Homeಕರ್ನಾಟಕಕುಮಟಾ: ಕಿಂಡಿ ಅಣೆಕಟ್ಟು ಕೃತಕ ಪ್ರವಾಹ ತರುವ ಭೀತಿ - ಹಳ್ಳಿಗರ ವಿರೋಧ

ಕುಮಟಾ: ಕಿಂಡಿ ಅಣೆಕಟ್ಟು ಕೃತಕ ಪ್ರವಾಹ ತರುವ ಭೀತಿ – ಹಳ್ಳಿಗರ ವಿರೋಧ

- Advertisement -
- Advertisement -

ಪಶ್ಚಿಮ ಘಟ್ಟದ ತಪ್ಪಲಲ್ಲಿರುವ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ 1,400 ಕಿಂಡಿ ಅಣೆಕಟ್ಟು ಕಟ್ಟುವ ಸಣ್ಣ ನೀರಾವರಿ ಮಂತ್ರಿ ಮಾಧುಸ್ವಾಮಿ ಮತ್ತು ಅವರ ಸಲೆಹೆಗಾರ ಅಧಿಕಾರಿಗಳ ನೀರಾವರಿ ಯೋಜನೆಯ ಒಂದು ಸ್ಯಾಂಪಲ್ ಅನ್ನು ಉತ್ತರ ಕನ್ನಡದ ಕುಮಟಾ ತಾಲೂಕಿನ ಬೊಗರಿಬೈಲ್ ಮತ್ತು ಉಪ್ಪಿನ ಪಟ್ಟಣದ ನಡುವೆ ಕೈಗೆತ್ತಿಕೊಳ್ಳಲಾಗುತ್ತಿದೆ.

ಅಘನಾಸಿನಿ ನದಿಗೆ 200 ಕೋಟಿ ರೂ. ಖರ್ಚಿನಲ್ಲಿ ಕಿರು ಅಣೆಕಟ್ಟು ಕಟ್ಟಿ 11 ಗ್ರಾಮ ಪಂಚಾಯಿತಿ ಪ್ರದೇಶಗಳಿಗೆ ಕುಡಿಯುವ ನೀರೊದಗಿಸುವುದು ಮತ್ತು ಕೆಲವು ಎಕರೆ ಕೃಷಿ ಜಮೀನಿಗೆ ನೀರಾವರಿ ಸೌಲಭ್ಯ ಕೊಡುವುದು ಸದರಿ ಯೋಜನೆಯಯ ಘೋಷಿತ ಉದ್ದೇಶ. ಆದರೆ ಈ ಯೋಜನೆಯಿಂದ ನದಿಯಂಚಿನ ಹಳ್ಳಿಗಳಲ್ಲಿ ಮಳೆಗಾಲದಲ್ಲಿ ಕೃತಕ ಪ್ರವಾಹ ಸೃಷ್ಟಿಯಾಗುವ ಮತ್ತು ಅಣೆಕಟ್ಟೆಯ ಕೆಳ ಭಾಗದಲ್ಲಿ ಬೇಸಿಗೆಯಲ್ಲಿ ನೀರಿಗೆ ಬರ ಬರುವ ಆತಂಕ ಹುಟ್ಟಿಸಿದೆ. ರಾಜ್ಯ ನೀರಾವರಿ ನಿಗಮದ ಈ ಯೋಜನೆಯನ್ನು ಪುನರ್ ಪರಿಶೀಲಿಸಬೇಕೆಂದು ಸ್ಥಳೀಯ ಜನರು ಒಕ್ಕೊರಲಲ್ಲಿ ಒತ್ತಾಯಿಸುತ್ತಿದ್ದಾರೆ.

ಅಘನಾಶಿನಿ ನದಿಯಾಳದಿಂದ ಒಂದೂವರೆ ಮೀಟರ್ ಎತ್ತರದ ಗೋಡೆ ಕಟ್ಟಲಾಗುತ್ತದೆ. ಅದರ ಮೇಲೆ ಕಿಂಡಿ ಆಣೆಕಟ್ಟು ನಿರ್ಮಿಸಲಾಗವುದು. ಮೇಲ್ಭಾಗದಲ್ಲಿ ಸೇತುವೆ, ರಸ್ತೆ ಮಾಡಲಾಗುವುದು. ಅಣೆಕಟ್ಟೆಯಲ್ಲಿ 0.2 ಟಿ.ಎಮ್.ಸಿ. ಅಡಿ ನೀರು ಸಂಗ್ರಹಿಲಾಗುತ್ತದೆ. ಕಾಮಗಾರಿ ಪೂರ್ಣಗೊಳ್ಳಲು ಎರಡು ವರ್ಷ ಬೇಕಾಗಬಹುದೆಂದು ಕಾಮಗಾರಿಯ ಗುತ್ತಿಗೆ ಪಡೆದಿರುವ ಬೆಂಗಳೂರಿನ ಇ.ಐ.ಟೆಕ್ನಾಲಜಿ ಸಮಸ್ಥೆ ಮತ್ತು ನೀರಾವರಿ ನಿಗಮದ ಅಧಿಕಾರಿಗಳು ಹೇಳುತ್ತಾರೆ. ಈಗಾಗಲೇ ಬೊಗರಿಬೈಲ್, ಉಪ್ಪಿನಪಟ್ಟಣ ಧಕ್ಕೆ, ಕಲ್ಲಬ್ಬೆ, ಅಂತ್ರವಳ್ಳಿ ಮುಂತಾದೆಡೆ ಸಮೀಕ್ಷೆ ನಡೆಸಲಾಗುತ್ತಿದೆ.

