Homeಮುಖಪುಟಕುಂಭಮೇಳ | ಗಂಗಾ ತೀರದಲ್ಲಿ ಮಲವಿಸರ್ಜನೆ; ಉತ್ತರ ಪ್ರದೇಶ ಸರ್ಕಾರ ಪ್ರತಿಕ್ರಿಯೆ ಕೇಳಿದ ಎನ್‌ಜಿಟಿ

ಕುಂಭಮೇಳ | ಗಂಗಾ ತೀರದಲ್ಲಿ ಮಲವಿಸರ್ಜನೆ; ಉತ್ತರ ಪ್ರದೇಶ ಸರ್ಕಾರ ಪ್ರತಿಕ್ರಿಯೆ ಕೇಳಿದ ಎನ್‌ಜಿಟಿ

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗರಜ್‌ನಲ್ಲಿ ನಡೆಯುತ್ತಿರುವ 2025ರ ಮಹಾ ಕುಂಭಮೇಳದಲ್ಲಿ ಸಮರ್ಪಕ ನೈರ್ಮಲ್ಯ ಸೌಲಭ್ಯಗಳು ಒದಗಿಸದ ಕಾರಣಕ್ಕಾಗಿ ಗಂಗಾ ನದಿಯ ದಡದಲ್ಲಿ ಬಯಲು ಮಲವಿಸರ್ಜನೆ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರ, ಪ್ರಯಾಗ್‌ರಾಜ್ ಮೇಳ ಪ್ರಾಧಿಕಾರ ಮತ್ತು ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ (UP PCB)ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT)ಯು ನೋಟಿಸ್ ಜಾರಿ ಮಾಡಿದೆ. ಕುಂಭಮೇಳ

ನ್ಯಾಯಮಂಡಳಿಯ ಅಧ್ಯಕ್ಷ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಮತ್ತು ತಜ್ಞ ಸದಸ್ಯ ಡಾ. ಎ. ಸೆಂಥಿಲ್ ವೆಲ್ ಅವರ ಪೀಠವು ಅಧಿಕಾರಿಗಳಿಂದ ಪ್ರತಿಕ್ರಿಯೆಗಳನ್ನು ಕೋರಿದ್ದು, ಮುಂದಿನ ವಿಚಾರಣೆಗೆ ಒಂದು ವಾರ ಮೊದಲು ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ನಿರ್ದೇಶಿಸಿದೆ. ಪ್ರಕರಣದ ವಿಚಾರಣೆ ಫೆಬ್ರವರಿ 24 ರಂದು ನಡೆಯಲಿದೆ. ಕುಂಭಮೇಳ

“ಸಾಕಷ್ಟು ಸೌಲಭ್ಯಗಳ ಕೊರತೆಯಿಂದಾಗಿ ಲಕ್ಷಾಂತರ ಸಾಮಾನ್ಯ ಜನರು ಮತ್ತು ಕುಟುಂಬಗಳು ಗಂಗಾ ನದಿಯ ದಡದಲ್ಲಿ ಬಯಲು ಮಲವಿಸರ್ಜನೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಮೂಲ ಅರ್ಜಿಯಲ್ಲಿ ಅರ್ಜಿದಾರರು ವೀಡಿಯೊಗಳನ್ನು ಹೊಂದಿರುವ ಪೆನ್ ಡ್ರೈವ್ ಅನ್ನು ಲಗತ್ತಿಸಿದ್ದಾರೆ” ಎಂದು ನ್ಯಾಯಮಂಡಳಿಯು ಹೇಳಿದೆ.

ಕುಂಭಮೇಳ ಸ್ಥಳದಲ್ಲಿ ನೈರ್ಮಲ್ಯ ಸೌಲಭ್ಯಗಳ ಕಳಪೆ ನಿಯೋಜನೆಯಿಂದಾಗಿ ದೊಡ್ಡ ಪ್ರಮಾಣದ ಮಾಲಿನ್ಯವನ್ನು ತಡೆಗಟ್ಟಲು ರಾಜ್ಯ ವಿಫಲವಾಗಿದೆ ಎಂಬ ಕಾರಣಕ್ಕೆ ಉತ್ತರ ಪ್ರದೇಶ ಸರ್ಕಾರದಿಂದ ₹10 ಕೋಟಿ ಪರಿಸರ ಪರಿಹಾರವನ್ನು ಕೋರಿ ನಿಪುಣ್ ಭೂಷಣ್ ಎಂಬವರು ಅರ್ಜಿಯನ್ನು ಸಲ್ಲಿಸಿದ್ದಾರೆ.

