Homeಮುಖಪುಟಕುಂಭಮೇಳ: ನಕಲಿ ಕೊರೊನಾ ಪರೀಕ್ಷೆ ನಡೆಸಿದ್ದ ಪ್ರಯೋಗಾಲಯಗಳ ವಿರುದ್ಧ ಪ್ರಕರಣ

ಕುಂಭಮೇಳ: ನಕಲಿ ಕೊರೊನಾ ಪರೀಕ್ಷೆ ನಡೆಸಿದ್ದ ಪ್ರಯೋಗಾಲಯಗಳ ವಿರುದ್ಧ ಪ್ರಕರಣ

- Advertisement -
- Advertisement -

ಉತ್ತರಾಖಂಡದಲ್ಲಿ ನಡೆದ ಕುಂಭಮೇಳದಲ್ಲಿ ನಕಲಿ ಕೊರೊನಾ ಪರೀಕ್ಷೆಗಳನ್ನು ನಡೆಸಿದ ಆರೋಪ ಹೊತ್ತಿರುವ ಖಾಸಗಿ ಪ್ರಯೋಗಾಲಯಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಉತ್ತರಾಖಂಡ ಸರ್ಕಾರ ಹರಿದ್ವಾರ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದೆ.

ಏಪ್ರಿಲ್ 1 ರಿಂದ 30 ರವರೆಗೆ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳಗಳಲ್ಲಿ ಒಂದಾದ ಕುಂಭ ಮೇಳದಲ್ಲಿ ಕೊರೊನಾ ಪರೀಕ್ಷೆಗಳನ್ನು ನಡೆಸಲು ಮುಖ್ಯವಾಗಿ ದೆಹಲಿ ಮತ್ತು ಹರಿಯಾಣ ಮೂಲದ ಖಾಸಗಿ ಪ್ರಯೋಗಾಲಯಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು.

“ಮಹಾಕುಂಭದ ಸಂದರ್ಭದಲ್ಲಿ ಕೋವಿಡ್ ಪರೀಕ್ಷಾ ಹಗರಣದಲ್ಲಿ ಎಫ್‌ಐಆರ್ ದಾಖಲಿಸುವಂತೆ ಉತ್ತರಾಖಂಡ ಸರ್ಕಾರ ಆದೇಶಿಸಿದೆ. ಕುಂಭಮೇಳ ಸಂದರ್ಭದಲ್ಲಿ ಹರಿದ್ವಾರದಲ್ಲಿ 5 ಸ್ಥಳಗಳಲ್ಲಿ ಪರೀಕ್ಷೆ ನಡೆಸಿದ ದೆಹಲಿ ಮತ್ತು ಹರಿಯಾಣದ ಪ್ರಯೋಗಾಲಯಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆದೇಶ ಹೊರಡಿಸಲಾಗಿದೆ” ಎಂದು ರಾಜ್ಯ ಸರ್ಕಾರದ ವಕ್ತಾರ ಸುಬೋಧ್ ಯುನಿಯಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ಕುಂಭಮೇಳದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ ಎಂಬ ವರದಿಗಳು ಹೊರಬಿದ್ದ ನಂತರ ಹರಿದ್ವಾರ್ ಜಿಲ್ಲಾಡಳಿತ ಕಳೆದ ವಾರ ತನಿಖೆಗೆ ಆದೇಶಿಸಿತ್ತು.

ವರದಿಗಳ ಪ್ರಕಾರ, ಉತ್ತರಾಖಂಡ ಹೈಕೋರ್ಟ್ ನಿಗದಿಪಡಿಸಿದ ದಿನಕ್ಕೆ 50,000 ಪರೀಕ್ಷೆಗಳ ಗುರಿಯನ್ನು ತಲುಪಲು ಈ ಖಾಸಗಿ ಪ್ರಯೋಗಾಲಯಗಳು ಈ ರೀತಿ ಕೊರೊನಾ ನಕಲಿ ಪರೀಕ್ಷೆಗಳನ್ನು ನಡೆಸಿವೆ ಎನ್ನಲಾಗಿದೆ. ಕುಂಭಮೇಳದ ಸಮಯದಲ್ಲಿ ಪರೀಕ್ಷೆ ನಡೆಸಲು ಇಪ್ಪತ್ತೆರಡು (22) ಖಾಸಗಿ ಲ್ಯಾಬ್‌ಗಳನ್ನು ನೇಮಿಸಲಾಗಿತ್ತು.

ಕುಂಭಮೇಳದ ಸಮಯದಲ್ಲಿ ಪರೀಕ್ಷೆಗಳನ್ನು ನಡೆಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಎಲ್ಲಾ ಲ್ಯಾಬ್‌ಗಳಿಗೆ ಹಣ ಪಾವತಿಯನ್ನು ಸರ್ಕಾರ ತಡೆ ಹಿಡಿದಿದೆ. ನಕಲಿ ಕೊರೊನಾ ಪರೀಕ್ಷೆ ಬಗ್ಗೆ ತನಿಖೆ ನಡೆಯುತ್ತಿರುವುದರಿಂದ ಸದ್ಯಕ್ಕೆ ತಡೆಹಿಡಿಯಲಾಗಿದೆ ಎಂದು ಹರಿದ್ವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಿ.ರವಿಶಂಕರ್ ಹೇಳಿದ್ದಾರೆ.

ದೇಶದಲ್ಲಿ ಕೊರೊನಾ ಎರಡನೇ ಅಲೆ ತೀವ್ರಗತಿಯಲ್ಲಿದ್ದ ಸಮಯದಲ್ಲಿಯೇ ದೇಶದ ವಿವಿಧ ಭಾಗಗಳಿಂದ ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸುವ ಕುಂಭಮೇಳವನ್ನು ನಡೆಸಲಾಯಿತು. ಹರಿದ್ವಾರದಲ್ಲಿ ನಡೆದ ಈ ಕುಂಭಮೇಳದಲ್ಲಿ ಕನಿಷ್ಠ 70 ಲಕ್ಷ ಭಕ್ತರು ಭಾಗವಹಿಸಿದ್ದಾರೆಂದು ಹೇಳಲಾಗಿದೆ.

ಈ ಬಾರಿಯ ಹರಿದ್ವಾರದ ಕುಂಭಮೇಳದಲ್ಲಿ ವೈದ್ಯಕೀಯ ಸಿಬ್ಬಂದಿ ನಡೆಸಿದ ಸುಮಾರು ಎರಡು ಲಕ್ಷ ಪರೀಕ್ಷೆಗಳಲ್ಲಿ ಸುಮಾರು 2,600 ಭಕ್ತರಲ್ಲಿ ಕೊರೊನಾ ಸೋಂಕು ಕಂಡು ಬಂದಿತ್ತು. ಈಗ ಕೊರೊನಾ ನಕಲಿ ಪರೀಕ್ಷೆಗಳನ್ನು ನಡೆಸಲಾಗಿದೆ ಎಂಬ ಮಾಹಿತಿ ಹೊರ ಬಿದ್ದಿದ್ದು, ಪ್ರಯೋಗಾಲಯಗಳ ವಿರುದ್ಧ ಪ್ರಕರಣ ದಾಖಲಿಸಲು ಉತ್ತರಾಖಂಡ ಸರ್ಕಾರ ಆದೇಶಿಸಿದೆ.


ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ಬಿಜೆಪಿಯಲ್ಲಿ ಭಿನ್ನಮತವಿಲ್ಲ; ಅರುಣ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...