Homeಕರ್ನಾಟಕಕುಮಟಾ: ಕಿಂಡಿ ಅಣೆಕಟ್ಟು ಕೃತಕ ಪ್ರವಾಹ ತರುವ ಭೀತಿ - ಹಳ್ಳಿಗರ ವಿರೋಧ

ಕುಮಟಾ: ಕಿಂಡಿ ಅಣೆಕಟ್ಟು ಕೃತಕ ಪ್ರವಾಹ ತರುವ ಭೀತಿ – ಹಳ್ಳಿಗರ ವಿರೋಧ

- Advertisement -
- Advertisement -

ಪಶ್ಚಿಮ ಘಟ್ಟದ ತಪ್ಪಲಲ್ಲಿರುವ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ 1,400 ಕಿಂಡಿ ಅಣೆಕಟ್ಟು ಕಟ್ಟುವ ಸಣ್ಣ ನೀರಾವರಿ ಮಂತ್ರಿ ಮಾಧುಸ್ವಾಮಿ ಮತ್ತು ಅವರ ಸಲೆಹೆಗಾರ ಅಧಿಕಾರಿಗಳ ನೀರಾವರಿ ಯೋಜನೆಯ ಒಂದು ಸ್ಯಾಂಪಲ್ ಅನ್ನು ಉತ್ತರ ಕನ್ನಡದ ಕುಮಟಾ ತಾಲೂಕಿನ ಬೊಗರಿಬೈಲ್ ಮತ್ತು ಉಪ್ಪಿನ ಪಟ್ಟಣದ ನಡುವೆ ಕೈಗೆತ್ತಿಕೊಳ್ಳಲಾಗುತ್ತಿದೆ.

ಅಘನಾಸಿನಿ ನದಿಗೆ 200 ಕೋಟಿ ರೂ. ಖರ್ಚಿನಲ್ಲಿ ಕಿರು ಅಣೆಕಟ್ಟು ಕಟ್ಟಿ 11 ಗ್ರಾಮ ಪಂಚಾಯಿತಿ ಪ್ರದೇಶಗಳಿಗೆ ಕುಡಿಯುವ ನೀರೊದಗಿಸುವುದು ಮತ್ತು ಕೆಲವು ಎಕರೆ ಕೃಷಿ ಜಮೀನಿಗೆ ನೀರಾವರಿ ಸೌಲಭ್ಯ ಕೊಡುವುದು ಸದರಿ ಯೋಜನೆಯಯ ಘೋಷಿತ ಉದ್ದೇಶ. ಆದರೆ ಈ ಯೋಜನೆಯಿಂದ ನದಿಯಂಚಿನ ಹಳ್ಳಿಗಳಲ್ಲಿ ಮಳೆಗಾಲದಲ್ಲಿ ಕೃತಕ ಪ್ರವಾಹ ಸೃಷ್ಟಿಯಾಗುವ ಮತ್ತು ಅಣೆಕಟ್ಟೆಯ ಕೆಳ ಭಾಗದಲ್ಲಿ ಬೇಸಿಗೆಯಲ್ಲಿ ನೀರಿಗೆ ಬರ ಬರುವ ಆತಂಕ ಹುಟ್ಟಿಸಿದೆ. ರಾಜ್ಯ ನೀರಾವರಿ ನಿಗಮದ ಈ ಯೋಜನೆಯನ್ನು ಪುನರ್ ಪರಿಶೀಲಿಸಬೇಕೆಂದು ಸ್ಥಳೀಯ ಜನರು ಒಕ್ಕೊರಲಲ್ಲಿ ಒತ್ತಾಯಿಸುತ್ತಿದ್ದಾರೆ.

ಅಘನಾಶಿನಿ ನದಿಯಾಳದಿಂದ ಒಂದೂವರೆ ಮೀಟರ್ ಎತ್ತರದ ಗೋಡೆ ಕಟ್ಟಲಾಗುತ್ತದೆ. ಅದರ ಮೇಲೆ ಕಿಂಡಿ ಆಣೆಕಟ್ಟು ನಿರ್ಮಿಸಲಾಗವುದು. ಮೇಲ್ಭಾಗದಲ್ಲಿ ಸೇತುವೆ, ರಸ್ತೆ ಮಾಡಲಾಗುವುದು. ಅಣೆಕಟ್ಟೆಯಲ್ಲಿ 0.2 ಟಿ.ಎಮ್.ಸಿ. ಅಡಿ ನೀರು ಸಂಗ್ರಹಿಲಾಗುತ್ತದೆ. ಕಾಮಗಾರಿ ಪೂರ್ಣಗೊಳ್ಳಲು ಎರಡು ವರ್ಷ ಬೇಕಾಗಬಹುದೆಂದು ಕಾಮಗಾರಿಯ ಗುತ್ತಿಗೆ ಪಡೆದಿರುವ ಬೆಂಗಳೂರಿನ ಇ.ಐ.ಟೆಕ್ನಾಲಜಿ ಸಮಸ್ಥೆ ಮತ್ತು ನೀರಾವರಿ ನಿಗಮದ ಅಧಿಕಾರಿಗಳು ಹೇಳುತ್ತಾರೆ. ಈಗಾಗಲೇ ಬೊಗರಿಬೈಲ್, ಉಪ್ಪಿನಪಟ್ಟಣ ಧಕ್ಕೆ, ಕಲ್ಲಬ್ಬೆ, ಅಂತ್ರವಳ್ಳಿ ಮುಂತಾದೆಡೆ ಸಮೀಕ್ಷೆ ನಡೆಸಲಾಗುತ್ತಿದೆ.

