Homeಮುಖಪುಟಕುಂಭಮೇಳ | ಗಂಗಾ ತೀರದಲ್ಲಿ ಮಲವಿಸರ್ಜನೆ; ಉತ್ತರ ಪ್ರದೇಶ ಸರ್ಕಾರ ಪ್ರತಿಕ್ರಿಯೆ ಕೇಳಿದ ಎನ್‌ಜಿಟಿ

ಕುಂಭಮೇಳ | ಗಂಗಾ ತೀರದಲ್ಲಿ ಮಲವಿಸರ್ಜನೆ; ಉತ್ತರ ಪ್ರದೇಶ ಸರ್ಕಾರ ಪ್ರತಿಕ್ರಿಯೆ ಕೇಳಿದ ಎನ್‌ಜಿಟಿ

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗರಜ್‌ನಲ್ಲಿ ನಡೆಯುತ್ತಿರುವ 2025ರ ಮಹಾ ಕುಂಭಮೇಳದಲ್ಲಿ ಸಮರ್ಪಕ ನೈರ್ಮಲ್ಯ ಸೌಲಭ್ಯಗಳು ಒದಗಿಸದ ಕಾರಣಕ್ಕಾಗಿ ಗಂಗಾ ನದಿಯ ದಡದಲ್ಲಿ ಬಯಲು ಮಲವಿಸರ್ಜನೆ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರ, ಪ್ರಯಾಗ್‌ರಾಜ್ ಮೇಳ ಪ್ರಾಧಿಕಾರ ಮತ್ತು ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ (UP PCB)ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT)ಯು ನೋಟಿಸ್ ಜಾರಿ ಮಾಡಿದೆ. ಕುಂಭಮೇಳ

ನ್ಯಾಯಮಂಡಳಿಯ ಅಧ್ಯಕ್ಷ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಮತ್ತು ತಜ್ಞ ಸದಸ್ಯ ಡಾ. ಎ. ಸೆಂಥಿಲ್ ವೆಲ್ ಅವರ ಪೀಠವು ಅಧಿಕಾರಿಗಳಿಂದ ಪ್ರತಿಕ್ರಿಯೆಗಳನ್ನು ಕೋರಿದ್ದು, ಮುಂದಿನ ವಿಚಾರಣೆಗೆ ಒಂದು ವಾರ ಮೊದಲು ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ನಿರ್ದೇಶಿಸಿದೆ. ಪ್ರಕರಣದ ವಿಚಾರಣೆ ಫೆಬ್ರವರಿ 24 ರಂದು ನಡೆಯಲಿದೆ. ಕುಂಭಮೇಳ

“ಸಾಕಷ್ಟು ಸೌಲಭ್ಯಗಳ ಕೊರತೆಯಿಂದಾಗಿ ಲಕ್ಷಾಂತರ ಸಾಮಾನ್ಯ ಜನರು ಮತ್ತು ಕುಟುಂಬಗಳು ಗಂಗಾ ನದಿಯ ದಡದಲ್ಲಿ ಬಯಲು ಮಲವಿಸರ್ಜನೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಮೂಲ ಅರ್ಜಿಯಲ್ಲಿ ಅರ್ಜಿದಾರರು ವೀಡಿಯೊಗಳನ್ನು ಹೊಂದಿರುವ ಪೆನ್ ಡ್ರೈವ್ ಅನ್ನು ಲಗತ್ತಿಸಿದ್ದಾರೆ” ಎಂದು ನ್ಯಾಯಮಂಡಳಿಯು ಹೇಳಿದೆ.

ಕುಂಭಮೇಳ ಸ್ಥಳದಲ್ಲಿ ನೈರ್ಮಲ್ಯ ಸೌಲಭ್ಯಗಳ ಕಳಪೆ ನಿಯೋಜನೆಯಿಂದಾಗಿ ದೊಡ್ಡ ಪ್ರಮಾಣದ ಮಾಲಿನ್ಯವನ್ನು ತಡೆಗಟ್ಟಲು ರಾಜ್ಯ ವಿಫಲವಾಗಿದೆ ಎಂಬ ಕಾರಣಕ್ಕೆ ಉತ್ತರ ಪ್ರದೇಶ ಸರ್ಕಾರದಿಂದ ₹10 ಕೋಟಿ ಪರಿಸರ ಪರಿಹಾರವನ್ನು ಕೋರಿ ನಿಪುಣ್ ಭೂಷಣ್ ಎಂಬವರು ಅರ್ಜಿಯನ್ನು ಸಲ್ಲಿಸಿದ್ದಾರೆ.

