Homeಅಂಕಣಗಳುಈಚೆಗೆ ಬೆಂಗಳೂರಲ್ಲಿ ಇರಕಾಗ್ತಾಯಿಲ್ಲ ಕಂಡ್ರಿ: ಯಾಹೂ ಜೊತೆ ಕುಮಾರಸ್ವಾಮಿ ಮಾತುಕತೆ

ಈಚೆಗೆ ಬೆಂಗಳೂರಲ್ಲಿ ಇರಕಾಗ್ತಾಯಿಲ್ಲ ಕಂಡ್ರಿ: ಯಾಹೂ ಜೊತೆ ಕುಮಾರಸ್ವಾಮಿ ಮಾತುಕತೆ

- Advertisement -
- Advertisement -

 

ಗಿರೀಶ್ ಕಾರ್ನಾಡ್‍ರವರ ಸಾವಿನ ನಂತರ ನಡೆದುಕೊಂಡ ರೀತಿಗೆ ಅವರ ವೈರಿಗಳೂ ಮೆಚ್ಚಿ ತಲೆದೂಗುತ್ತಿದ್ದಾರಂತಲ್ಲಾ. ಇದರ ನಡುವೆ ವೀರಶೈವರ ಜಾಲತಾಣಗಳು ಕಾರ್ನಾಡರ ಸಾವನ್ನು ಸಂಭ್ರಮಿಸಿದ್ದು ನೋಡಿದ ಲಿಂಗಾಯತರು, ‘ಥೂ ಎಷ್ಟೇ ಆಗಲಿ ಇವುರು ಅಂಥೋರೆಯ’ ಎಂದು ಉದ್ಘಾರ ತೆಗೆದರಂತಲ್ಲಾ. ಅದಿರಲಿ ಈ ವೀರಶೈವರಿಗೇಕೆ ಕಾರ್ನಾಡರ ಸಾವಿಗೆ ಸಂಭ್ರಮಿಸಿದರು ಎಂದು ನೋಡಿದರೆ, ಕಾರ್ನಾಡರ ‘ತಲೆದಂಡ’ ಕೃತಿ ಸಾಕ್ಷ್ಯಾಧಾರಗಳನ್ನು ಒದಗಿಸುತ್ತದಂತಲ್ಲಾ. ಹನ್ನೆರಡನೇ ಶತಮಾನದಲ್ಲಿ ನಡೆದ ಬಸವಣ್ಣನ ಕೊಲೆ ಇಪ್ಪತ್ತೊಂದನೆ ಶತಮಾನದಲ್ಲೂ ಕೆಲವರನ್ನು ಬೆಚ್ಚಿಸುತ್ತದೆ ಎಂದರೆ ಆಶ್ಚರ್ಯ. ಗಾಂಧೀ ಕೊಲೆಯೂ ಹಾಗೇ ಅಲ್ಲವೆ. ಕೊಂದವನು ನಮ್ಮ ಜಾತಿ ಅಲ್ಲ ಎಂದರು. ಪತ್ತೆ ಹಚ್ಚಿ ಹೇಳಿದಾಗ ನಮ್ಮ ಸಂಘದ ಸದಸ್ಯನಲ್ಲ ಎಂದರು. ಅದನ್ನೂ ಪತ್ತೆ ಹಚ್ಚಿದಾಗ ಸಂಘ ತೊರೆದು ಬಹಳ ವರ್ಷವಾಗಿತ್ತು ಎಂದರು. ಎಲ್ಲಾ ಮುಗಿದು ಮರಣ ದಂಡನೆಯಾದಾಗ ಮನುಧರ್ಮದುದ್ದಾರಕ್ಕೆ ಹುತಾತ್ಮನಾದ ಮಹಾತ್ಯಾಗಿ ಎಂದರು. ಅದೆಲ್ಲಾ ಆಗಿ ಮನುಧರ್ಮ ಗ್ರಂಥವನ್ನು ಪುನರ್ಮುದ್ರಣ ಮಾಡುವ ವ್ಯಾಪಾರಿಯಂತೆ ಕಾಣುವ ಮೋದಿ ಪ್ರಧಾನಿಯಾದ ಕೂಡಲೆ ಗೋಡ್ಸೆಗೆ ಗುಡಿಕಟ್ಟಿದರಂತಲ್ಲಾ ಥೂತ್ತೇರಿ.