ಪರಿಹಾರಕ್ಕಾಗಿ ಸಲ್ಲಿಸಿದ್ದ ತನ್ನ ಬೇಡಿಕೆಯಲ್ಲಿ ಅರ್ಜಿದಾರ ಭೂಷಣ್ ಅವರು, ಮಾಲಿನ್ಯಕಾರಕ ಪಾವತಿ ತತ್ವವನ್ನು ಪ್ರಸ್ತಾಪಿಸಿದ್ದಾರೆ. ಈ ತತ್ವವೂ ಪರಿಸರ ಕಾನೂನಿನಲ್ಲಿ ವ್ಯಾಪಕವಾಗಿ ಗುರುತಿಸಲ್ಪಟ್ಟ ತತ್ವವಾಗಿದ್ದು, ಮಾಲಿನ್ಯದಿಂದ ಪರಿಸರಕ್ಕೆ ಉಂಟಾಗುವ ಹಾನಿಯ ವೆಚ್ಚವನ್ನು ಭರಿಸಲು ಮಾಲಿನ್ಯಕಾರಕ ಪಾವತಿಯನ್ನು ಕಡ್ಡಾಯ ಮಾಡುತ್ತದೆ.

ಸಂವಿಧಾನದ 48A ವಿಧಿಯ ಅಡಿಯಲ್ಲಿ ಕರ್ತವ್ಯ ಲೋಪವನ್ನು ಕೂಡಾ ಅರ್ಜಿಯು ಆರೋಪಿಸಿದ್ದು, ಈ ವಿಧಿಯು ಪರಿಸರವನ್ನು ರಕ್ಷಿಸಲು ಮತ್ತು ಸುಧಾರಿಸಲು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳುತ್ತದೆ. ಸಾಮೂಹಿಕ ಬಯಲು ಮಲವಿಸರ್ಜನೆಗೆ ಅವಕಾಶ ನೀಡುವುದು ಮತ್ತು ಮಾಲಿನ್ಯವನ್ನು ತಡೆಗಟ್ಟಲು ವಿಫಲವಾಗುವುದು ಸಾಂವಿಧಾನಿಕ ಆದೇಶವನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯನ್ನು ದೂರಲಾಗಿದೆ.

ಜೈವಿಕ ಶೌಚಾಲಯಗಳನ್ನು ಸ್ಥಾಪಿಸುವ ಸರ್ಕಾರಿ ಭರವಸೆಗಳ ಹೊರತಾಗಿಯೂ, ಸಾವಿರಾರು ಯಾತ್ರಿಕರು ಸ್ವಚ್ಛ ಅಥವಾ ಕ್ರಿಯಾತ್ಮಕ ಸೌಲಭ್ಯಗಳ ಕೊರತೆಯಿಂದಾಗಿ ಬಯಲಿನಲ್ಲಿ ಮಲವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನಿಯೋಜಿಸಲಾದ 1.5 ಲಕ್ಷ ಜೈವಿಕ ಶೌಚಾಲಯಗಳು ಕಾರ್ಯನಿರ್ವಹಿಸುತ್ತಿದ್ದರೂ ಸಹ, ಜನರ ಬೃಹತ್ ಗುಂಪಿಗೆ ಅವು ಸಾಕಾಗುವುದಿಲ್ಲ ಎಂದು ಅವರು ವಾದಿಸಿದಿದ್ದಾರೆ.

ಕುಂಭಮೇಳದ ಸಂದರ್ಶಕರು ದಾಖಲಿಸಿದ ವೀಡಿಯೊಗಳಲ್ಲಿ ನದಿ ದಡದಲ್ಲಿ ಮಾನವ ತ್ಯಾಜ್ಯ ಸಂಗ್ರಹವಾಗುವುದನ್ನು ತೋರಿಸುತ್ತವೆ. ಇದು ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಸುರಕ್ಷತೆಯ ಬಗ್ಗೆ ಗಂಭೀರ ಆತಂಕವನ್ನು ಹುಟ್ಟುಹಾಕುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅಷ್ಟೆ ಅಲ್ಲದೆ, ಅರ್ಜಿಯು ನವೆಂಬರ್ 2024 ರ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಸಹ ಉಲ್ಲೇಖಿಸಿದೆ. ಈ ಗುಣಮಟ್ಟದ ವರದಿಯಲ್ಲಿ, ನದಿ ನೀರಿನಲ್ಲಿ ಮಲದಲ್ಲಿ ಕಂಡುಬರುವ ಬ್ಯಾಕ್ಟೀರಿಯಾ ಇರುವುದನ್ನು ಸೂಚಿಸಲಾಗಿತ್ತು. ಅಂತಹ ಮಾಲಿನ್ಯಕಾರಕವು ಕಾಲರಾ, ಹೆಪಟೈಟಿಸ್ ಎ ಮತ್ತು ಪೋಲಿಯೊದಂತಹ ಕಾಯಿಲೆಗಳಿಗೆ ಕಾರಣವಾಗಲಿದೆ. ಹಾಗಾಗಿ ಇದು ಗಂಗಾದಲ್ಲಿ ಪವಿತ್ರ ಸ್ನಾನ ಮಾಡುವ ಲಕ್ಷಾಂತರ ಭಕ್ತರಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ವಾದಿಸಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...