Homeಕರೋನಾ ತಲ್ಲಣಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

ಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

- Advertisement -
- Advertisement -

ಬೆಂಗಳೂರಿನ ಕುನಾಲ್ ಗಾರ್ನಾ ಎಂಬ 21 ವರ್ಷದ ಉದ್ಯಮಿ ಎರಡು ಬಾರಿ ಪ್ಲಾಸ್ಮಾ ದಾನ ಮಾಡಿ ನಾಲ್ಕು ಜೀವಗಳು ಉಳಿಯಲು ಕಾರಣವಾಗಿದ್ದು, ಅವರಿಗೆ ಜನರಿಂದ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ.

ಮಾರ್ಚ್‌ನಲ್ಲಿ ಕುನಾಲ್ ತನ್ನ ಅಧ್ಯಯನ ಮುಗಿಸಿದ ನಂತರ ಯುಕೆಯಿಂದ ಹಿಂದಿರುಗಿದಾಗ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುಣಮುಖರಾದ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ಆದರೆ ಸಾಂಕ್ರಾಮಿಕ ರೋಗ ಹರಡುತ್ತಿದ್ದ ಮೊದಲ ಕೆಲವು ತಿಂಗಳುಗಳಲ್ಲಿ, ಪ್ಲಾಸ್ಮಾ ದಾನ ಪ್ರಕ್ರಿಯೆಯು ಪ್ರಾರಂಭವಾಗಲಿಲ್ಲ. ಅದೂ ಅಲ್ಲದೆ ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ಕಡಿಮೆಯಿತ್ತು. ಪ್ರಕರಣಗಳು ಹೆಚ್ಚಿದಂತೆ ಜೂನ್‌ನಲ್ಲಿ, ಎಚ್‌ಸಿಜಿ ಆಸ್ಪತ್ರೆಯಿಂದ, ಪ್ಲಾಸ್ಮಾ ದಾನ ಮಾಡಲು ಅವರ ಒಪ್ಪಿಗೆಯನ್ನು ಕೇಳಲಾಗಿತ್ತು. ಅವರು ತಕ್ಷಣ ಒಪ್ಪಿದ್ದರು.

ಜೂನ್ 15 ರಂದು ಮೊದಲ ಬಾರಿಗೆ ತಮ್ಮ ಪ್ಲಾಸ್ಮಾವನ್ನು ದಾನ ಮಾಡಿದ್ದರು. ನಂತರ ಆಸ್ಪತ್ರೆಯ ಅಧಿಕಾರಿಗಳಿಗೆ ತಮ್ಮ ಪ್ಲಾಸ್ಮಾವನ್ನು ಹೆಚ್ಚು ಬಾರಿ ದಾನ ಮಾಡಲು ಸಿದ್ಧರಿದ್ದಾರೆ ಎಂದು ಹೇಳಿದ್ದರು.

“ಕೆಲವು ವರ್ಷಗಳ ಹಿಂದೆ ನಾನು ಪ್ಲೇಟ್‌ಲೆಟ್‌ಗಳನ್ನು ದಾನ ಮಾಡಿದ್ದೇನೆ. ನಾನು ಸಾಮಾನ್ಯವಾಗಿ ರಕ್ತದಾನ ಮಾಡುತ್ತಿದ್ದೆ. ಆದ್ದರಿಂದ, ನಾನು ಪ್ಲಾಸ್ಮಾ ದಾನಕ್ಕೂ ಒಪ್ಪಿದ್ದೆ. ಆರಂಭದಲ್ಲಿ, ನನ್ನ ಪೋಷಕರು ಸ್ವಲ್ಪ ಭಯಭೀತರಾಗಿದ್ದರು. ಆದರೆ ಇದು ರೋಗಿಗಳ ಜೀವ ಉಳಿಸಲು ಸಹಾಯ ಮಾಡುತ್ತದೆ ಎಂದು ಅವರಿಗೆ ಹೇಳಿದ ನಂತರ ಒಪ್ಪಿದರು. ನನ್ನ ಬಳಿ ಬಿ-ಪಾಸಿಟಿವ್ ಪ್ಲಾಸ್ಮಾ ಇದೆ. ನಾನು ಅದನ್ನು ಮೊದಲ ಬಾರಿಗೆ ದಾನ ಮಾಡಿದಾಗ ನನಗೆ ಏನೂ ತೊಂದರೆಯಾಗಲಿಲ್ಲ. ಇದು ನೋವುರಹಿತವಾಗಿರುತ್ತದೆ, ಜೊತೆಗೆ ಕೇವಲ ಒಂದು ಗಂಟೆ ಸಮಯವನಷ್ಟೇ ತೆಗೆದುಕೊಳ್ಳುತ್ತದೆ” ಎಂದು ಕುನಾಲ್ ದಿ ನ್ಯೂ ಸಂಡೇ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ನಾನು ಹೆಚ್ಚು ಪ್ಲಾಸ್ಮಾ ದಾನಕ್ಕೆ  ಸಿದ್ಧನಾಗಿದ್ದೇನೆ ಎಂದು ಎಚ್‌ಸಿಜಿ ವೈದ್ಯರಿಗೆ ಹೇಳಿದೆ. ಎರಡು ಪ್ಲಾಸ್ಮಾ ದಾನಗಳ ನಡುವಿನ ಅಂತರವು ಕನಿಷ್ಠ 15 ದಿನಗಳಿರಬೇಕು ಎಂದು ಅವರು ತಿಳಿಸಿದ್ದಾರೆ.

