Homeಕರ್ನಾಟಕಹಿಂದಿ ದಿವಸ ಆಚರಣೆ ವಿರೋಧಿಸಿ ಮುಖ್ಯಮಂತ್ರಿಗೆ ಕುಮಾರಸ್ವಾಮಿ ಪತ್ರ

ಹಿಂದಿ ದಿವಸ ಆಚರಣೆ ವಿರೋಧಿಸಿ ಮುಖ್ಯಮಂತ್ರಿಗೆ ಕುಮಾರಸ್ವಾಮಿ ಪತ್ರ

- Advertisement -
- Advertisement -

ಸೆಪ್ಟಂಬರ್‌‌ 14ರಂದು ಆಚರಿಸಲಾಗುವ ಹಿಂದಿ ದಿವಸವನ್ನು ವಿರೋಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

“ಭಾರತವು ಸಾವಿರಾರು ಭಾಷೆ ಹಾಗೂ ಉಪ ಭಾಷೆಗಳನ್ನು ಒಳಗೊಂಡ, 560ಕ್ಕೂ ಹೆಚ್ಚು ಸಂಸ್ಥಾನಗಳು ಒಪ್ಪಿ ಸೇರಿದ ಮತ್ತು ಸಾಮಾಜಿಕ, ಸಾಂಸ್ಕೃತಿಕವಾಗಿ ಭಿನ್ನ ಆಚರಣೆಗಳನ್ನು ಹೊಂದಿರುವ ಒಂದು ಮಹಾನ್ ಒಕ್ಕೂಟವಾಗಿದೆ. ಇಂತಹ ನಾಡಿನಲ್ಲಿ ಕೇವಲ ಒಂದು ಭಾಷೆಯನ್ನು ಮಾತ್ರವೇ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಅನ್ಯಾಯವಾಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸೆಪ್ಟಂಬರ್‌ 14ರಂದು ಭಾರತ ಒಕ್ಕೂಟ ಸರ್ಕಾರದ ಪ್ರಯೋಜಿತ ಕಾರ್ಯಕ್ರಮವಾದ ‘ಹಿಂದಿ ದಿವಸ’ವನ್ನು ಕರ್ನಾಟಕದಲ್ಲಿ ಒತ್ತಾಯಪೂರ್ವಕವಾಗಿ ಆಚರಿಸುವುದು ರಾಜ್ಯ ಸರ್ಕಾರ ಕನ್ನಡಿಗರಿಗೆ ಮಾಡುವ ಅನ್ಯಾಯವಾಗಿದೆ. ಕರ್ನಾಟಕ ಸರ್ಕಾರದ ವತಿಯಿಂದ, ನಮ್ಮ ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಹಿಂದಿ ದಿವಸ ಆಚರಣೆ ಮಾಡಬಾರದು” ಎಂದು ಅವರು ಆಗ್ರಹಿಸಿದ್ದಾರೆ.

ಹಿಂದಿ ದಿವಸಕ್ಕೆ ಕರವೇ ವಿರೋಧ

ಸೆ 14 ರಂದು ಒಕ್ಕೂಟ ಸರ್ಕಾರ ನಡೆಸಲು ಉದ್ದೇಶಿಸಿರುವ ಹಿಂದಿ ದಿವಸ ಆಚರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಿಡಿಕಿಡಿಯಾಗಿದ್ದು, ಕರ್ನಾಟಕದಲ್ಲಿ ನಮ್ಮ ತೆರಿಗೆ ಹಣದಲ್ಲಿ ಹಿಂದಿ ದಿವಸ ಆಚರಿಸಲು ಅವಕಾಶ ನೀಡುವುದಿಲ್ಲ ಎಂದು ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಕಿಡಿಕಾರಿದ್ದಾರೆ.

ಹಿಂದಿ ದಿವಸ ಆಚರಣೆ ಸಂಬಂಧ ರಾಜ್ಯದ ಎಲ್ಲ ಜಿಲ್ಲಾಕೇಂದ್ರಗಳಲ್ಲಿ ಸೆ.14ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್‌ ನಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಸಮಾನತೆಯ ಮೇಲೆ ರಚಿತವಾದ ಈ ಒಕ್ಕೂಟ ವ್ಯವಸ್ಥೆಯಲ್ಲಿ ಒಂದು ಭಾಷೆಯನ್ನು ಮಾತ್ರ ಮೆರೆಸಿ ಉಳಿದ ಭಾಷೆಗಳನ್ನು ತುಳಿಯುವ  ಹುನ್ನಾರವನ್ನು ನಾವೆಲ್ಲರೂ ವಿರೋಧಿಸಬೇಕು, ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

ಹಿಂದಿ ಹೇರಿಕೆಯನ್ನು ಕನ್ನಡಿಗರು ಒಪ್ಪುವುದಿಲ್ಲ. ಹಿಂದಿ ದಿವಸ ಆಚರಣೆಯನ್ನೂ ಸಹಿಸುವುದಿಲ್ಲ. ಒಕ್ಕೂಟದ ಎಲ್ಲಾ ನುಡಿಗಳಂತೆ ಹಿಂದಿಯೂ ಒಂದು ನುಡಿಯಷ್ಟೇ. ಕೇಂದ್ರ ಸರಕಾರ ಹಿಂದಿಗೆ ʼಇಂದ್ರ ವೈಭೋಗʼ ನೀಡಿ ಇತರ ನುಡಿಗಳನ್ನು ಬೀದಿಪಾಲು ಮಾಡುವುದನ್ನು ಸಹಿಸಲಾಗದು ಎಂದು ಎಚ್ಚರಿಸಿದ್ದಾರೆ.

ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ನುಡಿ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ನುಡಿ. ನಮ್ಮ ಕನ್ನಡ ಏಳು ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ. ಇಂಥ ನುಡಿಯ ಮೇಲೆ ಹಿಂದಿಯನ್ನು ಹೇರುವ ಕುತಂತ್ರಗಳನ್ನು ವಿಫಲಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ  ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....