*****

ಎಡೂರಪ್ಪನ ಜೊತೆ ಇಪ್ಪತ್ತು ತಿಂಗಳು ತೆಕ್ಕೆ ಬಡಿದುಕೊಂಡು ರಾಜ್ಯಾಡಳಿತ ನಡೆಸಿದ ಕುಮಾರಣ್ಣ, ಜನಾನುರಾಗಿ ಆಗಿದ್ದರು. ಅದಕ್ಕೆ ಕಾರಣ, ಅವರ ಗ್ರಾಮ ವಾಸ್ತವ್ಯವಂತೆ. ಆದರೀಗ ಕುಮಾರಣ್ಣ ಮೊದಲಿನ ವರ್ಚಸ್ಸು ಕಳೆದುಕೊಂಡಿದ್ದಾರೆ. ಮಂಡ್ಯದಲ್ಲಿ ಮಗನನ್ನ ಗೆಲ್ಲಿಸಲಾಗಿಲ್ಲ. ತುಮಕೂರಿನಲ್ಲಿ ಅಪ್ಪನನ್ನು ಉಳಿಸಿಕೊಳ್ಳಲಾಗಲಿಲ್ಲ. ಹಾಸನದಲ್ಲಿ ತನ್ನ ಮತ್ಸರಕ್ಕೆ ತುತ್ತಾಗಿರುವ ಭವಾನಿ ಪುತ್ರ ಗೆದ್ದು ಮೆರೆಯುತ್ತಿದ್ದಾನೆ. ಕಾಂಗೈಗಳು ನಂಬಿಕೆಗೆ ಯೋಗ್ಯವಾಗಿ ವರ್ತಿಸುತ್ತಿಲ್ಲ. ಸಿದ್ಧರಾಮಯ್ಯ ಕರ್ಣನಂತೆ ಮಾತನಾಡಿದರೂ ಶಕುನಿಯಾಗಿದ್ದಾರೆ. ಇಂತೆಲ್ಲಾ ತಲೆತಿನ್ನುವ ಸಂಗತಿಗಳಿಂದ ದೂರವಾಗಿ, ನೆಮ್ಮದಿಯಿಂದ ನಾಲ್ಕು ಗಂಟೆ ನಿದ್ದೆ ಮಾಡಬೇಕೆಂದರೆ, ಅದು ಗ್ರಾಮ ವಾಸ್ತವ್ಯದಿಂದ ಮಾತ್ರ ಸಾಧ್ಯ ಎಂದು ಸೂಕ್ತ ಗ್ರಾಮ ಶೋಧನೆಗೆ ತೊಡಗಿರುವಾಗ ಅವರಿಗೆ ಶುಭ ಹಾರೈಸುವುದು ನಮ್ಮ ಕರ್ತವ್ಯ. ಹಾಗಾಗಿ ಫೋನ್ ಮಾಡಿದರೆ ರಿಂಗಾಯ್ತು.
ರಿಂಗ್ ಟೋನ್: ಹಳ್ಳಿಯಾದರೇನು ಶಿವಾ ದಿಳ್ಳಿಯಾದರೇನು ಶಿವಾ ಜನರೆಲ್ಲಾ ಒಂದೇ ಶಿವಾ ಜನರೆಲ್ಲಾ…….
“ಹೇಳ್ರಿ ಯಾಹು ಏನ್ಸಮಾಚಾರ”
“ಸುಮ್ಮನೆ ಮಾತಾಡಬೇಕು ಅನ್ನುಸ್ತು ಸಾರ್.”
“ಒಂದು ಕೆಲಸ ಮಾಡಿ, ನಾನು ಕರ್ನಾಟಕದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡ್ತಕಂತ ಒಂದು ತೀರ್ಮಾನ ಏನು ತಗೊಂಡಿದ್ದೀನಿ. ಅದರ ಪ್ರಕಾರ ಗ್ರಾಮ ವಾಸ್ತವ್ಯವನ್ನ ಆರಂಭಿಸಬೇಕು ಅನ್ನೊ ತೀರ್ಮಾನದ ಪ್ರಕಾರ ನಡಕೊಳನಾ ಅಂತ ಇದೀನಿ.”
“ಒಳ್ಳೆ ಆಲೋಚನೆ ಸರ್, ಬೇಗ ಹೊರಡಿ.”
“ನೋಡಿ, ನಿಮ್ಮ ಬಾಯಲ್ಲೂ ಅದೇ ಬರ್ತಾಯಿದೆ. ಅಲ್ಲಿ ನಾನು ಗ್ರಾಮ ವಾಸ್ತವ್ಯದ ಜಾಗದಲ್ಲಿ ಮಾತ್ನಾಡಕ್ಕೆ ಯಾರು ಇರಲ್ಲ. ನೀವು ಬಂದ್ರೆ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡ್ತಕಂತ ಕಾರ್ಯಕ್ರಮ ಹಾಯ್ಕಬವುದು.”
