Homeಮುಖಪುಟಕುಂಭಮೇಳ: ನಕಲಿ ಕೊರೊನಾ ಪರೀಕ್ಷೆ ನಡೆಸಿದ್ದ ಪ್ರಯೋಗಾಲಯಗಳ ವಿರುದ್ಧ ಪ್ರಕರಣ

ಕುಂಭಮೇಳ: ನಕಲಿ ಕೊರೊನಾ ಪರೀಕ್ಷೆ ನಡೆಸಿದ್ದ ಪ್ರಯೋಗಾಲಯಗಳ ವಿರುದ್ಧ ಪ್ರಕರಣ

- Advertisement -
- Advertisement -

ಉತ್ತರಾಖಂಡದಲ್ಲಿ ನಡೆದ ಕುಂಭಮೇಳದಲ್ಲಿ ನಕಲಿ ಕೊರೊನಾ ಪರೀಕ್ಷೆಗಳನ್ನು ನಡೆಸಿದ ಆರೋಪ ಹೊತ್ತಿರುವ ಖಾಸಗಿ ಪ್ರಯೋಗಾಲಯಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಉತ್ತರಾಖಂಡ ಸರ್ಕಾರ ಹರಿದ್ವಾರ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದೆ.

ಏಪ್ರಿಲ್ 1 ರಿಂದ 30 ರವರೆಗೆ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳಗಳಲ್ಲಿ ಒಂದಾದ ಕುಂಭ ಮೇಳದಲ್ಲಿ ಕೊರೊನಾ ಪರೀಕ್ಷೆಗಳನ್ನು ನಡೆಸಲು ಮುಖ್ಯವಾಗಿ ದೆಹಲಿ ಮತ್ತು ಹರಿಯಾಣ ಮೂಲದ ಖಾಸಗಿ ಪ್ರಯೋಗಾಲಯಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು.

“ಮಹಾಕುಂಭದ ಸಂದರ್ಭದಲ್ಲಿ ಕೋವಿಡ್ ಪರೀಕ್ಷಾ ಹಗರಣದಲ್ಲಿ ಎಫ್‌ಐಆರ್ ದಾಖಲಿಸುವಂತೆ ಉತ್ತರಾಖಂಡ ಸರ್ಕಾರ ಆದೇಶಿಸಿದೆ. ಕುಂಭಮೇಳ ಸಂದರ್ಭದಲ್ಲಿ ಹರಿದ್ವಾರದಲ್ಲಿ 5 ಸ್ಥಳಗಳಲ್ಲಿ ಪರೀಕ್ಷೆ ನಡೆಸಿದ ದೆಹಲಿ ಮತ್ತು ಹರಿಯಾಣದ ಪ್ರಯೋಗಾಲಯಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆದೇಶ ಹೊರಡಿಸಲಾಗಿದೆ” ಎಂದು ರಾಜ್ಯ ಸರ್ಕಾರದ ವಕ್ತಾರ ಸುಬೋಧ್ ಯುನಿಯಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ಕುಂಭಮೇಳದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ ಎಂಬ ವರದಿಗಳು ಹೊರಬಿದ್ದ ನಂತರ ಹರಿದ್ವಾರ್ ಜಿಲ್ಲಾಡಳಿತ ಕಳೆದ ವಾರ ತನಿಖೆಗೆ ಆದೇಶಿಸಿತ್ತು.

ವರದಿಗಳ ಪ್ರಕಾರ, ಉತ್ತರಾಖಂಡ ಹೈಕೋರ್ಟ್ ನಿಗದಿಪಡಿಸಿದ ದಿನಕ್ಕೆ 50,000 ಪರೀಕ್ಷೆಗಳ ಗುರಿಯನ್ನು ತಲುಪಲು ಈ ಖಾಸಗಿ ಪ್ರಯೋಗಾಲಯಗಳು ಈ ರೀತಿ ಕೊರೊನಾ ನಕಲಿ ಪರೀಕ್ಷೆಗಳನ್ನು ನಡೆಸಿವೆ ಎನ್ನಲಾಗಿದೆ. ಕುಂಭಮೇಳದ ಸಮಯದಲ್ಲಿ ಪರೀಕ್ಷೆ ನಡೆಸಲು ಇಪ್ಪತ್ತೆರಡು (22) ಖಾಸಗಿ ಲ್ಯಾಬ್‌ಗಳನ್ನು ನೇಮಿಸಲಾಗಿತ್ತು.

ಕುಂಭಮೇಳದ ಸಮಯದಲ್ಲಿ ಪರೀಕ್ಷೆಗಳನ್ನು ನಡೆಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಎಲ್ಲಾ ಲ್ಯಾಬ್‌ಗಳಿಗೆ ಹಣ ಪಾವತಿಯನ್ನು ಸರ್ಕಾರ ತಡೆ ಹಿಡಿದಿದೆ. ನಕಲಿ ಕೊರೊನಾ ಪರೀಕ್ಷೆ ಬಗ್ಗೆ ತನಿಖೆ ನಡೆಯುತ್ತಿರುವುದರಿಂದ ಸದ್ಯಕ್ಕೆ ತಡೆಹಿಡಿಯಲಾಗಿದೆ ಎಂದು ಹರಿದ್ವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಿ.ರವಿಶಂಕರ್ ಹೇಳಿದ್ದಾರೆ.

ದೇಶದಲ್ಲಿ ಕೊರೊನಾ ಎರಡನೇ ಅಲೆ ತೀವ್ರಗತಿಯಲ್ಲಿದ್ದ ಸಮಯದಲ್ಲಿಯೇ ದೇಶದ ವಿವಿಧ ಭಾಗಗಳಿಂದ ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸುವ ಕುಂಭಮೇಳವನ್ನು ನಡೆಸಲಾಯಿತು. ಹರಿದ್ವಾರದಲ್ಲಿ ನಡೆದ ಈ ಕುಂಭಮೇಳದಲ್ಲಿ ಕನಿಷ್ಠ 70 ಲಕ್ಷ ಭಕ್ತರು ಭಾಗವಹಿಸಿದ್ದಾರೆಂದು ಹೇಳಲಾಗಿದೆ.

ಈ ಬಾರಿಯ ಹರಿದ್ವಾರದ ಕುಂಭಮೇಳದಲ್ಲಿ ವೈದ್ಯಕೀಯ ಸಿಬ್ಬಂದಿ ನಡೆಸಿದ ಸುಮಾರು ಎರಡು ಲಕ್ಷ ಪರೀಕ್ಷೆಗಳಲ್ಲಿ ಸುಮಾರು 2,600 ಭಕ್ತರಲ್ಲಿ ಕೊರೊನಾ ಸೋಂಕು ಕಂಡು ಬಂದಿತ್ತು. ಈಗ ಕೊರೊನಾ ನಕಲಿ ಪರೀಕ್ಷೆಗಳನ್ನು ನಡೆಸಲಾಗಿದೆ ಎಂಬ ಮಾಹಿತಿ ಹೊರ ಬಿದ್ದಿದ್ದು, ಪ್ರಯೋಗಾಲಯಗಳ ವಿರುದ್ಧ ಪ್ರಕರಣ ದಾಖಲಿಸಲು ಉತ್ತರಾಖಂಡ ಸರ್ಕಾರ ಆದೇಶಿಸಿದೆ.


ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ಬಿಜೆಪಿಯಲ್ಲಿ ಭಿನ್ನಮತವಿಲ್ಲ; ಅರುಣ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...