Homeಕರೋನಾ ತಲ್ಲಣಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

ಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

- Advertisement -
- Advertisement -

ಬೆಂಗಳೂರಿನ ಕುನಾಲ್ ಗಾರ್ನಾ ಎಂಬ 21 ವರ್ಷದ ಉದ್ಯಮಿ ಎರಡು ಬಾರಿ ಪ್ಲಾಸ್ಮಾ ದಾನ ಮಾಡಿ ನಾಲ್ಕು ಜೀವಗಳು ಉಳಿಯಲು ಕಾರಣವಾಗಿದ್ದು, ಅವರಿಗೆ ಜನರಿಂದ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ.

ಮಾರ್ಚ್‌ನಲ್ಲಿ ಕುನಾಲ್ ತನ್ನ ಅಧ್ಯಯನ ಮುಗಿಸಿದ ನಂತರ ಯುಕೆಯಿಂದ ಹಿಂದಿರುಗಿದಾಗ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುಣಮುಖರಾದ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ಆದರೆ ಸಾಂಕ್ರಾಮಿಕ ರೋಗ ಹರಡುತ್ತಿದ್ದ ಮೊದಲ ಕೆಲವು ತಿಂಗಳುಗಳಲ್ಲಿ, ಪ್ಲಾಸ್ಮಾ ದಾನ ಪ್ರಕ್ರಿಯೆಯು ಪ್ರಾರಂಭವಾಗಲಿಲ್ಲ. ಅದೂ ಅಲ್ಲದೆ ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ಕಡಿಮೆಯಿತ್ತು. ಪ್ರಕರಣಗಳು ಹೆಚ್ಚಿದಂತೆ ಜೂನ್‌ನಲ್ಲಿ, ಎಚ್‌ಸಿಜಿ ಆಸ್ಪತ್ರೆಯಿಂದ, ಪ್ಲಾಸ್ಮಾ ದಾನ ಮಾಡಲು ಅವರ ಒಪ್ಪಿಗೆಯನ್ನು ಕೇಳಲಾಗಿತ್ತು. ಅವರು ತಕ್ಷಣ ಒಪ್ಪಿದ್ದರು.

ಜೂನ್ 15 ರಂದು ಮೊದಲ ಬಾರಿಗೆ ತಮ್ಮ ಪ್ಲಾಸ್ಮಾವನ್ನು ದಾನ ಮಾಡಿದ್ದರು. ನಂತರ ಆಸ್ಪತ್ರೆಯ ಅಧಿಕಾರಿಗಳಿಗೆ ತಮ್ಮ ಪ್ಲಾಸ್ಮಾವನ್ನು ಹೆಚ್ಚು ಬಾರಿ ದಾನ ಮಾಡಲು ಸಿದ್ಧರಿದ್ದಾರೆ ಎಂದು ಹೇಳಿದ್ದರು.

“ಕೆಲವು ವರ್ಷಗಳ ಹಿಂದೆ ನಾನು ಪ್ಲೇಟ್‌ಲೆಟ್‌ಗಳನ್ನು ದಾನ ಮಾಡಿದ್ದೇನೆ. ನಾನು ಸಾಮಾನ್ಯವಾಗಿ ರಕ್ತದಾನ ಮಾಡುತ್ತಿದ್ದೆ. ಆದ್ದರಿಂದ, ನಾನು ಪ್ಲಾಸ್ಮಾ ದಾನಕ್ಕೂ ಒಪ್ಪಿದ್ದೆ. ಆರಂಭದಲ್ಲಿ, ನನ್ನ ಪೋಷಕರು ಸ್ವಲ್ಪ ಭಯಭೀತರಾಗಿದ್ದರು. ಆದರೆ ಇದು ರೋಗಿಗಳ ಜೀವ ಉಳಿಸಲು ಸಹಾಯ ಮಾಡುತ್ತದೆ ಎಂದು ಅವರಿಗೆ ಹೇಳಿದ ನಂತರ ಒಪ್ಪಿದರು. ನನ್ನ ಬಳಿ ಬಿ-ಪಾಸಿಟಿವ್ ಪ್ಲಾಸ್ಮಾ ಇದೆ. ನಾನು ಅದನ್ನು ಮೊದಲ ಬಾರಿಗೆ ದಾನ ಮಾಡಿದಾಗ ನನಗೆ ಏನೂ ತೊಂದರೆಯಾಗಲಿಲ್ಲ. ಇದು ನೋವುರಹಿತವಾಗಿರುತ್ತದೆ, ಜೊತೆಗೆ ಕೇವಲ ಒಂದು ಗಂಟೆ ಸಮಯವನಷ್ಟೇ ತೆಗೆದುಕೊಳ್ಳುತ್ತದೆ” ಎಂದು ಕುನಾಲ್ ದಿ ನ್ಯೂ ಸಂಡೇ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ನಾನು ಹೆಚ್ಚು ಪ್ಲಾಸ್ಮಾ ದಾನಕ್ಕೆ  ಸಿದ್ಧನಾಗಿದ್ದೇನೆ ಎಂದು ಎಚ್‌ಸಿಜಿ ವೈದ್ಯರಿಗೆ ಹೇಳಿದೆ. ಎರಡು ಪ್ಲಾಸ್ಮಾ ದಾನಗಳ ನಡುವಿನ ಅಂತರವು ಕನಿಷ್ಠ 15 ದಿನಗಳಿರಬೇಕು ಎಂದು ಅವರು ತಿಳಿಸಿದ್ದಾರೆ.