“ಸರಿ ಸಾರ್, ಆದ್ರೆ ನಿಮ್ಮ ಗ್ರಾಮ ವಾಸ್ತವ್ಯದಲ್ಲಿ ಭೋಜೇಗೌಡ ಇರ್ತನೆ, ಇನ್ನ ಶಿವರಾಮೇಗೌಡ ಈಗ ನಿರುದ್ಯೋಗಿ ಆಗಿರದ್ರಿಂದ ಅವುನೂ ಇರತನೆ, ಅಲ್ದೆ ಮಧ್ಯೆಮಧ್ಯೆ ಬಾಯಿ ಹಾಕಿ ಯಾರೂ ಮಾತಾಡಕೆ ಬಿಡಲ್ಲ. ಅಂತ ಜಾಗದಲ್ಲಿ ನಾನ್ಯಾಕೆ ಸಾರ್.”
“ನೀವು ಬನ್ನಿ, ಅವುರು ಬೇರೆ ಜಾಗದಲ್ಲಿ ಮನಗತಕ್ಕಂತ ವ್ಯವಸ್ಥೆ ಮಾಡ್ತಿನಿ.”
“ಅದರಗತ್ಯ ಇಲ್ಲ ಸಾರ್, ಶಿವರಾಮೇಗೌಡ ಅವುನ ಕಾರಲ್ಲೇ ಮನಿಕತ್ತನೆ, ಭೋಜೇ ಗೌಡನೂ ಅಂಗೆಯಾ, ಅದಿರ್ಲಿ ತಾವು ಇದ್ದಕ್ಕಿದ್ದಂಗೆ ಗ್ರಾಮ ವಾಸ್ತವ್ಯಕ್ಕೆ ಹೊಂಟಿದ್ಯಾಕೆ.”
“ಈಚೆಗೆ ಬೆಂಗಳೂರಿನಲ್ಲಿ ಇರಕ್ಕಾಗ್ತಾಯಿಲ್ಲ ಕಂಡ್ರಿ.”
“ಇದು ನಿಮ್ಮೊಬ್ಬರ ಸಮಸ್ಯೆ ಅಲ್ಲ ಸಾರ್. ಇಡೀ ಬೆಂಗಳೂರ ಜನಕ್ಕೆ ಅಂಗಾಗ್ಯದೆ.”
“ಅವುರದೇನಾದ್ರು ಆಗ್ಲಿ, ನನ್ನ ಈ ಸಂದರ್ಭದ ಪರಿಸ್ಥಿತಿಯನ್ನ ನೋಡೋದಾದ್ರೆ, ನಾನು ಎಲ್ಲಾದ್ರು ಹೊರಗೋಗಲೇಬೇಕು. ನಾನು ತುಂಬಾ ಭರವಸೆ ಇಟ್ಟಿದ್ದಂತಹ ಮಂಡ್ಯ ಜಿಲ್ಲೆ ಎಮ್ಮೆಲ್ಲೆಗಳು ಮೋಸ ಮಾಡಿದ್ರು. ನಮ್ಮ ಪಕ್ಷದವರೆ ನನಗೆ ತೊಂದರೆ ಕೊಡತಕಂತ ತೀರ್ಮಾನ ತಗೊಂಡ್ರು. ರಾತ್ರೆ ಆದ್ರು ಕೂಡ ಕಾಂಗ್ರೆಸ್‍ನವರು ಮನೆಹತ್ರ ಬಂದು ಏನೇನೊ ಕೇಳ್ತರೆ. ಅವು ಬೆದರಿಕೆ ತರ ಇರತವೆ. ಇನ್ನ ಬಿಜೆಪಿಗಳ ಭಯೋತ್ಪಾದನೆ ಬೇರೆ.”
“ಒಳ್ಳೆ ಪದ ಬಳಸಿದ್ರಿ ಸಾ. ಬಿಜೆಪಿಗಳದು ಯಾವತ್ತೂ ಭಯೋತ್ಪಾದನೆನೆ. ಸಾಬರ ಕಂಡು ಹೆದ್ರಿಕಂಡು ಅಂಗಾಡ್ತವವು.”
“ಅದೇನಾದ್ರು ಆಗ್ಲಿ. ನನ್ನ ಮನಸ್ಸು ಹಾಳಾಗಿರತಕ್ಕಂತ ಈ ಸಮಯದಲ್ಲಿ ಗ್ರಾಮ ವಾಸ್ತವ್ಯ ಸೂಕ್ತ.”
