Homeಕರೋನಾ ತಲ್ಲಣಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

ಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

- Advertisement -
- Advertisement -

ಬೆಂಗಳೂರಿನ ಕುನಾಲ್ ಗಾರ್ನಾ ಎಂಬ 21 ವರ್ಷದ ಉದ್ಯಮಿ ಎರಡು ಬಾರಿ ಪ್ಲಾಸ್ಮಾ ದಾನ ಮಾಡಿ ನಾಲ್ಕು ಜೀವಗಳು ಉಳಿಯಲು ಕಾರಣವಾಗಿದ್ದು, ಅವರಿಗೆ ಜನರಿಂದ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ.

ಮಾರ್ಚ್‌ನಲ್ಲಿ ಕುನಾಲ್ ತನ್ನ ಅಧ್ಯಯನ ಮುಗಿಸಿದ ನಂತರ ಯುಕೆಯಿಂದ ಹಿಂದಿರುಗಿದಾಗ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುಣಮುಖರಾದ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ಆದರೆ ಸಾಂಕ್ರಾಮಿಕ ರೋಗ ಹರಡುತ್ತಿದ್ದ ಮೊದಲ ಕೆಲವು ತಿಂಗಳುಗಳಲ್ಲಿ, ಪ್ಲಾಸ್ಮಾ ದಾನ ಪ್ರಕ್ರಿಯೆಯು ಪ್ರಾರಂಭವಾಗಲಿಲ್ಲ. ಅದೂ ಅಲ್ಲದೆ ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ಕಡಿಮೆಯಿತ್ತು. ಪ್ರಕರಣಗಳು ಹೆಚ್ಚಿದಂತೆ ಜೂನ್‌ನಲ್ಲಿ, ಎಚ್‌ಸಿಜಿ ಆಸ್ಪತ್ರೆಯಿಂದ, ಪ್ಲಾಸ್ಮಾ ದಾನ ಮಾಡಲು ಅವರ ಒಪ್ಪಿಗೆಯನ್ನು ಕೇಳಲಾಗಿತ್ತು. ಅವರು ತಕ್ಷಣ ಒಪ್ಪಿದ್ದರು.

ಜೂನ್ 15 ರಂದು ಮೊದಲ ಬಾರಿಗೆ ತಮ್ಮ ಪ್ಲಾಸ್ಮಾವನ್ನು ದಾನ ಮಾಡಿದ್ದರು. ನಂತರ ಆಸ್ಪತ್ರೆಯ ಅಧಿಕಾರಿಗಳಿಗೆ ತಮ್ಮ ಪ್ಲಾಸ್ಮಾವನ್ನು ಹೆಚ್ಚು ಬಾರಿ ದಾನ ಮಾಡಲು ಸಿದ್ಧರಿದ್ದಾರೆ ಎಂದು ಹೇಳಿದ್ದರು.

“ಕೆಲವು ವರ್ಷಗಳ ಹಿಂದೆ ನಾನು ಪ್ಲೇಟ್‌ಲೆಟ್‌ಗಳನ್ನು ದಾನ ಮಾಡಿದ್ದೇನೆ. ನಾನು ಸಾಮಾನ್ಯವಾಗಿ ರಕ್ತದಾನ ಮಾಡುತ್ತಿದ್ದೆ. ಆದ್ದರಿಂದ, ನಾನು ಪ್ಲಾಸ್ಮಾ ದಾನಕ್ಕೂ ಒಪ್ಪಿದ್ದೆ. ಆರಂಭದಲ್ಲಿ, ನನ್ನ ಪೋಷಕರು ಸ್ವಲ್ಪ ಭಯಭೀತರಾಗಿದ್ದರು. ಆದರೆ ಇದು ರೋಗಿಗಳ ಜೀವ ಉಳಿಸಲು ಸಹಾಯ ಮಾಡುತ್ತದೆ ಎಂದು ಅವರಿಗೆ ಹೇಳಿದ ನಂತರ ಒಪ್ಪಿದರು. ನನ್ನ ಬಳಿ ಬಿ-ಪಾಸಿಟಿವ್ ಪ್ಲಾಸ್ಮಾ ಇದೆ. ನಾನು ಅದನ್ನು ಮೊದಲ ಬಾರಿಗೆ ದಾನ ಮಾಡಿದಾಗ ನನಗೆ ಏನೂ ತೊಂದರೆಯಾಗಲಿಲ್ಲ. ಇದು ನೋವುರಹಿತವಾಗಿರುತ್ತದೆ, ಜೊತೆಗೆ ಕೇವಲ ಒಂದು ಗಂಟೆ ಸಮಯವನಷ್ಟೇ ತೆಗೆದುಕೊಳ್ಳುತ್ತದೆ” ಎಂದು ಕುನಾಲ್ ದಿ ನ್ಯೂ ಸಂಡೇ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ನಾನು ಹೆಚ್ಚು ಪ್ಲಾಸ್ಮಾ ದಾನಕ್ಕೆ  ಸಿದ್ಧನಾಗಿದ್ದೇನೆ ಎಂದು ಎಚ್‌ಸಿಜಿ ವೈದ್ಯರಿಗೆ ಹೇಳಿದೆ. ಎರಡು ಪ್ಲಾಸ್ಮಾ ದಾನಗಳ ನಡುವಿನ ಅಂತರವು ಕನಿಷ್ಠ 15 ದಿನಗಳಿರಬೇಕು ಎಂದು ಅವರು ತಿಳಿಸಿದ್ದಾರೆ.