ನದಿ ನೀರಿನ ಮಟ್ಟಕ್ಕಿಂತ ಎರಡು ಅಡಿಗಳಷ್ಟು ಹೆಚ್ಚು ನೀರನ್ನು ಬೇಸಿಗೆಯ ಉಬ್ಬರದ ಹೊತ್ತಲ್ಲಿ ಸಂಗ್ರಹಿಸಲಾಗುತ್ತದೆ; ಹತ್ತಿರದ ಚಂಡಿಕಾ ಹೊಳೆಯಲ್ಲೂ ನೀರು ಸಂಗ್ರಹಿಸಲಾಗತ್ತದೆ. ಸಂಗ್ರಹವಾದ ನೀರನ್ನು ಕುಡಿಯುವ ನೀರಿನ ಯೋಜನೆಗಾಗಿ ಪೈಪ್‌ಗಳ ಮೂಲಕ ಹರಿಸಲಾಗತ್ತದೆ. ಮಳೆಗಾಲದಲ್ಲಿ ಅಣೆಕಟ್ಟೆಯ ಎಲ್ಲ ಕಿಂಡಿ ತೆರೆದಿಡಲಾಗುತ್ತದೆ. ಇದರಿಂದಾಗಿ ನೀರು ಸರಾಗವಾಗಿ ಹರಿದು ಹೋಗುತ್ತದೆ. ಯೋಜನೆಯಿಂದ ಜನವಸತಿ ಪ್ರದೇಶ ಮಳುಗಡೆಯಾಗುವುದಿಲ್ಲವೆಂದು ಅಧಿಕಾರಿಗಳು ಹೇಳುತ್ತಾರೆ. ಈ ಮಾತನ್ನು ನದಿ ಪಾತ್ರದ ಇಕ್ಕೆಲದಲ್ಲಿರುವ ಮಂದಿ ಒಪ್ಪುವುದಿಲ್ಲ.

ಬೊಗರಿಬೈಲ್ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದು ಸುಮಾರು 500 ಮೀಟರ್ ಅಂತರದಲ್ಲಿ ಕಿರು ಅಣೆಕಟ್ಟು ಕಟ್ಟಲಾಗುತ್ತದೆ. ಸೇತುವೆಯ ಕಂಬಗಳು ನೀರು ಸರಾಗವಾಗಿ ಹರಿಯಲು ತಡೆಯೊಡ್ಡುತ್ತವೆ. ಕಂಬಗಳ ಹತ್ತಿರ ನೀರು ವೇಗಪಡೆದು ನದಿಯ ಎರಡೂ ಕಡೆಯ ಕೃಷಿ ಭೂಮಿ ಕೊರೆದು ಹಾನಿಯಾಗಲಿದೆ. ಕಳೆದ ಜುಲೈನಲ್ಲಿ ಪ್ರವಾಹ ಬಂದಾಗ ಸಾಕಷ್ಟು ಅನಾಹುತವಾಗಿದೆ. ಈ ಭಾಗದ ಅಘನಾಶಿನಿ ನದಿಗೆ ಅಡ್ಡವಾಗಿ ಐದು ಸೇತುವೆ ಕಟ್ಟಲಾಗಿದೆ. ಈ ಸೇತುವೆಯ ಕಂಬಗಳಿಂದ ನೀರಿನ ಹರಿವಿಗೆ ತಡೆಯಾಗುತ್ತಿರುವುದರಿಂದ ಪ್ರತಿ ಮಳೆಗಾಲದಲ್ಲಿ ನದಿಯಂಚಿನ ಹಳ್ಳಿಗಳು ಕೃತಕ ಪ್ರವಾಹಕ್ಕೆ ಈಡಾಗುತ್ತಿವೆ. ಕಿಂಡಿ ಅಣೆಕಟ್ಟಾದರೆ ನೆರೆ ಹಾವಳಿ ಹೆಚ್ಚಾಗಲಿದೆಯೆಂದು ಹಳ್ಳಿಗರು ಭಯಭೀತರಾಗಿದ್ದಾರೆ. ಪರಿಸರ ಸೂಕ್ಷ್ಮ ಪ್ರದೇಶವಿದಾದ್ದರಿಂದ ಒಂದಲ್ಲ ಒಂದು ರೀತಿಯ ಅನಾಹುತ ಕಿಂಡಿ ಅಣೆಕಟ್ಟೆಯಿಂದ ಆಗಲಿದೆಯೆಂದು ಭೂವಿಜ್ಞಾನಿಗಳು ಮತ್ತು ಪರಿಸರ ತಜ್ಞರು ಈಗಾಲೆ ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....