Homeಕರೋನಾ ತಲ್ಲಣಕುಂಭಮೇಳದ ’ಶಾಹಿ ಸ್ನಾನ'ದಲ್ಲಿ ದೈಹಿಕ ಅಂತರ ಅಸಾಧ್ಯ ಎಂದ ಅಧಿಕಾರಿಗಳು

ಕುಂಭಮೇಳದ ’ಶಾಹಿ ಸ್ನಾನ’ದಲ್ಲಿ ದೈಹಿಕ ಅಂತರ ಅಸಾಧ್ಯ ಎಂದ ಅಧಿಕಾರಿಗಳು

- Advertisement -
- Advertisement -

ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದ ’ಶಾಹಿ ಸ್ನಾನ’ದ ಸಂದರ್ಭದಲ್ಲಿ ಘಾಟ್‌ಗಳಲ್ಲಿ ಪರಸ್ಪರ ಅಂತರವನ್ನು ಜಾರಿಗೊಳಿಸಲು ಪೊಲೀಸರು ಪ್ರಯತ್ನಿಸಿದರೆ ಕಾಲ್ತುಳಿತ ಮುಂತಾದ ಪರಿಸ್ಥಿತಿ ಉದ್ಭವಿಸಬಹುದು ಎಂದು ಇನ್ಸ್‌ಪೆಕ್ಟರ್ ಜನರಲ್ ಸಂಜಯ್ ಗುಂಜ್ಯಾಲ್ ಹೇಳಿದ್ದಾರೆ.

ಕುಂಭಮೇಳದ ಉಸ್ತುವಾರಿ ವಹಿಸಿಕೊಂಡಿರುವ ಸಂಜಯ್ ಗುಂಜ್ಯಾಲ್, “ಎರಡನೇ`ಶಾಹಿ ಸ್ನಾನ’ದ ಸಂದರ್ಭದಲ್ಲಿ ಘಾಟ್‌ಗಳಲ್ಲಿ ನಾವು ಪರಸ್ಪರ ದೂರವನ್ನು ಜಾರಿಗೊಳಿಸಲು ಪ್ರಯತ್ನಿಸಿದರೆ ಕಾಲ್ತುಳಿತದ ಪರಿಸ್ಥಿತಿ ಉದ್ಭವಿಸಬಹುದು, ಆದ್ದರಿಂದ ಇಲ್ಲಿ ದೈಹಿಕ ಅಂತರವನ್ನು ಜಾರಿಗೊಳಿಸಲು ನಮಗೆ ಸಾಧ್ಯವಾಗುವುದಿಲ್ಲ”ಎಂದಿದ್ದಾರೆ.

’ಕೊರೊನಾ ನಿಯಮಾವಳಿಗಳನ್ನು ಅನುಸರಿಸಲು ನಾವು ಜನರಿಗೆ ನಿರಂತರವಾಗಿ ಮನವಿ ಮಾಡುತ್ತಿದ್ದೇವೆ. ಆದರೆ ಅಪಾರ ಜನಸಂದಣಿಯಿಂದಾಗಿ, ಚಲನ್‌ಗಳನ್ನು ವಿತರಿಸಲು ಸಾಧ್ಯವಾಗಿಲ್ಲ. ಘಾಟ್‌ಗಳಲ್ಲಿ ದೈಹಿಕ ಅಂತರವನ್ನು ಖಚಿತಪಡಿಸುವುದು ಬಹಳ ಕಷ್ಟ” ಎಂದು ಅವರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಕುಂಭಮೇಳಕ್ಕೆ ಬರುವ ಭಕ್ತಾದಿಗಳಿಗೆ ಕೊರೊನಾ ನೆಗೆಟಿವ್ ವರದಿ ಅಗತ್ಯವಿಲ್ಲ: ಉತ್ತರಾಖಂಡ್ ಸಿಎಂ

ಸೋಮವಾರ, ಕುಂಭಮೇಳದ ಎರಡನೇ ‘ಶಾಹಿ ಸ್ನಾನ’ ಸಂದರ್ಭದಲ್ಲಿ ಉತ್ತರಾಖಂಡದ ಹರಿದ್ವಾರದ ಹರ್‌ ಕಿ ಪೌಡಿಯ ಗಂಗಾ ನದಿಯಲ್ಲಿ ಸಾವಿರಾರು ಭಕ್ತರು ಸ್ನಾನ ಮಾಡಿದ್ದಾರೆ. ಸಾರ್ವಜನಿಕರಿಗೆ ಬೆಳಿಗ್ಗೆ 7 ಗಂಟೆಯವರೆಗೆ ಇಲ್ಲಿ ಸ್ನಾನಕ್ಕೆ ಅವಕಾಶ ನೀಡಲಾಗಿತ್ತು. 350 ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಕುಂಭಮೇಳ ಪ್ರದೇಶದ ವಿವಿಧ ಸ್ಥಳಗಳಲ್ಲಿ ಅಳವಡಿಸಲಾಗಿದೆ. ಮಾಸ್ಕ್ ಧರಿಸದೆ ಇರುವ ವ್ಯಕ್ತಿಗಳ ಮೇಲೆ ನಿಗಾ ಇಡಲಾಗುತ್ತಿದೆ.

ಇದನ್ನೂ ಓದಿ: ಕೂಲಿ ಕಾರ್ಮಿಕ ಸೈಯದ್ ಇಸಾಕ್‌ರ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: 11 ಸಾವಿರ ಪುಸ್ತಕಗಳು ಭಸ್ಮ

ಘಾಟ್‌ಗಳನ್ನು ಖಾಲಿ ಮಾಡಲು ಮತ್ತು ಸ್ವಚ್ಛಗೊಳಿಸಲು ’ಅಖಾರ’ರ ಸ್ನಾನದ ನಡುವೆ ಅರ್ಧ ಘಂಟೆಯ ಅಂತರವನ್ನು ನಾವು ನೀಡುತ್ತಿದ್ದೇವೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷ ನಾವು ನಿರೀಕ್ಷಿಸಿದ್ದಕ್ಕಿಂತ 50% ಕಡಿಮೆ ಜನ ಸೇರಿದ್ದಾರೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಹೇಳಿದ್ದಾರೆ.

ಮಹಾಶಿವರಾತ್ರಿಯ ಪ್ರಯುಕ್ತ ಮಾರ್ಚ್‌ 11ರಂದು ಮೊದಲ ಶಾಹಿ ಸ್ನಾನ ನಡೆದಿತತ್ತು. ಎರಡನೇ ಪವಿತ್ರ ಸ್ನಾನ ಸೋಮವಾರ ಹಾಗೂ ಮೂರನೇ ಶಾಹಿ ಸ್ನಾನವು ಏಪ್ರಿಲ್‌ 14ರಂದು ನಡೆಯಲಿದೆ.

ಉತ್ತರಾಖಂಡದಲ್ಲಿ ಭಾನುವಾರ 1,333 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,08,812 ಕ್ಕೆ ತಲುಪಿದೆ.


ಇದನ್ನೂ ಓದಿ: ಇತ್ತ ಲಸಿಕೆ ಇಲ್ಲದೆ ರಾಜ್ಯಗಳ ಪರದಾಟ, ಅತ್ತ ಗುಜರಾತ್‌ನಲ್ಲಿ ಬಿಜೆಪಿಯಿಂದ 1000 ರೆಮ್‌ಡೆಸಿವಿರ್‌ ಲಸಿಕೆ ವಿತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...