Homeಕರ್ನಾಟಕಜಿಎಸ್‌ಟಿ ವಿಚಾರದಲ್ಲಿ ರಾಜ್ಯಗಳನ್ನು ವಂಚಿಸಿದ್ದಕ್ಕೆ ಸಂಭ್ರಮಿಸಬೇಕೆ?: ಕುಮಾರಸ್ವಾಮಿ ಆಕ್ರೋಶ

ಜಿಎಸ್‌ಟಿ ವಿಚಾರದಲ್ಲಿ ರಾಜ್ಯಗಳನ್ನು ವಂಚಿಸಿದ್ದಕ್ಕೆ ಸಂಭ್ರಮಿಸಬೇಕೆ?: ಕುಮಾರಸ್ವಾಮಿ ಆಕ್ರೋಶ

- Advertisement -
- Advertisement -

ಜಿಎಸ್‌ಟಿಗೆ 4 ವರ್ಷವಾಗಿದ್ದಕ್ಕೆ ಒಕ್ಕೂಟ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಒಕ್ಕೂಟ ಸರ್ಕಾರ ಸಂಭ್ರಮಿಸಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಎಸ್‌‌ಟಿಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಒಕ್ಕೂಟ ಸರ್ಕಾರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯಕ್ಕೆ 9 ಸಾವಿರ ಕೋಟಿ ರೂ. ಗಳಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಈ ಸಂಭ್ರಮದ ವೇಳೆಯಲ್ಲೇ ಪರಿಹಾರ ಬಿಡುಗಡೆ ಆಗಿದ್ದರೆ ಕರ್ನಾಟಕವೂ ಸಂಭ್ರಮಿಸುತ್ತಿತ್ತು. ಕೋವಿಡ್‌ ಕಾಲದಲ್ಲಿ ಆದಾಯವಿಲ್ಲದೇ ನಲುಗಿರುವ ರಾಜ್ಯಕ್ಕೆ ಪರಿಹಾರದ ಸಿಕ್ಕಿದ್ದಿದ್ದರೆ ಅನುಕೂಲವಾಗುತ್ತಿತ್ತು. ಆದರೆ, ಪರಿಹಾರ ನೀಡದ ಒಕ್ಕೂಟ ಸರ್ಕಾರ ರಾಜ್ಯಗಳ ನೋವಿನ ಮೇಲೆ ಸಂಭ್ರಮಿಸುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ‘ಚಾಮರಾಜನಗರ ಆಕ್ಸಿಜನ್ ದುರಂತ’ದಲ್ಲಿ ಮೃತಪಟ್ಟವರಿಗೆ ಕೊರೊನಾ ಸಾವು ಮರಣಪ್ರಮಾಣ ಪತ್ರ ನೀಡದ ರಾಜ್ಯ ಸರ್ಕಾರ: ಡಿಕೆಶಿ ಅಸಮಾಧಾನ

ರಾಜ್ಯಗಳ ಅದಾಯವನ್ನು ಒಕ್ಕೂಟ ಸರ್ಕಾರಕ್ಕೆ ತಿರುಗಿಸಿಕೊಳ್ಳುವುದು, ಅನುದಾನಕ್ಕಾಗಿ ರಾಜ್ಯಗಳು ಒಕ್ಕೂಟ ಸರ್ಕಾರದ ಮುಂದೆ ಗುಲಾಮರಂತೆ ನಿಲ್ಲುವಂತೆ ಮಾಡುವುದು ಜಿಎಸ್‌ಟಿಯ ಉದ್ದೇಶ. ಇಂಥ ಗುಲಾಮಗಿರಿಯನ್ನು ಕಾಂಗ್ರೆಸ್‌ ರೂಪಿಸಿತು, ಬಿಜೆಪಿ ಜಾರಿಗೆ ತಂದಿತು. ಈಗ ರಾಜ್ಯಗಳು ಪರಿಹಾರಕ್ಕಾಗಿ ಬೇಡುವಂತಾಗಿದೆ. ಪೆಟ್ರೋಲಿಯಂ ಅನ್ನು ಜಿಎಸ್‌ಟಿಗೆ ಸೇರಿಸದಂತೆ ಹೋರಾಡುವಂತಾಗಿದೆ ಎಂದು ಅವರು ಹೇಳಿದ್ದಾರೆ.

