Homeಮುಖಪುಟಕುಂಭಮೇಳ | ಗಂಗಾ ತೀರದಲ್ಲಿ ಮಲವಿಸರ್ಜನೆ; ಉತ್ತರ ಪ್ರದೇಶ ಸರ್ಕಾರ ಪ್ರತಿಕ್ರಿಯೆ ಕೇಳಿದ ಎನ್‌ಜಿಟಿ

ಕುಂಭಮೇಳ | ಗಂಗಾ ತೀರದಲ್ಲಿ ಮಲವಿಸರ್ಜನೆ; ಉತ್ತರ ಪ್ರದೇಶ ಸರ್ಕಾರ ಪ್ರತಿಕ್ರಿಯೆ ಕೇಳಿದ ಎನ್‌ಜಿಟಿ

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗರಜ್‌ನಲ್ಲಿ ನಡೆಯುತ್ತಿರುವ 2025ರ ಮಹಾ ಕುಂಭಮೇಳದಲ್ಲಿ ಸಮರ್ಪಕ ನೈರ್ಮಲ್ಯ ಸೌಲಭ್ಯಗಳು ಒದಗಿಸದ ಕಾರಣಕ್ಕಾಗಿ ಗಂಗಾ ನದಿಯ ದಡದಲ್ಲಿ ಬಯಲು ಮಲವಿಸರ್ಜನೆ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರ, ಪ್ರಯಾಗ್‌ರಾಜ್ ಮೇಳ ಪ್ರಾಧಿಕಾರ ಮತ್ತು ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ (UP PCB)ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT)ಯು ನೋಟಿಸ್ ಜಾರಿ ಮಾಡಿದೆ. ಕುಂಭಮೇಳ

ನ್ಯಾಯಮಂಡಳಿಯ ಅಧ್ಯಕ್ಷ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಮತ್ತು ತಜ್ಞ ಸದಸ್ಯ ಡಾ. ಎ. ಸೆಂಥಿಲ್ ವೆಲ್ ಅವರ ಪೀಠವು ಅಧಿಕಾರಿಗಳಿಂದ ಪ್ರತಿಕ್ರಿಯೆಗಳನ್ನು ಕೋರಿದ್ದು, ಮುಂದಿನ ವಿಚಾರಣೆಗೆ ಒಂದು ವಾರ ಮೊದಲು ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ನಿರ್ದೇಶಿಸಿದೆ. ಪ್ರಕರಣದ ವಿಚಾರಣೆ ಫೆಬ್ರವರಿ 24 ರಂದು ನಡೆಯಲಿದೆ. ಕುಂಭಮೇಳ

“ಸಾಕಷ್ಟು ಸೌಲಭ್ಯಗಳ ಕೊರತೆಯಿಂದಾಗಿ ಲಕ್ಷಾಂತರ ಸಾಮಾನ್ಯ ಜನರು ಮತ್ತು ಕುಟುಂಬಗಳು ಗಂಗಾ ನದಿಯ ದಡದಲ್ಲಿ ಬಯಲು ಮಲವಿಸರ್ಜನೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಮೂಲ ಅರ್ಜಿಯಲ್ಲಿ ಅರ್ಜಿದಾರರು ವೀಡಿಯೊಗಳನ್ನು ಹೊಂದಿರುವ ಪೆನ್ ಡ್ರೈವ್ ಅನ್ನು ಲಗತ್ತಿಸಿದ್ದಾರೆ” ಎಂದು ನ್ಯಾಯಮಂಡಳಿಯು ಹೇಳಿದೆ.

ಕುಂಭಮೇಳ ಸ್ಥಳದಲ್ಲಿ ನೈರ್ಮಲ್ಯ ಸೌಲಭ್ಯಗಳ ಕಳಪೆ ನಿಯೋಜನೆಯಿಂದಾಗಿ ದೊಡ್ಡ ಪ್ರಮಾಣದ ಮಾಲಿನ್ಯವನ್ನು ತಡೆಗಟ್ಟಲು ರಾಜ್ಯ ವಿಫಲವಾಗಿದೆ ಎಂಬ ಕಾರಣಕ್ಕೆ ಉತ್ತರ ಪ್ರದೇಶ ಸರ್ಕಾರದಿಂದ ₹10 ಕೋಟಿ ಪರಿಸರ ಪರಿಹಾರವನ್ನು ಕೋರಿ ನಿಪುಣ್ ಭೂಷಣ್ ಎಂಬವರು ಅರ್ಜಿಯನ್ನು ಸಲ್ಲಿಸಿದ್ದಾರೆ.

