Homeಮುಖಪುಟಕುಂಭಮೇಳವನ್ನು ಶ್ಲಾಘಿಸಿ, ಕಾಲ್ತುಳಿತಕ್ಕೊಳಗಾಗಿ ಮೃತಪಟ್ಟವರನ್ನು ಮರೆತ ಮೋದಿ: ವಿಪಕ್ಷಗಳಿಂದ ಪ್ರತಿಭಟನೆ

ಕುಂಭಮೇಳವನ್ನು ಶ್ಲಾಘಿಸಿ, ಕಾಲ್ತುಳಿತಕ್ಕೊಳಗಾಗಿ ಮೃತಪಟ್ಟವರನ್ನು ಮರೆತ ಮೋದಿ: ವಿಪಕ್ಷಗಳಿಂದ ಪ್ರತಿಭಟನೆ

- Advertisement -
- Advertisement -

ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭ ಮೇಳವನ್ನು ಮಂಗಳವಾರ ಸದನದಲ್ಲಿ ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ಇಷ್ಟೊಂದು ದೊಡ್ಡ ಸಭೆಯನ್ನು ಆಯೋಜಿಸಿ ಭಾರತದ ಸಾಮೂಹಿಕ ಶಕ್ತಿಯನ್ನು ಪ್ರಶ್ನಿಸಿದವರಿಗೆ ಇದು ಸೂಕ್ತ ಉತ್ತರವನ್ನು ನೀಡಿದೆ ಎಂದು ಹೇಳಿದ್ದಾರೆ. ಕುಂಭಮೇಳವನ್ನು ಶ್ಲಾಘಿಸಿ

ಲೋಕಸಭೆಯಲ್ಲಿ ಅವರ ಹೇಳಿಕೆಯು ವಿರೋಧ ಪಕ್ಷಗಳಿಂದ ತೀವ್ರ ಪ್ರತಿಭಟನೆಗೆ ಕಾರಣವಾಯಿತು. ಕುಂಭಮೇಳದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಅದೇ ಕಾರ್ಯಕ್ರಮದ ಸಮಯದಲ್ಲಿ ಕಾಲ್ತುಳಿತಕ್ಕೆ ಒಳಪಟ್ಟು ಸಾವನ್ನಪ್ಪಿದ ಜೀವಗಳ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ವಿಪಕ್ಷಗಳು ಪ್ರಶ್ನಿಸಿವೆ. ಕುಂಭಮೇಳವನ್ನು ಶ್ಲಾಘಿಸಿ

ಲೋಕಸಭೆಯಲ್ಲಿ ಮಾತನಾಡಿದ ಮೋದಿ, ಮಹಾ ಕುಂಭದಲ್ಲಿ ನಡೆದ ಬೃಹತ್ ಏಕತೆಯ ಪ್ರದರ್ಶನವು ಭಾರತದ ಶಕ್ತಿಯಾಗಿದೆ ಎಂದು ಹೇಳಿದ್ದಾರೆ. ಅದರಲ್ಲೂ ವಿಶೇಷವಾಗಿ ಜಗತ್ತು ಅಸ್ತವ್ಯಸ್ತವಾಗಿರುವ ಈ ಸಮಯದಲ್ಲಿ ಈ ಕಾರ್ಯಕ್ರಮ ಭಾರತದ ಶಕ್ತಿಯನ್ನು ಪ್ರದರ್ಶಿಸಿದೆ ಎಂದು ಹೇಳಿದ್ದಾರೆ. “ಇತಿಹಾಸದಾದ್ಯಂತ, ಮುಂದಿನ ಪೀಳಿಗೆಗೆ ಉದಾಹರಣೆಗಳಾಗುವ ನಿರ್ಣಾಯಕ ಕ್ಷಣಗಳಿವೆ” ಎಂದು ಅವರು ಹೇಳಿದ್ದಾರೆ.

“ನಮ್ಮ ರಾಷ್ಟ್ರವು ಸಹ ಹೊಸ ದಿಕ್ಕನ್ನು ನೀಡಿದ ಮತ್ತು ತನ್ನ ಜನರನ್ನು ಜಾಗೃತಗೊಳಿಸಿದ ಅಂತಹ ಕ್ಷಣಗಳಿಗೆ ಸಾಕ್ಷಿಯಾಗಿದೆ… ಅದೇ ರೀತಿ, ನಮ್ಮ ಸ್ವಾತಂತ್ರ್ಯ ಹೋರಾಟವು ಹಲವಾರು ತಿರುವುಗಳಿಂದ ಗುರುತಿಸಲ್ಪಟ್ಟಿದೆ – 1857 ರ ದಂಗೆ, ವೀರ್ ಭಗತ್ ಸಿಂಗ್ ಅವರ ಹುತಾತ್ಮತೆ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ‘ದೆಹಲಿ ಚಲೋ’ ಎಂಬ ಘೋಷಣೆ ಮತ್ತು ಮಹಾತ್ಮ ಗಾಂಧಿಯವರ ದಂಡಿ ಮೆರವಣಿಗೆ” ಎಂದು ಮೋದಿ ಹೇಳಿದ್ದಾರೆ.

