Homeಮುಖಪುಟಕುಂಭಮೇಳ ಪ್ರಾರಂಭಕ್ಕಿಂತಲೂ ಮುಂಚಿನ ನೀರಿನ ಮಾದರಿಯ ವರದಿ ಹಂಚಿಕೆ - ಯುಪಿ ಸರ್ಕಾರದ ವಿರುದ್ಧ ನ್ಯಾಯಮಂಡಳಿ...

ಕುಂಭಮೇಳ ಪ್ರಾರಂಭಕ್ಕಿಂತಲೂ ಮುಂಚಿನ ನೀರಿನ ಮಾದರಿಯ ವರದಿ ಹಂಚಿಕೆ – ಯುಪಿ ಸರ್ಕಾರದ ವಿರುದ್ಧ ನ್ಯಾಯಮಂಡಳಿ ಕಿಡಿ

- Advertisement -
- Advertisement -

ಪ್ರಯಾಗ್‌ರಾಜ್‌ನ ಮಹಾಕುಂಭ ಸ್ಥಳದಲ್ಲಿ ನದಿ ನೀರಿನ ಗುಣಮಟ್ಟದ ಕುರಿತು ಹಳೆಯ ಮಾದರಿಗಳನ್ನು ಆಧರಿಸಿ ವರದಿ ಸಲ್ಲಿಸಿದ್ದಕ್ಕಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಬುಧವಾರ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಪ್ರಶ್ನಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಕುಂಭಮೇಳ ಪ್ರಾರಂಭಕ್ಕಿಂತಲೂ

ಯಾತ್ರೆ ಪ್ರಾರಂಭವಾಗುವ ಒಂದು ದಿನ ಮೊದಲು ಜನವರಿ 12 ರಂದು ಈ ಮಾದರಿಗಳನ್ನು ಪಡೆಯಲಾಗಿದೆ ಎಂದು ನ್ಯಾಯಮಂಡಳಿ ಹೇಳಿದೆ. “ಹಾಗಾದರೆ ನೀವು ಇಷ್ಟು ದೊಡ್ಡ ದಾಖಲೆಯನ್ನು ಏಕೆ ಸಲ್ಲಿಸಿದ್ದೀರಿ? ನಮ್ಮ ಸಮಯವನ್ನು ವ್ಯರ್ಥ ಮಾಡಲಲೆ” ಎಂದು ಅದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಕೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಪ್ರತಿನಿಧಿಸುವ ರಾಜ್ಯ ಹೆಚ್ಚುವರಿ ಅಡ್ವೊಕೇಟ್ ಜನರಲ್, ಇತ್ತೀಚಿನ ಮಾದರಿಗಳನ್ನು ಪರೀಕ್ಷಿಸಿದ್ದು, ಅವುಗಳನ್ನು ದಾಖಲೆಯಲ್ಲಿ ಇಡುವುದಾಗಿ ನ್ಯಾಯಮಂಡಳಿಗೆ ತಿಳಿಸಿದ್ದಾರೆ. ಜಲ ಮಾಲಿನ್ಯವನ್ನು ಪರಿಹರಿಸಲು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ. ಕುಂಭಮೇಳ ಪ್ರಾರಂಭಕ್ಕಿಂತಲೂ

“ಪ್ರತಿಯೊಂದು ವಿಚಲನಕ್ಕೂ, ಮೇಲ್ವಿಚಾರಣೆ ಮತ್ತು ಸರಿಪಡಿಸುವ ಕ್ರಮ ನಡೆಯುತ್ತಿದೆ” ಎಂದು ರಾಜ್ಯ ಸರ್ಕಾರ ಹೇಳಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಮಹಾ ಕುಂಭದಲ್ಲಿನ ನೀರು ಸ್ನಾನಕ್ಕೆ ಯೋಗ್ಯವಾಗಿದೆ ಎಂದು ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ ಬುಧವಾರ ಹೇಳಿಕೊಂಡಿದೆ. ಮಂಡಳಿಯ ಈ ಹೇಳಿಕೆ, ಫೆಬ್ರವರಿ 3 ರಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಗೆ ವಿರುದ್ಧವಾಗಿದೆ. ಕೇಂದ್ರ ಮಂಡಳಿಯು ತನ್ನ ವರದಿಯಲ್ಲಿ, ಗಂಗಾ ಮತ್ತು ಯಮುನಾ ನದಿ ನೀರಿನ ಗುಣಮಟ್ಟ ಸ್ನಾನಕ್ಕೆ ಯೋಗ್ಯವಲ್ಲ, ಅದರಲ್ಲಿ ಮಾನವ ಮತ್ತು ಪ್ರಾಣಿಗಳ ಮಲದಲ್ಲಿ ಸಾಮಾನ್ಯವಾಗಿ ಕಂಡುಬರುವ ಬ್ಯಾಕ್ಟೀರಿಯಾಗಳು ಹೆಚ್ಚಿನ ಮಟ್ಟದಲ್ಲಿದೆ ಎಂದು ಹೇಳಿತ್ತು.

ಬುಧವಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ರಾಜ್ಯ ವಿಧಾನಸಭೆಯಲ್ಲಿ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮದಲ್ಲಿರುವ ನೀರು ಸ್ನಾನಕ್ಕೆ ಮಾತ್ರವಲ್ಲ, “ಆಚಮನ” ಅಥವಾ ಪವಿತ್ರ ನೀರನ್ನು ಕುಡಿಯುವ ಧಾರ್ಮಿಕ ಆಚರಣೆಗೂ ಯೋಗ್ಯವಾಗಿದೆ ಎಂದು ಹೇಳಿದ್ದಾರೆ. ನೀರಿನ ಮಾಲಿನ್ಯದ ವರದಿಗಳು ಮಹಾ ಕುಂಭದ ಅಪಖ್ಯಾತಿ ಮಾಡಬೇಕು ಎಂಬ ಪಿತೂರಿಯ ಭಾಗವಾಗಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದಾಗಿ ಕುಂಭದಲ್ಲಿನ ನೀರು ಕಲುಷಿತವಾಗಿದೆ ಎಂದು ಬೆಳಕಿಗೆ ಬಂದಿದೆ. ರಾಜ್ಯ ಸರ್ಕಾರ ಎಲ್ಲವೂ ನಿಯಂತ್ರಣದಲ್ಲಿದೆ ಎಂದು ಹೇಳಿಕೊಂಡಿದೆ. ಅದರ ಅರ್ಥ ಮಾಧ್ಯಮಗಳು ಈ ವಿಷಯದ ಬಗ್ಗೆ ವರದಿ ಮಾಡುತ್ತಿರುವುದು ನಿಯಂತ್ರಣದಲ್ಲಿದೆ ಎಂದು ಅವರು ಟೀಕಿಸಿದ್ದಾರೆ.

“‘ನ್ಯಾಯಾಲಯ ನಿಂದನೆಯಂತೆ ‘ಸರ್ಕಾರಿ ಮಂಡಳಿ ಅಥವಾ ಪ್ರಾಧಿಕಾರದ ನಿಂದನೆ’ ಮಾಡಿದ್ದಕ್ಕಾಗಿ ಯಾರೊಬ್ಬರ ವಿರುದ್ಧವೂ ಪ್ರಕರಣ ದಾಖಲಿಸಬಹುದೇ ಎಂದು ಸಾರ್ವಜನಿಕರು ಕೇಳುತ್ತಿದ್ದಾರೆ” ಎಂದು ಅವರು ಕೇಳಿದ್ದಾರೆ.

ಮಹಾ ಕುಂಭಮೇಳವು ಜನವರಿ 13 ರಂದು ಪ್ರಾರಂಭವಾಯಿತು ಮತ್ತು ಫೆಬ್ರವರಿ 26 ರವರೆಗೆ ನಡೆಯಲಿದೆ. ತೀರ್ಥಯಾತ್ರೆಯ ಈ ಸಮಯದಲ್ಲಿ ಪ್ರತಿದಿನ ಸರಾಸರಿ ಒಂದು ಕೋಟಿಗೂ ಹೆಚ್ಚು ಜನರು ಗಂಗಾ ಮತ್ತು ಯಮುನಾ ನದಿಗಳಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿಕೊಂಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಹೇಳಿದೆ.

ಇದನ್ನೂಓದಿ:  ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ: ವಾರದೊಳಗೆ ಲೂಟಿ ಮಾಡಿದ 6,000 ಶಸ್ತ್ರಾಸ್ತ್ರ ಒಪ್ಪಿಸಿದಿದ್ದರೆ ಕಠಿಣ ಕ್ರಮ ಎಂದ ರಾಜ್ಯಪಾಲ

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ: ವಾರದೊಳಗೆ ಲೂಟಿ ಮಾಡಿದ 6,000 ಶಸ್ತ್ರಾಸ್ತ್ರ ಒಪ್ಪಿಸಿದಿದ್ದರೆ ಕಠಿಣ ಕ್ರಮ ಎಂದ ರಾಜ್ಯಪಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...