Homeಕರೋನಾ ತಲ್ಲಣಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

ಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

- Advertisement -
- Advertisement -

ಬೆಂಗಳೂರಿನ ಕುನಾಲ್ ಗಾರ್ನಾ ಎಂಬ 21 ವರ್ಷದ ಉದ್ಯಮಿ ಎರಡು ಬಾರಿ ಪ್ಲಾಸ್ಮಾ ದಾನ ಮಾಡಿ ನಾಲ್ಕು ಜೀವಗಳು ಉಳಿಯಲು ಕಾರಣವಾಗಿದ್ದು, ಅವರಿಗೆ ಜನರಿಂದ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ.

ಮಾರ್ಚ್‌ನಲ್ಲಿ ಕುನಾಲ್ ತನ್ನ ಅಧ್ಯಯನ ಮುಗಿಸಿದ ನಂತರ ಯುಕೆಯಿಂದ ಹಿಂದಿರುಗಿದಾಗ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುಣಮುಖರಾದ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ಆದರೆ ಸಾಂಕ್ರಾಮಿಕ ರೋಗ ಹರಡುತ್ತಿದ್ದ ಮೊದಲ ಕೆಲವು ತಿಂಗಳುಗಳಲ್ಲಿ, ಪ್ಲಾಸ್ಮಾ ದಾನ ಪ್ರಕ್ರಿಯೆಯು ಪ್ರಾರಂಭವಾಗಲಿಲ್ಲ. ಅದೂ ಅಲ್ಲದೆ ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ಕಡಿಮೆಯಿತ್ತು. ಪ್ರಕರಣಗಳು ಹೆಚ್ಚಿದಂತೆ ಜೂನ್‌ನಲ್ಲಿ, ಎಚ್‌ಸಿಜಿ ಆಸ್ಪತ್ರೆಯಿಂದ, ಪ್ಲಾಸ್ಮಾ ದಾನ ಮಾಡಲು ಅವರ ಒಪ್ಪಿಗೆಯನ್ನು ಕೇಳಲಾಗಿತ್ತು. ಅವರು ತಕ್ಷಣ ಒಪ್ಪಿದ್ದರು.

ಜೂನ್ 15 ರಂದು ಮೊದಲ ಬಾರಿಗೆ ತಮ್ಮ ಪ್ಲಾಸ್ಮಾವನ್ನು ದಾನ ಮಾಡಿದ್ದರು. ನಂತರ ಆಸ್ಪತ್ರೆಯ ಅಧಿಕಾರಿಗಳಿಗೆ ತಮ್ಮ ಪ್ಲಾಸ್ಮಾವನ್ನು ಹೆಚ್ಚು ಬಾರಿ ದಾನ ಮಾಡಲು ಸಿದ್ಧರಿದ್ದಾರೆ ಎಂದು ಹೇಳಿದ್ದರು.

“ಕೆಲವು ವರ್ಷಗಳ ಹಿಂದೆ ನಾನು ಪ್ಲೇಟ್‌ಲೆಟ್‌ಗಳನ್ನು ದಾನ ಮಾಡಿದ್ದೇನೆ. ನಾನು ಸಾಮಾನ್ಯವಾಗಿ ರಕ್ತದಾನ ಮಾಡುತ್ತಿದ್ದೆ. ಆದ್ದರಿಂದ, ನಾನು ಪ್ಲಾಸ್ಮಾ ದಾನಕ್ಕೂ ಒಪ್ಪಿದ್ದೆ. ಆರಂಭದಲ್ಲಿ, ನನ್ನ ಪೋಷಕರು ಸ್ವಲ್ಪ ಭಯಭೀತರಾಗಿದ್ದರು. ಆದರೆ ಇದು ರೋಗಿಗಳ ಜೀವ ಉಳಿಸಲು ಸಹಾಯ ಮಾಡುತ್ತದೆ ಎಂದು ಅವರಿಗೆ ಹೇಳಿದ ನಂತರ ಒಪ್ಪಿದರು. ನನ್ನ ಬಳಿ ಬಿ-ಪಾಸಿಟಿವ್ ಪ್ಲಾಸ್ಮಾ ಇದೆ. ನಾನು ಅದನ್ನು ಮೊದಲ ಬಾರಿಗೆ ದಾನ ಮಾಡಿದಾಗ ನನಗೆ ಏನೂ ತೊಂದರೆಯಾಗಲಿಲ್ಲ. ಇದು ನೋವುರಹಿತವಾಗಿರುತ್ತದೆ, ಜೊತೆಗೆ ಕೇವಲ ಒಂದು ಗಂಟೆ ಸಮಯವನಷ್ಟೇ ತೆಗೆದುಕೊಳ್ಳುತ್ತದೆ” ಎಂದು ಕುನಾಲ್ ದಿ ನ್ಯೂ ಸಂಡೇ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ನಾನು ಹೆಚ್ಚು ಪ್ಲಾಸ್ಮಾ ದಾನಕ್ಕೆ  ಸಿದ್ಧನಾಗಿದ್ದೇನೆ ಎಂದು ಎಚ್‌ಸಿಜಿ ವೈದ್ಯರಿಗೆ ಹೇಳಿದೆ. ಎರಡು ಪ್ಲಾಸ್ಮಾ ದಾನಗಳ ನಡುವಿನ ಅಂತರವು ಕನಿಷ್ಠ 15 ದಿನಗಳಿರಬೇಕು ಎಂದು ಅವರು ತಿಳಿಸಿದ್ದಾರೆ.

