Homeಕರೋನಾ ತಲ್ಲಣಕುಂಭಮೇಳದ ’ಶಾಹಿ ಸ್ನಾನ'ದಲ್ಲಿ ದೈಹಿಕ ಅಂತರ ಅಸಾಧ್ಯ ಎಂದ ಅಧಿಕಾರಿಗಳು

ಕುಂಭಮೇಳದ ’ಶಾಹಿ ಸ್ನಾನ’ದಲ್ಲಿ ದೈಹಿಕ ಅಂತರ ಅಸಾಧ್ಯ ಎಂದ ಅಧಿಕಾರಿಗಳು

- Advertisement -
- Advertisement -

ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದ ’ಶಾಹಿ ಸ್ನಾನ’ದ ಸಂದರ್ಭದಲ್ಲಿ ಘಾಟ್‌ಗಳಲ್ಲಿ ಪರಸ್ಪರ ಅಂತರವನ್ನು ಜಾರಿಗೊಳಿಸಲು ಪೊಲೀಸರು ಪ್ರಯತ್ನಿಸಿದರೆ ಕಾಲ್ತುಳಿತ ಮುಂತಾದ ಪರಿಸ್ಥಿತಿ ಉದ್ಭವಿಸಬಹುದು ಎಂದು ಇನ್ಸ್‌ಪೆಕ್ಟರ್ ಜನರಲ್ ಸಂಜಯ್ ಗುಂಜ್ಯಾಲ್ ಹೇಳಿದ್ದಾರೆ.

ಕುಂಭಮೇಳದ ಉಸ್ತುವಾರಿ ವಹಿಸಿಕೊಂಡಿರುವ ಸಂಜಯ್ ಗುಂಜ್ಯಾಲ್, “ಎರಡನೇ`ಶಾಹಿ ಸ್ನಾನ’ದ ಸಂದರ್ಭದಲ್ಲಿ ಘಾಟ್‌ಗಳಲ್ಲಿ ನಾವು ಪರಸ್ಪರ ದೂರವನ್ನು ಜಾರಿಗೊಳಿಸಲು ಪ್ರಯತ್ನಿಸಿದರೆ ಕಾಲ್ತುಳಿತದ ಪರಿಸ್ಥಿತಿ ಉದ್ಭವಿಸಬಹುದು, ಆದ್ದರಿಂದ ಇಲ್ಲಿ ದೈಹಿಕ ಅಂತರವನ್ನು ಜಾರಿಗೊಳಿಸಲು ನಮಗೆ ಸಾಧ್ಯವಾಗುವುದಿಲ್ಲ”ಎಂದಿದ್ದಾರೆ.

’ಕೊರೊನಾ ನಿಯಮಾವಳಿಗಳನ್ನು ಅನುಸರಿಸಲು ನಾವು ಜನರಿಗೆ ನಿರಂತರವಾಗಿ ಮನವಿ ಮಾಡುತ್ತಿದ್ದೇವೆ. ಆದರೆ ಅಪಾರ ಜನಸಂದಣಿಯಿಂದಾಗಿ, ಚಲನ್‌ಗಳನ್ನು ವಿತರಿಸಲು ಸಾಧ್ಯವಾಗಿಲ್ಲ. ಘಾಟ್‌ಗಳಲ್ಲಿ ದೈಹಿಕ ಅಂತರವನ್ನು ಖಚಿತಪಡಿಸುವುದು ಬಹಳ ಕಷ್ಟ” ಎಂದು ಅವರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಕುಂಭಮೇಳಕ್ಕೆ ಬರುವ ಭಕ್ತಾದಿಗಳಿಗೆ ಕೊರೊನಾ ನೆಗೆಟಿವ್ ವರದಿ ಅಗತ್ಯವಿಲ್ಲ: ಉತ್ತರಾಖಂಡ್ ಸಿಎಂ

ಸೋಮವಾರ, ಕುಂಭಮೇಳದ ಎರಡನೇ ‘ಶಾಹಿ ಸ್ನಾನ’ ಸಂದರ್ಭದಲ್ಲಿ ಉತ್ತರಾಖಂಡದ ಹರಿದ್ವಾರದ ಹರ್‌ ಕಿ ಪೌಡಿಯ ಗಂಗಾ ನದಿಯಲ್ಲಿ ಸಾವಿರಾರು ಭಕ್ತರು ಸ್ನಾನ ಮಾಡಿದ್ದಾರೆ. ಸಾರ್ವಜನಿಕರಿಗೆ ಬೆಳಿಗ್ಗೆ 7 ಗಂಟೆಯವರೆಗೆ ಇಲ್ಲಿ ಸ್ನಾನಕ್ಕೆ ಅವಕಾಶ ನೀಡಲಾಗಿತ್ತು. 350 ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಕುಂಭಮೇಳ ಪ್ರದೇಶದ ವಿವಿಧ ಸ್ಥಳಗಳಲ್ಲಿ ಅಳವಡಿಸಲಾಗಿದೆ. ಮಾಸ್ಕ್ ಧರಿಸದೆ ಇರುವ ವ್ಯಕ್ತಿಗಳ ಮೇಲೆ ನಿಗಾ ಇಡಲಾಗುತ್ತಿದೆ.

ಇದನ್ನೂ ಓದಿ: ಕೂಲಿ ಕಾರ್ಮಿಕ ಸೈಯದ್ ಇಸಾಕ್‌ರ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: 11 ಸಾವಿರ ಪುಸ್ತಕಗಳು ಭಸ್ಮ

ಘಾಟ್‌ಗಳನ್ನು ಖಾಲಿ ಮಾಡಲು ಮತ್ತು ಸ್ವಚ್ಛಗೊಳಿಸಲು ’ಅಖಾರ’ರ ಸ್ನಾನದ ನಡುವೆ ಅರ್ಧ ಘಂಟೆಯ ಅಂತರವನ್ನು ನಾವು ನೀಡುತ್ತಿದ್ದೇವೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷ ನಾವು ನಿರೀಕ್ಷಿಸಿದ್ದಕ್ಕಿಂತ 50% ಕಡಿಮೆ ಜನ ಸೇರಿದ್ದಾರೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಹೇಳಿದ್ದಾರೆ.

ಮಹಾಶಿವರಾತ್ರಿಯ ಪ್ರಯುಕ್ತ ಮಾರ್ಚ್‌ 11ರಂದು ಮೊದಲ ಶಾಹಿ ಸ್ನಾನ ನಡೆದಿತತ್ತು. ಎರಡನೇ ಪವಿತ್ರ ಸ್ನಾನ ಸೋಮವಾರ ಹಾಗೂ ಮೂರನೇ ಶಾಹಿ ಸ್ನಾನವು ಏಪ್ರಿಲ್‌ 14ರಂದು ನಡೆಯಲಿದೆ.

ಉತ್ತರಾಖಂಡದಲ್ಲಿ ಭಾನುವಾರ 1,333 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,08,812 ಕ್ಕೆ ತಲುಪಿದೆ.


ಇದನ್ನೂ ಓದಿ: ಇತ್ತ ಲಸಿಕೆ ಇಲ್ಲದೆ ರಾಜ್ಯಗಳ ಪರದಾಟ, ಅತ್ತ ಗುಜರಾತ್‌ನಲ್ಲಿ ಬಿಜೆಪಿಯಿಂದ 1000 ರೆಮ್‌ಡೆಸಿವಿರ್‌ ಲಸಿಕೆ ವಿತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...