Homeಮುಖಪುಟಕುಂಭಮೇಳ ಪ್ರಾರಂಭಕ್ಕಿಂತಲೂ ಮುಂಚಿನ ನೀರಿನ ಮಾದರಿಯ ವರದಿ ಹಂಚಿಕೆ - ಯುಪಿ ಸರ್ಕಾರದ ವಿರುದ್ಧ ನ್ಯಾಯಮಂಡಳಿ...

ಕುಂಭಮೇಳ ಪ್ರಾರಂಭಕ್ಕಿಂತಲೂ ಮುಂಚಿನ ನೀರಿನ ಮಾದರಿಯ ವರದಿ ಹಂಚಿಕೆ – ಯುಪಿ ಸರ್ಕಾರದ ವಿರುದ್ಧ ನ್ಯಾಯಮಂಡಳಿ ಕಿಡಿ

- Advertisement -
- Advertisement -

ಪ್ರಯಾಗ್‌ರಾಜ್‌ನ ಮಹಾಕುಂಭ ಸ್ಥಳದಲ್ಲಿ ನದಿ ನೀರಿನ ಗುಣಮಟ್ಟದ ಕುರಿತು ಹಳೆಯ ಮಾದರಿಗಳನ್ನು ಆಧರಿಸಿ ವರದಿ ಸಲ್ಲಿಸಿದ್ದಕ್ಕಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಬುಧವಾರ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಪ್ರಶ್ನಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಕುಂಭಮೇಳ ಪ್ರಾರಂಭಕ್ಕಿಂತಲೂ

ಯಾತ್ರೆ ಪ್ರಾರಂಭವಾಗುವ ಒಂದು ದಿನ ಮೊದಲು ಜನವರಿ 12 ರಂದು ಈ ಮಾದರಿಗಳನ್ನು ಪಡೆಯಲಾಗಿದೆ ಎಂದು ನ್ಯಾಯಮಂಡಳಿ ಹೇಳಿದೆ. “ಹಾಗಾದರೆ ನೀವು ಇಷ್ಟು ದೊಡ್ಡ ದಾಖಲೆಯನ್ನು ಏಕೆ ಸಲ್ಲಿಸಿದ್ದೀರಿ? ನಮ್ಮ ಸಮಯವನ್ನು ವ್ಯರ್ಥ ಮಾಡಲಲೆ” ಎಂದು ಅದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಕೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಪ್ರತಿನಿಧಿಸುವ ರಾಜ್ಯ ಹೆಚ್ಚುವರಿ ಅಡ್ವೊಕೇಟ್ ಜನರಲ್, ಇತ್ತೀಚಿನ ಮಾದರಿಗಳನ್ನು ಪರೀಕ್ಷಿಸಿದ್ದು, ಅವುಗಳನ್ನು ದಾಖಲೆಯಲ್ಲಿ ಇಡುವುದಾಗಿ ನ್ಯಾಯಮಂಡಳಿಗೆ ತಿಳಿಸಿದ್ದಾರೆ. ಜಲ ಮಾಲಿನ್ಯವನ್ನು ಪರಿಹರಿಸಲು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ. ಕುಂಭಮೇಳ ಪ್ರಾರಂಭಕ್ಕಿಂತಲೂ

“ಪ್ರತಿಯೊಂದು ವಿಚಲನಕ್ಕೂ, ಮೇಲ್ವಿಚಾರಣೆ ಮತ್ತು ಸರಿಪಡಿಸುವ ಕ್ರಮ ನಡೆಯುತ್ತಿದೆ” ಎಂದು ರಾಜ್ಯ ಸರ್ಕಾರ ಹೇಳಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಮಹಾ ಕುಂಭದಲ್ಲಿನ ನೀರು ಸ್ನಾನಕ್ಕೆ ಯೋಗ್ಯವಾಗಿದೆ ಎಂದು ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ ಬುಧವಾರ ಹೇಳಿಕೊಂಡಿದೆ. ಮಂಡಳಿಯ ಈ ಹೇಳಿಕೆ, ಫೆಬ್ರವರಿ 3 ರಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಗೆ ವಿರುದ್ಧವಾಗಿದೆ. ಕೇಂದ್ರ ಮಂಡಳಿಯು ತನ್ನ ವರದಿಯಲ್ಲಿ, ಗಂಗಾ ಮತ್ತು ಯಮುನಾ ನದಿ ನೀರಿನ ಗುಣಮಟ್ಟ ಸ್ನಾನಕ್ಕೆ ಯೋಗ್ಯವಲ್ಲ, ಅದರಲ್ಲಿ ಮಾನವ ಮತ್ತು ಪ್ರಾಣಿಗಳ ಮಲದಲ್ಲಿ ಸಾಮಾನ್ಯವಾಗಿ ಕಂಡುಬರುವ ಬ್ಯಾಕ್ಟೀರಿಯಾಗಳು ಹೆಚ್ಚಿನ ಮಟ್ಟದಲ್ಲಿದೆ ಎಂದು ಹೇಳಿತ್ತು.

ಬುಧವಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ರಾಜ್ಯ ವಿಧಾನಸಭೆಯಲ್ಲಿ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮದಲ್ಲಿರುವ ನೀರು ಸ್ನಾನಕ್ಕೆ ಮಾತ್ರವಲ್ಲ, “ಆಚಮನ” ಅಥವಾ ಪವಿತ್ರ ನೀರನ್ನು ಕುಡಿಯುವ ಧಾರ್ಮಿಕ ಆಚರಣೆಗೂ ಯೋಗ್ಯವಾಗಿದೆ ಎಂದು ಹೇಳಿದ್ದಾರೆ. ನೀರಿನ ಮಾಲಿನ್ಯದ ವರದಿಗಳು ಮಹಾ ಕುಂಭದ ಅಪಖ್ಯಾತಿ ಮಾಡಬೇಕು ಎಂಬ ಪಿತೂರಿಯ ಭಾಗವಾಗಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದಾಗಿ ಕುಂಭದಲ್ಲಿನ ನೀರು ಕಲುಷಿತವಾಗಿದೆ ಎಂದು ಬೆಳಕಿಗೆ ಬಂದಿದೆ. ರಾಜ್ಯ ಸರ್ಕಾರ ಎಲ್ಲವೂ ನಿಯಂತ್ರಣದಲ್ಲಿದೆ ಎಂದು ಹೇಳಿಕೊಂಡಿದೆ. ಅದರ ಅರ್ಥ ಮಾಧ್ಯಮಗಳು ಈ ವಿಷಯದ ಬಗ್ಗೆ ವರದಿ ಮಾಡುತ್ತಿರುವುದು ನಿಯಂತ್ರಣದಲ್ಲಿದೆ ಎಂದು ಅವರು ಟೀಕಿಸಿದ್ದಾರೆ.

“‘ನ್ಯಾಯಾಲಯ ನಿಂದನೆಯಂತೆ ‘ಸರ್ಕಾರಿ ಮಂಡಳಿ ಅಥವಾ ಪ್ರಾಧಿಕಾರದ ನಿಂದನೆ’ ಮಾಡಿದ್ದಕ್ಕಾಗಿ ಯಾರೊಬ್ಬರ ವಿರುದ್ಧವೂ ಪ್ರಕರಣ ದಾಖಲಿಸಬಹುದೇ ಎಂದು ಸಾರ್ವಜನಿಕರು ಕೇಳುತ್ತಿದ್ದಾರೆ” ಎಂದು ಅವರು ಕೇಳಿದ್ದಾರೆ.

ಮಹಾ ಕುಂಭಮೇಳವು ಜನವರಿ 13 ರಂದು ಪ್ರಾರಂಭವಾಯಿತು ಮತ್ತು ಫೆಬ್ರವರಿ 26 ರವರೆಗೆ ನಡೆಯಲಿದೆ. ತೀರ್ಥಯಾತ್ರೆಯ ಈ ಸಮಯದಲ್ಲಿ ಪ್ರತಿದಿನ ಸರಾಸರಿ ಒಂದು ಕೋಟಿಗೂ ಹೆಚ್ಚು ಜನರು ಗಂಗಾ ಮತ್ತು ಯಮುನಾ ನದಿಗಳಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿಕೊಂಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಹೇಳಿದೆ.

ಇದನ್ನೂಓದಿ:  ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ: ವಾರದೊಳಗೆ ಲೂಟಿ ಮಾಡಿದ 6,000 ಶಸ್ತ್ರಾಸ್ತ್ರ ಒಪ್ಪಿಸಿದಿದ್ದರೆ ಕಠಿಣ ಕ್ರಮ ಎಂದ ರಾಜ್ಯಪಾಲ

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ: ವಾರದೊಳಗೆ ಲೂಟಿ ಮಾಡಿದ 6,000 ಶಸ್ತ್ರಾಸ್ತ್ರ ಒಪ್ಪಿಸಿದಿದ್ದರೆ ಕಠಿಣ ಕ್ರಮ ಎಂದ ರಾಜ್ಯಪಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...