Homeಮುಖಪುಟಕುಂಭಮೇಳ | ಗಂಗಾ ತೀರದಲ್ಲಿ ಮಲವಿಸರ್ಜನೆ; ಉತ್ತರ ಪ್ರದೇಶ ಸರ್ಕಾರ ಪ್ರತಿಕ್ರಿಯೆ ಕೇಳಿದ ಎನ್‌ಜಿಟಿ

ಕುಂಭಮೇಳ | ಗಂಗಾ ತೀರದಲ್ಲಿ ಮಲವಿಸರ್ಜನೆ; ಉತ್ತರ ಪ್ರದೇಶ ಸರ್ಕಾರ ಪ್ರತಿಕ್ರಿಯೆ ಕೇಳಿದ ಎನ್‌ಜಿಟಿ

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗರಜ್‌ನಲ್ಲಿ ನಡೆಯುತ್ತಿರುವ 2025ರ ಮಹಾ ಕುಂಭಮೇಳದಲ್ಲಿ ಸಮರ್ಪಕ ನೈರ್ಮಲ್ಯ ಸೌಲಭ್ಯಗಳು ಒದಗಿಸದ ಕಾರಣಕ್ಕಾಗಿ ಗಂಗಾ ನದಿಯ ದಡದಲ್ಲಿ ಬಯಲು ಮಲವಿಸರ್ಜನೆ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರ, ಪ್ರಯಾಗ್‌ರಾಜ್ ಮೇಳ ಪ್ರಾಧಿಕಾರ ಮತ್ತು ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ (UP PCB)ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT)ಯು ನೋಟಿಸ್ ಜಾರಿ ಮಾಡಿದೆ. ಕುಂಭಮೇಳ

ನ್ಯಾಯಮಂಡಳಿಯ ಅಧ್ಯಕ್ಷ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಮತ್ತು ತಜ್ಞ ಸದಸ್ಯ ಡಾ. ಎ. ಸೆಂಥಿಲ್ ವೆಲ್ ಅವರ ಪೀಠವು ಅಧಿಕಾರಿಗಳಿಂದ ಪ್ರತಿಕ್ರಿಯೆಗಳನ್ನು ಕೋರಿದ್ದು, ಮುಂದಿನ ವಿಚಾರಣೆಗೆ ಒಂದು ವಾರ ಮೊದಲು ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ನಿರ್ದೇಶಿಸಿದೆ. ಪ್ರಕರಣದ ವಿಚಾರಣೆ ಫೆಬ್ರವರಿ 24 ರಂದು ನಡೆಯಲಿದೆ. ಕುಂಭಮೇಳ

“ಸಾಕಷ್ಟು ಸೌಲಭ್ಯಗಳ ಕೊರತೆಯಿಂದಾಗಿ ಲಕ್ಷಾಂತರ ಸಾಮಾನ್ಯ ಜನರು ಮತ್ತು ಕುಟುಂಬಗಳು ಗಂಗಾ ನದಿಯ ದಡದಲ್ಲಿ ಬಯಲು ಮಲವಿಸರ್ಜನೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಮೂಲ ಅರ್ಜಿಯಲ್ಲಿ ಅರ್ಜಿದಾರರು ವೀಡಿಯೊಗಳನ್ನು ಹೊಂದಿರುವ ಪೆನ್ ಡ್ರೈವ್ ಅನ್ನು ಲಗತ್ತಿಸಿದ್ದಾರೆ” ಎಂದು ನ್ಯಾಯಮಂಡಳಿಯು ಹೇಳಿದೆ.

ಕುಂಭಮೇಳ ಸ್ಥಳದಲ್ಲಿ ನೈರ್ಮಲ್ಯ ಸೌಲಭ್ಯಗಳ ಕಳಪೆ ನಿಯೋಜನೆಯಿಂದಾಗಿ ದೊಡ್ಡ ಪ್ರಮಾಣದ ಮಾಲಿನ್ಯವನ್ನು ತಡೆಗಟ್ಟಲು ರಾಜ್ಯ ವಿಫಲವಾಗಿದೆ ಎಂಬ ಕಾರಣಕ್ಕೆ ಉತ್ತರ ಪ್ರದೇಶ ಸರ್ಕಾರದಿಂದ ₹10 ಕೋಟಿ ಪರಿಸರ ಪರಿಹಾರವನ್ನು ಕೋರಿ ನಿಪುಣ್ ಭೂಷಣ್ ಎಂಬವರು ಅರ್ಜಿಯನ್ನು ಸಲ್ಲಿಸಿದ್ದಾರೆ.

