Homeಅಂಕಣಗಳುಈಚೆಗೆ ಬೆಂಗಳೂರಲ್ಲಿ ಇರಕಾಗ್ತಾಯಿಲ್ಲ ಕಂಡ್ರಿ: ಯಾಹೂ ಜೊತೆ ಕುಮಾರಸ್ವಾಮಿ ಮಾತುಕತೆ

ಈಚೆಗೆ ಬೆಂಗಳೂರಲ್ಲಿ ಇರಕಾಗ್ತಾಯಿಲ್ಲ ಕಂಡ್ರಿ: ಯಾಹೂ ಜೊತೆ ಕುಮಾರಸ್ವಾಮಿ ಮಾತುಕತೆ

- Advertisement -
- Advertisement -

 

ಗಿರೀಶ್ ಕಾರ್ನಾಡ್‍ರವರ ಸಾವಿನ ನಂತರ ನಡೆದುಕೊಂಡ ರೀತಿಗೆ ಅವರ ವೈರಿಗಳೂ ಮೆಚ್ಚಿ ತಲೆದೂಗುತ್ತಿದ್ದಾರಂತಲ್ಲಾ. ಇದರ ನಡುವೆ ವೀರಶೈವರ ಜಾಲತಾಣಗಳು ಕಾರ್ನಾಡರ ಸಾವನ್ನು ಸಂಭ್ರಮಿಸಿದ್ದು ನೋಡಿದ ಲಿಂಗಾಯತರು, ‘ಥೂ ಎಷ್ಟೇ ಆಗಲಿ ಇವುರು ಅಂಥೋರೆಯ’ ಎಂದು ಉದ್ಘಾರ ತೆಗೆದರಂತಲ್ಲಾ. ಅದಿರಲಿ ಈ ವೀರಶೈವರಿಗೇಕೆ ಕಾರ್ನಾಡರ ಸಾವಿಗೆ ಸಂಭ್ರಮಿಸಿದರು ಎಂದು ನೋಡಿದರೆ, ಕಾರ್ನಾಡರ ‘ತಲೆದಂಡ’ ಕೃತಿ ಸಾಕ್ಷ್ಯಾಧಾರಗಳನ್ನು ಒದಗಿಸುತ್ತದಂತಲ್ಲಾ. ಹನ್ನೆರಡನೇ ಶತಮಾನದಲ್ಲಿ ನಡೆದ ಬಸವಣ್ಣನ ಕೊಲೆ ಇಪ್ಪತ್ತೊಂದನೆ ಶತಮಾನದಲ್ಲೂ ಕೆಲವರನ್ನು ಬೆಚ್ಚಿಸುತ್ತದೆ ಎಂದರೆ ಆಶ್ಚರ್ಯ. ಗಾಂಧೀ ಕೊಲೆಯೂ ಹಾಗೇ ಅಲ್ಲವೆ. ಕೊಂದವನು ನಮ್ಮ ಜಾತಿ ಅಲ್ಲ ಎಂದರು. ಪತ್ತೆ ಹಚ್ಚಿ ಹೇಳಿದಾಗ ನಮ್ಮ ಸಂಘದ ಸದಸ್ಯನಲ್ಲ ಎಂದರು. ಅದನ್ನೂ ಪತ್ತೆ ಹಚ್ಚಿದಾಗ ಸಂಘ ತೊರೆದು ಬಹಳ ವರ್ಷವಾಗಿತ್ತು ಎಂದರು. ಎಲ್ಲಾ ಮುಗಿದು ಮರಣ ದಂಡನೆಯಾದಾಗ ಮನುಧರ್ಮದುದ್ದಾರಕ್ಕೆ ಹುತಾತ್ಮನಾದ ಮಹಾತ್ಯಾಗಿ ಎಂದರು. ಅದೆಲ್ಲಾ ಆಗಿ ಮನುಧರ್ಮ ಗ್ರಂಥವನ್ನು ಪುನರ್ಮುದ್ರಣ ಮಾಡುವ ವ್ಯಾಪಾರಿಯಂತೆ ಕಾಣುವ ಮೋದಿ ಪ್ರಧಾನಿಯಾದ ಕೂಡಲೆ ಗೋಡ್ಸೆಗೆ ಗುಡಿಕಟ್ಟಿದರಂತಲ್ಲಾ ಥೂತ್ತೇರಿ.