“ಜನರು ತಮ್ಮ ಅಹಂಕಾರವನ್ನು ಬದಿಗಿಟ್ಟು ‘ನಾನು’ ಅಲ್ಲ ‘ನಾವು’ ಎಂಬ ಭಾವನೆಯೊಂದಿಗೆ ಪ್ರಯಾಗ್‌ರಾಜ್‌ನಲ್ಲಿ ಒಟ್ಟುಗೂಡಿದರು. ಮಹಾ ಕುಂಭವು ದೊಡ್ಡವರು ಮತ್ತು ಸಣ್ಣವರು ಎಂಬ ಭೇದವಿಲ್ಲ ಎಂಬುದನ್ನು ಪ್ರದರ್ಶಿಸಿತು” ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ಮಹಾಕುಂಭದಲ್ಲಿ ವಿವಿಐಪಿಗಳಿಗೆ ಪ್ರತ್ಯೇಕ ಮತ್ತು ಸಾಮಾನ್ಯ ಜನರಿಗೆ ಪ್ರತ್ಯೇಕ ಸ್ಥಳಗಳನ್ನು ಗುರುತಿಸಲಾಗಿತ್ತು ಎಂದು ವರದಿಯಾಗಿದೆ.

ತಮ್ಮ ಇತ್ತೀಚಿನ ಮಾರಿಷಸ್ ಭೇಟಿಯನ್ನು ನೆನಪಿಸಿಕೊಂಡ ಮೋದಿ, ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಿಂದ ಪವಿತ್ರ ನೀರನ್ನು ಗಂಗಾ ತಲಾಬ್‌ನಲ್ಲಿ ಅರ್ಪಿಸಿದ ಕ್ಷಣ ಭಕ್ತಿ, ನಂಬಿಕೆ ಮತ್ತು ಈ ಆಚರಣೆಯ ವಾತಾವರಣವು ನಿಜವಾಗಿಯೂ ಅದ್ಭುತವಾಗಿತ್ತು ಎಂದು ಹೇಳಿದ್ದಾರೆ.

ನಂತರ, ಮಹಾ ಕುಂಭದ ಕುರಿತು ಚರ್ಚೆ ನಡೆಸಲು ಕೋರಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಮಾತನ್ನು ಸ್ಪೀಕರ್ ಓಂ ಬಿರ್ಲಾ ನಿರಾಕರಿಸಿದರು. ಇದರ ನಂತರ ವಿರೋಧ ಪಕ್ಷಗಳ ಪೀಠವು ಪ್ರತಿಭಟನೆ ನಡೆಸಿದೆ. ವಿರೋಧ ಪಕ್ಷದ ಸಂಸದರು ಸದನದ ಬಾವಿಗೆ ಧಾವಿಸಿ ಪ್ರಧಾನಿಗೆ ಯಾವ ನಿಯಮದ ಅಡಿಯಲ್ಲಿ ಮಾತನಾಡಲು ಅವಕಾಶವಿದೆ ಎಂದು ಕೇಳಿದ್ದಾರೆ.

ಪ್ರಧಾನಿ ಮತ್ತು ಸಚಿವರು ಸದನದಲ್ಲಿ ಹೇಳಿಕೆ ನೀಡಲು ಅನುಮತಿಸುವ ಕಾರ್ಯವಿಧಾನ ಮತ್ತು ವ್ಯವಹಾರ ನಡವಳಿಕೆ ನಿಯಮಗಳ ನಿಯಮ 372 ಅನ್ನು ಈ ವೇಳೆ ಬಿರ್ಲಾ ಉಲ್ಲೇಖಿಸಿದ್ದು, ಆದರೆ ಹೇಳಿಕೆಯ ನಂತರ ಯಾವುದೇ ಪ್ರಶ್ನೆಗಳನ್ನು ಕೇಳಲು ಅವಕಾಶವಿಲ್ಲ ಎಂದು ಹೇಳಿದ್ದಾರೆ. ವಿರೋಧ ಪಕ್ಷದ ಸಂಸದರು ಘೋಷಣೆಗಳನ್ನು ಮುಂದುವರೆಸಿದ್ದರಿಂದ ಸದನವನ್ನು ನಂತರ 30 ನಿಮಿಷಗಳ ಕಾಲ ಮುಂದೂಡಲಾಯಿತು.

ಮಹಾ ಕುಂಭ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ಗೌರವ ಸಲ್ಲಿಸಲಿಲ್ಲ ಎಂದು ರಾಹುಲ್ ಹೇಳಿದ್ದಾರೆ. “ಪ್ರಧಾನಿಯವರು ಹೇಳಿದ್ದನ್ನು ನಾನು ಬೆಂಬಲಿಸಲು ಬಯಸಿದ್ದೆ. ಕುಂಭ ನಮ್ಮ ಇತಿಹಾಸ ಮತ್ತು ಸಂಸ್ಕೃತಿ. ಕುಂಭದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ಸಂತಾಪ ಸೂಚಿಸಲಿಲ್ಲ ಎಂಬುದು ನಮ್ಮ ಏಕೈಕ ದೂರು” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ

ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...