ಜುಲೈನಲ್ಲಿ, ಜಯದೇವ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯೋವಾಸ್ಕುಲರ್ ಸೈನ್ಸಸ್‌ನ ಹಿರಿಯ ಹೃದ್ರೋಗ ತಜ್ಞ ಡಾ.ನಟೇಶ್ ಬಿ ಎಚ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತು. ಆದರೆ ವೇಗವಾಗಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು. ಹಾಗಾಗಿ ಅವರನ್ನು ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಯಿತು. ಅವರಿಗೆ ವೆಂಟಿಲೇಟರ್ ಮತ್ತು ರೆಮ್ಡೆಸಿವಿರ್ ಔಷಧಿಯನ್ನು ನೀಡಲಾಗಿದ್ದರೂ, ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿತು. ನಂತರ ಪ್ಲಾಸ್ಮಾ ಚಿಕಿತ್ಸೆಯನ್ನು ಪರಿಗಣಿಸಲಾಯಿತು. ಜುಲೈ ಅಂತ್ಯದಲ್ಲಿ, ಕುನಾಲ್ ಮತ್ತೆ ತಮ್ಮ ಪ್ಲಾಸ್ಮಾವನ್ನು ದಾನ ಮಾಡಿದರು. ಅದನ್ನು ಡಾ.ನಾಟೇಶ್ ಅವರಿಗೆ ನೀಡಲಾಯಿತು.

ಅವರು ಮೂರು ದಿನಗಳಲ್ಲಿ ಚೇತರಿಸಿಕೊಂಡರು. ಐಸಿಯುನಲ್ಲಿ ಐದು ದಿನಗಳನ್ನು ಕಳೆದ ನಂತರ ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಯಿತು.

‘ನನ್ನ ಪ್ಲಾಸ್ಮಾವನ್ನು ಯಾರಿಗೆ ನೀಡಲಾಗಿದೆ ಎಂಬುದರ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ವೈದ್ಯರು ನನ್ನೊಂದಿಗೆ ವೀಡಿಯೊ-ಕಾನ್ಫರೆನ್ಸ್ ಮೂಲಕ ಸಂಪರ್ಕ ಮಾಡಿ ನನಗೆ ಧನ್ಯವಾದಗಳನ್ನು ತಿಳಿಸಿದರು. ನನ್ನ ಪ್ಲಾಸ್ಮಾ ನಾಲ್ಕುಕ್ಕೂ ಹೆಚ್ಚು ಜೀವಗಳನ್ನು ಉಳಿಸಲು ಸಹಾಯ ಮಾಡಿದೆ ಎಂದು ತಿಳಿಸಲಾಯಿತು’ ಎಂದು ಅವರು ಹೇಳಿದರು.

“ನಿರ್ಣಾಯಕ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆಯು ಮುಖ್ಯವಾಗಿದೆ. ರೋಗ ನಿಯಂತ್ರಿಸಲು ನಮಗೆ ಹೆಚ್ಚಿನ ದಾನಿಗಳು ಬೇಕು” ಡಾ. ನಟೇಶ್ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ರಾಜ್ಯದಲ್ಲಿ ಕೊರೊನಾ ವಿರುದ್ದ ಪ್ಲಾಸ್ಮಾ ಥೆರಪಿ ಮುಂದುವರೆಸಲಾಗುವುದು: ಆರೋಗ್ಯ ಸಚಿವ ಶ್ರೀರಾಮುಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...