿಂದಿ ದಿವಸ ಆಚರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಿಡಿಕಿಡಿಯಾಗಿದ್ದು, ಕರ್ನಾಟಕದಲ್ಲಿ ನಮ್ಮ ತೆರಿಗೆ ಹಣದಲ್ಲಿ ಹಿಂದಿ ದಿವಸ ಆಚರಿಸಲು ಅವಕಾಶ ನೀಡುವುದಿಲ್ಲ ಎಂದು ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಕಿಡಿಕಾರಿದ್ದಾರೆ.

ಹಿಂದಿ ದಿವಸ ಆಚರಣೆ ಸಂಬಂಧ ರಾಜ್ಯದ ಎಲ್ಲ ಜಿಲ್ಲಾಕೇಂದ್ರಗಳಲ್ಲಿ ಸೆ.14ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್‌ ನಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಸಮಾನತೆಯ ಮೇಲೆ ರಚಿತವಾದ ಈ ಒಕ್ಕೂಟ ವ್ಯವಸ್ಥೆಯಲ್ಲಿ ಒಂದು ಭಾಷೆಯನ್ನು ಮಾತ್ರ ಮೆರೆಸಿ ಉಳಿದ ಭಾಷೆಗಳನ್ನು ತುಳಿಯುವ  ಹುನ್ನಾರವನ್ನು ನಾವೆಲ್ಲರೂ ವಿರೋಧಿಸಬೇಕು, ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

ಹಿಂದಿ ಹೇರಿಕೆಯನ್ನು ಕನ್ನಡಿಗರು ಒಪ್ಪುವುದಿಲ್ಲ. ಹಿಂದಿ ದಿವಸ ಆಚರಣೆಯನ್ನೂ ಸಹಿಸುವುದಿಲ್ಲ. ಒಕ್ಕೂಟದ ಎಲ್ಲಾ ನುಡಿಗಳಂತೆ ಹಿಂದಿಯೂ ಒಂದು ನುಡಿಯಷ್ಟೇ. ಕೇಂದ್ರ ಸರಕಾರ ಹಿಂದಿಗೆ ʼಇಂದ್ರ ವೈಭೋಗʼ ನೀಡಿ ಇತರ ನುಡಿಗಳನ್ನು ಬೀದಿಪಾಲು ಮಾಡುವುದನ್ನು ಸಹಿಸಲಾಗದು ಎಂದು ಎಚ್ಚರಿಸಿದ್ದಾರೆ.

ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ನುಡಿ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ನುಡಿ. ನಮ್ಮ ಕನ್ನಡ ಏಳು ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ. ಇಂಥ ನುಡಿಯ ಮೇಲೆ ಹಿಂದಿಯನ್ನು ಹೇರುವ ಕುತಂತ್ರಗಳನ್ನು ವಿಫಲಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ  ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....