“ಆರೋಗ್ಯ ಹ್ಯಾಗಿದೆ ಸಾ.”
“ಚೆನ್ನಾಗಿದೀನಿ.”
“ಮತ್ತೆ ದೇವೇಗೌಡ್ರು ತುಂಬ ಅಪಾಯದ ಸ್ಥಿತೀಲಿದಾನೆ ಕುಮಾರ ಅಂದ್ರು.”
“ಅದು ಮಂಡ್ಯದಲ್ಲಿ ನಿಖಿಲ್ ನಿಲ್ಲಿಸಬೇಕಾದ್ರೆ, ಏನಾದ್ರು ಒಂದು ಪ್ರಮುಖವಾದ ಕಾರಣ ಬೇಕಾಗಿದ್ದ ಸನ್ನಿವೇಶದಲ್ಲಿ ನಮ್ಮ ತಂದೆ ಹಾಗಂದಿದ್ರು.”
“ಥೂ.. ಏನಾಯ್ತು ಗೊತ್ತ ಸಾರ್, ನೀವು ಕಾಂಗ್ರೆಸ್‍ನಿಂದ ಮಂಜೇಗೌಡ ಅಂತ ಕೊಂಡಕೊಂಡ್ರಲ್ಲ ಅವುನೇನು ಮಾಡಿದ ಗೊತ್ತೇ, ಕುಮಾರಣ್ಣ ಜಾಸ್ತಿ ದಿನ ಇರದಿಲ್ಲ. ನಿಖಿಲ್‍ಗೆ ಓಟು ಮಾಡಿ ಅಂತ ಇಡೀ ಜಿಲ್ಲೇಲಿ ಹೇಳಿಕಂಡು ತಿರುಗಿದ. ಅಂಗಾಗಿ ಜನ ನಿಮ್ಮ ಬಗ್ಗೆ ಕ್ಯಟ್ಟ ನಿರೀಕ್ಷೆಲವುರೆ.”
“ಇರ್ಲಿ ಬಿಡಿ, ಜನ ನಮ್ಮ ಬಗ್ಗೆ ಅಂಗನ್ನಕಂಡ್ರೆ ನನ್ನ ಆಯಸ್ಸು ಜಾಸ್ತಿಯಾಯ್ತದಂತೆ, ನಮ್ಮ ತಂದೆ ಹಾಗೇಳತಿದ್ರು.”
“ಗ್ರಾಮ ವಾಸ್ತವ್ಯದಲ್ಲಿ ಏನು ಮಾಡ್ತಿರಿ ಸಾರ್.”
“ನಮ್ಮ ಅಧಿಕಾರಿಗಳು ನಾನು ಆಯ್ಕೆ ಮಾಡಿದ ಗ್ರಾಮಕ್ಕೆ ಹೋಗಿ ಒಂದು ಮನೇನ ವಶಕ್ಕೆ ತಗೊಳ್ತರೆ. ಅಲ್ಲಿ ನನ್ನ ವಾಸ್ತವ್ಯಕ್ಕೆ ಏನೇನು ಬೇಕೊ ಅದನ್ನ ಅರೇಂಜ್ ಮಾಡ್ತರೆ. ನಾನು ಆ ಮನೆ ಜನಗಳ ಜೊತೆ ಕುಳಿತು ಊಟ ಮಾಡ್ತಿನಿ, ಚರ್ಚೆ ಮಾಡ್ತಿನಿ. ಈ ಗ್ರಾಮದ ಅಭಿವೃದ್ಧಿ ಹೇಗೆ ಮಾಡಬೇಕು ಅನತಕ್ಕಂತ ಸಲಹೆ ಕೇಳ್ತಿನಿ.”
“ಒಳ್ಳೆ ಕಾರ್ಯಕ್ರಮ ಸಾರ್, ಆದ್ರು ಕರ್ನಾಟಕದಲ್ಲಿ 28 ಸಾವಿರ ಹಳ್ಳಿಗಳಿವೆ ಅವುಗಳ ಅಭಿವೃದ್ಧಿ ಹೇಗೆ.”
“ಇಪ್ಪತ್ತೆಂಟು ಸಾವಿರ ಹಳ್ಳಿಗಳಿಗೂ ಹೋಗಿ ನಾನು ಗ್ರಾಮ ವಾಸ್ತವ್ಯ ಮಾಡಕ್ಕಾಗಲ್ಲ.”
“ಅಷ್ಟು ದಿನ ಇರಬೇಕಲ್ಲ ಸಾ ನೀವು.”