ಜುಲೈನಲ್ಲಿ, ಜಯದೇವ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯೋವಾಸ್ಕುಲರ್ ಸೈನ್ಸಸ್‌ನ ಹಿರಿಯ ಹೃದ್ರೋಗ ತಜ್ಞ ಡಾ.ನಟೇಶ್ ಬಿ ಎಚ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತು. ಆದರೆ ವೇಗವಾಗಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು. ಹಾಗಾಗಿ ಅವರನ್ನು ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಯಿತು. ಅವರಿಗೆ ವೆಂಟಿಲೇಟರ್ ಮತ್ತು ರೆಮ್ಡೆಸಿವಿರ್ ಔಷಧಿಯನ್ನು ನೀಡಲಾಗಿದ್ದರೂ, ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿತು. ನಂತರ ಪ್ಲಾಸ್ಮಾ ಚಿಕಿತ್ಸೆಯನ್ನು ಪರಿಗಣಿಸಲಾಯಿತು. ಜುಲೈ ಅಂತ್ಯದಲ್ಲಿ, ಕುನಾಲ್ ಮತ್ತೆ ತಮ್ಮ ಪ್ಲಾಸ್ಮಾವನ್ನು ದಾನ ಮಾಡಿದರು. ಅದನ್ನು ಡಾ.ನಾಟೇಶ್ ಅವರಿಗೆ ನೀಡಲಾಯಿತು.

ಅವರು ಮೂರು ದಿನಗಳಲ್ಲಿ ಚೇತರಿಸಿಕೊಂಡರು. ಐಸಿಯುನಲ್ಲಿ ಐದು ದಿನಗಳನ್ನು ಕಳೆದ ನಂತರ ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಯಿತು.

‘ನನ್ನ ಪ್ಲಾಸ್ಮಾವನ್ನು ಯಾರಿಗೆ ನೀಡಲಾಗಿದೆ ಎಂಬುದರ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ವೈದ್ಯರು ನನ್ನೊಂದಿಗೆ ವೀಡಿಯೊ-ಕಾನ್ಫರೆನ್ಸ್ ಮೂಲಕ ಸಂಪರ್ಕ ಮಾಡಿ ನನಗೆ ಧನ್ಯವಾದಗಳನ್ನು ತಿಳಿಸಿದರು. ನನ್ನ ಪ್ಲಾಸ್ಮಾ ನಾಲ್ಕುಕ್ಕೂ ಹೆಚ್ಚು ಜೀವಗಳನ್ನು ಉಳಿಸಲು ಸಹಾಯ ಮಾಡಿದೆ ಎಂದು ತಿಳಿಸಲಾಯಿತು’ ಎಂದು ಅವರು ಹೇಳಿದರು.

“ನಿರ್ಣಾಯಕ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆಯು ಮುಖ್ಯವಾಗಿದೆ. ರೋಗ ನಿಯಂತ್ರಿಸಲು ನಮಗೆ ಹೆಚ್ಚಿನ ದಾನಿಗಳು ಬೇಕು” ಡಾ. ನಟೇಶ್ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ರಾಜ್ಯದಲ್ಲಿ ಕೊರೊನಾ ವಿರುದ್ದ ಪ್ಲಾಸ್ಮಾ ಥೆರಪಿ ಮುಂದುವರೆಸಲಾಗುವುದು: ಆರೋಗ್ಯ ಸಚಿವ ಶ್ರೀರಾಮುಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...