Homeಕರ್ನಾಟಕಜಿಎಸ್‌ಟಿ ವಿಚಾರದಲ್ಲಿ ರಾಜ್ಯಗಳನ್ನು ವಂಚಿಸಿದ್ದಕ್ಕೆ ಸಂಭ್ರಮಿಸಬೇಕೆ?: ಕುಮಾರಸ್ವಾಮಿ ಆಕ್ರೋಶ

ಜಿಎಸ್‌ಟಿ ವಿಚಾರದಲ್ಲಿ ರಾಜ್ಯಗಳನ್ನು ವಂಚಿಸಿದ್ದಕ್ಕೆ ಸಂಭ್ರಮಿಸಬೇಕೆ?: ಕುಮಾರಸ್ವಾಮಿ ಆಕ್ರೋಶ

- Advertisement -
- Advertisement -

ಜಿಎಸ್‌ಟಿಗೆ 4 ವರ್ಷವಾಗಿದ್ದಕ್ಕೆ ಒಕ್ಕೂಟ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಒಕ್ಕೂಟ ಸರ್ಕಾರ ಸಂಭ್ರಮಿಸಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಎಸ್‌‌ಟಿಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಒಕ್ಕೂಟ ಸರ್ಕಾರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯಕ್ಕೆ 9 ಸಾವಿರ ಕೋಟಿ ರೂ. ಗಳಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಈ ಸಂಭ್ರಮದ ವೇಳೆಯಲ್ಲೇ ಪರಿಹಾರ ಬಿಡುಗಡೆ ಆಗಿದ್ದರೆ ಕರ್ನಾಟಕವೂ ಸಂಭ್ರಮಿಸುತ್ತಿತ್ತು. ಕೋವಿಡ್‌ ಕಾಲದಲ್ಲಿ ಆದಾಯವಿಲ್ಲದೇ ನಲುಗಿರುವ ರಾಜ್ಯಕ್ಕೆ ಪರಿಹಾರದ ಸಿಕ್ಕಿದ್ದಿದ್ದರೆ ಅನುಕೂಲವಾಗುತ್ತಿತ್ತು. ಆದರೆ, ಪರಿಹಾರ ನೀಡದ ಒಕ್ಕೂಟ ಸರ್ಕಾರ ರಾಜ್ಯಗಳ ನೋವಿನ ಮೇಲೆ ಸಂಭ್ರಮಿಸುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ‘ಚಾಮರಾಜನಗರ ಆಕ್ಸಿಜನ್ ದುರಂತ’ದಲ್ಲಿ ಮೃತಪಟ್ಟವರಿಗೆ ಕೊರೊನಾ ಸಾವು ಮರಣಪ್ರಮಾಣ ಪತ್ರ ನೀಡದ ರಾಜ್ಯ ಸರ್ಕಾರ: ಡಿಕೆಶಿ ಅಸಮಾಧಾನ

ರಾಜ್ಯಗಳ ಅದಾಯವನ್ನು ಒಕ್ಕೂಟ ಸರ್ಕಾರಕ್ಕೆ ತಿರುಗಿಸಿಕೊಳ್ಳುವುದು, ಅನುದಾನಕ್ಕಾಗಿ ರಾಜ್ಯಗಳು ಒಕ್ಕೂಟ ಸರ್ಕಾರದ ಮುಂದೆ ಗುಲಾಮರಂತೆ ನಿಲ್ಲುವಂತೆ ಮಾಡುವುದು ಜಿಎಸ್‌ಟಿಯ ಉದ್ದೇಶ. ಇಂಥ ಗುಲಾಮಗಿರಿಯನ್ನು ಕಾಂಗ್ರೆಸ್‌ ರೂಪಿಸಿತು, ಬಿಜೆಪಿ ಜಾರಿಗೆ ತಂದಿತು. ಈಗ ರಾಜ್ಯಗಳು ಪರಿಹಾರಕ್ಕಾಗಿ ಬೇಡುವಂತಾಗಿದೆ. ಪೆಟ್ರೋಲಿಯಂ ಅನ್ನು ಜಿಎಸ್‌ಟಿಗೆ ಸೇರಿಸದಂತೆ ಹೋರಾಡುವಂತಾಗಿದೆ ಎಂದು ಅವರು ಹೇಳಿದ್ದಾರೆ.

“ಜಿಎಸ್‌ಟಿ ರಾಜ್ಯಗಳ ಅನುದಾನ ಕಸಿಯಿತು. ಆದಕ್ಕೆ ಪರಿಹಾರವಾಗಿ ಸಾಮಾನ್ಯರ ಬದುಕನ್ನೇನಾದರೂ ಹಸನಾಗಿಸಿತೇ? ನವ ಉದ್ಯಮಿಗಳನ್ನು ಪ್ರೋತ್ಸಾಹಿಸಿದೆಯೇ? ಅದ್ಯಾವುದೂ ಆಗಿಲ್ಲ. ವ್ಯಾಪರಿಗಳ ಪರಿಸ್ಥಿತಿ ಹಿಂದಿಗಿಂತಲೂ ಈಗ ಏನಾದರೂ ಉತ್ತಮವಾಗಿದೆಯೇ? ಆದರೆ, ಪರಿಸ್ಥಿತಿ ಮಾತ್ರ ಭಿನ್ನವಾಗಿದೆ. ಇಂಥ ಜಿಎಸ್‌ಟಿ ವ್ಯವಸ್ಥೆಯಲ್ಲಿ ಸಂಭ್ರಮಿಸುವುದೇನಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಈ ಒಕ್ಕೂಟದಲ್ಲಿ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನು ಹರಣ ಮಾಡಿದ್ದಕ್ಕೆ ದ್ಯೋತಕವಾಗಿ ಜಿಎಸ್‌ಟಿ ವ್ಯವಸ್ಥೆ ದೈತ್ಯವಾಗಿ ನಿಂತಿದೆ. ರಾಜ್ಯಗಳನ್ನು ಶೋಷಿಸಿ ಒಕ್ಕೂಟ ಸರ್ಕಾರವನ್ನು ಪೋಷಿಸಿದ ಅರ್ಥವ್ಯವಸ್ಥೆಯಾಗಿ ಜಿಎಸ್‌ಟಿ ಕಾಣಿಸುತ್ತಿದೆ. ಇಂಥ ಜಿಎಸ್‌ಟಿಯಿಂದ ರಾಜ್ಯಗಳು ಸಂಭ್ರಮಿಸುವುದು ಏನೂ ಇಲ್ಲ. ಇದು ಕಾಂಗ್ರೆಸ್‌–ಬಿಜೆಪಿಯ ಯಜಮಾನಿಕೆ ಸಂಕೇತ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ದೇವರೆ ಶಿಕ್ಷೆ ಕೊಡುವ ಕಾಲ‌ ಬರುತ್ತದೆ’: ಯಡಿಯೂರಪ್ಪ ವಿರುದ್ದ ರೇವಣ್ಣ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...