Homeಕರ್ನಾಟಕಕುಮಟಾ: ಕಿಂಡಿ ಅಣೆಕಟ್ಟು ಕೃತಕ ಪ್ರವಾಹ ತರುವ ಭೀತಿ - ಹಳ್ಳಿಗರ ವಿರೋಧ

ಕುಮಟಾ: ಕಿಂಡಿ ಅಣೆಕಟ್ಟು ಕೃತಕ ಪ್ರವಾಹ ತರುವ ಭೀತಿ – ಹಳ್ಳಿಗರ ವಿರೋಧ

- Advertisement -
- Advertisement -

ಪಶ್ಚಿಮ ಘಟ್ಟದ ತಪ್ಪಲಲ್ಲಿರುವ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ 1,400 ಕಿಂಡಿ ಅಣೆಕಟ್ಟು ಕಟ್ಟುವ ಸಣ್ಣ ನೀರಾವರಿ ಮಂತ್ರಿ ಮಾಧುಸ್ವಾಮಿ ಮತ್ತು ಅವರ ಸಲೆಹೆಗಾರ ಅಧಿಕಾರಿಗಳ ನೀರಾವರಿ ಯೋಜನೆಯ ಒಂದು ಸ್ಯಾಂಪಲ್ ಅನ್ನು ಉತ್ತರ ಕನ್ನಡದ ಕುಮಟಾ ತಾಲೂಕಿನ ಬೊಗರಿಬೈಲ್ ಮತ್ತು ಉಪ್ಪಿನ ಪಟ್ಟಣದ ನಡುವೆ ಕೈಗೆತ್ತಿಕೊಳ್ಳಲಾಗುತ್ತಿದೆ.

ಅಘನಾಸಿನಿ ನದಿಗೆ 200 ಕೋಟಿ ರೂ. ಖರ್ಚಿನಲ್ಲಿ ಕಿರು ಅಣೆಕಟ್ಟು ಕಟ್ಟಿ 11 ಗ್ರಾಮ ಪಂಚಾಯಿತಿ ಪ್ರದೇಶಗಳಿಗೆ ಕುಡಿಯುವ ನೀರೊದಗಿಸುವುದು ಮತ್ತು ಕೆಲವು ಎಕರೆ ಕೃಷಿ ಜಮೀನಿಗೆ ನೀರಾವರಿ ಸೌಲಭ್ಯ ಕೊಡುವುದು ಸದರಿ ಯೋಜನೆಯಯ ಘೋಷಿತ ಉದ್ದೇಶ. ಆದರೆ ಈ ಯೋಜನೆಯಿಂದ ನದಿಯಂಚಿನ ಹಳ್ಳಿಗಳಲ್ಲಿ ಮಳೆಗಾಲದಲ್ಲಿ ಕೃತಕ ಪ್ರವಾಹ ಸೃಷ್ಟಿಯಾಗುವ ಮತ್ತು ಅಣೆಕಟ್ಟೆಯ ಕೆಳ ಭಾಗದಲ್ಲಿ ಬೇಸಿಗೆಯಲ್ಲಿ ನೀರಿಗೆ ಬರ ಬರುವ ಆತಂಕ ಹುಟ್ಟಿಸಿದೆ. ರಾಜ್ಯ ನೀರಾವರಿ ನಿಗಮದ ಈ ಯೋಜನೆಯನ್ನು ಪುನರ್ ಪರಿಶೀಲಿಸಬೇಕೆಂದು ಸ್ಥಳೀಯ ಜನರು ಒಕ್ಕೊರಲಲ್ಲಿ ಒತ್ತಾಯಿಸುತ್ತಿದ್ದಾರೆ.

ಅಘನಾಶಿನಿ ನದಿಯಾಳದಿಂದ ಒಂದೂವರೆ ಮೀಟರ್ ಎತ್ತರದ ಗೋಡೆ ಕಟ್ಟಲಾಗುತ್ತದೆ. ಅದರ ಮೇಲೆ ಕಿಂಡಿ ಆಣೆಕಟ್ಟು ನಿರ್ಮಿಸಲಾಗವುದು. ಮೇಲ್ಭಾಗದಲ್ಲಿ ಸೇತುವೆ, ರಸ್ತೆ ಮಾಡಲಾಗುವುದು. ಅಣೆಕಟ್ಟೆಯಲ್ಲಿ 0.2 ಟಿ.ಎಮ್.ಸಿ. ಅಡಿ ನೀರು ಸಂಗ್ರಹಿಲಾಗುತ್ತದೆ. ಕಾಮಗಾರಿ ಪೂರ್ಣಗೊಳ್ಳಲು ಎರಡು ವರ್ಷ ಬೇಕಾಗಬಹುದೆಂದು ಕಾಮಗಾರಿಯ ಗುತ್ತಿಗೆ ಪಡೆದಿರುವ ಬೆಂಗಳೂರಿನ ಇ.ಐ.ಟೆಕ್ನಾಲಜಿ ಸಮಸ್ಥೆ ಮತ್ತು ನೀರಾವರಿ ನಿಗಮದ ಅಧಿಕಾರಿಗಳು ಹೇಳುತ್ತಾರೆ. ಈಗಾಗಲೇ ಬೊಗರಿಬೈಲ್, ಉಪ್ಪಿನಪಟ್ಟಣ ಧಕ್ಕೆ, ಕಲ್ಲಬ್ಬೆ, ಅಂತ್ರವಳ್ಳಿ ಮುಂತಾದೆಡೆ ಸಮೀಕ್ಷೆ ನಡೆಸಲಾಗುತ್ತಿದೆ.