ಪರಿಹಾರಕ್ಕಾಗಿ ಸಲ್ಲಿಸಿದ್ದ ತನ್ನ ಬೇಡಿಕೆಯಲ್ಲಿ ಅರ್ಜಿದಾರ ಭೂಷಣ್ ಅವರು, ಮಾಲಿನ್ಯಕಾರಕ ಪಾವತಿ ತತ್ವವನ್ನು ಪ್ರಸ್ತಾಪಿಸಿದ್ದಾರೆ. ಈ ತತ್ವವೂ ಪರಿಸರ ಕಾನೂನಿನಲ್ಲಿ ವ್ಯಾಪಕವಾಗಿ ಗುರುತಿಸಲ್ಪಟ್ಟ ತತ್ವವಾಗಿದ್ದು, ಮಾಲಿನ್ಯದಿಂದ ಪರಿಸರಕ್ಕೆ ಉಂಟಾಗುವ ಹಾನಿಯ ವೆಚ್ಚವನ್ನು ಭರಿಸಲು ಮಾಲಿನ್ಯಕಾರಕ ಪಾವತಿಯನ್ನು ಕಡ್ಡಾಯ ಮಾಡುತ್ತದೆ.

ಸಂವಿಧಾನದ 48A ವಿಧಿಯ ಅಡಿಯಲ್ಲಿ ಕರ್ತವ್ಯ ಲೋಪವನ್ನು ಕೂಡಾ ಅರ್ಜಿಯು ಆರೋಪಿಸಿದ್ದು, ಈ ವಿಧಿಯು ಪರಿಸರವನ್ನು ರಕ್ಷಿಸಲು ಮತ್ತು ಸುಧಾರಿಸಲು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳುತ್ತದೆ. ಸಾಮೂಹಿಕ ಬಯಲು ಮಲವಿಸರ್ಜನೆಗೆ ಅವಕಾಶ ನೀಡುವುದು ಮತ್ತು ಮಾಲಿನ್ಯವನ್ನು ತಡೆಗಟ್ಟಲು ವಿಫಲವಾಗುವುದು ಸಾಂವಿಧಾನಿಕ ಆದೇಶವನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯನ್ನು ದೂರಲಾಗಿದೆ.

ಜೈವಿಕ ಶೌಚಾಲಯಗಳನ್ನು ಸ್ಥಾಪಿಸುವ ಸರ್ಕಾರಿ ಭರವಸೆಗಳ ಹೊರತಾಗಿಯೂ, ಸಾವಿರಾರು ಯಾತ್ರಿಕರು ಸ್ವಚ್ಛ ಅಥವಾ ಕ್ರಿಯಾತ್ಮಕ ಸೌಲಭ್ಯಗಳ ಕೊರತೆಯಿಂದಾಗಿ ಬಯಲಿನಲ್ಲಿ ಮಲವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನಿಯೋಜಿಸಲಾದ 1.5 ಲಕ್ಷ ಜೈವಿಕ ಶೌಚಾಲಯಗಳು ಕಾರ್ಯನಿರ್ವಹಿಸುತ್ತಿದ್ದರೂ ಸಹ, ಜನರ ಬೃಹತ್ ಗುಂಪಿಗೆ ಅವು ಸಾಕಾಗುವುದಿಲ್ಲ ಎಂದು ಅವರು ವಾದಿಸಿದಿದ್ದಾರೆ.

ಕುಂಭಮೇಳದ ಸಂದರ್ಶಕರು ದಾಖಲಿಸಿದ ವೀಡಿಯೊಗಳಲ್ಲಿ ನದಿ ದಡದಲ್ಲಿ ಮಾನವ ತ್ಯಾಜ್ಯ ಸಂಗ್ರಹವಾಗುವುದನ್ನು ತೋರಿಸುತ್ತವೆ. ಇದು ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಸುರಕ್ಷತೆಯ ಬಗ್ಗೆ ಗಂಭೀರ ಆತಂಕವನ್ನು ಹುಟ್ಟುಹಾಕುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅಷ್ಟೆ ಅಲ್ಲದೆ, ಅರ್ಜಿಯು ನವೆಂಬರ್ 2024 ರ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಸಹ ಉಲ್ಲೇಖಿಸಿದೆ. ಈ ಗುಣಮಟ್ಟದ ವರದಿಯಲ್ಲಿ, ನದಿ ನೀರಿನಲ್ಲಿ ಮಲದಲ್ಲಿ ಕಂಡುಬರುವ ಬ್ಯಾಕ್ಟೀರಿಯಾ ಇರುವುದನ್ನು ಸೂಚಿಸಲಾಗಿತ್ತು. ಅಂತಹ ಮಾಲಿನ್ಯಕಾರಕವು ಕಾಲರಾ, ಹೆಪಟೈಟಿಸ್ ಎ ಮತ್ತು ಪೋಲಿಯೊದಂತಹ ಕಾಯಿಲೆಗಳಿಗೆ ಕಾರಣವಾಗಲಿದೆ. ಹಾಗಾಗಿ ಇದು ಗಂಗಾದಲ್ಲಿ ಪವಿತ್ರ ಸ್ನಾನ ಮಾಡುವ ಲಕ್ಷಾಂತರ ಭಕ್ತರಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ವಾದಿಸಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...