Homeಕರ್ನಾಟಕಕುಮಟಾ: ಕಿಂಡಿ ಅಣೆಕಟ್ಟು ಕೃತಕ ಪ್ರವಾಹ ತರುವ ಭೀತಿ - ಹಳ್ಳಿಗರ ವಿರೋಧ

ಕುಮಟಾ: ಕಿಂಡಿ ಅಣೆಕಟ್ಟು ಕೃತಕ ಪ್ರವಾಹ ತರುವ ಭೀತಿ – ಹಳ್ಳಿಗರ ವಿರೋಧ

- Advertisement -
- Advertisement -

ಪಶ್ಚಿಮ ಘಟ್ಟದ ತಪ್ಪಲಲ್ಲಿರುವ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ 1,400 ಕಿಂಡಿ ಅಣೆಕಟ್ಟು ಕಟ್ಟುವ ಸಣ್ಣ ನೀರಾವರಿ ಮಂತ್ರಿ ಮಾಧುಸ್ವಾಮಿ ಮತ್ತು ಅವರ ಸಲೆಹೆಗಾರ ಅಧಿಕಾರಿಗಳ ನೀರಾವರಿ ಯೋಜನೆಯ ಒಂದು ಸ್ಯಾಂಪಲ್ ಅನ್ನು ಉತ್ತರ ಕನ್ನಡದ ಕುಮಟಾ ತಾಲೂಕಿನ ಬೊಗರಿಬೈಲ್ ಮತ್ತು ಉಪ್ಪಿನ ಪಟ್ಟಣದ ನಡುವೆ ಕೈಗೆತ್ತಿಕೊಳ್ಳಲಾಗುತ್ತಿದೆ.

ಅಘನಾಸಿನಿ ನದಿಗೆ 200 ಕೋಟಿ ರೂ. ಖರ್ಚಿನಲ್ಲಿ ಕಿರು ಅಣೆಕಟ್ಟು ಕಟ್ಟಿ 11 ಗ್ರಾಮ ಪಂಚಾಯಿತಿ ಪ್ರದೇಶಗಳಿಗೆ ಕುಡಿಯುವ ನೀರೊದಗಿಸುವುದು ಮತ್ತು ಕೆಲವು ಎಕರೆ ಕೃಷಿ ಜಮೀನಿಗೆ ನೀರಾವರಿ ಸೌಲಭ್ಯ ಕೊಡುವುದು ಸದರಿ ಯೋಜನೆಯಯ ಘೋಷಿತ ಉದ್ದೇಶ. ಆದರೆ ಈ ಯೋಜನೆಯಿಂದ ನದಿಯಂಚಿನ ಹಳ್ಳಿಗಳಲ್ಲಿ ಮಳೆಗಾಲದಲ್ಲಿ ಕೃತಕ ಪ್ರವಾಹ ಸೃಷ್ಟಿಯಾಗುವ ಮತ್ತು ಅಣೆಕಟ್ಟೆಯ ಕೆಳ ಭಾಗದಲ್ಲಿ ಬೇಸಿಗೆಯಲ್ಲಿ ನೀರಿಗೆ ಬರ ಬರುವ ಆತಂಕ ಹುಟ್ಟಿಸಿದೆ. ರಾಜ್ಯ ನೀರಾವರಿ ನಿಗಮದ ಈ ಯೋಜನೆಯನ್ನು ಪುನರ್ ಪರಿಶೀಲಿಸಬೇಕೆಂದು ಸ್ಥಳೀಯ ಜನರು ಒಕ್ಕೊರಲಲ್ಲಿ ಒತ್ತಾಯಿಸುತ್ತಿದ್ದಾರೆ.

ಅಘನಾಶಿನಿ ನದಿಯಾಳದಿಂದ ಒಂದೂವರೆ ಮೀಟರ್ ಎತ್ತರದ ಗೋಡೆ ಕಟ್ಟಲಾಗುತ್ತದೆ. ಅದರ ಮೇಲೆ ಕಿಂಡಿ ಆಣೆಕಟ್ಟು ನಿರ್ಮಿಸಲಾಗವುದು. ಮೇಲ್ಭಾಗದಲ್ಲಿ ಸೇತುವೆ, ರಸ್ತೆ ಮಾಡಲಾಗುವುದು. ಅಣೆಕಟ್ಟೆಯಲ್ಲಿ 0.2 ಟಿ.ಎಮ್.ಸಿ. ಅಡಿ ನೀರು ಸಂಗ್ರಹಿಲಾಗುತ್ತದೆ. ಕಾಮಗಾರಿ ಪೂರ್ಣಗೊಳ್ಳಲು ಎರಡು ವರ್ಷ ಬೇಕಾಗಬಹುದೆಂದು ಕಾಮಗಾರಿಯ ಗುತ್ತಿಗೆ ಪಡೆದಿರುವ ಬೆಂಗಳೂರಿನ ಇ.ಐ.ಟೆಕ್ನಾಲಜಿ ಸಮಸ್ಥೆ ಮತ್ತು ನೀರಾವರಿ ನಿಗಮದ ಅಧಿಕಾರಿಗಳು ಹೇಳುತ್ತಾರೆ. ಈಗಾಗಲೇ ಬೊಗರಿಬೈಲ್, ಉಪ್ಪಿನಪಟ್ಟಣ ಧಕ್ಕೆ, ಕಲ್ಲಬ್ಬೆ, ಅಂತ್ರವಳ್ಳಿ ಮುಂತಾದೆಡೆ ಸಮೀಕ್ಷೆ ನಡೆಸಲಾಗುತ್ತಿದೆ.

