Homeಕರ್ನಾಟಕಕುಮಟಾ: ಕಿಂಡಿ ಅಣೆಕಟ್ಟು ಕೃತಕ ಪ್ರವಾಹ ತರುವ ಭೀತಿ - ಹಳ್ಳಿಗರ ವಿರೋಧ

ಕುಮಟಾ: ಕಿಂಡಿ ಅಣೆಕಟ್ಟು ಕೃತಕ ಪ್ರವಾಹ ತರುವ ಭೀತಿ – ಹಳ್ಳಿಗರ ವಿರೋಧ

- Advertisement -
- Advertisement -

ಪಶ್ಚಿಮ ಘಟ್ಟದ ತಪ್ಪಲಲ್ಲಿರುವ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ 1,400 ಕಿಂಡಿ ಅಣೆಕಟ್ಟು ಕಟ್ಟುವ ಸಣ್ಣ ನೀರಾವರಿ ಮಂತ್ರಿ ಮಾಧುಸ್ವಾಮಿ ಮತ್ತು ಅವರ ಸಲೆಹೆಗಾರ ಅಧಿಕಾರಿಗಳ ನೀರಾವರಿ ಯೋಜನೆಯ ಒಂದು ಸ್ಯಾಂಪಲ್ ಅನ್ನು ಉತ್ತರ ಕನ್ನಡದ ಕುಮಟಾ ತಾಲೂಕಿನ ಬೊಗರಿಬೈಲ್ ಮತ್ತು ಉಪ್ಪಿನ ಪಟ್ಟಣದ ನಡುವೆ ಕೈಗೆತ್ತಿಕೊಳ್ಳಲಾಗುತ್ತಿದೆ.

ಅಘನಾಸಿನಿ ನದಿಗೆ 200 ಕೋಟಿ ರೂ. ಖರ್ಚಿನಲ್ಲಿ ಕಿರು ಅಣೆಕಟ್ಟು ಕಟ್ಟಿ 11 ಗ್ರಾಮ ಪಂಚಾಯಿತಿ ಪ್ರದೇಶಗಳಿಗೆ ಕುಡಿಯುವ ನೀರೊದಗಿಸುವುದು ಮತ್ತು ಕೆಲವು ಎಕರೆ ಕೃಷಿ ಜಮೀನಿಗೆ ನೀರಾವರಿ ಸೌಲಭ್ಯ ಕೊಡುವುದು ಸದರಿ ಯೋಜನೆಯಯ ಘೋಷಿತ ಉದ್ದೇಶ. ಆದರೆ ಈ ಯೋಜನೆಯಿಂದ ನದಿಯಂಚಿನ ಹಳ್ಳಿಗಳಲ್ಲಿ ಮಳೆಗಾಲದಲ್ಲಿ ಕೃತಕ ಪ್ರವಾಹ ಸೃಷ್ಟಿಯಾಗುವ ಮತ್ತು ಅಣೆಕಟ್ಟೆಯ ಕೆಳ ಭಾಗದಲ್ಲಿ ಬೇಸಿಗೆಯಲ್ಲಿ ನೀರಿಗೆ ಬರ ಬರುವ ಆತಂಕ ಹುಟ್ಟಿಸಿದೆ. ರಾಜ್ಯ ನೀರಾವರಿ ನಿಗಮದ ಈ ಯೋಜನೆಯನ್ನು ಪುನರ್ ಪರಿಶೀಲಿಸಬೇಕೆಂದು ಸ್ಥಳೀಯ ಜನರು ಒಕ್ಕೊರಲಲ್ಲಿ ಒತ್ತಾಯಿಸುತ್ತಿದ್ದಾರೆ.

ಅಘನಾಶಿನಿ ನದಿಯಾಳದಿಂದ ಒಂದೂವರೆ ಮೀಟರ್ ಎತ್ತರದ ಗೋಡೆ ಕಟ್ಟಲಾಗುತ್ತದೆ. ಅದರ ಮೇಲೆ ಕಿಂಡಿ ಆಣೆಕಟ್ಟು ನಿರ್ಮಿಸಲಾಗವುದು. ಮೇಲ್ಭಾಗದಲ್ಲಿ ಸೇತುವೆ, ರಸ್ತೆ ಮಾಡಲಾಗುವುದು. ಅಣೆಕಟ್ಟೆಯಲ್ಲಿ 0.2 ಟಿ.ಎಮ್.ಸಿ. ಅಡಿ ನೀರು ಸಂಗ್ರಹಿಲಾಗುತ್ತದೆ. ಕಾಮಗಾರಿ ಪೂರ್ಣಗೊಳ್ಳಲು ಎರಡು ವರ್ಷ ಬೇಕಾಗಬಹುದೆಂದು ಕಾಮಗಾರಿಯ ಗುತ್ತಿಗೆ ಪಡೆದಿರುವ ಬೆಂಗಳೂರಿನ ಇ.ಐ.ಟೆಕ್ನಾಲಜಿ ಸಮಸ್ಥೆ ಮತ್ತು ನೀರಾವರಿ ನಿಗಮದ ಅಧಿಕಾರಿಗಳು ಹೇಳುತ್ತಾರೆ. ಈಗಾಗಲೇ ಬೊಗರಿಬೈಲ್, ಉಪ್ಪಿನಪಟ್ಟಣ ಧಕ್ಕೆ, ಕಲ್ಲಬ್ಬೆ, ಅಂತ್ರವಳ್ಳಿ ಮುಂತಾದೆಡೆ ಸಮೀಕ್ಷೆ ನಡೆಸಲಾಗುತ್ತಿದೆ.

