Homeಮುಖಪುಟಕುಂಭಮೇಳವನ್ನು ಶ್ಲಾಘಿಸಿ, ಕಾಲ್ತುಳಿತಕ್ಕೊಳಗಾಗಿ ಮೃತಪಟ್ಟವರನ್ನು ಮರೆತ ಮೋದಿ: ವಿಪಕ್ಷಗಳಿಂದ ಪ್ರತಿಭಟನೆ

ಕುಂಭಮೇಳವನ್ನು ಶ್ಲಾಘಿಸಿ, ಕಾಲ್ತುಳಿತಕ್ಕೊಳಗಾಗಿ ಮೃತಪಟ್ಟವರನ್ನು ಮರೆತ ಮೋದಿ: ವಿಪಕ್ಷಗಳಿಂದ ಪ್ರತಿಭಟನೆ

- Advertisement -
- Advertisement -

ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭ ಮೇಳವನ್ನು ಮಂಗಳವಾರ ಸದನದಲ್ಲಿ ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ಇಷ್ಟೊಂದು ದೊಡ್ಡ ಸಭೆಯನ್ನು ಆಯೋಜಿಸಿ ಭಾರತದ ಸಾಮೂಹಿಕ ಶಕ್ತಿಯನ್ನು ಪ್ರಶ್ನಿಸಿದವರಿಗೆ ಇದು ಸೂಕ್ತ ಉತ್ತರವನ್ನು ನೀಡಿದೆ ಎಂದು ಹೇಳಿದ್ದಾರೆ. ಕುಂಭಮೇಳವನ್ನು ಶ್ಲಾಘಿಸಿ

ಲೋಕಸಭೆಯಲ್ಲಿ ಅವರ ಹೇಳಿಕೆಯು ವಿರೋಧ ಪಕ್ಷಗಳಿಂದ ತೀವ್ರ ಪ್ರತಿಭಟನೆಗೆ ಕಾರಣವಾಯಿತು. ಕುಂಭಮೇಳದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಅದೇ ಕಾರ್ಯಕ್ರಮದ ಸಮಯದಲ್ಲಿ ಕಾಲ್ತುಳಿತಕ್ಕೆ ಒಳಪಟ್ಟು ಸಾವನ್ನಪ್ಪಿದ ಜೀವಗಳ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ವಿಪಕ್ಷಗಳು ಪ್ರಶ್ನಿಸಿವೆ. ಕುಂಭಮೇಳವನ್ನು ಶ್ಲಾಘಿಸಿ

ಲೋಕಸಭೆಯಲ್ಲಿ ಮಾತನಾಡಿದ ಮೋದಿ, ಮಹಾ ಕುಂಭದಲ್ಲಿ ನಡೆದ ಬೃಹತ್ ಏಕತೆಯ ಪ್ರದರ್ಶನವು ಭಾರತದ ಶಕ್ತಿಯಾಗಿದೆ ಎಂದು ಹೇಳಿದ್ದಾರೆ. ಅದರಲ್ಲೂ ವಿಶೇಷವಾಗಿ ಜಗತ್ತು ಅಸ್ತವ್ಯಸ್ತವಾಗಿರುವ ಈ ಸಮಯದಲ್ಲಿ ಈ ಕಾರ್ಯಕ್ರಮ ಭಾರತದ ಶಕ್ತಿಯನ್ನು ಪ್ರದರ್ಶಿಸಿದೆ ಎಂದು ಹೇಳಿದ್ದಾರೆ. “ಇತಿಹಾಸದಾದ್ಯಂತ, ಮುಂದಿನ ಪೀಳಿಗೆಗೆ ಉದಾಹರಣೆಗಳಾಗುವ ನಿರ್ಣಾಯಕ ಕ್ಷಣಗಳಿವೆ” ಎಂದು ಅವರು ಹೇಳಿದ್ದಾರೆ.

“ನಮ್ಮ ರಾಷ್ಟ್ರವು ಸಹ ಹೊಸ ದಿಕ್ಕನ್ನು ನೀಡಿದ ಮತ್ತು ತನ್ನ ಜನರನ್ನು ಜಾಗೃತಗೊಳಿಸಿದ ಅಂತಹ ಕ್ಷಣಗಳಿಗೆ ಸಾಕ್ಷಿಯಾಗಿದೆ… ಅದೇ ರೀತಿ, ನಮ್ಮ ಸ್ವಾತಂತ್ರ್ಯ ಹೋರಾಟವು ಹಲವಾರು ತಿರುವುಗಳಿಂದ ಗುರುತಿಸಲ್ಪಟ್ಟಿದೆ – 1857 ರ ದಂಗೆ, ವೀರ್ ಭಗತ್ ಸಿಂಗ್ ಅವರ ಹುತಾತ್ಮತೆ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ‘ದೆಹಲಿ ಚಲೋ’ ಎಂಬ ಘೋಷಣೆ ಮತ್ತು ಮಹಾತ್ಮ ಗಾಂಧಿಯವರ ದಂಡಿ ಮೆರವಣಿಗೆ” ಎಂದು ಮೋದಿ ಹೇಳಿದ್ದಾರೆ.

