Homeಕರ್ನಾಟಕಕುಮಟಾ: ಕಿಂಡಿ ಅಣೆಕಟ್ಟು ಕೃತಕ ಪ್ರವಾಹ ತರುವ ಭೀತಿ - ಹಳ್ಳಿಗರ ವಿರೋಧ

ಕುಮಟಾ: ಕಿಂಡಿ ಅಣೆಕಟ್ಟು ಕೃತಕ ಪ್ರವಾಹ ತರುವ ಭೀತಿ – ಹಳ್ಳಿಗರ ವಿರೋಧ

- Advertisement -
- Advertisement -

ಪಶ್ಚಿಮ ಘಟ್ಟದ ತಪ್ಪಲಲ್ಲಿರುವ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ 1,400 ಕಿಂಡಿ ಅಣೆಕಟ್ಟು ಕಟ್ಟುವ ಸಣ್ಣ ನೀರಾವರಿ ಮಂತ್ರಿ ಮಾಧುಸ್ವಾಮಿ ಮತ್ತು ಅವರ ಸಲೆಹೆಗಾರ ಅಧಿಕಾರಿಗಳ ನೀರಾವರಿ ಯೋಜನೆಯ ಒಂದು ಸ್ಯಾಂಪಲ್ ಅನ್ನು ಉತ್ತರ ಕನ್ನಡದ ಕುಮಟಾ ತಾಲೂಕಿನ ಬೊಗರಿಬೈಲ್ ಮತ್ತು ಉಪ್ಪಿನ ಪಟ್ಟಣದ ನಡುವೆ ಕೈಗೆತ್ತಿಕೊಳ್ಳಲಾಗುತ್ತಿದೆ.

ಅಘನಾಸಿನಿ ನದಿಗೆ 200 ಕೋಟಿ ರೂ. ಖರ್ಚಿನಲ್ಲಿ ಕಿರು ಅಣೆಕಟ್ಟು ಕಟ್ಟಿ 11 ಗ್ರಾಮ ಪಂಚಾಯಿತಿ ಪ್ರದೇಶಗಳಿಗೆ ಕುಡಿಯುವ ನೀರೊದಗಿಸುವುದು ಮತ್ತು ಕೆಲವು ಎಕರೆ ಕೃಷಿ ಜಮೀನಿಗೆ ನೀರಾವರಿ ಸೌಲಭ್ಯ ಕೊಡುವುದು ಸದರಿ ಯೋಜನೆಯಯ ಘೋಷಿತ ಉದ್ದೇಶ. ಆದರೆ ಈ ಯೋಜನೆಯಿಂದ ನದಿಯಂಚಿನ ಹಳ್ಳಿಗಳಲ್ಲಿ ಮಳೆಗಾಲದಲ್ಲಿ ಕೃತಕ ಪ್ರವಾಹ ಸೃಷ್ಟಿಯಾಗುವ ಮತ್ತು ಅಣೆಕಟ್ಟೆಯ ಕೆಳ ಭಾಗದಲ್ಲಿ ಬೇಸಿಗೆಯಲ್ಲಿ ನೀರಿಗೆ ಬರ ಬರುವ ಆತಂಕ ಹುಟ್ಟಿಸಿದೆ. ರಾಜ್ಯ ನೀರಾವರಿ ನಿಗಮದ ಈ ಯೋಜನೆಯನ್ನು ಪುನರ್ ಪರಿಶೀಲಿಸಬೇಕೆಂದು ಸ್ಥಳೀಯ ಜನರು ಒಕ್ಕೊರಲಲ್ಲಿ ಒತ್ತಾಯಿಸುತ್ತಿದ್ದಾರೆ.

ಅಘನಾಶಿನಿ ನದಿಯಾಳದಿಂದ ಒಂದೂವರೆ ಮೀಟರ್ ಎತ್ತರದ ಗೋಡೆ ಕಟ್ಟಲಾಗುತ್ತದೆ. ಅದರ ಮೇಲೆ ಕಿಂಡಿ ಆಣೆಕಟ್ಟು ನಿರ್ಮಿಸಲಾಗವುದು. ಮೇಲ್ಭಾಗದಲ್ಲಿ ಸೇತುವೆ, ರಸ್ತೆ ಮಾಡಲಾಗುವುದು. ಅಣೆಕಟ್ಟೆಯಲ್ಲಿ 0.2 ಟಿ.ಎಮ್.ಸಿ. ಅಡಿ ನೀರು ಸಂಗ್ರಹಿಲಾಗುತ್ತದೆ. ಕಾಮಗಾರಿ ಪೂರ್ಣಗೊಳ್ಳಲು ಎರಡು ವರ್ಷ ಬೇಕಾಗಬಹುದೆಂದು ಕಾಮಗಾರಿಯ ಗುತ್ತಿಗೆ ಪಡೆದಿರುವ ಬೆಂಗಳೂರಿನ ಇ.ಐ.ಟೆಕ್ನಾಲಜಿ ಸಮಸ್ಥೆ ಮತ್ತು ನೀರಾವರಿ ನಿಗಮದ ಅಧಿಕಾರಿಗಳು ಹೇಳುತ್ತಾರೆ. ಈಗಾಗಲೇ ಬೊಗರಿಬೈಲ್, ಉಪ್ಪಿನಪಟ್ಟಣ ಧಕ್ಕೆ, ಕಲ್ಲಬ್ಬೆ, ಅಂತ್ರವಳ್ಳಿ ಮುಂತಾದೆಡೆ ಸಮೀಕ್ಷೆ ನಡೆಸಲಾಗುತ್ತಿದೆ.

