Homeಕರ್ನಾಟಕಜಿಎಸ್‌ಟಿ ವಿಚಾರದಲ್ಲಿ ರಾಜ್ಯಗಳನ್ನು ವಂಚಿಸಿದ್ದಕ್ಕೆ ಸಂಭ್ರಮಿಸಬೇಕೆ?: ಕುಮಾರಸ್ವಾಮಿ ಆಕ್ರೋಶ

ಜಿಎಸ್‌ಟಿ ವಿಚಾರದಲ್ಲಿ ರಾಜ್ಯಗಳನ್ನು ವಂಚಿಸಿದ್ದಕ್ಕೆ ಸಂಭ್ರಮಿಸಬೇಕೆ?: ಕುಮಾರಸ್ವಾಮಿ ಆಕ್ರೋಶ

- Advertisement -
- Advertisement -

ಜಿಎಸ್‌ಟಿಗೆ 4 ವರ್ಷವಾಗಿದ್ದಕ್ಕೆ ಒಕ್ಕೂಟ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಒಕ್ಕೂಟ ಸರ್ಕಾರ ಸಂಭ್ರಮಿಸಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಎಸ್‌‌ಟಿಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಒಕ್ಕೂಟ ಸರ್ಕಾರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯಕ್ಕೆ 9 ಸಾವಿರ ಕೋಟಿ ರೂ. ಗಳಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಈ ಸಂಭ್ರಮದ ವೇಳೆಯಲ್ಲೇ ಪರಿಹಾರ ಬಿಡುಗಡೆ ಆಗಿದ್ದರೆ ಕರ್ನಾಟಕವೂ ಸಂಭ್ರಮಿಸುತ್ತಿತ್ತು. ಕೋವಿಡ್‌ ಕಾಲದಲ್ಲಿ ಆದಾಯವಿಲ್ಲದೇ ನಲುಗಿರುವ ರಾಜ್ಯಕ್ಕೆ ಪರಿಹಾರದ ಸಿಕ್ಕಿದ್ದಿದ್ದರೆ ಅನುಕೂಲವಾಗುತ್ತಿತ್ತು. ಆದರೆ, ಪರಿಹಾರ ನೀಡದ ಒಕ್ಕೂಟ ಸರ್ಕಾರ ರಾಜ್ಯಗಳ ನೋವಿನ ಮೇಲೆ ಸಂಭ್ರಮಿಸುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ‘ಚಾಮರಾಜನಗರ ಆಕ್ಸಿಜನ್ ದುರಂತ’ದಲ್ಲಿ ಮೃತಪಟ್ಟವರಿಗೆ ಕೊರೊನಾ ಸಾವು ಮರಣಪ್ರಮಾಣ ಪತ್ರ ನೀಡದ ರಾಜ್ಯ ಸರ್ಕಾರ: ಡಿಕೆಶಿ ಅಸಮಾಧಾನ

ರಾಜ್ಯಗಳ ಅದಾಯವನ್ನು ಒಕ್ಕೂಟ ಸರ್ಕಾರಕ್ಕೆ ತಿರುಗಿಸಿಕೊಳ್ಳುವುದು, ಅನುದಾನಕ್ಕಾಗಿ ರಾಜ್ಯಗಳು ಒಕ್ಕೂಟ ಸರ್ಕಾರದ ಮುಂದೆ ಗುಲಾಮರಂತೆ ನಿಲ್ಲುವಂತೆ ಮಾಡುವುದು ಜಿಎಸ್‌ಟಿಯ ಉದ್ದೇಶ. ಇಂಥ ಗುಲಾಮಗಿರಿಯನ್ನು ಕಾಂಗ್ರೆಸ್‌ ರೂಪಿಸಿತು, ಬಿಜೆಪಿ ಜಾರಿಗೆ ತಂದಿತು. ಈಗ ರಾಜ್ಯಗಳು ಪರಿಹಾರಕ್ಕಾಗಿ ಬೇಡುವಂತಾಗಿದೆ. ಪೆಟ್ರೋಲಿಯಂ ಅನ್ನು ಜಿಎಸ್‌ಟಿಗೆ ಸೇರಿಸದಂತೆ ಹೋರಾಡುವಂತಾಗಿದೆ ಎಂದು ಅವರು ಹೇಳಿದ್ದಾರೆ.

“ಜಿಎಸ್‌ಟಿ ರಾಜ್ಯಗಳ ಅನುದಾನ ಕಸಿಯಿತು. ಆದಕ್ಕೆ ಪರಿಹಾರವಾಗಿ ಸಾಮಾನ್ಯರ ಬದುಕನ್ನೇನಾದರೂ ಹಸನಾಗಿಸಿತೇ? ನವ ಉದ್ಯಮಿಗಳನ್ನು ಪ್ರೋತ್ಸಾಹಿಸಿದೆಯೇ? ಅದ್ಯಾವುದೂ ಆಗಿಲ್ಲ. ವ್ಯಾಪರಿಗಳ ಪರಿಸ್ಥಿತಿ ಹಿಂದಿಗಿಂತಲೂ ಈಗ ಏನಾದರೂ ಉತ್ತಮವಾಗಿದೆಯೇ? ಆದರೆ, ಪರಿಸ್ಥಿತಿ ಮಾತ್ರ ಭಿನ್ನವಾಗಿದೆ. ಇಂಥ ಜಿಎಸ್‌ಟಿ ವ್ಯವಸ್ಥೆಯಲ್ಲಿ ಸಂಭ್ರಮಿಸುವುದೇನಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಈ ಒಕ್ಕೂಟದಲ್ಲಿ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನು ಹರಣ ಮಾಡಿದ್ದಕ್ಕೆ ದ್ಯೋತಕವಾಗಿ ಜಿಎಸ್‌ಟಿ ವ್ಯವಸ್ಥೆ ದೈತ್ಯವಾಗಿ ನಿಂತಿದೆ. ರಾಜ್ಯಗಳನ್ನು ಶೋಷಿಸಿ ಒಕ್ಕೂಟ ಸರ್ಕಾರವನ್ನು ಪೋಷಿಸಿದ ಅರ್ಥವ್ಯವಸ್ಥೆಯಾಗಿ ಜಿಎಸ್‌ಟಿ ಕಾಣಿಸುತ್ತಿದೆ. ಇಂಥ ಜಿಎಸ್‌ಟಿಯಿಂದ ರಾಜ್ಯಗಳು ಸಂಭ್ರಮಿಸುವುದು ಏನೂ ಇಲ್ಲ. ಇದು ಕಾಂಗ್ರೆಸ್‌–ಬಿಜೆಪಿಯ ಯಜಮಾನಿಕೆ ಸಂಕೇತ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ದೇವರೆ ಶಿಕ್ಷೆ ಕೊಡುವ ಕಾಲ‌ ಬರುತ್ತದೆ’: ಯಡಿಯೂರಪ್ಪ ವಿರುದ್ದ ರೇವಣ್ಣ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...