ನದಿ ನೀರಿನ ಮಟ್ಟಕ್ಕಿಂತ ಎರಡು ಅಡಿಗಳಷ್ಟು ಹೆಚ್ಚು ನೀರನ್ನು ಬೇಸಿಗೆಯ ಉಬ್ಬರದ ಹೊತ್ತಲ್ಲಿ ಸಂಗ್ರಹಿಸಲಾಗುತ್ತದೆ; ಹತ್ತಿರದ ಚಂಡಿಕಾ ಹೊಳೆಯಲ್ಲೂ ನೀರು ಸಂಗ್ರಹಿಸಲಾಗತ್ತದೆ. ಸಂಗ್ರಹವಾದ ನೀರನ್ನು ಕುಡಿಯುವ ನೀರಿನ ಯೋಜನೆಗಾಗಿ ಪೈಪ್‌ಗಳ ಮೂಲಕ ಹರಿಸಲಾಗತ್ತದೆ. ಮಳೆಗಾಲದಲ್ಲಿ ಅಣೆಕಟ್ಟೆಯ ಎಲ್ಲ ಕಿಂಡಿ ತೆರೆದಿಡಲಾಗುತ್ತದೆ. ಇದರಿಂದಾಗಿ ನೀರು ಸರಾಗವಾಗಿ ಹರಿದು ಹೋಗುತ್ತದೆ. ಯೋಜನೆಯಿಂದ ಜನವಸತಿ ಪ್ರದೇಶ ಮಳುಗಡೆಯಾಗುವುದಿಲ್ಲವೆಂದು ಅಧಿಕಾರಿಗಳು ಹೇಳುತ್ತಾರೆ. ಈ ಮಾತನ್ನು ನದಿ ಪಾತ್ರದ ಇಕ್ಕೆಲದಲ್ಲಿರುವ ಮಂದಿ ಒಪ್ಪುವುದಿಲ್ಲ.

ಬೊಗರಿಬೈಲ್ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದು ಸುಮಾರು 500 ಮೀಟರ್ ಅಂತರದಲ್ಲಿ ಕಿರು ಅಣೆಕಟ್ಟು ಕಟ್ಟಲಾಗುತ್ತದೆ. ಸೇತುವೆಯ ಕಂಬಗಳು ನೀರು ಸರಾಗವಾಗಿ ಹರಿಯಲು ತಡೆಯೊಡ್ಡುತ್ತವೆ. ಕಂಬಗಳ ಹತ್ತಿರ ನೀರು ವೇಗಪಡೆದು ನದಿಯ ಎರಡೂ ಕಡೆಯ ಕೃಷಿ ಭೂಮಿ ಕೊರೆದು ಹಾನಿಯಾಗಲಿದೆ. ಕಳೆದ ಜುಲೈನಲ್ಲಿ ಪ್ರವಾಹ ಬಂದಾಗ ಸಾಕಷ್ಟು ಅನಾಹುತವಾಗಿದೆ. ಈ ಭಾಗದ ಅಘನಾಶಿನಿ ನದಿಗೆ ಅಡ್ಡವಾಗಿ ಐದು ಸೇತುವೆ ಕಟ್ಟಲಾಗಿದೆ. ಈ ಸೇತುವೆಯ ಕಂಬಗಳಿಂದ ನೀರಿನ ಹರಿವಿಗೆ ತಡೆಯಾಗುತ್ತಿರುವುದರಿಂದ ಪ್ರತಿ ಮಳೆಗಾಲದಲ್ಲಿ ನದಿಯಂಚಿನ ಹಳ್ಳಿಗಳು ಕೃತಕ ಪ್ರವಾಹಕ್ಕೆ ಈಡಾಗುತ್ತಿವೆ. ಕಿಂಡಿ ಅಣೆಕಟ್ಟಾದರೆ ನೆರೆ ಹಾವಳಿ ಹೆಚ್ಚಾಗಲಿದೆಯೆಂದು ಹಳ್ಳಿಗರು ಭಯಭೀತರಾಗಿದ್ದಾರೆ. ಪರಿಸರ ಸೂಕ್ಷ್ಮ ಪ್ರದೇಶವಿದಾದ್ದರಿಂದ ಒಂದಲ್ಲ ಒಂದು ರೀತಿಯ ಅನಾಹುತ ಕಿಂಡಿ ಅಣೆಕಟ್ಟೆಯಿಂದ ಆಗಲಿದೆಯೆಂದು ಭೂವಿಜ್ಞಾನಿಗಳು ಮತ್ತು ಪರಿಸರ ತಜ್ಞರು ಈಗಾಲೆ ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...