ಜುಲೈನಲ್ಲಿ, ಜಯದೇವ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯೋವಾಸ್ಕುಲರ್ ಸೈನ್ಸಸ್‌ನ ಹಿರಿಯ ಹೃದ್ರೋಗ ತಜ್ಞ ಡಾ.ನಟೇಶ್ ಬಿ ಎಚ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತು. ಆದರೆ ವೇಗವಾಗಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು. ಹಾಗಾಗಿ ಅವರನ್ನು ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಯಿತು. ಅವರಿಗೆ ವೆಂಟಿಲೇಟರ್ ಮತ್ತು ರೆಮ್ಡೆಸಿವಿರ್ ಔಷಧಿಯನ್ನು ನೀಡಲಾಗಿದ್ದರೂ, ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿತು. ನಂತರ ಪ್ಲಾಸ್ಮಾ ಚಿಕಿತ್ಸೆಯನ್ನು ಪರಿಗಣಿಸಲಾಯಿತು. ಜುಲೈ ಅಂತ್ಯದಲ್ಲಿ, ಕುನಾಲ್ ಮತ್ತೆ ತಮ್ಮ ಪ್ಲಾಸ್ಮಾವನ್ನು ದಾನ ಮಾಡಿದರು. ಅದನ್ನು ಡಾ.ನಾಟೇಶ್ ಅವರಿಗೆ ನೀಡಲಾಯಿತು.

ಅವರು ಮೂರು ದಿನಗಳಲ್ಲಿ ಚೇತರಿಸಿಕೊಂಡರು. ಐಸಿಯುನಲ್ಲಿ ಐದು ದಿನಗಳನ್ನು ಕಳೆದ ನಂತರ ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಯಿತು.

‘ನನ್ನ ಪ್ಲಾಸ್ಮಾವನ್ನು ಯಾರಿಗೆ ನೀಡಲಾಗಿದೆ ಎಂಬುದರ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ವೈದ್ಯರು ನನ್ನೊಂದಿಗೆ ವೀಡಿಯೊ-ಕಾನ್ಫರೆನ್ಸ್ ಮೂಲಕ ಸಂಪರ್ಕ ಮಾಡಿ ನನಗೆ ಧನ್ಯವಾದಗಳನ್ನು ತಿಳಿಸಿದರು. ನನ್ನ ಪ್ಲಾಸ್ಮಾ ನಾಲ್ಕುಕ್ಕೂ ಹೆಚ್ಚು ಜೀವಗಳನ್ನು ಉಳಿಸಲು ಸಹಾಯ ಮಾಡಿದೆ ಎಂದು ತಿಳಿಸಲಾಯಿತು’ ಎಂದು ಅವರು ಹೇಳಿದರು.

“ನಿರ್ಣಾಯಕ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆಯು ಮುಖ್ಯವಾಗಿದೆ. ರೋಗ ನಿಯಂತ್ರಿಸಲು ನಮಗೆ ಹೆಚ್ಚಿನ ದಾನಿಗಳು ಬೇಕು” ಡಾ. ನಟೇಶ್ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ರಾಜ್ಯದಲ್ಲಿ ಕೊರೊನಾ ವಿರುದ್ದ ಪ್ಲಾಸ್ಮಾ ಥೆರಪಿ ಮುಂದುವರೆಸಲಾಗುವುದು: ಆರೋಗ್ಯ ಸಚಿವ ಶ್ರೀರಾಮುಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...