Homeಮುಖಪುಟಕುಂಭಮೇಳ: ನಕಲಿ ಕೊರೊನಾ ಪರೀಕ್ಷೆ ನಡೆಸಿದ್ದ ಪ್ರಯೋಗಾಲಯಗಳ ವಿರುದ್ಧ ಪ್ರಕರಣ

ಕುಂಭಮೇಳ: ನಕಲಿ ಕೊರೊನಾ ಪರೀಕ್ಷೆ ನಡೆಸಿದ್ದ ಪ್ರಯೋಗಾಲಯಗಳ ವಿರುದ್ಧ ಪ್ರಕರಣ

- Advertisement -
- Advertisement -

ಉತ್ತರಾಖಂಡದಲ್ಲಿ ನಡೆದ ಕುಂಭಮೇಳದಲ್ಲಿ ನಕಲಿ ಕೊರೊನಾ ಪರೀಕ್ಷೆಗಳನ್ನು ನಡೆಸಿದ ಆರೋಪ ಹೊತ್ತಿರುವ ಖಾಸಗಿ ಪ್ರಯೋಗಾಲಯಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಉತ್ತರಾಖಂಡ ಸರ್ಕಾರ ಹರಿದ್ವಾರ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದೆ.

ಏಪ್ರಿಲ್ 1 ರಿಂದ 30 ರವರೆಗೆ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳಗಳಲ್ಲಿ ಒಂದಾದ ಕುಂಭ ಮೇಳದಲ್ಲಿ ಕೊರೊನಾ ಪರೀಕ್ಷೆಗಳನ್ನು ನಡೆಸಲು ಮುಖ್ಯವಾಗಿ ದೆಹಲಿ ಮತ್ತು ಹರಿಯಾಣ ಮೂಲದ ಖಾಸಗಿ ಪ್ರಯೋಗಾಲಯಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು.

“ಮಹಾಕುಂಭದ ಸಂದರ್ಭದಲ್ಲಿ ಕೋವಿಡ್ ಪರೀಕ್ಷಾ ಹಗರಣದಲ್ಲಿ ಎಫ್‌ಐಆರ್ ದಾಖಲಿಸುವಂತೆ ಉತ್ತರಾಖಂಡ ಸರ್ಕಾರ ಆದೇಶಿಸಿದೆ. ಕುಂಭಮೇಳ ಸಂದರ್ಭದಲ್ಲಿ ಹರಿದ್ವಾರದಲ್ಲಿ 5 ಸ್ಥಳಗಳಲ್ಲಿ ಪರೀಕ್ಷೆ ನಡೆಸಿದ ದೆಹಲಿ ಮತ್ತು ಹರಿಯಾಣದ ಪ್ರಯೋಗಾಲಯಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆದೇಶ ಹೊರಡಿಸಲಾಗಿದೆ” ಎಂದು ರಾಜ್ಯ ಸರ್ಕಾರದ ವಕ್ತಾರ ಸುಬೋಧ್ ಯುನಿಯಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ಕುಂಭಮೇಳದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ ಎಂಬ ವರದಿಗಳು ಹೊರಬಿದ್ದ ನಂತರ ಹರಿದ್ವಾರ್ ಜಿಲ್ಲಾಡಳಿತ ಕಳೆದ ವಾರ ತನಿಖೆಗೆ ಆದೇಶಿಸಿತ್ತು.

ವರದಿಗಳ ಪ್ರಕಾರ, ಉತ್ತರಾಖಂಡ ಹೈಕೋರ್ಟ್ ನಿಗದಿಪಡಿಸಿದ ದಿನಕ್ಕೆ 50,000 ಪರೀಕ್ಷೆಗಳ ಗುರಿಯನ್ನು ತಲುಪಲು ಈ ಖಾಸಗಿ ಪ್ರಯೋಗಾಲಯಗಳು ಈ ರೀತಿ ಕೊರೊನಾ ನಕಲಿ ಪರೀಕ್ಷೆಗಳನ್ನು ನಡೆಸಿವೆ ಎನ್ನಲಾಗಿದೆ. ಕುಂಭಮೇಳದ ಸಮಯದಲ್ಲಿ ಪರೀಕ್ಷೆ ನಡೆಸಲು ಇಪ್ಪತ್ತೆರಡು (22) ಖಾಸಗಿ ಲ್ಯಾಬ್‌ಗಳನ್ನು ನೇಮಿಸಲಾಗಿತ್ತು.

ಕುಂಭಮೇಳದ ಸಮಯದಲ್ಲಿ ಪರೀಕ್ಷೆಗಳನ್ನು ನಡೆಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಎಲ್ಲಾ ಲ್ಯಾಬ್‌ಗಳಿಗೆ ಹಣ ಪಾವತಿಯನ್ನು ಸರ್ಕಾರ ತಡೆ ಹಿಡಿದಿದೆ. ನಕಲಿ ಕೊರೊನಾ ಪರೀಕ್ಷೆ ಬಗ್ಗೆ ತನಿಖೆ ನಡೆಯುತ್ತಿರುವುದರಿಂದ ಸದ್ಯಕ್ಕೆ ತಡೆಹಿಡಿಯಲಾಗಿದೆ ಎಂದು ಹರಿದ್ವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಿ.ರವಿಶಂಕರ್ ಹೇಳಿದ್ದಾರೆ.

ದೇಶದಲ್ಲಿ ಕೊರೊನಾ ಎರಡನೇ ಅಲೆ ತೀವ್ರಗತಿಯಲ್ಲಿದ್ದ ಸಮಯದಲ್ಲಿಯೇ ದೇಶದ ವಿವಿಧ ಭಾಗಗಳಿಂದ ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸುವ ಕುಂಭಮೇಳವನ್ನು ನಡೆಸಲಾಯಿತು. ಹರಿದ್ವಾರದಲ್ಲಿ ನಡೆದ ಈ ಕುಂಭಮೇಳದಲ್ಲಿ ಕನಿಷ್ಠ 70 ಲಕ್ಷ ಭಕ್ತರು ಭಾಗವಹಿಸಿದ್ದಾರೆಂದು ಹೇಳಲಾಗಿದೆ.

ಈ ಬಾರಿಯ ಹರಿದ್ವಾರದ ಕುಂಭಮೇಳದಲ್ಲಿ ವೈದ್ಯಕೀಯ ಸಿಬ್ಬಂದಿ ನಡೆಸಿದ ಸುಮಾರು ಎರಡು ಲಕ್ಷ ಪರೀಕ್ಷೆಗಳಲ್ಲಿ ಸುಮಾರು 2,600 ಭಕ್ತರಲ್ಲಿ ಕೊರೊನಾ ಸೋಂಕು ಕಂಡು ಬಂದಿತ್ತು. ಈಗ ಕೊರೊನಾ ನಕಲಿ ಪರೀಕ್ಷೆಗಳನ್ನು ನಡೆಸಲಾಗಿದೆ ಎಂಬ ಮಾಹಿತಿ ಹೊರ ಬಿದ್ದಿದ್ದು, ಪ್ರಯೋಗಾಲಯಗಳ ವಿರುದ್ಧ ಪ್ರಕರಣ ದಾಖಲಿಸಲು ಉತ್ತರಾಖಂಡ ಸರ್ಕಾರ ಆದೇಶಿಸಿದೆ.


ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ಬಿಜೆಪಿಯಲ್ಲಿ ಭಿನ್ನಮತವಿಲ್ಲ; ಅರುಣ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...