ಪರಿಹಾರಕ್ಕಾಗಿ ಸಲ್ಲಿಸಿದ್ದ ತನ್ನ ಬೇಡಿಕೆಯಲ್ಲಿ ಅರ್ಜಿದಾರ ಭೂಷಣ್ ಅವರು, ಮಾಲಿನ್ಯಕಾರಕ ಪಾವತಿ ತತ್ವವನ್ನು ಪ್ರಸ್ತಾಪಿಸಿದ್ದಾರೆ. ಈ ತತ್ವವೂ ಪರಿಸರ ಕಾನೂನಿನಲ್ಲಿ ವ್ಯಾಪಕವಾಗಿ ಗುರುತಿಸಲ್ಪಟ್ಟ ತತ್ವವಾಗಿದ್ದು, ಮಾಲಿನ್ಯದಿಂದ ಪರಿಸರಕ್ಕೆ ಉಂಟಾಗುವ ಹಾನಿಯ ವೆಚ್ಚವನ್ನು ಭರಿಸಲು ಮಾಲಿನ್ಯಕಾರಕ ಪಾವತಿಯನ್ನು ಕಡ್ಡಾಯ ಮಾಡುತ್ತದೆ.

ಸಂವಿಧಾನದ 48A ವಿಧಿಯ ಅಡಿಯಲ್ಲಿ ಕರ್ತವ್ಯ ಲೋಪವನ್ನು ಕೂಡಾ ಅರ್ಜಿಯು ಆರೋಪಿಸಿದ್ದು, ಈ ವಿಧಿಯು ಪರಿಸರವನ್ನು ರಕ್ಷಿಸಲು ಮತ್ತು ಸುಧಾರಿಸಲು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳುತ್ತದೆ. ಸಾಮೂಹಿಕ ಬಯಲು ಮಲವಿಸರ್ಜನೆಗೆ ಅವಕಾಶ ನೀಡುವುದು ಮತ್ತು ಮಾಲಿನ್ಯವನ್ನು ತಡೆಗಟ್ಟಲು ವಿಫಲವಾಗುವುದು ಸಾಂವಿಧಾನಿಕ ಆದೇಶವನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯನ್ನು ದೂರಲಾಗಿದೆ.

ಜೈವಿಕ ಶೌಚಾಲಯಗಳನ್ನು ಸ್ಥಾಪಿಸುವ ಸರ್ಕಾರಿ ಭರವಸೆಗಳ ಹೊರತಾಗಿಯೂ, ಸಾವಿರಾರು ಯಾತ್ರಿಕರು ಸ್ವಚ್ಛ ಅಥವಾ ಕ್ರಿಯಾತ್ಮಕ ಸೌಲಭ್ಯಗಳ ಕೊರತೆಯಿಂದಾಗಿ ಬಯಲಿನಲ್ಲಿ ಮಲವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನಿಯೋಜಿಸಲಾದ 1.5 ಲಕ್ಷ ಜೈವಿಕ ಶೌಚಾಲಯಗಳು ಕಾರ್ಯನಿರ್ವಹಿಸುತ್ತಿದ್ದರೂ ಸಹ, ಜನರ ಬೃಹತ್ ಗುಂಪಿಗೆ ಅವು ಸಾಕಾಗುವುದಿಲ್ಲ ಎಂದು ಅವರು ವಾದಿಸಿದಿದ್ದಾರೆ.

ಕುಂಭಮೇಳದ ಸಂದರ್ಶಕರು ದಾಖಲಿಸಿದ ವೀಡಿಯೊಗಳಲ್ಲಿ ನದಿ ದಡದಲ್ಲಿ ಮಾನವ ತ್ಯಾಜ್ಯ ಸಂಗ್ರಹವಾಗುವುದನ್ನು ತೋರಿಸುತ್ತವೆ. ಇದು ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಸುರಕ್ಷತೆಯ ಬಗ್ಗೆ ಗಂಭೀರ ಆತಂಕವನ್ನು ಹುಟ್ಟುಹಾಕುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅಷ್ಟೆ ಅಲ್ಲದೆ, ಅರ್ಜಿಯು ನವೆಂಬರ್ 2024 ರ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಸಹ ಉಲ್ಲೇಖಿಸಿದೆ. ಈ ಗುಣಮಟ್ಟದ ವರದಿಯಲ್ಲಿ, ನದಿ ನೀರಿನಲ್ಲಿ ಮಲದಲ್ಲಿ ಕಂಡುಬರುವ ಬ್ಯಾಕ್ಟೀರಿಯಾ ಇರುವುದನ್ನು ಸೂಚಿಸಲಾಗಿತ್ತು. ಅಂತಹ ಮಾಲಿನ್ಯಕಾರಕವು ಕಾಲರಾ, ಹೆಪಟೈಟಿಸ್ ಎ ಮತ್ತು ಪೋಲಿಯೊದಂತಹ ಕಾಯಿಲೆಗಳಿಗೆ ಕಾರಣವಾಗಲಿದೆ. ಹಾಗಾಗಿ ಇದು ಗಂಗಾದಲ್ಲಿ ಪವಿತ್ರ ಸ್ನಾನ ಮಾಡುವ ಲಕ್ಷಾಂತರ ಭಕ್ತರಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ವಾದಿಸಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...