“ಇರದರ ಪ್ರಶ್ನೆ ಅಲ್ಲ. ಗ್ರಾಮಗಳನ್ನ ಹೇಗೆ ಅಭಿವೃದ್ಧಿ ಮಾಡಬೇಕು ಅನತಕ್ಕಂತ ವಿಷಯಗಳನ್ನ ವಿಧಾನಸೌಧದಲ್ಲಿ ಕುಳಿತು ಚರ್ಚೆಮಾಡದಕ್ಕಿಂತ ಗ್ರಾಮಕ್ಕೆ ಹೋದ್ರೆ ಒಳ್ಳೆದಲವೆ.”
“ಸರಿ, ವಿಧಾನಸೌಧದ ರಾಶಿ ಫೈಲ್‍ಗಳ ನೋಡದ್ಯಾವಾಗ ನೀವು.”
“ಅದಕ್ಕೆಲ್ಲಾ ಜನ ಇದಾರೆ.”
“ನಿಮ್ಮ ಕುಟುಂಬದಲ್ಲಾ.”
“ನಮ್ಮ ಕುಟುಂಬ ಅಂದ್ರು ತಪ್ಪಾಗಲಾರ್ದು. ಯಾಕೆ ಅಂದ್ರೆ ನಮ್ಮ ಕುಟುಂಬದಲ್ಲಿ ಕೆಎಎಸ್ ಅಧಿಕಾರಿಯಾಗಿದ್ದವುರು ಇದಾರೆ. ಸತತ ಮಂತ್ರಿಗಳಾಗಿದ್ದವರು ಇದಾರೆ. ಮಾಜಿ ಪ್ರಧಾನಿಗಳಿದಾರೆ. ಆದ್ರಿಂದ ಆಡಳಿತ ನಡೆಸತಕ್ಕಂತ ವಿಷಯದಲ್ಲಿ ನಮಗೆ ಯಾವ ಭಯವೂ ಇಲ್ಲ.”
“ಗ್ರಾಮಾಭಿವೃದ್ಧಿ ಬಗ್ಗೆ ಒಂದೆರಡು ಸಲಹೆ ಕೊಡ್ಳ ಸಾರ್.”
“ಕೊಡಿ, ನಾವು ದನಕಾಯೋ ಹುಡುಗನಿಂದ್ಲೂ ಸಲಹೆ ತಗೊಳ್ತಿವಿ.”
“ನಾನು ಕುರಿಕಾದಿದ್ದೆ ಸಾ.”
“ಇನ್ನೂ ಒಳ್ಳೆದಲವ, ನಾವು ದನಕಾದಿದ್ದೊ, ನೀವು ಕುರಿಕಾದಿದ್ರಿ. ಆದ್ರಿಂದ ನಾವಿಬ್ರು ಅಣ್ಣತಮ್ಮಂದಿರಿದ್ದಂಗೆ.”
“ಏನಿಲ್ಲ ಸಾರ್, ಗ್ರಾಮದ ಉದ್ದಾರ ಒಂದು ನಾಲ್ಕಾರು ಸಮಸ್ಯೆನ ಒಳಗೊಂಡದೆ ಸಾರ್. ರಸ್ತೆ, ಕರೆಂಟು, ಕುಡಿಯೋ ನೀರು, ಒಳ್ಳೆ ಸ್ಕೂಲು ಇಷ್ಟೆ ಸಾರ್.”
“ಅದಕ್ಕೆ ನಾನು ಸ್ಕೂಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಹೊರಟಿರೋದು.”
“ಒಳ್ಳೆ ತೀರ್ಮಾನ ಸಾರ್, ಒಂಥರ ಐತಿಹಾಸಿಕ ತೀರ್ಮಾನ.”
“ಐತಿಹಾಸಿಕ ಯಾಕ್ರಿ?”
“ನೀವು ಎಡೂರಪ್ಪನ ಜೊತೆ ಸರಕಾರ ಮಾಡಿದಾಗ ಗ್ರಾಮ ವಾಸ್ತವ್ಯಕ್ಕೆ ಹೊರಟಿದ್ರಿ. ಆಯ್ಕೆ ಮಾಡಿದ ಊರಿನ ಮಹಿಳೆ ನಿಮಗಾಗಿ ಬೆಡ್ ರೂಮನ ಶೃಂಗಾರ ಮಾಡಿದ್ಲು ಇದು ಗೊತ್ತಾಗಿ ನೀವು ಐಬಿಗೆ ಓಡಿದ್ರಿ ಅಲವ ಸಾರ್.”
“ಹೌದು ಕಂಡ್ರೀ.”
ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...