Homeಕರ್ನಾಟಕಕುಮಟಾ: ಕಿಂಡಿ ಅಣೆಕಟ್ಟು ಕೃತಕ ಪ್ರವಾಹ ತರುವ ಭೀತಿ - ಹಳ್ಳಿಗರ ವಿರೋಧ

ಕುಮಟಾ: ಕಿಂಡಿ ಅಣೆಕಟ್ಟು ಕೃತಕ ಪ್ರವಾಹ ತರುವ ಭೀತಿ – ಹಳ್ಳಿಗರ ವಿರೋಧ

- Advertisement -
- Advertisement -

ಪಶ್ಚಿಮ ಘಟ್ಟದ ತಪ್ಪಲಲ್ಲಿರುವ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ 1,400 ಕಿಂಡಿ ಅಣೆಕಟ್ಟು ಕಟ್ಟುವ ಸಣ್ಣ ನೀರಾವರಿ ಮಂತ್ರಿ ಮಾಧುಸ್ವಾಮಿ ಮತ್ತು ಅವರ ಸಲೆಹೆಗಾರ ಅಧಿಕಾರಿಗಳ ನೀರಾವರಿ ಯೋಜನೆಯ ಒಂದು ಸ್ಯಾಂಪಲ್ ಅನ್ನು ಉತ್ತರ ಕನ್ನಡದ ಕುಮಟಾ ತಾಲೂಕಿನ ಬೊಗರಿಬೈಲ್ ಮತ್ತು ಉಪ್ಪಿನ ಪಟ್ಟಣದ ನಡುವೆ ಕೈಗೆತ್ತಿಕೊಳ್ಳಲಾಗುತ್ತಿದೆ.

ಅಘನಾಸಿನಿ ನದಿಗೆ 200 ಕೋಟಿ ರೂ. ಖರ್ಚಿನಲ್ಲಿ ಕಿರು ಅಣೆಕಟ್ಟು ಕಟ್ಟಿ 11 ಗ್ರಾಮ ಪಂಚಾಯಿತಿ ಪ್ರದೇಶಗಳಿಗೆ ಕುಡಿಯುವ ನೀರೊದಗಿಸುವುದು ಮತ್ತು ಕೆಲವು ಎಕರೆ ಕೃಷಿ ಜಮೀನಿಗೆ ನೀರಾವರಿ ಸೌಲಭ್ಯ ಕೊಡುವುದು ಸದರಿ ಯೋಜನೆಯಯ ಘೋಷಿತ ಉದ್ದೇಶ. ಆದರೆ ಈ ಯೋಜನೆಯಿಂದ ನದಿಯಂಚಿನ ಹಳ್ಳಿಗಳಲ್ಲಿ ಮಳೆಗಾಲದಲ್ಲಿ ಕೃತಕ ಪ್ರವಾಹ ಸೃಷ್ಟಿಯಾಗುವ ಮತ್ತು ಅಣೆಕಟ್ಟೆಯ ಕೆಳ ಭಾಗದಲ್ಲಿ ಬೇಸಿಗೆಯಲ್ಲಿ ನೀರಿಗೆ ಬರ ಬರುವ ಆತಂಕ ಹುಟ್ಟಿಸಿದೆ. ರಾಜ್ಯ ನೀರಾವರಿ ನಿಗಮದ ಈ ಯೋಜನೆಯನ್ನು ಪುನರ್ ಪರಿಶೀಲಿಸಬೇಕೆಂದು ಸ್ಥಳೀಯ ಜನರು ಒಕ್ಕೊರಲಲ್ಲಿ ಒತ್ತಾಯಿಸುತ್ತಿದ್ದಾರೆ.

ಅಘನಾಶಿನಿ ನದಿಯಾಳದಿಂದ ಒಂದೂವರೆ ಮೀಟರ್ ಎತ್ತರದ ಗೋಡೆ ಕಟ್ಟಲಾಗುತ್ತದೆ. ಅದರ ಮೇಲೆ ಕಿಂಡಿ ಆಣೆಕಟ್ಟು ನಿರ್ಮಿಸಲಾಗವುದು. ಮೇಲ್ಭಾಗದಲ್ಲಿ ಸೇತುವೆ, ರಸ್ತೆ ಮಾಡಲಾಗುವುದು. ಅಣೆಕಟ್ಟೆಯಲ್ಲಿ 0.2 ಟಿ.ಎಮ್.ಸಿ. ಅಡಿ ನೀರು ಸಂಗ್ರಹಿಲಾಗುತ್ತದೆ. ಕಾಮಗಾರಿ ಪೂರ್ಣಗೊಳ್ಳಲು ಎರಡು ವರ್ಷ ಬೇಕಾಗಬಹುದೆಂದು ಕಾಮಗಾರಿಯ ಗುತ್ತಿಗೆ ಪಡೆದಿರುವ ಬೆಂಗಳೂರಿನ ಇ.ಐ.ಟೆಕ್ನಾಲಜಿ ಸಮಸ್ಥೆ ಮತ್ತು ನೀರಾವರಿ ನಿಗಮದ ಅಧಿಕಾರಿಗಳು ಹೇಳುತ್ತಾರೆ. ಈಗಾಗಲೇ ಬೊಗರಿಬೈಲ್, ಉಪ್ಪಿನಪಟ್ಟಣ ಧಕ್ಕೆ, ಕಲ್ಲಬ್ಬೆ, ಅಂತ್ರವಳ್ಳಿ ಮುಂತಾದೆಡೆ ಸಮೀಕ್ಷೆ ನಡೆಸಲಾಗುತ್ತಿದೆ.