*****

ಎಡೂರಪ್ಪನ ಜೊತೆ ಇಪ್ಪತ್ತು ತಿಂಗಳು ತೆಕ್ಕೆ ಬಡಿದುಕೊಂಡು ರಾಜ್ಯಾಡಳಿತ ನಡೆಸಿದ ಕುಮಾರಣ್ಣ, ಜನಾನುರಾಗಿ ಆಗಿದ್ದರು. ಅದಕ್ಕೆ ಕಾರಣ, ಅವರ ಗ್ರಾಮ ವಾಸ್ತವ್ಯವಂತೆ. ಆದರೀಗ ಕುಮಾರಣ್ಣ ಮೊದಲಿನ ವರ್ಚಸ್ಸು ಕಳೆದುಕೊಂಡಿದ್ದಾರೆ. ಮಂಡ್ಯದಲ್ಲಿ ಮಗನನ್ನ ಗೆಲ್ಲಿಸಲಾಗಿಲ್ಲ. ತುಮಕೂರಿನಲ್ಲಿ ಅಪ್ಪನನ್ನು ಉಳಿಸಿಕೊಳ್ಳಲಾಗಲಿಲ್ಲ. ಹಾಸನದಲ್ಲಿ ತನ್ನ ಮತ್ಸರಕ್ಕೆ ತುತ್ತಾಗಿರುವ ಭವಾನಿ ಪುತ್ರ ಗೆದ್ದು ಮೆರೆಯುತ್ತಿದ್ದಾನೆ. ಕಾಂಗೈಗಳು ನಂಬಿಕೆಗೆ ಯೋಗ್ಯವಾಗಿ ವರ್ತಿಸುತ್ತಿಲ್ಲ. ಸಿದ್ಧರಾಮಯ್ಯ ಕರ್ಣನಂತೆ ಮಾತನಾಡಿದರೂ ಶಕುನಿಯಾಗಿದ್ದಾರೆ. ಇಂತೆಲ್ಲಾ ತಲೆತಿನ್ನುವ ಸಂಗತಿಗಳಿಂದ ದೂರವಾಗಿ, ನೆಮ್ಮದಿಯಿಂದ ನಾಲ್ಕು ಗಂಟೆ ನಿದ್ದೆ ಮಾಡಬೇಕೆಂದರೆ, ಅದು ಗ್ರಾಮ ವಾಸ್ತವ್ಯದಿಂದ ಮಾತ್ರ ಸಾಧ್ಯ ಎಂದು ಸೂಕ್ತ ಗ್ರಾಮ ಶೋಧನೆಗೆ ತೊಡಗಿರುವಾಗ ಅವರಿಗೆ ಶುಭ ಹಾರೈಸುವುದು ನಮ್ಮ ಕರ್ತವ್ಯ. ಹಾಗಾಗಿ ಫೋನ್ ಮಾಡಿದರೆ ರಿಂಗಾಯ್ತು.
ರಿಂಗ್ ಟೋನ್: ಹಳ್ಳಿಯಾದರೇನು ಶಿವಾ ದಿಳ್ಳಿಯಾದರೇನು ಶಿವಾ ಜನರೆಲ್ಲಾ ಒಂದೇ ಶಿವಾ ಜನರೆಲ್ಲಾ…….
“ಹೇಳ್ರಿ ಯಾಹು ಏನ್ಸಮಾಚಾರ”
“ಸುಮ್ಮನೆ ಮಾತಾಡಬೇಕು ಅನ್ನುಸ್ತು ಸಾರ್.”
“ಒಂದು ಕೆಲಸ ಮಾಡಿ, ನಾನು ಕರ್ನಾಟಕದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡ್ತಕಂತ ಒಂದು ತೀರ್ಮಾನ ಏನು ತಗೊಂಡಿದ್ದೀನಿ. ಅದರ ಪ್ರಕಾರ ಗ್ರಾಮ ವಾಸ್ತವ್ಯವನ್ನ ಆರಂಭಿಸಬೇಕು ಅನ್ನೊ ತೀರ್ಮಾನದ ಪ್ರಕಾರ ನಡಕೊಳನಾ ಅಂತ ಇದೀನಿ.”
“ಒಳ್ಳೆ ಆಲೋಚನೆ ಸರ್, ಬೇಗ ಹೊರಡಿ.”
“ನೋಡಿ, ನಿಮ್ಮ ಬಾಯಲ್ಲೂ ಅದೇ ಬರ್ತಾಯಿದೆ. ಅಲ್ಲಿ ನಾನು ಗ್ರಾಮ ವಾಸ್ತವ್ಯದ ಜಾಗದಲ್ಲಿ ಮಾತ್ನಾಡಕ್ಕೆ ಯಾರು ಇರಲ್ಲ. ನೀವು ಬಂದ್ರೆ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡ್ತಕಂತ ಕಾರ್ಯಕ್ರಮ ಹಾಯ್ಕಬವುದು.”