“ಜಿಎಸ್‌ಟಿ ರಾಜ್ಯಗಳ ಅನುದಾನ ಕಸಿಯಿತು. ಆದಕ್ಕೆ ಪರಿಹಾರವಾಗಿ ಸಾಮಾನ್ಯರ ಬದುಕನ್ನೇನಾದರೂ ಹಸನಾಗಿಸಿತೇ? ನವ ಉದ್ಯಮಿಗಳನ್ನು ಪ್ರೋತ್ಸಾಹಿಸಿದೆಯೇ? ಅದ್ಯಾವುದೂ ಆಗಿಲ್ಲ. ವ್ಯಾಪರಿಗಳ ಪರಿಸ್ಥಿತಿ ಹಿಂದಿಗಿಂತಲೂ ಈಗ ಏನಾದರೂ ಉತ್ತಮವಾಗಿದೆಯೇ? ಆದರೆ, ಪರಿಸ್ಥಿತಿ ಮಾತ್ರ ಭಿನ್ನವಾಗಿದೆ. ಇಂಥ ಜಿಎಸ್‌ಟಿ ವ್ಯವಸ್ಥೆಯಲ್ಲಿ ಸಂಭ್ರಮಿಸುವುದೇನಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಈ ಒಕ್ಕೂಟದಲ್ಲಿ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನು ಹರಣ ಮಾಡಿದ್ದಕ್ಕೆ ದ್ಯೋತಕವಾಗಿ ಜಿಎಸ್‌ಟಿ ವ್ಯವಸ್ಥೆ ದೈತ್ಯವಾಗಿ ನಿಂತಿದೆ. ರಾಜ್ಯಗಳನ್ನು ಶೋಷಿಸಿ ಒಕ್ಕೂಟ ಸರ್ಕಾರವನ್ನು ಪೋಷಿಸಿದ ಅರ್ಥವ್ಯವಸ್ಥೆಯಾಗಿ ಜಿಎಸ್‌ಟಿ ಕಾಣಿಸುತ್ತಿದೆ. ಇಂಥ ಜಿಎಸ್‌ಟಿಯಿಂದ ರಾಜ್ಯಗಳು ಸಂಭ್ರಮಿಸುವುದು ಏನೂ ಇಲ್ಲ. ಇದು ಕಾಂಗ್ರೆಸ್‌–ಬಿಜೆಪಿಯ ಯಜಮಾನಿಕೆ ಸಂಕೇತ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ದೇವರೆ ಶಿಕ್ಷೆ ಕೊಡುವ ಕಾಲ‌ ಬರುತ್ತದೆ’: ಯಡಿಯೂರಪ್ಪ ವಿರುದ್ದ ರೇವಣ್ಣ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಮೋದಿ, ಅಮಿತ್ ಶಾ ರಾಜೀನಾಮೆಗೆ ಖರ್ಗೆ ಒತ್ತಾಯ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ದ ಜಾರಿ ನಿರ್ದೇನಾಲಯ (ಇಡಿ) ದಾಖಲಿಸಿದ್ದ ಹಣ ಅಕ್ರಮ ವರ್ಗಾವಣೆ (ಪಿಎಂಎಲ್‌ಎ) ದೂರು ಸ್ವೀಕರಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿರುವುದನ್ನು ಕಾಂಗ್ರೆಸ್‌ ಸ್ವಾಗತಿಸಿದೆ. ಬಿಜೆಪಿ...

ಹಿಜಾಬ್ ಎಳೆದ ನಿತೀಶ್ ಕುಮಾರ್: ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ ವೈದ್ಯೆ?

ಆಯುಷ್ ವೈದ್ಯೆ ನುಸ್ರತ್ ಪರ್ವೀನ್ ಇತ್ತೀಚೆಗೆ ತಮ್ಮ ನೇಮಕಾತಿ ಪತ್ರವನ್ನು ಪಡೆದಿದ್ದರೂ ಬಿಹಾರ ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪಾಟ್ನಾದಲ್ಲಿ ನಡೆದ ಸಕಾfರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ...

ಮಹಿಳೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನ ವಕೀಲರಿಂದ ದೂರು

ಬೆಂಗಳೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳೆಯೊಬ್ಬರ ಹಿಜಾಬ್ ಅನ್ನು ಹಿಡಿದ ಎಳೆದ ವಿಚಾರಕ್ಕೆ ಸಂಬಂಧ ಪಟ್ಟಂತೆ ಅವರ ವಿರುದ್ಧ ಬೆಂಗಳೂರು ಮೂಲದ ವಕೀಲರೊಬ್ಬರು ಮಂಗಳವಾರ ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್...