ನದಿ ನೀರಿನ ಮಟ್ಟಕ್ಕಿಂತ ಎರಡು ಅಡಿಗಳಷ್ಟು ಹೆಚ್ಚು ನೀರನ್ನು ಬೇಸಿಗೆಯ ಉಬ್ಬರದ ಹೊತ್ತಲ್ಲಿ ಸಂಗ್ರಹಿಸಲಾಗುತ್ತದೆ; ಹತ್ತಿರದ ಚಂಡಿಕಾ ಹೊಳೆಯಲ್ಲೂ ನೀರು ಸಂಗ್ರಹಿಸಲಾಗತ್ತದೆ. ಸಂಗ್ರಹವಾದ ನೀರನ್ನು ಕುಡಿಯುವ ನೀರಿನ ಯೋಜನೆಗಾಗಿ ಪೈಪ್‌ಗಳ ಮೂಲಕ ಹರಿಸಲಾಗತ್ತದೆ. ಮಳೆಗಾಲದಲ್ಲಿ ಅಣೆಕಟ್ಟೆಯ ಎಲ್ಲ ಕಿಂಡಿ ತೆರೆದಿಡಲಾಗುತ್ತದೆ. ಇದರಿಂದಾಗಿ ನೀರು ಸರಾಗವಾಗಿ ಹರಿದು ಹೋಗುತ್ತದೆ. ಯೋಜನೆಯಿಂದ ಜನವಸತಿ ಪ್ರದೇಶ ಮಳುಗಡೆಯಾಗುವುದಿಲ್ಲವೆಂದು ಅಧಿಕಾರಿಗಳು ಹೇಳುತ್ತಾರೆ. ಈ ಮಾತನ್ನು ನದಿ ಪಾತ್ರದ ಇಕ್ಕೆಲದಲ್ಲಿರುವ ಮಂದಿ ಒಪ್ಪುವುದಿಲ್ಲ.

ಬೊಗರಿಬೈಲ್ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದು ಸುಮಾರು 500 ಮೀಟರ್ ಅಂತರದಲ್ಲಿ ಕಿರು ಅಣೆಕಟ್ಟು ಕಟ್ಟಲಾಗುತ್ತದೆ. ಸೇತುವೆಯ ಕಂಬಗಳು ನೀರು ಸರಾಗವಾಗಿ ಹರಿಯಲು ತಡೆಯೊಡ್ಡುತ್ತವೆ. ಕಂಬಗಳ ಹತ್ತಿರ ನೀರು ವೇಗಪಡೆದು ನದಿಯ ಎರಡೂ ಕಡೆಯ ಕೃಷಿ ಭೂಮಿ ಕೊರೆದು ಹಾನಿಯಾಗಲಿದೆ. ಕಳೆದ ಜುಲೈನಲ್ಲಿ ಪ್ರವಾಹ ಬಂದಾಗ ಸಾಕಷ್ಟು ಅನಾಹುತವಾಗಿದೆ. ಈ ಭಾಗದ ಅಘನಾಶಿನಿ ನದಿಗೆ ಅಡ್ಡವಾಗಿ ಐದು ಸೇತುವೆ ಕಟ್ಟಲಾಗಿದೆ. ಈ ಸೇತುವೆಯ ಕಂಬಗಳಿಂದ ನೀರಿನ ಹರಿವಿಗೆ ತಡೆಯಾಗುತ್ತಿರುವುದರಿಂದ ಪ್ರತಿ ಮಳೆಗಾಲದಲ್ಲಿ ನದಿಯಂಚಿನ ಹಳ್ಳಿಗಳು ಕೃತಕ ಪ್ರವಾಹಕ್ಕೆ ಈಡಾಗುತ್ತಿವೆ. ಕಿಂಡಿ ಅಣೆಕಟ್ಟಾದರೆ ನೆರೆ ಹಾವಳಿ ಹೆಚ್ಚಾಗಲಿದೆಯೆಂದು ಹಳ್ಳಿಗರು ಭಯಭೀತರಾಗಿದ್ದಾರೆ. ಪರಿಸರ ಸೂಕ್ಷ್ಮ ಪ್ರದೇಶವಿದಾದ್ದರಿಂದ ಒಂದಲ್ಲ ಒಂದು ರೀತಿಯ ಅನಾಹುತ ಕಿಂಡಿ ಅಣೆಕಟ್ಟೆಯಿಂದ ಆಗಲಿದೆಯೆಂದು ಭೂವಿಜ್ಞಾನಿಗಳು ಮತ್ತು ಪರಿಸರ ತಜ್ಞರು ಈಗಾಲೆ ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...