Homeಮುಖಪುಟಅವಿಶ್ವಾಸ ನಿರ್ಣಯದ ವೇಳೆ ಬೆತ್ತಲಾದ ಕುಂಭಕರ್ಣ: ಮೋದಿ ವಿರುದ್ಧ ಮತ್ತೆ ಗುಡುಗಿದ ನಟ ಕಿಶೋರ್

ಅವಿಶ್ವಾಸ ನಿರ್ಣಯದ ವೇಳೆ ಬೆತ್ತಲಾದ ಕುಂಭಕರ್ಣ: ಮೋದಿ ವಿರುದ್ಧ ಮತ್ತೆ ಗುಡುಗಿದ ನಟ ಕಿಶೋರ್

- Advertisement -
- Advertisement -

ಸಂಸತ್ತಿನಲ್ಲಿ ಮಣಿಪುರ ಹಿಂಸಾಚಾರದ ಕುರಿತು ಪ್ರಧಾನಿ ಮೋದಿ ಮಾತನಾಡಬೇಕು ಎನ್ನುವ ಉದ್ದೇಶದಿಂದ ವಿರೋಧ ಪಕ್ಷಗಳ INDIA ಒಕ್ಕೂಟವು ಅವಿಶ್ವಾಸ ನಿರ್ಣಯ ತಂದಿತ್ತು. ಹಾಗಾಗಿ ಗುರುವಾಗ ಮಾತ್ರವೇ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಣಿಪುರದ ಬಗ್ಗೆ ಕೆಲವೇ ನಿಮಿಷಗಳ ಕಾಲ ಮಾತನಾಡಿದ್ದಾರೆ. ಅವರ ಇಷ್ಟು ದಿನದ ಮೌನದ ಬಗ್ಗೆ ನಟ ಕಿಶೋರ್ ಕುಮಾರ್ ಅವರು ಕಟುವಾಗಿ ಟೀಕಿಸಿದ್ದಾರೆ.

ಪ್ರಧಾನಿ ಮೋದಿ ಹಾಗೂ ವ್ಯವಸ್ಥೆ ವಿರುದ್ಧ ಆಗಾಗ ಪ್ರತಿಕ್ರಿಯಿಸುವ ಸಂವೇದನಾಶೀಲ ನಟ ಕಿಶೋರ್ ಕುಮಾರ್ ಅವರು ಇದೀಗ ಮತ್ತೆ ಪ್ರಧಾನಿ ಮೋದಿಯನ್ನು ಟೀಕಿಸಿ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ”ಮಣಿಪುರದ ಪ್ರಶ್ನೆಗೆ ಉತ್ತರಿಸಲು ಬಾರದ ಅಯೋಗ್ಯತೆಯನ್ನು, ಧೂರ್ತತೆಯನ್ನು ಮುಚ್ಚಿಟ್ಟಿದ್ದ ಮೌನದ ಮುಸುಕನ್ನು ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯ ಕಳಚಿ ಬಿಸಾಡುತ್ತಿದ್ದಂತೆ ಸಂಸತ್ತಿನಲ್ಲಿ ಬೆತ್ತಲಾದ ಕುಂಭಕರ್ಣ” ಎಂದು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

View this post on Instagram

 

A post shared by Kishore Kumar Huli (@actorkishore)

”ನಮ್ಮದೇ ಜನ ಮಣಿಪುರದಲ್ಲಿ ರಕ್ತದ ಮಡುವಲ್ಲಿ ಸತ್ತು ಬಿದ್ದಿರುವಾಗ, ನಾವು ಹಾಕಿದ ಅನ್ನ ತಿಂದು ನಮ್ಮ ಸಮಸ್ಯೆಯ ಬಗ್ಗೆ ಮಾತಾಡುವುದು ಬಿಟ್ಟು ಮತ್ತವರ ಟೀಕೆ, ತನ್ನದೇ ಹೊಗಳಿಕೆಯಲ್ಲಿ, ಸುಳ್ಳುಗಳ, ಜೈಕಾರಗಳ ಮಳೆಯಲ್ಲಿ ಮಿಂದ ಪ್ರಧಾನ ಸೇವಕ.. ನಿದ್ದೆ ಹೊಡೆದ ಹೊಗಳುಭಟ್ಟರು, ಅದನ್ನೇ ಸಾಧನೆಯೆಂದು ಮೆರೆದ ತಲೆತಿರುಕ ಗೋದೀ ಮಾಧ್ಯಮ” ಎಂದು ಬರೆದು ಕಿಶೋರ್ ಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಗಾಗಿ ಕೊನೆಗೂ ಗುರುವಾರ ಸಂಸತ್ತಿಗೆ ಬಂದ ಪ್ರಧಾನಿ ಮೋದಿಯವರು 2 ಗಂಟೆಗಳಿಗಿಂತಲೂ ಹೆಚ್ಚು ಸಮಯ ಮಾತಾಡಿದ್ದಾರೆ. ಇದರಲ್ಲಿ ಮಣಿಪುರದ ಬಗ್ಗೆ ಕೇವಲ 7 ನಿಮಿಷಗಳ ಕಾಲ ಮಾತಾಡಿದ್ದಾರೆ! ಅನ್ಯಾಯಕ್ಕೊಳಗಾಗಿರುವ ಮಣಿಪುರಕ್ಕೆ ಮತ್ತಷ್ಟು ಅನ್ಯಾಯ ಮಾಡಿದ್ದಾರೆ.

ಈ ಬಗ್ಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒ’ಬ್ರೇನ್ ಅವರು ಟ್ವೀಟ್ ಮಾಡಿದ್ದು, ”21 ದಿನಗಳ ಕಾಲ ತಲೆಮರೆಸಿಕೊಂಡ ನಂತರ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಳೆದುಕೊಂಡು ಲೋಕಸಭೆಗೆ ವಿಶ್ವಾಸಮತ ಯಾಚನೆಯೊಂದಿಗೆ ಬರುವಂತೆ ಮಾಡಬೇಕಾಯಿತು.ಮೊದಲ ಒಂದು ಗಂಟೆ ಭಾಷಣದಲ್ಲಿ, ಕಲ್ಲು ಹೃದಯದ ವ್ಯಕ್ತಿ ಮಣಿಪುರದ ಬಗ್ಗೆ ಒಂದು ಮಾತನ್ನು ಕೂಡ ಹೇಳಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪ್ರಧಾನಿ ಮೋದಿಗಿಂತ ಹೆಚ್ಚು ಸಂಸತ್ತಿಗೆ ಅವಮಾನ ಮಾಡಿಲ್ಲ” ಎಂದು ಡೆರೆಕ್ ಒಬ್ರಿಯಾನ್ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ: ಬೆಂಕಿಗೆ ತುಪ್ಪ ಸುರಿದ ಅಮಿತ್‌ ಶಾ, 7 ನಿಮಿಷಕ್ಕೆ ಸುಸ್ತಾದ ಮೋದಿಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...