“ಜನರು ತಮ್ಮ ಅಹಂಕಾರವನ್ನು ಬದಿಗಿಟ್ಟು ‘ನಾನು’ ಅಲ್ಲ ‘ನಾವು’ ಎಂಬ ಭಾವನೆಯೊಂದಿಗೆ ಪ್ರಯಾಗ್‌ರಾಜ್‌ನಲ್ಲಿ ಒಟ್ಟುಗೂಡಿದರು. ಮಹಾ ಕುಂಭವು ದೊಡ್ಡವರು ಮತ್ತು ಸಣ್ಣವರು ಎಂಬ ಭೇದವಿಲ್ಲ ಎಂಬುದನ್ನು ಪ್ರದರ್ಶಿಸಿತು” ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ಮಹಾಕುಂಭದಲ್ಲಿ ವಿವಿಐಪಿಗಳಿಗೆ ಪ್ರತ್ಯೇಕ ಮತ್ತು ಸಾಮಾನ್ಯ ಜನರಿಗೆ ಪ್ರತ್ಯೇಕ ಸ್ಥಳಗಳನ್ನು ಗುರುತಿಸಲಾಗಿತ್ತು ಎಂದು ವರದಿಯಾಗಿದೆ.

ತಮ್ಮ ಇತ್ತೀಚಿನ ಮಾರಿಷಸ್ ಭೇಟಿಯನ್ನು ನೆನಪಿಸಿಕೊಂಡ ಮೋದಿ, ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಿಂದ ಪವಿತ್ರ ನೀರನ್ನು ಗಂಗಾ ತಲಾಬ್‌ನಲ್ಲಿ ಅರ್ಪಿಸಿದ ಕ್ಷಣ ಭಕ್ತಿ, ನಂಬಿಕೆ ಮತ್ತು ಈ ಆಚರಣೆಯ ವಾತಾವರಣವು ನಿಜವಾಗಿಯೂ ಅದ್ಭುತವಾಗಿತ್ತು ಎಂದು ಹೇಳಿದ್ದಾರೆ.

ನಂತರ, ಮಹಾ ಕುಂಭದ ಕುರಿತು ಚರ್ಚೆ ನಡೆಸಲು ಕೋರಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಮಾತನ್ನು ಸ್ಪೀಕರ್ ಓಂ ಬಿರ್ಲಾ ನಿರಾಕರಿಸಿದರು. ಇದರ ನಂತರ ವಿರೋಧ ಪಕ್ಷಗಳ ಪೀಠವು ಪ್ರತಿಭಟನೆ ನಡೆಸಿದೆ. ವಿರೋಧ ಪಕ್ಷದ ಸಂಸದರು ಸದನದ ಬಾವಿಗೆ ಧಾವಿಸಿ ಪ್ರಧಾನಿಗೆ ಯಾವ ನಿಯಮದ ಅಡಿಯಲ್ಲಿ ಮಾತನಾಡಲು ಅವಕಾಶವಿದೆ ಎಂದು ಕೇಳಿದ್ದಾರೆ.

ಪ್ರಧಾನಿ ಮತ್ತು ಸಚಿವರು ಸದನದಲ್ಲಿ ಹೇಳಿಕೆ ನೀಡಲು ಅನುಮತಿಸುವ ಕಾರ್ಯವಿಧಾನ ಮತ್ತು ವ್ಯವಹಾರ ನಡವಳಿಕೆ ನಿಯಮಗಳ ನಿಯಮ 372 ಅನ್ನು ಈ ವೇಳೆ ಬಿರ್ಲಾ ಉಲ್ಲೇಖಿಸಿದ್ದು, ಆದರೆ ಹೇಳಿಕೆಯ ನಂತರ ಯಾವುದೇ ಪ್ರಶ್ನೆಗಳನ್ನು ಕೇಳಲು ಅವಕಾಶವಿಲ್ಲ ಎಂದು ಹೇಳಿದ್ದಾರೆ. ವಿರೋಧ ಪಕ್ಷದ ಸಂಸದರು ಘೋಷಣೆಗಳನ್ನು ಮುಂದುವರೆಸಿದ್ದರಿಂದ ಸದನವನ್ನು ನಂತರ 30 ನಿಮಿಷಗಳ ಕಾಲ ಮುಂದೂಡಲಾಯಿತು.

ಮಹಾ ಕುಂಭ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ಗೌರವ ಸಲ್ಲಿಸಲಿಲ್ಲ ಎಂದು ರಾಹುಲ್ ಹೇಳಿದ್ದಾರೆ. “ಪ್ರಧಾನಿಯವರು ಹೇಳಿದ್ದನ್ನು ನಾನು ಬೆಂಬಲಿಸಲು ಬಯಸಿದ್ದೆ. ಕುಂಭ ನಮ್ಮ ಇತಿಹಾಸ ಮತ್ತು ಸಂಸ್ಕೃತಿ. ಕುಂಭದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ಸಂತಾಪ ಸೂಚಿಸಲಿಲ್ಲ ಎಂಬುದು ನಮ್ಮ ಏಕೈಕ ದೂರು” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ

ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...