ನದಿ ನೀರಿನ ಮಟ್ಟಕ್ಕಿಂತ ಎರಡು ಅಡಿಗಳಷ್ಟು ಹೆಚ್ಚು ನೀರನ್ನು ಬೇಸಿಗೆಯ ಉಬ್ಬರದ ಹೊತ್ತಲ್ಲಿ ಸಂಗ್ರಹಿಸಲಾಗುತ್ತದೆ; ಹತ್ತಿರದ ಚಂಡಿಕಾ ಹೊಳೆಯಲ್ಲೂ ನೀರು ಸಂಗ್ರಹಿಸಲಾಗತ್ತದೆ. ಸಂಗ್ರಹವಾದ ನೀರನ್ನು ಕುಡಿಯುವ ನೀರಿನ ಯೋಜನೆಗಾಗಿ ಪೈಪ್‌ಗಳ ಮೂಲಕ ಹರಿಸಲಾಗತ್ತದೆ. ಮಳೆಗಾಲದಲ್ಲಿ ಅಣೆಕಟ್ಟೆಯ ಎಲ್ಲ ಕಿಂಡಿ ತೆರೆದಿಡಲಾಗುತ್ತದೆ. ಇದರಿಂದಾಗಿ ನೀರು ಸರಾಗವಾಗಿ ಹರಿದು ಹೋಗುತ್ತದೆ. ಯೋಜನೆಯಿಂದ ಜನವಸತಿ ಪ್ರದೇಶ ಮಳುಗಡೆಯಾಗುವುದಿಲ್ಲವೆಂದು ಅಧಿಕಾರಿಗಳು ಹೇಳುತ್ತಾರೆ. ಈ ಮಾತನ್ನು ನದಿ ಪಾತ್ರದ ಇಕ್ಕೆಲದಲ್ಲಿರುವ ಮಂದಿ ಒಪ್ಪುವುದಿಲ್ಲ.

ಬೊಗರಿಬೈಲ್ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದು ಸುಮಾರು 500 ಮೀಟರ್ ಅಂತರದಲ್ಲಿ ಕಿರು ಅಣೆಕಟ್ಟು ಕಟ್ಟಲಾಗುತ್ತದೆ. ಸೇತುವೆಯ ಕಂಬಗಳು ನೀರು ಸರಾಗವಾಗಿ ಹರಿಯಲು ತಡೆಯೊಡ್ಡುತ್ತವೆ. ಕಂಬಗಳ ಹತ್ತಿರ ನೀರು ವೇಗಪಡೆದು ನದಿಯ ಎರಡೂ ಕಡೆಯ ಕೃಷಿ ಭೂಮಿ ಕೊರೆದು ಹಾನಿಯಾಗಲಿದೆ. ಕಳೆದ ಜುಲೈನಲ್ಲಿ ಪ್ರವಾಹ ಬಂದಾಗ ಸಾಕಷ್ಟು ಅನಾಹುತವಾಗಿದೆ. ಈ ಭಾಗದ ಅಘನಾಶಿನಿ ನದಿಗೆ ಅಡ್ಡವಾಗಿ ಐದು ಸೇತುವೆ ಕಟ್ಟಲಾಗಿದೆ. ಈ ಸೇತುವೆಯ ಕಂಬಗಳಿಂದ ನೀರಿನ ಹರಿವಿಗೆ ತಡೆಯಾಗುತ್ತಿರುವುದರಿಂದ ಪ್ರತಿ ಮಳೆಗಾಲದಲ್ಲಿ ನದಿಯಂಚಿನ ಹಳ್ಳಿಗಳು ಕೃತಕ ಪ್ರವಾಹಕ್ಕೆ ಈಡಾಗುತ್ತಿವೆ. ಕಿಂಡಿ ಅಣೆಕಟ್ಟಾದರೆ ನೆರೆ ಹಾವಳಿ ಹೆಚ್ಚಾಗಲಿದೆಯೆಂದು ಹಳ್ಳಿಗರು ಭಯಭೀತರಾಗಿದ್ದಾರೆ. ಪರಿಸರ ಸೂಕ್ಷ್ಮ ಪ್ರದೇಶವಿದಾದ್ದರಿಂದ ಒಂದಲ್ಲ ಒಂದು ರೀತಿಯ ಅನಾಹುತ ಕಿಂಡಿ ಅಣೆಕಟ್ಟೆಯಿಂದ ಆಗಲಿದೆಯೆಂದು ಭೂವಿಜ್ಞಾನಿಗಳು ಮತ್ತು ಪರಿಸರ ತಜ್ಞರು ಈಗಾಲೆ ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಸಾವಿರಾರು ಕಿರು ಅಣೆಕಟ್ಟೆ ಯೋಜನೆ; ಗುಡ್ಡಗಳ ಸಾಲು ಕುಸಿವ ಆತಂಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...