ಜುಲೈನಲ್ಲಿ, ಜಯದೇವ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯೋವಾಸ್ಕುಲರ್ ಸೈನ್ಸಸ್‌ನ ಹಿರಿಯ ಹೃದ್ರೋಗ ತಜ್ಞ ಡಾ.ನಟೇಶ್ ಬಿ ಎಚ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತು. ಆದರೆ ವೇಗವಾಗಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು. ಹಾಗಾಗಿ ಅವರನ್ನು ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಯಿತು. ಅವರಿಗೆ ವೆಂಟಿಲೇಟರ್ ಮತ್ತು ರೆಮ್ಡೆಸಿವಿರ್ ಔಷಧಿಯನ್ನು ನೀಡಲಾಗಿದ್ದರೂ, ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿತು. ನಂತರ ಪ್ಲಾಸ್ಮಾ ಚಿಕಿತ್ಸೆಯನ್ನು ಪರಿಗಣಿಸಲಾಯಿತು. ಜುಲೈ ಅಂತ್ಯದಲ್ಲಿ, ಕುನಾಲ್ ಮತ್ತೆ ತಮ್ಮ ಪ್ಲಾಸ್ಮಾವನ್ನು ದಾನ ಮಾಡಿದರು. ಅದನ್ನು ಡಾ.ನಾಟೇಶ್ ಅವರಿಗೆ ನೀಡಲಾಯಿತು.

ಅವರು ಮೂರು ದಿನಗಳಲ್ಲಿ ಚೇತರಿಸಿಕೊಂಡರು. ಐಸಿಯುನಲ್ಲಿ ಐದು ದಿನಗಳನ್ನು ಕಳೆದ ನಂತರ ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಯಿತು.

‘ನನ್ನ ಪ್ಲಾಸ್ಮಾವನ್ನು ಯಾರಿಗೆ ನೀಡಲಾಗಿದೆ ಎಂಬುದರ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ವೈದ್ಯರು ನನ್ನೊಂದಿಗೆ ವೀಡಿಯೊ-ಕಾನ್ಫರೆನ್ಸ್ ಮೂಲಕ ಸಂಪರ್ಕ ಮಾಡಿ ನನಗೆ ಧನ್ಯವಾದಗಳನ್ನು ತಿಳಿಸಿದರು. ನನ್ನ ಪ್ಲಾಸ್ಮಾ ನಾಲ್ಕುಕ್ಕೂ ಹೆಚ್ಚು ಜೀವಗಳನ್ನು ಉಳಿಸಲು ಸಹಾಯ ಮಾಡಿದೆ ಎಂದು ತಿಳಿಸಲಾಯಿತು’ ಎಂದು ಅವರು ಹೇಳಿದರು.

“ನಿರ್ಣಾಯಕ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆಯು ಮುಖ್ಯವಾಗಿದೆ. ರೋಗ ನಿಯಂತ್ರಿಸಲು ನಮಗೆ ಹೆಚ್ಚಿನ ದಾನಿಗಳು ಬೇಕು” ಡಾ. ನಟೇಶ್ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ರಾಜ್ಯದಲ್ಲಿ ಕೊರೊನಾ ವಿರುದ್ದ ಪ್ಲಾಸ್ಮಾ ಥೆರಪಿ ಮುಂದುವರೆಸಲಾಗುವುದು: ಆರೋಗ್ಯ ಸಚಿವ ಶ್ರೀರಾಮುಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...