“ಸರಿ ಸಾರ್, ಆದ್ರೆ ನಿಮ್ಮ ಗ್ರಾಮ ವಾಸ್ತವ್ಯದಲ್ಲಿ ಭೋಜೇಗೌಡ ಇರ್ತನೆ, ಇನ್ನ ಶಿವರಾಮೇಗೌಡ ಈಗ ನಿರುದ್ಯೋಗಿ ಆಗಿರದ್ರಿಂದ ಅವುನೂ ಇರತನೆ, ಅಲ್ದೆ ಮಧ್ಯೆಮಧ್ಯೆ ಬಾಯಿ ಹಾಕಿ ಯಾರೂ ಮಾತಾಡಕೆ ಬಿಡಲ್ಲ. ಅಂತ ಜಾಗದಲ್ಲಿ ನಾನ್ಯಾಕೆ ಸಾರ್.”
“ನೀವು ಬನ್ನಿ, ಅವುರು ಬೇರೆ ಜಾಗದಲ್ಲಿ ಮನಗತಕ್ಕಂತ ವ್ಯವಸ್ಥೆ ಮಾಡ್ತಿನಿ.”
“ಅದರಗತ್ಯ ಇಲ್ಲ ಸಾರ್, ಶಿವರಾಮೇಗೌಡ ಅವುನ ಕಾರಲ್ಲೇ ಮನಿಕತ್ತನೆ, ಭೋಜೇ ಗೌಡನೂ ಅಂಗೆಯಾ, ಅದಿರ್ಲಿ ತಾವು ಇದ್ದಕ್ಕಿದ್ದಂಗೆ ಗ್ರಾಮ ವಾಸ್ತವ್ಯಕ್ಕೆ ಹೊಂಟಿದ್ಯಾಕೆ.”
“ಈಚೆಗೆ ಬೆಂಗಳೂರಿನಲ್ಲಿ ಇರಕ್ಕಾಗ್ತಾಯಿಲ್ಲ ಕಂಡ್ರಿ.”
“ಇದು ನಿಮ್ಮೊಬ್ಬರ ಸಮಸ್ಯೆ ಅಲ್ಲ ಸಾರ್. ಇಡೀ ಬೆಂಗಳೂರ ಜನಕ್ಕೆ ಅಂಗಾಗ್ಯದೆ.”
“ಅವುರದೇನಾದ್ರು ಆಗ್ಲಿ, ನನ್ನ ಈ ಸಂದರ್ಭದ ಪರಿಸ್ಥಿತಿಯನ್ನ ನೋಡೋದಾದ್ರೆ, ನಾನು ಎಲ್ಲಾದ್ರು ಹೊರಗೋಗಲೇಬೇಕು. ನಾನು ತುಂಬಾ ಭರವಸೆ ಇಟ್ಟಿದ್ದಂತಹ ಮಂಡ್ಯ ಜಿಲ್ಲೆ ಎಮ್ಮೆಲ್ಲೆಗಳು ಮೋಸ ಮಾಡಿದ್ರು. ನಮ್ಮ ಪಕ್ಷದವರೆ ನನಗೆ ತೊಂದರೆ ಕೊಡತಕಂತ ತೀರ್ಮಾನ ತಗೊಂಡ್ರು. ರಾತ್ರೆ ಆದ್ರು ಕೂಡ ಕಾಂಗ್ರೆಸ್‍ನವರು ಮನೆಹತ್ರ ಬಂದು ಏನೇನೊ ಕೇಳ್ತರೆ. ಅವು ಬೆದರಿಕೆ ತರ ಇರತವೆ. ಇನ್ನ ಬಿಜೆಪಿಗಳ ಭಯೋತ್ಪಾದನೆ ಬೇರೆ.”
“ಒಳ್ಳೆ ಪದ ಬಳಸಿದ್ರಿ ಸಾ. ಬಿಜೆಪಿಗಳದು ಯಾವತ್ತೂ ಭಯೋತ್ಪಾದನೆನೆ. ಸಾಬರ ಕಂಡು ಹೆದ್ರಿಕಂಡು ಅಂಗಾಡ್ತವವು.”
“ಅದೇನಾದ್ರು ಆಗ್ಲಿ. ನನ್ನ ಮನಸ್ಸು ಹಾಳಾಗಿರತಕ್ಕಂತ ಈ ಸಮಯದಲ್ಲಿ ಗ್ರಾಮ ವಾಸ್ತವ್ಯ ಸೂಕ್ತ.”