ನದಿ ನೀರಿನ ಮಟ್ಟಕ್ಕಿಂತ ಎರಡು ಅಡಿಗಳಷ್ಟು ಹೆಚ್ಚು ನೀರನ್ನು ಬೇಸಿಗೆಯ ಉಬ್ಬರದ ಹೊತ್ತಲ್ಲಿ ಸಂಗ್ರಹಿಸಲಾಗುತ್ತದೆ; ಹತ್ತಿರದ ಚಂಡಿಕಾ ಹೊಳೆಯಲ್ಲೂ ನೀರು ಸಂಗ್ರಹಿಸಲಾಗತ್ತದೆ. ಸಂಗ್ರಹವಾದ ನೀರನ್ನು ಕುಡಿಯುವ ನೀರಿನ ಯೋಜನೆಗಾಗಿ ಪೈಪ್‌ಗಳ ಮೂಲಕ ಹರಿಸಲಾಗತ್ತದೆ. ಮಳೆಗಾಲದಲ್ಲಿ ಅಣೆಕಟ್ಟೆಯ ಎಲ್ಲ ಕಿಂಡಿ ತೆರೆದಿಡಲಾಗುತ್ತದೆ. ಇದರಿಂದಾಗಿ ನೀರು ಸರಾಗವಾಗಿ ಹರಿದು ಹೋಗುತ್ತದೆ. ಯೋಜನೆಯಿಂದ ಜನವಸತಿ ಪ್ರದೇಶ ಮಳುಗಡೆಯಾಗುವುದಿಲ್ಲವೆಂದು ಅಧಿಕಾರಿಗಳು ಹೇಳುತ್ತಾರೆ. ಈ ಮಾತನ್ನು ನದಿ ಪಾತ್ರದ ಇಕ್ಕೆಲದಲ್ಲಿರುವ ಮಂದಿ ಒಪ್ಪುವುದಿಲ್ಲ.

ಬೊಗರಿಬೈಲ್ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದು ಸುಮಾರು 500 ಮೀಟರ್ ಅಂತರದಲ್ಲಿ ಕಿರು ಅಣೆಕಟ್ಟು ಕಟ್ಟಲಾಗುತ್ತದೆ. ಸೇತುವೆಯ ಕಂಬಗಳು ನೀರು ಸರಾಗವಾಗಿ ಹರಿಯಲು ತಡೆಯೊಡ್ಡುತ್ತವೆ. ಕಂಬಗಳ ಹತ್ತಿರ ನೀರು ವೇಗಪಡೆದು ನದಿಯ ಎರಡೂ ಕಡೆಯ ಕೃಷಿ ಭೂಮಿ ಕೊರೆದು ಹಾನಿಯಾಗಲಿದೆ. ಕಳೆದ ಜುಲೈನಲ್ಲಿ ಪ್ರವಾಹ ಬಂದಾಗ ಸಾಕಷ್ಟು ಅನಾಹುತವಾಗಿದೆ. ಈ ಭಾಗದ ಅಘನಾಶಿನಿ ನದಿಗೆ ಅಡ್ಡವಾಗಿ ಐದು ಸೇತುವೆ ಕಟ್ಟಲಾಗಿದೆ. ಈ ಸೇತುವೆಯ ಕಂಬಗಳಿಂದ ನೀರಿನ ಹರಿವಿಗೆ ತಡೆಯಾಗುತ್ತಿರುವುದರಿಂದ ಪ್ರತಿ ಮಳೆಗಾಲದಲ್ಲಿ ನದಿಯಂಚಿನ ಹಳ್ಳಿಗಳು ಕೃತಕ ಪ್ರವಾಹಕ್ಕೆ ಈಡಾಗುತ್ತಿವೆ. ಕಿಂಡಿ ಅಣೆಕಟ್ಟಾದರೆ ನೆರೆ ಹಾವಳಿ ಹೆಚ್ಚಾಗಲಿದೆಯೆಂದು ಹಳ್ಳಿಗರು ಭಯಭೀತರಾಗಿದ್ದಾರೆ. ಪರಿಸರ ಸೂಕ್ಷ್ಮ ಪ್ರದೇಶವಿದಾದ್ದರಿಂದ ಒಂದಲ್ಲ ಒಂದು ರೀತಿಯ ಅನಾಹುತ ಕಿಂಡಿ ಅಣೆಕಟ್ಟೆಯಿಂದ ಆಗಲಿದೆಯೆಂದು ಭೂವಿಜ್ಞಾನಿಗಳು ಮತ್ತು ಪರಿಸರ ತಜ್ಞರು ಈಗಾಲೆ ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...