Homeಮುಖಪುಟಕುಂಭಮೇಳ ಯಾತ್ರಿಗಳು ಕೋವಿಡ್ ಅನ್ನು ಪ್ರಸಾದದಂತೆ ವಿತರಿಸಲಿದ್ದಾರೆ: ಭಕ್ತರ ವಿರುದ್ಧ ಕಿಡಿಕಾರಿದ ಮುಂಬೈ ಮೇಯರ್

ಕುಂಭಮೇಳ ಯಾತ್ರಿಗಳು ಕೋವಿಡ್ ಅನ್ನು ಪ್ರಸಾದದಂತೆ ವಿತರಿಸಲಿದ್ದಾರೆ: ಭಕ್ತರ ವಿರುದ್ಧ ಕಿಡಿಕಾರಿದ ಮುಂಬೈ ಮೇಯರ್

- Advertisement -
- Advertisement -

ಕೋವಿಡ್ ಎರಡನೇ ಅಲೆಯ ನಡುವೆಯೂ ನಡೆಯುತ್ತಿರುವ ಉತ್ತರಾಖಂಡದ ಹರಿದ್ವಾರದ ಕುಂಭಮೇಳದಿಂದ ಹಿಂದಿರುಗಿದ ಯಾತ್ರಿಗಳು ತಮ್ಮ ರಾಜ್ಯಗಳಲ್ಲಿ ಕೊರೊನಾವನ್ನು “ಪ್ರಸಾದ” ಎಂದು ವಿತರಿಸಲಿದ್ದಾರೆ ಎಂದು ಮುಂಬೈನ ಮೇಯರ್ ಭಕ್ತರ ವಿರುದ್ಧ ಕಿಡಿಕಾರಿದ್ದಾರೆ.

ಕುಂಭಮೇಳದಿಂದ ಮುಂಬೈಗೆ ಮರಳುವ ಯಾತ್ರಾರ್ಥಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲಿದ್ದೇವೆ ಮತ್ತು ಇದರ ಖರ್ಚನ್ನು ಅವರೇ ಭರಿಸಬೇಕು ಎಂದು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್‌ನ ಮೇಯರ್ ಕಿಶೋರಿ ಪಡ್ನೇಕರ್ ತಿಳಿಸಿದ್ದಾರೆ.

“ಕುಂಭಮೇಳದಿಂದ ಆಯಾ ರಾಜ್ಯಗಳಿಗೆ ಹಿಂದಿರುಗುವವರು ಕೊರೋನಾವನ್ನು ‘ಪ್ರಸಾದ’ ಎಂಬಂತೆ ವಿತರಿಸುತ್ತಾರೆ. ಈ ಎಲ್ಲ ಜನರನ್ನು ಆಯಾ ರಾಜ್ಯಗಳಲ್ಲಿ ತಮ್ಮ ಸ್ವಂತ ವೆಚ್ಚದಲ್ಲಿ ನಿರ್ಬಂಧಿಸಬೇಕು. ಮುಂಬೈನಲ್ಲಿಯೂ ಸಹ, ಹಿಂದಿರುಗುವಾಗ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸುವ ಬಗ್ಗೆ ಯೋಚಿಸುತ್ತಿದ್ದೇವೆ” ಎಂದು ಕಿಶೋರಿ ಪಡ್ನೇಕರ್ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

“95 ಪ್ರತಿಶತದಷ್ಟು ಮುಂಬೈವಾಲಾಗಳು ಕೊರೊನಾ ನಿರ್ಬಂಧಗಳಿಗೆ ಬದ್ಧರಾಗಿದ್ದಾರೆ. ಉಳಿದ 5 ಪ್ರತಿಶತದಷ್ಟು ಜನರು ನಿರ್ಬಂಧಗಳನ್ನು ಪಾಲಿಸುತ್ತಿಲ್ಲ. ಅವರು ಇತರರಿಗೆ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಪ್ರಸ್ತುತ ಕೊರೊನಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ಲಾಕ್‌ಡೌನ್ ವಿಧಿಸಬೇಕು ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಗಂಗಾ ನದಿಯ ದಡದಲ್ಲಿ ನಡೆದಿರುವ ಕುಂಭಮೇಳಕ್ಕಾಗಿ ಲಕ್ಷಾಂತರ ಭಕ್ತರು ಶಾಹಿ ಸ್ನಾನ (ಪವಿತ್ರ ಸ್ನಾನ) ಮಾಡಿದ್ದಾರೆ. ಕುಂಭಮೇಳದಲ್ಲಿ ಭಾಗವಹಿಸಿದ್ದ ಸಾಧುಗಳಿಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇತರ 80 ಮಂದಿ ಸಾಧುಗಳಿಗೆ ಕೊರೊನಾ ದೃಢಪಟ್ಟಿದೆ. ಲಕ್ಷಾಂತರ ಮಂದಿ ಸೇರುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿದ್ದ ಎರಡು ಸಾವಿರಕ್ಕೂ ಅಧಿಕ ಭಕ್ತರಿಗೆ ಕೊರೊನಾ ಸೋಂಕು ಹರಡಿದೆ ಎಂದು ವರದಿಯಾಗಿದೆ. ಕುಂಭಮೇಳಕ್ಕೆ ದೇಶಾದ್ಯಂತದ ಯಾತ್ರಾರ್ಥಿಗಳು ಬಂದು ತಮ್ಮ ರಾಜ್ಯಗಳಿಗೆ ​​ಮತ್ತು ಹಳ್ಳಿಗಳಿಗೆ ಮರಳುತ್ತಿರುವುದರಿಂದ ಇದು “ಸೂಪರ್-ಸ್ಪ್ರೆಡರ್” ಆಗಿ ಬದಲಾಗಬಹುದು ಎಂದು ತಜ್ಞರು ಹೇಳಿದ್ದಾರೆ.


ಇದನ್ನೂ ಓದಿ: ಕುಂಭಮೇಳ ಸಾಂಕೇತಿಕವಾಗಿಸಬೇಕು, ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ತರುತ್ತದೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...