“ಆರೋಗ್ಯ ಹ್ಯಾಗಿದೆ ಸಾ.”
“ಚೆನ್ನಾಗಿದೀನಿ.”
“ಮತ್ತೆ ದೇವೇಗೌಡ್ರು ತುಂಬ ಅಪಾಯದ ಸ್ಥಿತೀಲಿದಾನೆ ಕುಮಾರ ಅಂದ್ರು.”
“ಅದು ಮಂಡ್ಯದಲ್ಲಿ ನಿಖಿಲ್ ನಿಲ್ಲಿಸಬೇಕಾದ್ರೆ, ಏನಾದ್ರು ಒಂದು ಪ್ರಮುಖವಾದ ಕಾರಣ ಬೇಕಾಗಿದ್ದ ಸನ್ನಿವೇಶದಲ್ಲಿ ನಮ್ಮ ತಂದೆ ಹಾಗಂದಿದ್ರು.”
“ಥೂ.. ಏನಾಯ್ತು ಗೊತ್ತ ಸಾರ್, ನೀವು ಕಾಂಗ್ರೆಸ್‍ನಿಂದ ಮಂಜೇಗೌಡ ಅಂತ ಕೊಂಡಕೊಂಡ್ರಲ್ಲ ಅವುನೇನು ಮಾಡಿದ ಗೊತ್ತೇ, ಕುಮಾರಣ್ಣ ಜಾಸ್ತಿ ದಿನ ಇರದಿಲ್ಲ. ನಿಖಿಲ್‍ಗೆ ಓಟು ಮಾಡಿ ಅಂತ ಇಡೀ ಜಿಲ್ಲೇಲಿ ಹೇಳಿಕಂಡು ತಿರುಗಿದ. ಅಂಗಾಗಿ ಜನ ನಿಮ್ಮ ಬಗ್ಗೆ ಕ್ಯಟ್ಟ ನಿರೀಕ್ಷೆಲವುರೆ.”
“ಇರ್ಲಿ ಬಿಡಿ, ಜನ ನಮ್ಮ ಬಗ್ಗೆ ಅಂಗನ್ನಕಂಡ್ರೆ ನನ್ನ ಆಯಸ್ಸು ಜಾಸ್ತಿಯಾಯ್ತದಂತೆ, ನಮ್ಮ ತಂದೆ ಹಾಗೇಳತಿದ್ರು.”
“ಗ್ರಾಮ ವಾಸ್ತವ್ಯದಲ್ಲಿ ಏನು ಮಾಡ್ತಿರಿ ಸಾರ್.”
“ನಮ್ಮ ಅಧಿಕಾರಿಗಳು ನಾನು ಆಯ್ಕೆ ಮಾಡಿದ ಗ್ರಾಮಕ್ಕೆ ಹೋಗಿ ಒಂದು ಮನೇನ ವಶಕ್ಕೆ ತಗೊಳ್ತರೆ. ಅಲ್ಲಿ ನನ್ನ ವಾಸ್ತವ್ಯಕ್ಕೆ ಏನೇನು ಬೇಕೊ ಅದನ್ನ ಅರೇಂಜ್ ಮಾಡ್ತರೆ. ನಾನು ಆ ಮನೆ ಜನಗಳ ಜೊತೆ ಕುಳಿತು ಊಟ ಮಾಡ್ತಿನಿ, ಚರ್ಚೆ ಮಾಡ್ತಿನಿ. ಈ ಗ್ರಾಮದ ಅಭಿವೃದ್ಧಿ ಹೇಗೆ ಮಾಡಬೇಕು ಅನತಕ್ಕಂತ ಸಲಹೆ ಕೇಳ್ತಿನಿ.”
“ಒಳ್ಳೆ ಕಾರ್ಯಕ್ರಮ ಸಾರ್, ಆದ್ರು ಕರ್ನಾಟಕದಲ್ಲಿ 28 ಸಾವಿರ ಹಳ್ಳಿಗಳಿವೆ ಅವುಗಳ ಅಭಿವೃದ್ಧಿ ಹೇಗೆ.”
“ಇಪ್ಪತ್ತೆಂಟು ಸಾವಿರ ಹಳ್ಳಿಗಳಿಗೂ ಹೋಗಿ ನಾನು ಗ್ರಾಮ ವಾಸ್ತವ್ಯ ಮಾಡಕ್ಕಾಗಲ್ಲ.”
“ಅಷ್ಟು ದಿನ ಇರಬೇಕಲ್ಲ ಸಾ ನೀವು.”