ನದಿ ನೀರಿನ ಮಟ್ಟಕ್ಕಿಂತ ಎರಡು ಅಡಿಗಳಷ್ಟು ಹೆಚ್ಚು ನೀರನ್ನು ಬೇಸಿಗೆಯ ಉಬ್ಬರದ ಹೊತ್ತಲ್ಲಿ ಸಂಗ್ರಹಿಸಲಾಗುತ್ತದೆ; ಹತ್ತಿರದ ಚಂಡಿಕಾ ಹೊಳೆಯಲ್ಲೂ ನೀರು ಸಂಗ್ರಹಿಸಲಾಗತ್ತದೆ. ಸಂಗ್ರಹವಾದ ನೀರನ್ನು ಕುಡಿಯುವ ನೀರಿನ ಯೋಜನೆಗಾಗಿ ಪೈಪ್‌ಗಳ ಮೂಲಕ ಹರಿಸಲಾಗತ್ತದೆ. ಮಳೆಗಾಲದಲ್ಲಿ ಅಣೆಕಟ್ಟೆಯ ಎಲ್ಲ ಕಿಂಡಿ ತೆರೆದಿಡಲಾಗುತ್ತದೆ. ಇದರಿಂದಾಗಿ ನೀರು ಸರಾಗವಾಗಿ ಹರಿದು ಹೋಗುತ್ತದೆ. ಯೋಜನೆಯಿಂದ ಜನವಸತಿ ಪ್ರದೇಶ ಮಳುಗಡೆಯಾಗುವುದಿಲ್ಲವೆಂದು ಅಧಿಕಾರಿಗಳು ಹೇಳುತ್ತಾರೆ. ಈ ಮಾತನ್ನು ನದಿ ಪಾತ್ರದ ಇಕ್ಕೆಲದಲ್ಲಿರುವ ಮಂದಿ ಒಪ್ಪುವುದಿಲ್ಲ.

ಬೊಗರಿಬೈಲ್ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದು ಸುಮಾರು 500 ಮೀಟರ್ ಅಂತರದಲ್ಲಿ ಕಿರು ಅಣೆಕಟ್ಟು ಕಟ್ಟಲಾಗುತ್ತದೆ. ಸೇತುವೆಯ ಕಂಬಗಳು ನೀರು ಸರಾಗವಾಗಿ ಹರಿಯಲು ತಡೆಯೊಡ್ಡುತ್ತವೆ. ಕಂಬಗಳ ಹತ್ತಿರ ನೀರು ವೇಗಪಡೆದು ನದಿಯ ಎರಡೂ ಕಡೆಯ ಕೃಷಿ ಭೂಮಿ ಕೊರೆದು ಹಾನಿಯಾಗಲಿದೆ. ಕಳೆದ ಜುಲೈನಲ್ಲಿ ಪ್ರವಾಹ ಬಂದಾಗ ಸಾಕಷ್ಟು ಅನಾಹುತವಾಗಿದೆ. ಈ ಭಾಗದ ಅಘನಾಶಿನಿ ನದಿಗೆ ಅಡ್ಡವಾಗಿ ಐದು ಸೇತುವೆ ಕಟ್ಟಲಾಗಿದೆ. ಈ ಸೇತುವೆಯ ಕಂಬಗಳಿಂದ ನೀರಿನ ಹರಿವಿಗೆ ತಡೆಯಾಗುತ್ತಿರುವುದರಿಂದ ಪ್ರತಿ ಮಳೆಗಾಲದಲ್ಲಿ ನದಿಯಂಚಿನ ಹಳ್ಳಿಗಳು ಕೃತಕ ಪ್ರವಾಹಕ್ಕೆ ಈಡಾಗುತ್ತಿವೆ. ಕಿಂಡಿ ಅಣೆಕಟ್ಟಾದರೆ ನೆರೆ ಹಾವಳಿ ಹೆಚ್ಚಾಗಲಿದೆಯೆಂದು ಹಳ್ಳಿಗರು ಭಯಭೀತರಾಗಿದ್ದಾರೆ. ಪರಿಸರ ಸೂಕ್ಷ್ಮ ಪ್ರದೇಶವಿದಾದ್ದರಿಂದ ಒಂದಲ್ಲ ಒಂದು ರೀತಿಯ ಅನಾಹುತ ಕಿಂಡಿ ಅಣೆಕಟ್ಟೆಯಿಂದ ಆಗಲಿದೆಯೆಂದು ಭೂವಿಜ್ಞಾನಿಗಳು ಮತ್ತು ಪರಿಸರ ತಜ್ಞರು ಈಗಾಲೆ ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...