ನದಿ ನೀರಿನ ಮಟ್ಟಕ್ಕಿಂತ ಎರಡು ಅಡಿಗಳಷ್ಟು ಹೆಚ್ಚು ನೀರನ್ನು ಬೇಸಿಗೆಯ ಉಬ್ಬರದ ಹೊತ್ತಲ್ಲಿ ಸಂಗ್ರಹಿಸಲಾಗುತ್ತದೆ; ಹತ್ತಿರದ ಚಂಡಿಕಾ ಹೊಳೆಯಲ್ಲೂ ನೀರು ಸಂಗ್ರಹಿಸಲಾಗತ್ತದೆ. ಸಂಗ್ರಹವಾದ ನೀರನ್ನು ಕುಡಿಯುವ ನೀರಿನ ಯೋಜನೆಗಾಗಿ ಪೈಪ್‌ಗಳ ಮೂಲಕ ಹರಿಸಲಾಗತ್ತದೆ. ಮಳೆಗಾಲದಲ್ಲಿ ಅಣೆಕಟ್ಟೆಯ ಎಲ್ಲ ಕಿಂಡಿ ತೆರೆದಿಡಲಾಗುತ್ತದೆ. ಇದರಿಂದಾಗಿ ನೀರು ಸರಾಗವಾಗಿ ಹರಿದು ಹೋಗುತ್ತದೆ. ಯೋಜನೆಯಿಂದ ಜನವಸತಿ ಪ್ರದೇಶ ಮಳುಗಡೆಯಾಗುವುದಿಲ್ಲವೆಂದು ಅಧಿಕಾರಿಗಳು ಹೇಳುತ್ತಾರೆ. ಈ ಮಾತನ್ನು ನದಿ ಪಾತ್ರದ ಇಕ್ಕೆಲದಲ್ಲಿರುವ ಮಂದಿ ಒಪ್ಪುವುದಿಲ್ಲ.

ಬೊಗರಿಬೈಲ್ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದು ಸುಮಾರು 500 ಮೀಟರ್ ಅಂತರದಲ್ಲಿ ಕಿರು ಅಣೆಕಟ್ಟು ಕಟ್ಟಲಾಗುತ್ತದೆ. ಸೇತುವೆಯ ಕಂಬಗಳು ನೀರು ಸರಾಗವಾಗಿ ಹರಿಯಲು ತಡೆಯೊಡ್ಡುತ್ತವೆ. ಕಂಬಗಳ ಹತ್ತಿರ ನೀರು ವೇಗಪಡೆದು ನದಿಯ ಎರಡೂ ಕಡೆಯ ಕೃಷಿ ಭೂಮಿ ಕೊರೆದು ಹಾನಿಯಾಗಲಿದೆ. ಕಳೆದ ಜುಲೈನಲ್ಲಿ ಪ್ರವಾಹ ಬಂದಾಗ ಸಾಕಷ್ಟು ಅನಾಹುತವಾಗಿದೆ. ಈ ಭಾಗದ ಅಘನಾಶಿನಿ ನದಿಗೆ ಅಡ್ಡವಾಗಿ ಐದು ಸೇತುವೆ ಕಟ್ಟಲಾಗಿದೆ. ಈ ಸೇತುವೆಯ ಕಂಬಗಳಿಂದ ನೀರಿನ ಹರಿವಿಗೆ ತಡೆಯಾಗುತ್ತಿರುವುದರಿಂದ ಪ್ರತಿ ಮಳೆಗಾಲದಲ್ಲಿ ನದಿಯಂಚಿನ ಹಳ್ಳಿಗಳು ಕೃತಕ ಪ್ರವಾಹಕ್ಕೆ ಈಡಾಗುತ್ತಿವೆ. ಕಿಂಡಿ ಅಣೆಕಟ್ಟಾದರೆ ನೆರೆ ಹಾವಳಿ ಹೆಚ್ಚಾಗಲಿದೆಯೆಂದು ಹಳ್ಳಿಗರು ಭಯಭೀತರಾಗಿದ್ದಾರೆ. ಪರಿಸರ ಸೂಕ್ಷ್ಮ ಪ್ರದೇಶವಿದಾದ್ದರಿಂದ ಒಂದಲ್ಲ ಒಂದು ರೀತಿಯ ಅನಾಹುತ ಕಿಂಡಿ ಅಣೆಕಟ್ಟೆಯಿಂದ ಆಗಲಿದೆಯೆಂದು ಭೂವಿಜ್ಞಾನಿಗಳು ಮತ್ತು ಪರಿಸರ ತಜ್ಞರು ಈಗಾಲೆ ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...