ಪರಿಹಾರಕ್ಕಾಗಿ ಸಲ್ಲಿಸಿದ್ದ ತನ್ನ ಬೇಡಿಕೆಯಲ್ಲಿ ಅರ್ಜಿದಾರ ಭೂಷಣ್ ಅವರು, ಮಾಲಿನ್ಯಕಾರಕ ಪಾವತಿ ತತ್ವವನ್ನು ಪ್ರಸ್ತಾಪಿಸಿದ್ದಾರೆ. ಈ ತತ್ವವೂ ಪರಿಸರ ಕಾನೂನಿನಲ್ಲಿ ವ್ಯಾಪಕವಾಗಿ ಗುರುತಿಸಲ್ಪಟ್ಟ ತತ್ವವಾಗಿದ್ದು, ಮಾಲಿನ್ಯದಿಂದ ಪರಿಸರಕ್ಕೆ ಉಂಟಾಗುವ ಹಾನಿಯ ವೆಚ್ಚವನ್ನು ಭರಿಸಲು ಮಾಲಿನ್ಯಕಾರಕ ಪಾವತಿಯನ್ನು ಕಡ್ಡಾಯ ಮಾಡುತ್ತದೆ.

ಸಂವಿಧಾನದ 48A ವಿಧಿಯ ಅಡಿಯಲ್ಲಿ ಕರ್ತವ್ಯ ಲೋಪವನ್ನು ಕೂಡಾ ಅರ್ಜಿಯು ಆರೋಪಿಸಿದ್ದು, ಈ ವಿಧಿಯು ಪರಿಸರವನ್ನು ರಕ್ಷಿಸಲು ಮತ್ತು ಸುಧಾರಿಸಲು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳುತ್ತದೆ. ಸಾಮೂಹಿಕ ಬಯಲು ಮಲವಿಸರ್ಜನೆಗೆ ಅವಕಾಶ ನೀಡುವುದು ಮತ್ತು ಮಾಲಿನ್ಯವನ್ನು ತಡೆಗಟ್ಟಲು ವಿಫಲವಾಗುವುದು ಸಾಂವಿಧಾನಿಕ ಆದೇಶವನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯನ್ನು ದೂರಲಾಗಿದೆ.

ಜೈವಿಕ ಶೌಚಾಲಯಗಳನ್ನು ಸ್ಥಾಪಿಸುವ ಸರ್ಕಾರಿ ಭರವಸೆಗಳ ಹೊರತಾಗಿಯೂ, ಸಾವಿರಾರು ಯಾತ್ರಿಕರು ಸ್ವಚ್ಛ ಅಥವಾ ಕ್ರಿಯಾತ್ಮಕ ಸೌಲಭ್ಯಗಳ ಕೊರತೆಯಿಂದಾಗಿ ಬಯಲಿನಲ್ಲಿ ಮಲವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನಿಯೋಜಿಸಲಾದ 1.5 ಲಕ್ಷ ಜೈವಿಕ ಶೌಚಾಲಯಗಳು ಕಾರ್ಯನಿರ್ವಹಿಸುತ್ತಿದ್ದರೂ ಸಹ, ಜನರ ಬೃಹತ್ ಗುಂಪಿಗೆ ಅವು ಸಾಕಾಗುವುದಿಲ್ಲ ಎಂದು ಅವರು ವಾದಿಸಿದಿದ್ದಾರೆ.

ಕುಂಭಮೇಳದ ಸಂದರ್ಶಕರು ದಾಖಲಿಸಿದ ವೀಡಿಯೊಗಳಲ್ಲಿ ನದಿ ದಡದಲ್ಲಿ ಮಾನವ ತ್ಯಾಜ್ಯ ಸಂಗ್ರಹವಾಗುವುದನ್ನು ತೋರಿಸುತ್ತವೆ. ಇದು ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಸುರಕ್ಷತೆಯ ಬಗ್ಗೆ ಗಂಭೀರ ಆತಂಕವನ್ನು ಹುಟ್ಟುಹಾಕುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅಷ್ಟೆ ಅಲ್ಲದೆ, ಅರ್ಜಿಯು ನವೆಂಬರ್ 2024 ರ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಸಹ ಉಲ್ಲೇಖಿಸಿದೆ. ಈ ಗುಣಮಟ್ಟದ ವರದಿಯಲ್ಲಿ, ನದಿ ನೀರಿನಲ್ಲಿ ಮಲದಲ್ಲಿ ಕಂಡುಬರುವ ಬ್ಯಾಕ್ಟೀರಿಯಾ ಇರುವುದನ್ನು ಸೂಚಿಸಲಾಗಿತ್ತು. ಅಂತಹ ಮಾಲಿನ್ಯಕಾರಕವು ಕಾಲರಾ, ಹೆಪಟೈಟಿಸ್ ಎ ಮತ್ತು ಪೋಲಿಯೊದಂತಹ ಕಾಯಿಲೆಗಳಿಗೆ ಕಾರಣವಾಗಲಿದೆ. ಹಾಗಾಗಿ ಇದು ಗಂಗಾದಲ್ಲಿ ಪವಿತ್ರ ಸ್ನಾನ ಮಾಡುವ ಲಕ್ಷಾಂತರ ಭಕ್ತರಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ವಾದಿಸಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...