“ಇರದರ ಪ್ರಶ್ನೆ ಅಲ್ಲ. ಗ್ರಾಮಗಳನ್ನ ಹೇಗೆ ಅಭಿವೃದ್ಧಿ ಮಾಡಬೇಕು ಅನತಕ್ಕಂತ ವಿಷಯಗಳನ್ನ ವಿಧಾನಸೌಧದಲ್ಲಿ ಕುಳಿತು ಚರ್ಚೆಮಾಡದಕ್ಕಿಂತ ಗ್ರಾಮಕ್ಕೆ ಹೋದ್ರೆ ಒಳ್ಳೆದಲವೆ.”
“ಸರಿ, ವಿಧಾನಸೌಧದ ರಾಶಿ ಫೈಲ್‍ಗಳ ನೋಡದ್ಯಾವಾಗ ನೀವು.”
“ಅದಕ್ಕೆಲ್ಲಾ ಜನ ಇದಾರೆ.”
“ನಿಮ್ಮ ಕುಟುಂಬದಲ್ಲಾ.”
“ನಮ್ಮ ಕುಟುಂಬ ಅಂದ್ರು ತಪ್ಪಾಗಲಾರ್ದು. ಯಾಕೆ ಅಂದ್ರೆ ನಮ್ಮ ಕುಟುಂಬದಲ್ಲಿ ಕೆಎಎಸ್ ಅಧಿಕಾರಿಯಾಗಿದ್ದವುರು ಇದಾರೆ. ಸತತ ಮಂತ್ರಿಗಳಾಗಿದ್ದವರು ಇದಾರೆ. ಮಾಜಿ ಪ್ರಧಾನಿಗಳಿದಾರೆ. ಆದ್ರಿಂದ ಆಡಳಿತ ನಡೆಸತಕ್ಕಂತ ವಿಷಯದಲ್ಲಿ ನಮಗೆ ಯಾವ ಭಯವೂ ಇಲ್ಲ.”
“ಗ್ರಾಮಾಭಿವೃದ್ಧಿ ಬಗ್ಗೆ ಒಂದೆರಡು ಸಲಹೆ ಕೊಡ್ಳ ಸಾರ್.”
“ಕೊಡಿ, ನಾವು ದನಕಾಯೋ ಹುಡುಗನಿಂದ್ಲೂ ಸಲಹೆ ತಗೊಳ್ತಿವಿ.”
“ನಾನು ಕುರಿಕಾದಿದ್ದೆ ಸಾ.”
“ಇನ್ನೂ ಒಳ್ಳೆದಲವ, ನಾವು ದನಕಾದಿದ್ದೊ, ನೀವು ಕುರಿಕಾದಿದ್ರಿ. ಆದ್ರಿಂದ ನಾವಿಬ್ರು ಅಣ್ಣತಮ್ಮಂದಿರಿದ್ದಂಗೆ.”
“ಏನಿಲ್ಲ ಸಾರ್, ಗ್ರಾಮದ ಉದ್ದಾರ ಒಂದು ನಾಲ್ಕಾರು ಸಮಸ್ಯೆನ ಒಳಗೊಂಡದೆ ಸಾರ್. ರಸ್ತೆ, ಕರೆಂಟು, ಕುಡಿಯೋ ನೀರು, ಒಳ್ಳೆ ಸ್ಕೂಲು ಇಷ್ಟೆ ಸಾರ್.”
“ಅದಕ್ಕೆ ನಾನು ಸ್ಕೂಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಹೊರಟಿರೋದು.”
“ಒಳ್ಳೆ ತೀರ್ಮಾನ ಸಾರ್, ಒಂಥರ ಐತಿಹಾಸಿಕ ತೀರ್ಮಾನ.”
“ಐತಿಹಾಸಿಕ ಯಾಕ್ರಿ?”
“ನೀವು ಎಡೂರಪ್ಪನ ಜೊತೆ ಸರಕಾರ ಮಾಡಿದಾಗ ಗ್ರಾಮ ವಾಸ್ತವ್ಯಕ್ಕೆ ಹೊರಟಿದ್ರಿ. ಆಯ್ಕೆ ಮಾಡಿದ ಊರಿನ ಮಹಿಳೆ ನಿಮಗಾಗಿ ಬೆಡ್ ರೂಮನ ಶೃಂಗಾರ ಮಾಡಿದ್ಲು ಇದು ಗೊತ್ತಾಗಿ ನೀವು ಐಬಿಗೆ ಓಡಿದ್ರಿ ಅಲವ ಸಾರ್.”
“ಹೌದು ಕಂಡ್ರೀ.”
ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...